Homeಅಂತರಾಷ್ಟ್ರೀಯಲಸಿಕೆ ಖರೀದಿಗೆ ವಿದೇಶಿ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಮುಂದಾದ ಭಾರತ: ಇಂಧನ ತೆರಿಗೆ ಎಲ್ಲಿಗೆ ಹೋಯಿತು?

ಲಸಿಕೆ ಖರೀದಿಗೆ ವಿದೇಶಿ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಮುಂದಾದ ಭಾರತ: ಇಂಧನ ತೆರಿಗೆ ಎಲ್ಲಿಗೆ ಹೋಯಿತು?

ಉಚಿತ ಲಸಿಕೆ ನೀಡುವ ಕಾರಣಕ್ಕಾಗಿ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆ ಏರಿಕೆಯಾಗುತ್ತಿದೆ ಎಂದು ಕೇಂದ್ರ ಸಚಿವರ ಹೇಳಿಕೆ ನೀಡಿದ್ದರು.

- Advertisement -
- Advertisement -

ಸುಮಾರು 66.7 ಕೋಟಿ ಕೋವಿಡ್ -19 ಲಸಿಕೆಗಳನ್ನು ಖರೀದಿಸಲು ಏಷ್ಯಾದ ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್‌ಗಳಿಂದ ಭಾರತವು 2 ಬಿಲಿಯನ್ ಡಾಲರ್ ಸಾಲ ಪಡೆಯಲು ಅರ್ಜಿ ಸಲ್ಲಿಸಿದೆ.

ಬೀಜಿಂಗ್ ಮೂಲದ ಏಷ್ಯನ್ ಇನ್‌ಫ್ರಾಸ್ಟ್ರಕ್ಚರ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್ (AIIB) ಮತ್ತು ಮನಿಲಾದ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ADB) ಶೀಘ್ರದಲ್ಲೇ ಭಾರತದ ಸಾಲದ ವಿನಂತಿಯನ್ನು ಪರಿಷ್ಕರಿಸಲಿವೆ ಎನ್ನಲಾಗಿದೆ. ಈ ಹಣವನ್ನು 66.7 ಕೋಟಿ ಕೋವಿಡ್ -19 ಡೋಸ್‌ಗಳನ್ನು ಖರೀದಿಸಲು ಬಳಸಲಾಗುತ್ತದೆ ಎಂದು ಸರ್ಕಾರ ಹೇಳಿದೆ.

ADB $1.5 ಶತಕೋಟಿ ಮತ್ತು AIIB ಸುಮಾರು $500 ಮಿಲಿಯನ್ ಸಾಲ ನೀಡುವ ನಿರೀಕ್ಷೆಯಿದೆ. ಭಾರತ ಸರ್ಕಾರವು ಈ ಯೋಜನೆಗಾಗಿ ಸುಮಾರು $58 ಮಿಲಿಯನ್ ಅನ್ನು ಹೂಡಿಕೆ ಮಾಡಲಿದೆ ಎನ್ನಲಾಗಿದೆ.

ಉಚಿತ ಲಸಿಕೆಗೆ ಬೆಲೆ ಏರಿಕೆ?

ಭಾರತ ಸರ್ಕಾರವು ಉಚಿತ ಲಸಿಕೆ ಮತ್ತು ಉಚಿತ ಪಡಿತರ ನೀಡುವ ಕಾರಣಕ್ಕಾಗಿ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆ ಏರಿಕೆಯಾಗುತ್ತಿದೆ ಎಂದು ಹಲವು ಬಿಜೆಪಿ ಮುಖಂಡರು ಮತ್ತು ಕೇಂದ್ರ ಸಚಿವರು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದರು. ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ರಾಜ್ಯ ಸಚಿವ ರಾಮೇಶ್ವರ್ ತೇಲಿ ಅಸ್ಸಾಂನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, “ಇಂಧನ ಬೆಲೆಗಳಲ್ಲಿ ಹೆಚ್ಚಳವಾಗಿಲ್ಲ. ಆದರೆ ತೆರಿಗೆಗಳು ಹೆಚ್ಚಿವೆ. ಈ ತೆರಿಗೆಯ ಹಣವನ್ನು ಉಚಿತ ಕೋವಿಡ್ ಲಸಿಕೆ ನೀಡಲು ಸಹಾಯಧನವಾಗಿ ಬಳಸಲಾಗಿದೆ. ನೀವು ಉಚಿತ ಲಸಿಕೆ ಪಡೆದಿರಬೇಕು ಅಲ್ಲವೇ? ಅದಕ್ಕೆ ಹಣ ಎಲ್ಲಿಂದ ಬಂದಿದೆ?” ಎಂದು ಪ್ರಶ್ನಿಸಿದ್ದರು.

ಈ ಹಿಂದೆ ಕೇಂದ್ರ ಪೆಟ್ರೋಲಿಯಂ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್‌ ಸಹ ಇದೇ ರೀತಿಯ ಹೇಳಿಕೆ ನೀಡಿದ್ದರು. ಉಚಿತ ಕೋವಿಡ್ ಲಸಿಕೆ ನೀಡುತ್ತಿರುವುದರಿಂದ ಮತ್ತು ಇತರ ಕಲ್ಯಾಣ ಕಾರ್ಯಕ್ರಮಗಳು ಜಾರಿಯಲ್ಲಿರುವುದರಿಂದ ಇಂಧನಗಳ ಮೇಲಿನ ತೆರಿಗೆ ಹೆಚ್ಚು ಮಾಡಲಾಗಿದೆ. ಹಾಗಾಗಿ ಪೆಟ್ರೋಲ್ – ಡೀಸೆಲ್ ಬೆಲೆ ಇಳಿಸಲು ಸಾಧ್ಯವಿಲ್ಲ ಎಂದಿದ್ದರು. ಜುಲೈ 27 ರಂದು ಮಾತನಾಡಿ “2020-21ರ ಸಾಲಿನ ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕ ಮತ್ತು ಸೆಸ್‌ನಿಂದಾಗಿ 3.4 ಲಕ್ಷ ಕೋಟಿ ರೂಗಳನ್ನು ಗಳಿಸಿದ್ದು, ಅದರ ಬಹುಪಾಲು ಹಣವನ್ನು ಉಚಿತ ಲಸಿಕೆ ಮತ್ತು ಕೋವಿಡ್ ಪರಿಹಾರ ಕಾರ್ಯಗಳಿಗಾಗಿ ಬಳಸಲಾಗಿದೆ” ಎಂದಿದ್ದರು.

ಲಸಿಕೆಗೆಂದೇ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆಯಲ್ಲಿ ಗಣನೀಯವಾಗಿ ಏರಿಕೆಯಾಗಿರುವಾಗ ಮತ್ತೆ ವಿದೇಶಿ ಬ್ಯಾಂಕುಗಳಿಂದ ಸಾಲ ಮಾಡುವ ಅಗತ್ಯವೇನಿದೆ? ಇಂಧನ ತೆರಿಗೆ ಎಲ್ಲಿಗೆ ಹೋಯಿತು? ವಿದೇಶಿ ಸಾಲ ಸಿಗುವುದಿದ್ದರೆ ಬೆಲೆ ಏಕೆ ಇಳಿಸಿಲ್ಲ ಎಂಬ ಪ್ರಶ್ನೆ ಉದ್ಭವವಾಗಿದೆ.

ಇಂಧನ ತೆರಿಗೆ ಸಂಗ್ರಹ ಎಷ್ಟು?

2021 ರ ಈ ವರ್ಷದ ಎಪ್ರಿಲ್‌ನಿಂದ-ಜುಲೈವರೆಗಿನ ನಾಲ್ಕು ತಿಂಗಳಲ್ಲೇ ಸರ್ಕಾರ ಸಂಗ್ರಹಿಸಿದ ಅಬಕಾರಿ ಸುಂಕ 1 ಲಕ್ಷ ಕೋಟಿಗಿಂತ ಹೆಚ್ಚು! ಅದಕ್ಕೂ ಮುಂಚಿನ ವರ್ಷ 3.4 ಲಕ್ಷ ಕೋಟಿ ರೂ ಸಂಗ್ರಹಿಸಿದ್ದಾಗಿ ಕೇಂದ್ರ ಸಚಿವರು ತಿಳಿಸಿದ್ದಾರೆ. ಅಲ್ಲಿಗೆ ಒಂದು ವರ್ಷ ನಾಲ್ಕು ತಿಂಗಳಿನಲ್ಲಿಯೇ  4.4 ಲಕ್ಷ ಕೋಟಿ ರೂ ಗೂ ಹೆಚ್ಚು ಸಂಗ್ರಹವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ

ಕೇಂದ್ರ ಸರಕಾರ ವ್ಯಾಕ್ಸೀನಿಗಾಗಿ ಅಂತರಾಷ್ಟ್ರೀಯ ಬ್ಯಾಂಕುಗಳಾದ ಬೀಜಿಂಗ್‍ನ Asian Infrastructure Investment Bank (AIIB) ಹಾಗೂ Asian Development (ADB), ಫಿಲಿಪೈನ್ಸ್ ನಿಂದ Rs 15000 ಕೋಟಿ ಸಾಲ ತೆಗೆದುಕೊಳ್ಳುತ್ತಿದೆ, ಅದೂ ಕೋವಿಡ್ ವ್ಯಾಕ್ಸೀನಿಗಾಗಿ. ಈ ಸಾಲದಲ್ಲಿ ADB ಫಿಲಿಪೈನ್ಸ್ ಕೊಡುತ್ತಿರುವುದು Rs 11500 ಕೋಟಿಯಾದರೆ, ಬೀಜಿಂಗ್‍ನ AIIB ಯ ಪಾಲು Rs 3500 ಕೋಟಿ.

ಕಳೆದ ವರುಷ ಅದೇನೋ ಚೀನಾದಿಂದ ಆಮದು ಮಾಡಲ್ಲ, ಅವರೊಡನೆ ಯಾಪಾರ ಮಾಡಲ್ಲ, ಅವರ App ಗಳನ್ನು ಬಂದ್ ಮಾಡ್ತೀವಿ, ಚೀನಾದ ಪಟಾಕಿ, ರಾಕಿ ಇಲ್ಲ ಎಂದೆಲ್ಲಾ ಕೆಲವರು ಬೀದಿ-ಬೀದಿಗಳಲ್ಲಿ ಬೊಗಳಿದ್ದೇ ಬಂತು. 2020-2021 ರಲ್ಲಿ ಭಾರತ-ಚೀನಾದ ನಡುವಿನ ವ್ಯಾಪಾರ ಇತಿಹಾಸದಲ್ಲೇ ಗರಿಷ್ಟ ಮಟ್ಟದ್ದೆಂದು ಕೇಂದ್ರ ಸರಕಾರದ ವರದಿಗಳು ಹೇಳುತ್ತಿವೆ.

ವ್ಯಾಕೀನಿಗಾಗಿ ಸರಕಾರ ಸಾಲ ತೆಗೆದುಕೊಳ್ಳುತ್ತಿದೆಯಾದರೆ, ತೈಲ, ಗ್ಯಾಸ್‍ನ ಮೇಲಿನ ತೆರಿಗೆಯಿಂದ ಕಳೆದ ಒಂದೂವರೆ ವರುಷಗಳಲ್ಲಿ ಸಂಗ್ರಹಿಸಿದ Rs 6.5 ಲಕ್ಷ ಕೋಟಿ ಹಣ ಎಲ್ಲಿಗೋಯಿತು? ಪಿಎಮ್‍ ಕೇರ್ಸ್ ನ ಸಾವಿರಾರು ಕೋಟಿ ಯಾರ ಜೇಬಿಗಿಳಿಯಿತು? ಲೆಕ್ಕ ಕೊಡುವುದೇ ಕೇಂದ್ರ ಸರಕಾರ? ಎಂದು ಸಾಮಾಜಿಕ ಕಾರ್ಯಕರ್ತ ಅಲ್ಮೆಡಾ ಗ್ಲಾಡ್‌ಸನ್ ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ಬೆಲೆ ಏರಿಕೆ ನಿರಂತರವಾಗಿದೆ. ಅತ್ತ ವಿದೇಶಿ ಬ್ಯಾಂಕುಗಳಿಂದ ಸಾಲ ತೆಗೆದುಕೊಳ್ಳಲಾಗುತ್ತಿದೆ. ಸಚಿವರು ದಿನಕ್ಕೊಂದು ಹೇಳಿಕೆ ಕೊಡುತ್ತಿದ್ದಾರೆ. ಇವೆಲ್ಲವೂ ಜನರನ್ನು ಗೊಂದಲಕ್ಕೆ ತಳ್ಳಿರುವುದಂತೂ ಸತ್ಯ.


ಇದನ್ನೂ ಓದಿ: ಉಚಿತ ಲಸಿಕೆ ನೀಡಿದ್ದೆ ಇಂಧನ ಬೆಲೆ ಏರಿಕೆಗೆ ಕಾರಣವೆಂದ ಕೇಂದ್ರ ಸಚಿವ: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. You bastards are anti nationals. You will never come up like this. Do something good to support the good work of the government which struggles to come out of the crisis

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...