Homeಅಂತರಾಷ್ಟ್ರೀಯಲಸಿಕೆ ಖರೀದಿಗೆ ವಿದೇಶಿ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಮುಂದಾದ ಭಾರತ: ಇಂಧನ ತೆರಿಗೆ ಎಲ್ಲಿಗೆ ಹೋಯಿತು?

ಲಸಿಕೆ ಖರೀದಿಗೆ ವಿದೇಶಿ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಮುಂದಾದ ಭಾರತ: ಇಂಧನ ತೆರಿಗೆ ಎಲ್ಲಿಗೆ ಹೋಯಿತು?

ಉಚಿತ ಲಸಿಕೆ ನೀಡುವ ಕಾರಣಕ್ಕಾಗಿ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆ ಏರಿಕೆಯಾಗುತ್ತಿದೆ ಎಂದು ಕೇಂದ್ರ ಸಚಿವರ ಹೇಳಿಕೆ ನೀಡಿದ್ದರು.

- Advertisement -
- Advertisement -

ಸುಮಾರು 66.7 ಕೋಟಿ ಕೋವಿಡ್ -19 ಲಸಿಕೆಗಳನ್ನು ಖರೀದಿಸಲು ಏಷ್ಯಾದ ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್‌ಗಳಿಂದ ಭಾರತವು 2 ಬಿಲಿಯನ್ ಡಾಲರ್ ಸಾಲ ಪಡೆಯಲು ಅರ್ಜಿ ಸಲ್ಲಿಸಿದೆ.

ಬೀಜಿಂಗ್ ಮೂಲದ ಏಷ್ಯನ್ ಇನ್‌ಫ್ರಾಸ್ಟ್ರಕ್ಚರ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್ (AIIB) ಮತ್ತು ಮನಿಲಾದ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ADB) ಶೀಘ್ರದಲ್ಲೇ ಭಾರತದ ಸಾಲದ ವಿನಂತಿಯನ್ನು ಪರಿಷ್ಕರಿಸಲಿವೆ ಎನ್ನಲಾಗಿದೆ. ಈ ಹಣವನ್ನು 66.7 ಕೋಟಿ ಕೋವಿಡ್ -19 ಡೋಸ್‌ಗಳನ್ನು ಖರೀದಿಸಲು ಬಳಸಲಾಗುತ್ತದೆ ಎಂದು ಸರ್ಕಾರ ಹೇಳಿದೆ.

ADB $1.5 ಶತಕೋಟಿ ಮತ್ತು AIIB ಸುಮಾರು $500 ಮಿಲಿಯನ್ ಸಾಲ ನೀಡುವ ನಿರೀಕ್ಷೆಯಿದೆ. ಭಾರತ ಸರ್ಕಾರವು ಈ ಯೋಜನೆಗಾಗಿ ಸುಮಾರು $58 ಮಿಲಿಯನ್ ಅನ್ನು ಹೂಡಿಕೆ ಮಾಡಲಿದೆ ಎನ್ನಲಾಗಿದೆ.

ಉಚಿತ ಲಸಿಕೆಗೆ ಬೆಲೆ ಏರಿಕೆ?

ಭಾರತ ಸರ್ಕಾರವು ಉಚಿತ ಲಸಿಕೆ ಮತ್ತು ಉಚಿತ ಪಡಿತರ ನೀಡುವ ಕಾರಣಕ್ಕಾಗಿ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆ ಏರಿಕೆಯಾಗುತ್ತಿದೆ ಎಂದು ಹಲವು ಬಿಜೆಪಿ ಮುಖಂಡರು ಮತ್ತು ಕೇಂದ್ರ ಸಚಿವರು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದರು. ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ರಾಜ್ಯ ಸಚಿವ ರಾಮೇಶ್ವರ್ ತೇಲಿ ಅಸ್ಸಾಂನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, “ಇಂಧನ ಬೆಲೆಗಳಲ್ಲಿ ಹೆಚ್ಚಳವಾಗಿಲ್ಲ. ಆದರೆ ತೆರಿಗೆಗಳು ಹೆಚ್ಚಿವೆ. ಈ ತೆರಿಗೆಯ ಹಣವನ್ನು ಉಚಿತ ಕೋವಿಡ್ ಲಸಿಕೆ ನೀಡಲು ಸಹಾಯಧನವಾಗಿ ಬಳಸಲಾಗಿದೆ. ನೀವು ಉಚಿತ ಲಸಿಕೆ ಪಡೆದಿರಬೇಕು ಅಲ್ಲವೇ? ಅದಕ್ಕೆ ಹಣ ಎಲ್ಲಿಂದ ಬಂದಿದೆ?” ಎಂದು ಪ್ರಶ್ನಿಸಿದ್ದರು.

ಈ ಹಿಂದೆ ಕೇಂದ್ರ ಪೆಟ್ರೋಲಿಯಂ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್‌ ಸಹ ಇದೇ ರೀತಿಯ ಹೇಳಿಕೆ ನೀಡಿದ್ದರು. ಉಚಿತ ಕೋವಿಡ್ ಲಸಿಕೆ ನೀಡುತ್ತಿರುವುದರಿಂದ ಮತ್ತು ಇತರ ಕಲ್ಯಾಣ ಕಾರ್ಯಕ್ರಮಗಳು ಜಾರಿಯಲ್ಲಿರುವುದರಿಂದ ಇಂಧನಗಳ ಮೇಲಿನ ತೆರಿಗೆ ಹೆಚ್ಚು ಮಾಡಲಾಗಿದೆ. ಹಾಗಾಗಿ ಪೆಟ್ರೋಲ್ – ಡೀಸೆಲ್ ಬೆಲೆ ಇಳಿಸಲು ಸಾಧ್ಯವಿಲ್ಲ ಎಂದಿದ್ದರು. ಜುಲೈ 27 ರಂದು ಮಾತನಾಡಿ “2020-21ರ ಸಾಲಿನ ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕ ಮತ್ತು ಸೆಸ್‌ನಿಂದಾಗಿ 3.4 ಲಕ್ಷ ಕೋಟಿ ರೂಗಳನ್ನು ಗಳಿಸಿದ್ದು, ಅದರ ಬಹುಪಾಲು ಹಣವನ್ನು ಉಚಿತ ಲಸಿಕೆ ಮತ್ತು ಕೋವಿಡ್ ಪರಿಹಾರ ಕಾರ್ಯಗಳಿಗಾಗಿ ಬಳಸಲಾಗಿದೆ” ಎಂದಿದ್ದರು.

ಲಸಿಕೆಗೆಂದೇ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆಯಲ್ಲಿ ಗಣನೀಯವಾಗಿ ಏರಿಕೆಯಾಗಿರುವಾಗ ಮತ್ತೆ ವಿದೇಶಿ ಬ್ಯಾಂಕುಗಳಿಂದ ಸಾಲ ಮಾಡುವ ಅಗತ್ಯವೇನಿದೆ? ಇಂಧನ ತೆರಿಗೆ ಎಲ್ಲಿಗೆ ಹೋಯಿತು? ವಿದೇಶಿ ಸಾಲ ಸಿಗುವುದಿದ್ದರೆ ಬೆಲೆ ಏಕೆ ಇಳಿಸಿಲ್ಲ ಎಂಬ ಪ್ರಶ್ನೆ ಉದ್ಭವವಾಗಿದೆ.

ಇಂಧನ ತೆರಿಗೆ ಸಂಗ್ರಹ ಎಷ್ಟು?

2021 ರ ಈ ವರ್ಷದ ಎಪ್ರಿಲ್‌ನಿಂದ-ಜುಲೈವರೆಗಿನ ನಾಲ್ಕು ತಿಂಗಳಲ್ಲೇ ಸರ್ಕಾರ ಸಂಗ್ರಹಿಸಿದ ಅಬಕಾರಿ ಸುಂಕ 1 ಲಕ್ಷ ಕೋಟಿಗಿಂತ ಹೆಚ್ಚು! ಅದಕ್ಕೂ ಮುಂಚಿನ ವರ್ಷ 3.4 ಲಕ್ಷ ಕೋಟಿ ರೂ ಸಂಗ್ರಹಿಸಿದ್ದಾಗಿ ಕೇಂದ್ರ ಸಚಿವರು ತಿಳಿಸಿದ್ದಾರೆ. ಅಲ್ಲಿಗೆ ಒಂದು ವರ್ಷ ನಾಲ್ಕು ತಿಂಗಳಿನಲ್ಲಿಯೇ  4.4 ಲಕ್ಷ ಕೋಟಿ ರೂ ಗೂ ಹೆಚ್ಚು ಸಂಗ್ರಹವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ

ಕೇಂದ್ರ ಸರಕಾರ ವ್ಯಾಕ್ಸೀನಿಗಾಗಿ ಅಂತರಾಷ್ಟ್ರೀಯ ಬ್ಯಾಂಕುಗಳಾದ ಬೀಜಿಂಗ್‍ನ Asian Infrastructure Investment Bank (AIIB) ಹಾಗೂ Asian Development (ADB), ಫಿಲಿಪೈನ್ಸ್ ನಿಂದ Rs 15000 ಕೋಟಿ ಸಾಲ ತೆಗೆದುಕೊಳ್ಳುತ್ತಿದೆ, ಅದೂ ಕೋವಿಡ್ ವ್ಯಾಕ್ಸೀನಿಗಾಗಿ. ಈ ಸಾಲದಲ್ಲಿ ADB ಫಿಲಿಪೈನ್ಸ್ ಕೊಡುತ್ತಿರುವುದು Rs 11500 ಕೋಟಿಯಾದರೆ, ಬೀಜಿಂಗ್‍ನ AIIB ಯ ಪಾಲು Rs 3500 ಕೋಟಿ.

ಕಳೆದ ವರುಷ ಅದೇನೋ ಚೀನಾದಿಂದ ಆಮದು ಮಾಡಲ್ಲ, ಅವರೊಡನೆ ಯಾಪಾರ ಮಾಡಲ್ಲ, ಅವರ App ಗಳನ್ನು ಬಂದ್ ಮಾಡ್ತೀವಿ, ಚೀನಾದ ಪಟಾಕಿ, ರಾಕಿ ಇಲ್ಲ ಎಂದೆಲ್ಲಾ ಕೆಲವರು ಬೀದಿ-ಬೀದಿಗಳಲ್ಲಿ ಬೊಗಳಿದ್ದೇ ಬಂತು. 2020-2021 ರಲ್ಲಿ ಭಾರತ-ಚೀನಾದ ನಡುವಿನ ವ್ಯಾಪಾರ ಇತಿಹಾಸದಲ್ಲೇ ಗರಿಷ್ಟ ಮಟ್ಟದ್ದೆಂದು ಕೇಂದ್ರ ಸರಕಾರದ ವರದಿಗಳು ಹೇಳುತ್ತಿವೆ.

ವ್ಯಾಕೀನಿಗಾಗಿ ಸರಕಾರ ಸಾಲ ತೆಗೆದುಕೊಳ್ಳುತ್ತಿದೆಯಾದರೆ, ತೈಲ, ಗ್ಯಾಸ್‍ನ ಮೇಲಿನ ತೆರಿಗೆಯಿಂದ ಕಳೆದ ಒಂದೂವರೆ ವರುಷಗಳಲ್ಲಿ ಸಂಗ್ರಹಿಸಿದ Rs 6.5 ಲಕ್ಷ ಕೋಟಿ ಹಣ ಎಲ್ಲಿಗೋಯಿತು? ಪಿಎಮ್‍ ಕೇರ್ಸ್ ನ ಸಾವಿರಾರು ಕೋಟಿ ಯಾರ ಜೇಬಿಗಿಳಿಯಿತು? ಲೆಕ್ಕ ಕೊಡುವುದೇ ಕೇಂದ್ರ ಸರಕಾರ? ಎಂದು ಸಾಮಾಜಿಕ ಕಾರ್ಯಕರ್ತ ಅಲ್ಮೆಡಾ ಗ್ಲಾಡ್‌ಸನ್ ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ಬೆಲೆ ಏರಿಕೆ ನಿರಂತರವಾಗಿದೆ. ಅತ್ತ ವಿದೇಶಿ ಬ್ಯಾಂಕುಗಳಿಂದ ಸಾಲ ತೆಗೆದುಕೊಳ್ಳಲಾಗುತ್ತಿದೆ. ಸಚಿವರು ದಿನಕ್ಕೊಂದು ಹೇಳಿಕೆ ಕೊಡುತ್ತಿದ್ದಾರೆ. ಇವೆಲ್ಲವೂ ಜನರನ್ನು ಗೊಂದಲಕ್ಕೆ ತಳ್ಳಿರುವುದಂತೂ ಸತ್ಯ.


ಇದನ್ನೂ ಓದಿ: ಉಚಿತ ಲಸಿಕೆ ನೀಡಿದ್ದೆ ಇಂಧನ ಬೆಲೆ ಏರಿಕೆಗೆ ಕಾರಣವೆಂದ ಕೇಂದ್ರ ಸಚಿವ: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. You bastards are anti nationals. You will never come up like this. Do something good to support the good work of the government which struggles to come out of the crisis

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...