Homeಅಂತರಾಷ್ಟ್ರೀಯಲಸಿಕೆ ಖರೀದಿಗೆ ವಿದೇಶಿ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಮುಂದಾದ ಭಾರತ: ಇಂಧನ ತೆರಿಗೆ ಎಲ್ಲಿಗೆ ಹೋಯಿತು?

ಲಸಿಕೆ ಖರೀದಿಗೆ ವಿದೇಶಿ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಮುಂದಾದ ಭಾರತ: ಇಂಧನ ತೆರಿಗೆ ಎಲ್ಲಿಗೆ ಹೋಯಿತು?

ಉಚಿತ ಲಸಿಕೆ ನೀಡುವ ಕಾರಣಕ್ಕಾಗಿ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆ ಏರಿಕೆಯಾಗುತ್ತಿದೆ ಎಂದು ಕೇಂದ್ರ ಸಚಿವರ ಹೇಳಿಕೆ ನೀಡಿದ್ದರು.

- Advertisement -
- Advertisement -

ಸುಮಾರು 66.7 ಕೋಟಿ ಕೋವಿಡ್ -19 ಲಸಿಕೆಗಳನ್ನು ಖರೀದಿಸಲು ಏಷ್ಯಾದ ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್‌ಗಳಿಂದ ಭಾರತವು 2 ಬಿಲಿಯನ್ ಡಾಲರ್ ಸಾಲ ಪಡೆಯಲು ಅರ್ಜಿ ಸಲ್ಲಿಸಿದೆ.

ಬೀಜಿಂಗ್ ಮೂಲದ ಏಷ್ಯನ್ ಇನ್‌ಫ್ರಾಸ್ಟ್ರಕ್ಚರ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್ (AIIB) ಮತ್ತು ಮನಿಲಾದ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ADB) ಶೀಘ್ರದಲ್ಲೇ ಭಾರತದ ಸಾಲದ ವಿನಂತಿಯನ್ನು ಪರಿಷ್ಕರಿಸಲಿವೆ ಎನ್ನಲಾಗಿದೆ. ಈ ಹಣವನ್ನು 66.7 ಕೋಟಿ ಕೋವಿಡ್ -19 ಡೋಸ್‌ಗಳನ್ನು ಖರೀದಿಸಲು ಬಳಸಲಾಗುತ್ತದೆ ಎಂದು ಸರ್ಕಾರ ಹೇಳಿದೆ.

ADB $1.5 ಶತಕೋಟಿ ಮತ್ತು AIIB ಸುಮಾರು $500 ಮಿಲಿಯನ್ ಸಾಲ ನೀಡುವ ನಿರೀಕ್ಷೆಯಿದೆ. ಭಾರತ ಸರ್ಕಾರವು ಈ ಯೋಜನೆಗಾಗಿ ಸುಮಾರು $58 ಮಿಲಿಯನ್ ಅನ್ನು ಹೂಡಿಕೆ ಮಾಡಲಿದೆ ಎನ್ನಲಾಗಿದೆ.

ಉಚಿತ ಲಸಿಕೆಗೆ ಬೆಲೆ ಏರಿಕೆ?

ಭಾರತ ಸರ್ಕಾರವು ಉಚಿತ ಲಸಿಕೆ ಮತ್ತು ಉಚಿತ ಪಡಿತರ ನೀಡುವ ಕಾರಣಕ್ಕಾಗಿ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆ ಏರಿಕೆಯಾಗುತ್ತಿದೆ ಎಂದು ಹಲವು ಬಿಜೆಪಿ ಮುಖಂಡರು ಮತ್ತು ಕೇಂದ್ರ ಸಚಿವರು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದರು. ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ರಾಜ್ಯ ಸಚಿವ ರಾಮೇಶ್ವರ್ ತೇಲಿ ಅಸ್ಸಾಂನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, “ಇಂಧನ ಬೆಲೆಗಳಲ್ಲಿ ಹೆಚ್ಚಳವಾಗಿಲ್ಲ. ಆದರೆ ತೆರಿಗೆಗಳು ಹೆಚ್ಚಿವೆ. ಈ ತೆರಿಗೆಯ ಹಣವನ್ನು ಉಚಿತ ಕೋವಿಡ್ ಲಸಿಕೆ ನೀಡಲು ಸಹಾಯಧನವಾಗಿ ಬಳಸಲಾಗಿದೆ. ನೀವು ಉಚಿತ ಲಸಿಕೆ ಪಡೆದಿರಬೇಕು ಅಲ್ಲವೇ? ಅದಕ್ಕೆ ಹಣ ಎಲ್ಲಿಂದ ಬಂದಿದೆ?” ಎಂದು ಪ್ರಶ್ನಿಸಿದ್ದರು.

ಈ ಹಿಂದೆ ಕೇಂದ್ರ ಪೆಟ್ರೋಲಿಯಂ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್‌ ಸಹ ಇದೇ ರೀತಿಯ ಹೇಳಿಕೆ ನೀಡಿದ್ದರು. ಉಚಿತ ಕೋವಿಡ್ ಲಸಿಕೆ ನೀಡುತ್ತಿರುವುದರಿಂದ ಮತ್ತು ಇತರ ಕಲ್ಯಾಣ ಕಾರ್ಯಕ್ರಮಗಳು ಜಾರಿಯಲ್ಲಿರುವುದರಿಂದ ಇಂಧನಗಳ ಮೇಲಿನ ತೆರಿಗೆ ಹೆಚ್ಚು ಮಾಡಲಾಗಿದೆ. ಹಾಗಾಗಿ ಪೆಟ್ರೋಲ್ – ಡೀಸೆಲ್ ಬೆಲೆ ಇಳಿಸಲು ಸಾಧ್ಯವಿಲ್ಲ ಎಂದಿದ್ದರು. ಜುಲೈ 27 ರಂದು ಮಾತನಾಡಿ “2020-21ರ ಸಾಲಿನ ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕ ಮತ್ತು ಸೆಸ್‌ನಿಂದಾಗಿ 3.4 ಲಕ್ಷ ಕೋಟಿ ರೂಗಳನ್ನು ಗಳಿಸಿದ್ದು, ಅದರ ಬಹುಪಾಲು ಹಣವನ್ನು ಉಚಿತ ಲಸಿಕೆ ಮತ್ತು ಕೋವಿಡ್ ಪರಿಹಾರ ಕಾರ್ಯಗಳಿಗಾಗಿ ಬಳಸಲಾಗಿದೆ” ಎಂದಿದ್ದರು.

ಲಸಿಕೆಗೆಂದೇ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆಯಲ್ಲಿ ಗಣನೀಯವಾಗಿ ಏರಿಕೆಯಾಗಿರುವಾಗ ಮತ್ತೆ ವಿದೇಶಿ ಬ್ಯಾಂಕುಗಳಿಂದ ಸಾಲ ಮಾಡುವ ಅಗತ್ಯವೇನಿದೆ? ಇಂಧನ ತೆರಿಗೆ ಎಲ್ಲಿಗೆ ಹೋಯಿತು? ವಿದೇಶಿ ಸಾಲ ಸಿಗುವುದಿದ್ದರೆ ಬೆಲೆ ಏಕೆ ಇಳಿಸಿಲ್ಲ ಎಂಬ ಪ್ರಶ್ನೆ ಉದ್ಭವವಾಗಿದೆ.

ಇಂಧನ ತೆರಿಗೆ ಸಂಗ್ರಹ ಎಷ್ಟು?

2021 ರ ಈ ವರ್ಷದ ಎಪ್ರಿಲ್‌ನಿಂದ-ಜುಲೈವರೆಗಿನ ನಾಲ್ಕು ತಿಂಗಳಲ್ಲೇ ಸರ್ಕಾರ ಸಂಗ್ರಹಿಸಿದ ಅಬಕಾರಿ ಸುಂಕ 1 ಲಕ್ಷ ಕೋಟಿಗಿಂತ ಹೆಚ್ಚು! ಅದಕ್ಕೂ ಮುಂಚಿನ ವರ್ಷ 3.4 ಲಕ್ಷ ಕೋಟಿ ರೂ ಸಂಗ್ರಹಿಸಿದ್ದಾಗಿ ಕೇಂದ್ರ ಸಚಿವರು ತಿಳಿಸಿದ್ದಾರೆ. ಅಲ್ಲಿಗೆ ಒಂದು ವರ್ಷ ನಾಲ್ಕು ತಿಂಗಳಿನಲ್ಲಿಯೇ  4.4 ಲಕ್ಷ ಕೋಟಿ ರೂ ಗೂ ಹೆಚ್ಚು ಸಂಗ್ರಹವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ

ಕೇಂದ್ರ ಸರಕಾರ ವ್ಯಾಕ್ಸೀನಿಗಾಗಿ ಅಂತರಾಷ್ಟ್ರೀಯ ಬ್ಯಾಂಕುಗಳಾದ ಬೀಜಿಂಗ್‍ನ Asian Infrastructure Investment Bank (AIIB) ಹಾಗೂ Asian Development (ADB), ಫಿಲಿಪೈನ್ಸ್ ನಿಂದ Rs 15000 ಕೋಟಿ ಸಾಲ ತೆಗೆದುಕೊಳ್ಳುತ್ತಿದೆ, ಅದೂ ಕೋವಿಡ್ ವ್ಯಾಕ್ಸೀನಿಗಾಗಿ. ಈ ಸಾಲದಲ್ಲಿ ADB ಫಿಲಿಪೈನ್ಸ್ ಕೊಡುತ್ತಿರುವುದು Rs 11500 ಕೋಟಿಯಾದರೆ, ಬೀಜಿಂಗ್‍ನ AIIB ಯ ಪಾಲು Rs 3500 ಕೋಟಿ.

ಕಳೆದ ವರುಷ ಅದೇನೋ ಚೀನಾದಿಂದ ಆಮದು ಮಾಡಲ್ಲ, ಅವರೊಡನೆ ಯಾಪಾರ ಮಾಡಲ್ಲ, ಅವರ App ಗಳನ್ನು ಬಂದ್ ಮಾಡ್ತೀವಿ, ಚೀನಾದ ಪಟಾಕಿ, ರಾಕಿ ಇಲ್ಲ ಎಂದೆಲ್ಲಾ ಕೆಲವರು ಬೀದಿ-ಬೀದಿಗಳಲ್ಲಿ ಬೊಗಳಿದ್ದೇ ಬಂತು. 2020-2021 ರಲ್ಲಿ ಭಾರತ-ಚೀನಾದ ನಡುವಿನ ವ್ಯಾಪಾರ ಇತಿಹಾಸದಲ್ಲೇ ಗರಿಷ್ಟ ಮಟ್ಟದ್ದೆಂದು ಕೇಂದ್ರ ಸರಕಾರದ ವರದಿಗಳು ಹೇಳುತ್ತಿವೆ.

ವ್ಯಾಕೀನಿಗಾಗಿ ಸರಕಾರ ಸಾಲ ತೆಗೆದುಕೊಳ್ಳುತ್ತಿದೆಯಾದರೆ, ತೈಲ, ಗ್ಯಾಸ್‍ನ ಮೇಲಿನ ತೆರಿಗೆಯಿಂದ ಕಳೆದ ಒಂದೂವರೆ ವರುಷಗಳಲ್ಲಿ ಸಂಗ್ರಹಿಸಿದ Rs 6.5 ಲಕ್ಷ ಕೋಟಿ ಹಣ ಎಲ್ಲಿಗೋಯಿತು? ಪಿಎಮ್‍ ಕೇರ್ಸ್ ನ ಸಾವಿರಾರು ಕೋಟಿ ಯಾರ ಜೇಬಿಗಿಳಿಯಿತು? ಲೆಕ್ಕ ಕೊಡುವುದೇ ಕೇಂದ್ರ ಸರಕಾರ? ಎಂದು ಸಾಮಾಜಿಕ ಕಾರ್ಯಕರ್ತ ಅಲ್ಮೆಡಾ ಗ್ಲಾಡ್‌ಸನ್ ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ಬೆಲೆ ಏರಿಕೆ ನಿರಂತರವಾಗಿದೆ. ಅತ್ತ ವಿದೇಶಿ ಬ್ಯಾಂಕುಗಳಿಂದ ಸಾಲ ತೆಗೆದುಕೊಳ್ಳಲಾಗುತ್ತಿದೆ. ಸಚಿವರು ದಿನಕ್ಕೊಂದು ಹೇಳಿಕೆ ಕೊಡುತ್ತಿದ್ದಾರೆ. ಇವೆಲ್ಲವೂ ಜನರನ್ನು ಗೊಂದಲಕ್ಕೆ ತಳ್ಳಿರುವುದಂತೂ ಸತ್ಯ.


ಇದನ್ನೂ ಓದಿ: ಉಚಿತ ಲಸಿಕೆ ನೀಡಿದ್ದೆ ಇಂಧನ ಬೆಲೆ ಏರಿಕೆಗೆ ಕಾರಣವೆಂದ ಕೇಂದ್ರ ಸಚಿವ: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. You bastards are anti nationals. You will never come up like this. Do something good to support the good work of the government which struggles to come out of the crisis

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...