Homeಮುಖಪುಟಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಮೇಲುಗೈ, ಬಿಜೆಪಿಗೆ ಮುಖಭಂಗ

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಮೇಲುಗೈ, ಬಿಜೆಪಿಗೆ ಮುಖಭಂಗ

ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರದಲ್ಲೇ ಬಿಜೆಪಿ ಮುಖಭಂಗ ಎದುರಿಸಿದ್ದು, ಹಾವೇರಿ ಜಿಲ್ಲೆಯ ಬಂಕಾಪುರ ಪುರಸಭೆ ಮತ್ತು ಗುತ್ತಲ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ.

- Advertisement -
- Advertisement -

ರಾಜ್ಯದ 5 ನಗರಸಭೆ ಸಭೆಗಳು ಸೇರಿದಂತೆ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಡಿಸೆಂಬರ್ 27ರಂದು ನಡೆದಿದ್ದ ಚುನಾವಣೆಯ ಫಲಿತಾಂಶ ಇಂದು (ಗುರುವಾರ) ಪ್ರಕಟವಾಗಿದೆ. ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದು, ಆಡಳಿತರೂಢ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. 

ರಾಜ್ಯದ ಒಟ್ಟು 19 ಪುರಸಭೆಗಳ ಪೈಕಿ ಕಾಂಗ್ರೆಸ್- 8, ಬಿಜೆಪಿ- 6, ಜೆಡಿಎಸ್- 1 ಪುರಸಭೆಗಳ ಅಧಿಕಾರ ಗಿಟ್ಟಿಸಿಕೊಂಡಿವೆ. ಇನ್ನು 4 ಪುರಸಭೆಗಳಲ್ಲಿ ಅತಂತ್ರ ಫಲಿತಾಂಶ ಬಂದಿದೆ.

ಒಟ್ಟು 34 ಪಟ್ಟಣ ಪಂಚಾಯತ್‌ಗಳ ಪೈಕಿ ಕಾಂಗ್ರೆಸ್- 13, ಬಿಜೆಪಿ- 5, ಇತರರು- 5 ಪುರಸಭೆಗಳಲ್ಲಿ ಅಧಿಕಾರ ಹಿಡಿದ್ದಾರೆ. ಉಳಿದ 10 ಪುರಸಭೆಗಳಲ್ಲಿ ಅತಂತ್ರ ಫಲಿತಾಂಶ ಎದುರಾಗಿದೆ.

ಇನ್ನು 5 ನಗರಸಭೆಗಳ ಪೈಕಿ ಬಿಜೆಪಿ- 3 (ಚಿಕ್ಕಮಗಳೂರು, ಹೆಬ್ಬಗೋಡಿ, ಗದಗ-ಬೆಟಗೇರಿ) ನಗರ ಸಭೆಗಳಲ್ಲಿ ಅಧಿಕಾರ ಪಡೆದಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಯಾವುದೇ ನಗರಸಭೆಯಲ್ಲಿ ಬಹುಮತ ಪಡೆಯಲು ಸಾಧ್ಯವಾಗಿಲ್ಲ.  2 ನಗರಸಭೆ (ಶಿರಾ, ಹೊಸಪೇಟೆ)ಗಳಲ್ಲಿ ಅತಂತ್ರ ಪರಿಸ್ಥಿತಿ ಇದೆ.

ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರದಲ್ಲೇ ಬಿಜೆಪಿ ಮುಖಭಂಗ ಎದುರಿಸಿದ್ದು, ಹಾವೇರಿ ಜಿಲ್ಲೆಯ ಬಂಕಾಪುರ ಪುರಸಭೆ ಮತ್ತು ಗುತ್ತಲ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ.

ಬಂಕಾಪುರ ಪುರಸಭೆಯಲ್ಲಿರುವ ಒಟ್ಟು 23 ಸ್ಥಾನಗಳ ಪೈಕಿ ಕಾಂಗ್ರೆಸ್- 14, ಬಿಜೆಪಿ- 7, ಪಕ್ಷೇತರರು- 2 ಸ್ಥಾನ ಗೆದ್ದಿದ್ದಾರೆ. ಇನ್ನು, ಗುತ್ತಲ ಪಟ್ಟಣ ಪಂಚಾಯಿತಿಯಲ್ಲಿರುವ ಒಟ್ಟು 18 ಸ್ಥಾನಗಳ ಪೈಕಿ ಕಾಂಗ್ರೆಸ್‌- 11, ಬಿಜೆಪಿ- 6, ಪಕ್ಷೇತರರು- 1 ಸ್ಥಾನಗಳಲ್ಲಿ ಗೆಲುವುಸಾಧಿಸಿದ್ದಾರೆ.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ಜಿದ್ದಾಜಿದ್ದಿನ ಕಣವಾಗಿದ್ದ ಬಿಡದಿ ಪುರಸಭೆಯಲ್ಲಿ ಜೆಡಿಎಸ್‌ ಅಧಿಕಾರ ಪಡೆದುಕೊಂಡಿದೆ. ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲಿಯೂ ಠೇವಣಿ ಕಳೆದುಕೊಂಡು ಮುಖಭಂಗ ಅನುಭವಿಸಿದೆ. 

ಬಿಡದಿ ಪುರಸಭೆಯ ಒಟ್ಟು 23 ವಾರ್ಡುಗಳ ಪೈಕಿ ಜೆಡಿಎಸ್ 14 ವಾರ್ಡುಗಳಲ್ಲಿ, ಕಾಂಗ್ರೆಸ್ 9 ವಾರ್ಡುಗಳಲ್ಲಿ ಗೆದ್ದಿವೆ. ಬಿಜೆಪಿ 12 ವಾರ್ಡ್‌ಗಳಲ್ಲಿ ಸ್ಪರ್ಧಿಸಿತ್ತು, 12 ವಾರ್ಡುಗಳಲ್ಲಿಯೂ ಠೇವಣಿ ಕಳೆದುಕೊಂಡಿದೆ.


ಇದನ್ನೂ ಓದಿ: ಜೈಲುಗಳಲ್ಲೂ ಜಾತಿಭೇದ ಮೆರೆದಿರುವ ಮನುವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...