Homeಮುಖಪುಟಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೀಸಲಾತಿ ಪ್ರಶ್ನೆ ಮತ್ತು ಸುಪ್ರೀಂ ತೀರ್ಪು

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೀಸಲಾತಿ ಪ್ರಶ್ನೆ ಮತ್ತು ಸುಪ್ರೀಂ ತೀರ್ಪು

- Advertisement -
- Advertisement -

ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿ ಕುರಿತು ಸರ್ವೋಚ್ಚ ನ್ಯಾಯಾಲಯ ನೀಡಿರುವ ಇತ್ತೀಚಿನ ತೀರ್ಪಿನ ಬಗ್ಗೆ ಕರ್ನಾಟಕ ಸೇರಿದಂತೆ ಇತರ ರಾಜ್ಯ ಸರ್ಕಾರಗಳೂ ಹೆಚ್ಚು ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಕೋಮು ವಿಭಜನೆಯ ರಾಜಕಾರಣದ ಭಜನೆಯಲ್ಲಿ ಮುಳುಗಿಹೋಗಿರುವ ಮೆಜಾರಿಟೇರಿಯನ್ ರಾಜ್ಯ ಸರ್ಕಾರಕ್ಕೆ ಆಲಕ್ಷಿತ ಸಮುದಾಯಗಳ ಕುರಿತು ಕಾಳಜಿ ಇರುವಂತೆ ತೋರುತ್ತಿಲ್ಲ.

1992ರಲ್ಲಿ ಸಂವಿಧಾನಕ್ಕೆ 73 ಮತ್ತು 74ನೇ ತಿದ್ದುಪಡಿ ತಂದು ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಕ್ಕೆ ರಾಜಕೀಯ ಮೀಸಲಾತಿಯನ್ನು ಪಿ.ವಿ.ನರಸಿಂಹರಾವ್ ಸರ್ಕಾರ ನೀಡಿತು. ಕರ್ನಾಟಕ ಸರ್ಕಾರ 1993ರಲ್ಲಿ ಇದನ್ನು ಅನುಸರಿಸಿತು. 1991ರ ಜಾತಿ ಜನಗಣತಿ ಆಧರಿಸಿ ಮೀಸಲು ನಿಗದಿ ಮಾಡಲಾಗಿತ್ತು. ಶಿಕ್ಷಣ ಮತ್ತು ಉದ್ಯೋಗದ ವಿಚಾರಕ್ಕೆ ಸಂಬಂಧಿಸಿದಂತೆ ಮಾಡಲಾಗಿದ್ದ ಚಿನ್ನಪ್ಪರೆಡ್ಡಿ ವರದಿಯನ್ನು ರಾಜಕೀಯ ಮೀಸಲಾತಿಗೂ ಅನ್ವಯ ಮಾಡಲಾಯಿತು. ಕೋರ್ಟು ಕಟ್ಟಲೆ ಎಂದು ಅಲೆದಾಡಿರುವ ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿ ವಿಚಾರಕ್ಕೆ ಕೊನೆಯ ಮೊಳೆಯನ್ನು ಹೊಡೆಯಲು ಇಡೀ ವ್ಯವಸ್ಥೆ ಈಗ ಹೊರಟಿದೆ.

ಪಿ.ವಿ.ನರಸಿಂಹರಾವ್

ಹಿಂದುಳಿದ ವರ್ಗಗಳು ರಾಜಕೀಯದಿಂದ ವಂಚಿತವಾಗುವ ಅಥವಾ ಆಮೂಲಾಗ್ರ ಕ್ರಾಂತಿಯನ್ನೇ ಮಾಡಬಲ್ಲ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ. ಮಹಾರಾಷ್ಟ್ರ ಸರ್ಕಾರ ಸ್ಥಳೀಯ ಸಂಸ್ಥೆಗಳಲ್ಲಿ ನೀಡಿರುವ ಮೀಸಲಾತಿ ಅವೈಜ್ಞಾನಿಕವಾಗಿರುವುದಾಗಿ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. 2010ರಲ್ಲಿ ನೀಡಲಾಗಿರುವ ತೀರ್ಪನ್ನು ಪುನರುಚ್ಚರಿಸಿರುವ ಕೋರ್ಟ್, “ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯ ಕುರಿತು ಮೂರು ಹಂತದ ಸಮೀಕ್ಷೆ ಮಾಡದ ಹೊರತು ಚುನಾವಣೆ ಮಾಡುವಂತಿಲ್ಲ ಹಾಗೂ ಸದ್ಯಕ್ಕೆ ಹಿಂದುಳಿದ ವರ್ಗಗಳ ಶೇ.27ರಷ್ಟು ಮೀಸಲಾತಿಯನ್ನು ಸಾಮಾನ್ಯ ಕ್ಷೇತ್ರಗಳೆಂದು ಘೋಷಿಸಿ ಚುನಾವಣೆ ನಡೆಸಬಹುದು” ಎಂದಿದೆ. ಸುಪ್ರೀಂ ಸೂಚನೆ ಹಲವು ಆತಂಕಗಳಿಗೆ ಕಾರಣವಾಗಿದೆ.

’ನ್ಯಾಯಪಥ’ ಪತ್ರಿಕೆಯೊಂದಿಗೆ ಮಾತನಾಡಿದ ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಎಚ್.ಎನ್. ನಾಗಮೋಹನ ದಾಸ್, “ಕೋರ್ಟ್ ಆದೇಶದ ಅನ್ವಯ ಮಾಹಿತಿ ಸಂಗ್ರಹ ಮಾಡಬೇಕು. ಅದರ ಆಧಾರದಲ್ಲಿ ಯಾರ್‍ಯಾರು, ಯಾವ್ಯಾವ ವರ್ಗಕ್ಕೆ ಸೇರಿದವರೆಂದು ಮೀಸಲು ವಿಂಗಡಣೆ ಮಾಡಬೇಕು. ಯಾವ ವರ್ಗಕ್ಕೆ ಎಷ್ಟು ಮೀಸಲು ಕೊಡಬೇಕೆಂದು ನಿರ್ಧರಿಸಬೇಕು. ಇದರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಆದರೆ ಈ ದತ್ತಾಂಶ ಸಂಗ್ರಹಣೆ ಜಾತಿ ಗಣತಿಯಿಂದ ಮಾತ್ರ ಸಾಧ್ಯ. ಜಾತಿಗಣತಿಯನ್ನು ಕೇಂದ್ರ ಸರ್ಕಾರ ಮಾಡಬಹುದೇ ಹೊರತು ರಾಜ್ಯ ಸರ್ಕಾರವಲ್ಲ. 1951ರಿಂದ ಇಲ್ಲಿಯವರೆಗೂ ಕೇಂದ್ರ ಸರ್ಕಾರ ಜನಗಣತಿ ಮಾಡಿದೆ. ಆದರೆ ಹಿಂದುಳಿದ ವರ್ಗಗಳ ಜಾತಿಗಣತಿ ನಡೆದಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜಾತಿಗಣತಿ ನಡೆದಿದೆ. ಈಗಲೂ ಕೂಡ ಕೇಂದ್ರ ಸರ್ಕಾರ ನಾವು ಜಾತಿಗಣತಿ ಮಾಡಲ್ಲ ಎನ್ನುತ್ತಿದೆ. ಆದರೆ ಜಾತಿಗಣತಿಯನ್ನು ರಾಜ್ಯ ಸರ್ಕಾರ ಮಾಡುವಂತಿಲ್ಲ. ಇವತ್ತು ನಮ್ಮ ಮುಂದೆ ದತ್ತಾಂಶಗಳಿಲ್ಲ. ಇಡೀ ದೇಶದ ಜಾತಿಗಣತಿ ಒಂದೆರಡು ತಿಂಗಳಲ್ಲಿ ಆಗುವಂತಹ ಕೆಲಸ ಅಲ್ಲ. ಇದಕ್ಕೆ ಸಮಯ ಹಿಡಿಯುತ್ತದೆ. ಹೀಗಾಗಿ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಮರುಪರಿಶೀಲಿಸಬೇಕು” ಎಂದರು.

“ಕೋರ್ಟ್ ಆದೇಶದಂತೆ ಹಿಂದುಳಿದ ವರ್ಗಕ್ಕೆ ಮೀಸಲಿಟ್ಟ ಸ್ಥಾನಗಳನ್ನು ಸಾಮಾನ್ಯ ವರ್ಗ ಎಂದು ಪರಿಗಣಿಸಿ ಚುನಾವಣೆ ನಡೆಸಿದರೆ, ಹಿಂದುಳಿದ ವರ್ಗಗಳು ಈಗ ಅನುಭವಿಸುತ್ತಿರುವ ಮೀಸಲಾತಿಯನ್ನೂ ಕಳೆದುಕೊಂಡುಬಿಡುತ್ತವೆ. ಹೀಗಾಗಿ ತೀರ್ಪನ್ನು ಪುನರ್ ಪರಿಶೀಲಿಸಬೇಕು. ಜಾತಿಗಣತಿ ಮಾಡಿ ಮೀಸಲಾತಿ ನಿಗದಿ ಮಾಡುವವರೆಗೂ ಯಥಾಸ್ಥಿತಿ ಕಾಪಾಡಿಕೊಂಡು ಹೋಗುವುದು ಸೂಕ್ತ. ದತ್ತಾಂಶ ಸಿಕ್ಕಿದ ಬಳಿಕ ಮರುವರ್ಗೀಕರಣ ಆಗಲಿ” ಎಂದು ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು.

“ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನೇಮಿಸಲಾದ ಕಾಂತರಾಜ್ ಆಯೋಗ ಎಲ್ಲ ಜಾತಿಗಳ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಸಮೀಕ್ಷೆ ನಡೆಸಿದೆ. ಈ ಸಮೀಕ್ಷೆಯ ವರದಿಯನ್ನು ಸರ್ಕಾರ ಕೂಡಲೇ ಸ್ವೀಕಾರ ಮಾಡಿ ಅದನ್ನು ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡಬೇಕು. ಸುಪ್ರೀಂ ಕೋರ್ಟ್‌ನ ಸೂಕ್ತ ಆದೇಶಗಳನ್ನು ಪಡೆದು ಕಾಂತರಾಜ್ ಆಯೋಗದ ವರದಿಯ ಆಧಾರದ ಮೇಲೆ ಮೀಸಲಾತಿ ಮರುವರ್ಗೀಕರಣ ಮಾಡಲಿ. ಇದಾಗದಿದ್ದರೆ ಪ್ರಜಾಪ್ರಭುತ್ವ ಹಾಗೂ ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

ಎಚ್.ಎನ್. ನಾಗಮೋಹನ ದಾಸ್

“ಹಿಂದುಳಿದ ವರ್ಗದಲ್ಲಿ ಸಮುದಾಯಗಳು ಅಸಂಘಟಿತ ಅನ್ನೋದು ನಿಜ. ಆದರೆ ರಾಜ್ಯ ಸರ್ಕಾರ ಈ ಮೀಸಲಾತಿಯನ್ನು ಕೊಟ್ಟಿತ್ತು. ಆದರೆ ಇಂದು ಸುಪ್ರೀಂ ಕೋರ್ಟ್ ಅದನ್ನು ರಿವರ್ಸ್ ಮಾಡಿದೆ. ಆದರೆ ರಾಜ್ಯ ಸರ್ಕಾರಗಳು ಧ್ವನಿ ಎತ್ತಬೇಕಲ್ಲ? ಒಬ್ಬರೂ ಇದರ ಬಗ್ಗೆ ಧ್ವನಿ ಎತ್ತುತ್ತಲೇ ಇಲ್ಲ ಎಂದು ವಿಷಾದಿಸಿದರು.
ಮೀಸಲಾತಿ ಹಾಗೂ ಜಾತಿಗಣತಿ ವಿಚಾರ ಬಂದಾಗ ಒಂದು ವರ್ಗದ ಜನ, ’ಈ ರೀತಿಯ ಕ್ರಮಗಳಿಂದ ಜಾತಿ ಪದ್ಧತಿ ಗಟ್ಟಿಯಾಗಿಬಿಡುತ್ತದೆ’ ಎಂಬ ಆಕ್ಷೇಪಗಳನ್ನು ಎತ್ತುವುದು ಸಾಮಾನ್ಯ. ಇದಕ್ಕೆ ಉತ್ತರಿಸಿದ ಜಸ್ಟೀಸ್ ದಾಸ್ ಅವರು, “’ಮೀಸಲಾತಿ-ಸತ್ಯ ಮತ್ತು ಭ್ರಮೆ’ ಎಂಬ ಕೃತಿ ಬರೆಯುತ್ತಿದ್ದೇನೆ. ಈ ಪ್ರಶ್ನೆಗೆ ಅಲ್ಲಿಯೂ ಉತ್ತರಿಸುವ ಪ್ರಯತ್ನ ಮಾಡಿದ್ದೇನೆ. 1881ರಿಂದ 1931ರ ನಡುವೆ ಜನಗಣತಿ, ಜಾತಿಗಣತಿಯೂ ನಡೆದಿದೆ. 1941ರಲ್ಲಿ ಜಾತಿಜನಗಣತಿ ಮಾಡಬೇಕಿತ್ತು. ಆದರೆ ಎರಡನೇ ಮಹಾಯುದ್ಧ ಅಡ್ಡಬಂತು. ಆದರೆ ಸ್ವಾತಂತ್ರ್ಯ ಬಂದು ಇಲ್ಲಿಯವರೆಗೂ ಜಾತಿಗಣತಿ ನಡೆದಿಲ್ಲ. ಜಾತಿಗಣತಿ ನಡೆಸುವುದನ್ನು ನಿಲ್ಲಿಸಿ 90 ವರ್ಷಗಳಾದರೂ ಜಾತಿಪದ್ಧತಿ ಕಡಿಮೆಯಾಗಿದೆಯಾ? ನಡೆಸದೆ ಇದ್ದರೆ ಜಾತಿ ಕಡಿಮೆಯಾಗುತ್ತದೆಯಾ? ದೇಶದ ಎಲ್ಲಾ ರಾಜಕೀಯ ಪಕ್ಷಗಳು ಅಭ್ಯರ್ಥಿಗಳಿಗೆ ಟಿಕೆಟ್ ಕೊಡೋದು ಜಾತಿ ಲೆಕ್ಕಾಚಾರದ ಮೇಲೆ. ಚುನಾವಣೆಗಳಲ್ಲಿ ಜಾತಿ, ಧರ್ಮ ತರುತ್ತಾರೆ. ಇದು ಜಾತಿ ವ್ಯವಸ್ಥೆಯನ್ನು ಗಟ್ಟಿ ಮಾಡಿದೆ. ರಾಜಕಾರಣ ಹಾಗೂ ರಾಜಕಾರಣಿಗಳ ಸ್ವಾರ್ಥದಿಂದ ಜಾತಿ ವ್ಯವಸ್ಥೆ ಬಲಿಷ್ಠವಾಗಿದೆ. ಎಷ್ಟು ಬಡವರು ಇದ್ದಾರೆ, ಸಾಕ್ಷರತೆ, ನಿರುದ್ಯೋಗ, ಆರೋಗ್ಯ ಸ್ಥಿತಿ ಹೇಗಿದೆ, ಇತ್ಯಾದಿ ವಿಷಯಗಳನ್ನು ತಿಳಿಯಲೆಂದೇ ಸಮೀಕ್ಷೆ ಮಾಡಲಾಗುತ್ತದೆ. ಅದರ ಆಧಾರದ ಮೇಲೆ ಯೋಜನೆಗಳನ್ನು ರೂಪಿಸಲಾಗುತ್ತದೆ. ದತ್ತಾಂಶಗಳೇ ಇಲ್ಲವಾದರೆ ಯೋಜನೆಗಳೇ ಇಲ್ಲವಾಗುತ್ತವೆ” ಎಂದು ಎಚ್ಚರಿಸಿದರು.

ಹಿಂದುತ್ವಕ್ಕಾಗಿ ಮಾತ್ರ ಹಿಂದುಳಿದ ಜಾತಿಗಳು ಬಿಜೆಪಿಗೆ ಬೇಕಾಗಿದೆ: ದ್ವಾರಕನಾಥ್

’ನ್ಯಾಯಪಥ’ದೊಂದಿಗೆ ಮಾತನಾಡಿದ ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕನಾಥ್ “ನಿಮ್ಮ ಬಳಿ ಅಂಕಿ-ಅಂಶ ಇದೆಯಾ ಅಂತ ಸುಪ್ರೀಂ ಕೋರ್ಟ್ ಕೇಳುತ್ತಿದೆ. ಭಾರತದ ಯಾವುದೇ ರಾಜ್ಯಗಳು ಹೊಂದಿಲ್ಲದೆ ಇರದಷ್ಟು ಅಂಕಿ-ಅಂಶಗಳನ್ನು ಕರ್ನಾಟಕ ಹೊಂದಿದೆ. ಜಾತಿವಾರು ಸಮೀಕ್ಷೆಯಾಗಿದೆ. ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಕುರಿತು ಕನಿಷ್ಠ ಕಾಳಜಿ ಇದ್ದರೆ ಕಾಂತರಾಜ್ ಆಯೋಗದ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಬೇಕು. ಈ ಪ್ರಯತ್ನವನ್ನು ಸರ್ಕಾರ ಮಾಡುತ್ತಿಲ್ಲ. ಇವರಿಗೆ ಇಚ್ಛಾ ಶಕ್ತಿ ಇಲ್ಲದಿರುವುದರಿಂದ ಈ ಸಮಸ್ಯೆಯಾಗುತ್ತಿದೆ. ಹಿಂದುಳಿದ ಸಮುದಾಯಗಳ ಕುರಿತು ಕಾಳಜಿ ಇದ್ದರೆ ತನ್ನ ಬಳಿ ಇರುವ ದತ್ತಾಂಶಗಳನ್ನು ಸರ್ಕಾರ ಬಿಡುಗಡೆ ಮಾಡುತ್ತಿತ್ತು. ಹಿಂದುತ್ವ ಎಂದು ಹೋರಾಡಿ ಹುತಾತ್ಮರಾಗಲು ಹಿಂದುಳಿದ ವರ್ಗಗಳ ಹುಡುಗರು ಬೇಕು. ಹಿಂದುಳಿದ ವರ್ಗಗಳಿಗೆ ಏನನ್ನೂ ಕೊಡುವುದಿಲ್ಲ” ಎಂದರು.

“ಶಿಕ್ಷಣ ಹಾಗೂ ಉದ್ಯೋಗ ನೇಮಕಾತಿ ಮೀಸಲು ಮಾಹಿತಿಯು ದ್ವಿತೀಯ ಮೂಲದ ಆಧಾರದಲ್ಲಿರುತ್ತದೆ. ಮೀಸಲಾತಿ ಪಡೆದ ವರ್ಗದಲ್ಲೇ ಬಲಿಷ್ಟ ಜಾತಿಗಳ ಮೂಲದ್ದಾಗಿರುತ್ತದೆ. ಜಾತಿ ಸಮೀಕ್ಷೆ, ಜಾತಿ ಜನಗಣತಿ ಮಾಡಿದರೆ ಈ ಸತ್ಯಗಳೆಲ್ಲ ಹೊರಗೆ ಬರುತ್ತವೆ ಎಂಬ ಕಾರಣಕ್ಕೆ ಫಲಾನುಭವಿ ಜಾತಿಗಳು, ಬಲಾಢ್ಯ ಜಾತಿಗಳು ಮೌನವಾಗಿರುತ್ತವೆ. ಹಿಂದುಳಿದ ವರ್ಗಗಳ ಪಟ್ಟಿಯೇ ಇಲ್ಲಿ ಅವೈಜ್ಞಾನಿಕವಾಗಿದೆ. ಇಲ್ಲಿ ಹುಲಿಗಳನ್ನು, ಸಿಂಹಗಳನ್ನು, ಚಿರತೆಗಳನ್ನು, ಕುರಿ, ಮೊಲಗಳನ್ನೂ ಒಂದೇ ಕಡೆ ಹಾಕಿದ್ದಾರೆ. ಮೈಸೂರು ಮೃಗಾಲಯದಲ್ಲಾದರೂ ಒಂದೊಂದು ಪ್ರಾಣಿಗೆ ಒಂದೊಂದು ಪ್ರತ್ಯೇಕ ಬೋನು ಇರಿಸಿದ್ದಾರೆ. ಅವುಗಳಿಗೆ ಸಿಗಬೇಕಾದ ಆಹಾರ ಸಿಗುತ್ತಿದೆ. ಆದರೆ ಹಿಂದುಳಿದ ವರ್ಗದಲ್ಲಿನ ಸಹಾಯಕ ಸಮುದಾಯಗಳಿಗೆ ಮೈಸೂರು ಮೃಗಾಲಯದಲ್ಲಿ ಪ್ರಾಣಿಗಳಿಗೆ ದೊರೆತಿರುವ ಆದ್ಯತೆಯೂ ಸಿಕ್ಕಿಲ್ಲ” ಎಂದು ವಿಷಾದಿಸಿದರು.

“ಹಿಂದುಳಿದ ವರ್ಗಗಳಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮಾತ್ರ ಮೀಸಲಾತಿ ದೊರಕುತ್ತಿತ್ತು. ಶಾಸನಸಭೆಗಳಲ್ಲಿಯೂ ಮೀಸಲಾತಿಯನ್ನು ಪರಿಶಿಷ್ಟ ಜಾತಿ ಸಮುದಾಯಕ್ಕೆ ನೀಡಿದಂತೆ ನೀಡಬೇಕು ಎಂದು ಕೇಳಲಾಗುತ್ತಿತ್ತು. ಈಗ ಇರುವುದನ್ನೂ ಕಳೆದುಕೊಳ್ಳುವಂತಾಗಿದೆ. ಭಾರತದ ಇತಿಹಾಸದಲ್ಲಿ ತನಗಿದ್ದ ಸವಲತ್ತನ್ನು ಕಳೆದುಕೊಳ್ಳುತ್ತಿರುವುದು ಹಿಂದುಳಿದ ವರ್ಗಗಳು ಮಾತ್ರವೇ. ಎಸ್.ಸಿ., ಎಸ್.ಟಿ. ಸಮುದಾಯಗಳು ತಮಗೆ ಅನ್ಯಾಯವಾದರೆ ಕನಿಷ್ಠ ಪಕ್ಷ ಪ್ರತಿಭಟಿಸುತ್ತವೆ. ಆದರೆ ಹಿಂದುಳಿದ ವರ್ಗಗಳು ಅಸಂಘಟಿತ ಸಮುದಾಯಗಳು. ಪ್ರತಿಭಟನೆ ದಾಖಲಿಸುವುದೇ ಇಲ್ಲ” ಎಂದು ಹೇಳಿದರು.

ಸಿ.ಎಸ್.ದ್ವಾರಕನಾಥ್

“ನಾನು ಆಯೋಗದಲ್ಲಿದ್ದಾಗ ತರಿಸಿಕೊಂಡ ಮಾಹಿತಿಯು ಹೇಗಿತ್ತೆಂದರೆ, ಪ್ರವರ್ಗ ಒಂದರಲ್ಲಿ 95 ಜಾತಿಗಳಿವೆ. ಇಲ್ಲಿಯವರೆಗೆ ಮೀಸಲಾತಿಯನ್ನು ತೆಗೆದುಕೊಂಡಿರುವುದು ಕೇವಲ 23 ಜಾತಿಗಳು ಮಾತ್ರ. ಕ್ಯಾಟಗರಿ 2ಎನಲ್ಲಿ 102 ಜಾತಿಗಳಿವೆ. ಆದರೆ ಅಲ್ಲಿ ಮೀಸಲಾತಿ ಅನುಭವಿಸಿದ್ದು 27 ಜಾತಿಗಳು ಮಾತ್ರ. ಇದು ಹತ್ತು ವರ್ಷದ ಹಿಂದಿನ ಪರಿಸ್ಥಿತಿ. ಆದರೆ ಈಗಲೂ ಬದಲಾಗಿಲ್ಲ. ಈ ಪಟ್ಟಿಯಲ್ಲಿರುವ ಅಲೆಮಾರಿಗಳು, ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಜಾತಿಗಳಿಗೆ ಯಾವುದೇ ಪ್ರಾತಿನಿಧ್ಯ ಸಿಗುತ್ತಲೇ ಇಲ್ಲ. ಈ ಅಸಮಾನತೆಯನ್ನು ಸಿದ್ದರಾಮಯ್ಯನವರ ಸರ್ಕಾರದಲ್ಲೇ ನಿವಾರಿಸಬೇಕಿತ್ತು. ಆದರೆ ಆಗಲಿಲ್ಲ. ಈ ಸರ್ಕಾರದಲ್ಲಿ ಪರಿಹಾರ ದೊರೆಯುವ ಸೂಚನೆಯೂ ಇಲ್ಲ. ಈ ಸಮುದಾಯಗಳಲ್ಲಿ ಧ್ವನಿ ಎತ್ತುವವರೂ ಇಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ಜಾತಿ ಗಣತಿ 1931ರಲ್ಲಿ ನಡೆದ ಬಳಿಕ ಇಲ್ಲಿಯವರೆಗೂ ಹಲವು ಬದಲಾವಣೆಗಳಾಗಿವೆ. ಇದನ್ನೇ ಸುಪ್ರೀಂ ಕೋರ್ಟ್ ಕೇಳುತ್ತಿದೆ. ಪ್ರೊಜೆಕ್ಟೆಡ್ ಪಾಪ್ಯುಲೇಷನ್ ಬಗ್ಗೆ ಹೇಳುತ್ತಿದ್ದಾರೆ, ಅಂದರೆ 1931ನಲ್ಲಿ ಇಷ್ಟು ಜನರಿದ್ದರೆ, 2021ರಲ್ಲಿ ಇಷ್ಟು ಜನರಿರುತ್ತಾರೆ ಎಂದು ಅಂದಾಜು ಮಾಡಲಾಗುತ್ತದೆ. ಯಾವುದಾದರೂ ಒಂದು ಸಮುದಾಯ ಅಂದು ನೂರಿದ್ದರೆ, ಇಂದು ಸಾವಿರ ಇದ್ದಾರೆ ಎಂದು ಹೇಳುವುದೂ ಅವೈಜ್ಞಾನಿಕ. ಯಾಕೆಂದರೆ ಅನೇಕ ಸಮುದಾಯಗಳು ನಶಿಸಿಹೋಗಿವೆ. ಉದಾಹರಣೆಗೆ ಅಂಡಮಾನ್‌ನಲ್ಲಿರುವ ಜರೋವಾ ಎಂಬ ಸಮುದಾಯ 1931ರಲ್ಲಿ ಸಾವಿರ ಇತ್ತು. ಇಂದು ನೂರಾಗಿದೆ. ಕರ್ನಾಟಕದ ಕೊರಗರು ಅಂದು 15,000 ಇದ್ದರೆ, ಇಂದು 1,500 ಆಗಿದ್ದಾರೆ. ಕಡಿಮೆಯಾಗುತ್ತಿದ್ದಾರೆ. ಹೀಗಾಗಿ ಸರ್ಕಾರದ ಮಾನದಂಡವೂ ತಪ್ಪಾಗಿದೆ. ಹೀಗಿರುವ ಕೋರ್ಟ್ ಹೇಗೆ ಈ ಅಂಕಿ-ಅಂಶಗಳನ್ನು ಒಪ್ಪಿಕೊಳ್ಳುತ್ತದೆ?” ಎಂದು ಪ್ರಶ್ನಿಸಿದರು.

ಈಗ ಕರ್ನಾಟಕದಲ್ಲಿ ಆಗಿರುವ ಜಾತಿಗಣತಿಯ ಬಗ್ಗೆ ಪ್ರಸಕ್ತ ಸರ್ಕಾರದ ವಕ್ತಾರರು ಕೆಲವು ಬಾರಿ ಪ್ರಸ್ತಾಪಿಸಿದ್ದರೂ, ಮುಂದೆ ತೆಗೆದುಕೊಳ್ಳಲಿರುವ ನಿರ್ದಿಷ್ಟ ಕ್ರಮಗಳ ಬಗ್ಗೆ ಯಾವುದೇ ಸ್ಪಷ್ಟತೆಯಿಲ್ಲದೆ ಮಾತನಾಡುತ್ತಿದ್ದಾರೆ. ಇದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿದ್ದ ಹಿಂದುಳಿದ ವರ್ಗಗಳ ಮೀಸಲಾತಿಯ ಮೇಲೆ ತೂಗುಗತ್ತಿ ನೇತಾಡುತ್ತಿದೆ.


ಇದನ್ನೂ ಓದಿ: 10 ವರ್ಷಗಳ ಸತತ ಹೋರಾಟ!; 2011ರ ದೇಶದ್ರೋಹ ಪ್ರಕರಣದಲ್ಲಿ ಹೋರಾಟಗಾರ್ತಿ ಸೋನಿ ಸೋರಿ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...