Homeಮುಖಪುಟರಾಜ್ಯ ಸ್ಥಳೀಯ ಸಂಸ್ಥೆ ಚುನಾವಣೆ: ದೊಡ್ಡ ಪಕ್ಷಗಳನ್ನು ಎದುರಿಸಲು ಸಿದ್ಧವಾಗಿವೆ ಸಣ್ಣ ಪಕ್ಷಗಳು

ರಾಜ್ಯ ಸ್ಥಳೀಯ ಸಂಸ್ಥೆ ಚುನಾವಣೆ: ದೊಡ್ಡ ಪಕ್ಷಗಳನ್ನು ಎದುರಿಸಲು ಸಿದ್ಧವಾಗಿವೆ ಸಣ್ಣ ಪಕ್ಷಗಳು

- Advertisement -
- Advertisement -

ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೂರು ಪ್ರಮುಖ ಪಕ್ಷಗಳು ಪ್ರಾಬಲ್ಯವಿರುವ ರಾಜಕೀಯ ಕಣವಾಗಿರುವ ಕರ್ನಾಟಕದಲ್ಲಿ ಯಾವುದೇ ಆಧಾರವಿಲ್ಲದ ಸಣ್ಣ ಪಕ್ಷಗಳು, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತಮ್ಮ ನೆಲೆಯನ್ನು ಕಂಡುಕೊಳ್ಳಲು ಸಿದ್ದತೆ ನಡೆಸುತ್ತಿವೆ.

ಸೆಪ್ಟೆಂಬರ್‌ ತಿಂಗಳಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ಆರಂಭವಾಗಲಿದ್ದು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ನಗರ ಪಾಲಿಕೆಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದೆ. ಅಲ್ಲಿಂದ ಬೆಂಗಳೂರಿನಲ್ಲಿ ವರ್ಷಾಂತ್ಯದಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದೆ.

ಆಮ್ ಆದ್ಮಿ ಪಕ್ಷ (ಎಎಪಿ) ಮೊದಲ ಬಾರಿಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. “ನಾವು ಸ್ಥಳದ ಐತಿಹಾಸಿಕ ಮಹತ್ವವನ್ನು ಎತ್ತಿ ತೋರಿಸುವ ಮೂಲಕ ವಿಶ್ವ ದರ್ಜೆಯ ನಗರಗಳ ನಿರ್ಮಾಣದ ಭರವಸೆಯನ್ನು ಹೊಂದಿದ್ದೇವೆ. ಮಹಿಳೆಯರು ಮತ್ತು ಯುವಕರ ಮತಗಳನ್ನು ಪಡೆಯಲು ಯೋಜನೆಗಳನ್ನು ರೂಪಿಸುತ್ತಿದ್ದೇವೆ. ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಅಲ್ಪಸಂಖ್ಯಾತರ ಮತಗಳನ್ನು ವಿಭಜಿಸಲು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರಬಹುದು, ಆದರೆ ನಾವು ಎಲ್ಲರನ್ನೂ ಒಳಗೊಳ್ಳುವ ರಾಜಕೀಯಕ್ಕಾಗಿ ಕಣಕ್ಕಿಳಿಯಲಿದ್ದೇವೆ” ಎಂದು ಎಎಪಿ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ವಿದ್ಯುತ್ ಮಸೂದೆ 2021; ಕೃಷಿಗೆ ಮತ್ತು ವಿದ್ಯುತ್ ವಲಯದ ಕಾರ್ಮಿಕರಿಗೆ ಮಾರಕ

ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆಗಳ  ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎಂಟು ವಾರ್ಡ್‌ಗಳಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಕೂಡ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. “ನಾವು ಪಕ್ಷದ ಬದ್ದತೆಯ ಕಾರ್ಯಕರ್ತರು. ಕೊಳ್ಳೇಗಾಲದ ಶಾಸಕ ಎನ್ ಮಹೇಶ್ ಅವರ ಉಚ್ಚಾಟಣೆಯಿಂದ ಪಕ್ಷವು ಶುದ್ದೀಕರಣಗೊಂಡಿದೆ. ಇದರಿಂದಾಗಿಜನರು ನಮ್ಮನ್ನು ಆರ್ಶೀವದಿಸುತ್ತಾರೆ” ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷ ಡಾ. ಕೃಷ್ಣಮೂರ್ತಿ ಹೇಳಿದ್ದಾರೆ.

“ಬಿಎಸ್‌ಪಿ ನಿರ್ದಿಷ್ಟ ಸಮುದಾಯದ ಮತಗಳ ವಿಭಜನೆ ಮಾಡುತ್ತದೆ ಎಂಬುದು ಅಪ್ರಸ್ತುತ. ಬದಲಾಗಿ, ಹಿಂದಿನ ಆಡಳಿತಗಳಲ್ಲಿ ಬಹುಜನರ (ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ) ಜೀವನವು ಹೇಗೆ ಸುಧಾರಿಸಿಲ್ಲ ಎಂಬುದನ್ನು ಬಿಎಸ್‌ಪಿ ಎತ್ತಿ ತೋರಿಸುತ್ತದೆ” ಎಂದು ಹೇಳಿದ್ದಾರೆ.

ಬಿಎಸ್‌ಪಿ ಪಕ್ಷವು ರಾಜ್ಯದಾದ್ಯಂತ ತನ್ನ ಕಾರ್ಯಕರ್ತರಿಗಾಗಿ ಸರಣಿ ಕಾರ್ಯಾಗಾರಗಳನ್ನು ನಡೆಸುತ್ತಿದೆ ಎಂದು ವರದಿಯಾಗುತ್ತಿದೆ. ಪಕ್ಷವು 2018 ರ ವಿಧಾನಸಭಾ ಚುನಾವಣೆಯಲ್ಲಿ ಕೊಳ್ಳೇಗಲ ಕ್ಷೇತ್ರವನ್ನು ಗೆಲ್ಲುವ ಮೂಲಕ ತನ್ನ ಮೊದಲ ಗೆಲುವನ್ನು ದಾಖಲಿಸುವಲ್ಲಿ ಯಶಸ್ವಿಯಾಗಿದೆ.

2004ರಲ್ಲಿ, ಪಕ್ಷದ ನಾಯಕಿ ಮಾಯಾವತಿ ಅವರ ಪ್ರಭಾವ ಉತ್ತುಂಗದಲ್ಲಿದ್ದಾಗ, ಬಿಎಸ್‌ಪಿ ಪಕ್ಷವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕೇವಲ 2.5% ಮತಗಳನ್ನು ಗಳಿಸುವ ಮೂಲಕ, ಸುಮಾರು 45 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಭವಿಷ್ಯದ ಮೇಲೆ ಪ್ರಭಾವ ಬೀರಿದೆ ಎಂದು ಹೇಳಲಾಗಿದೆ.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ), ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಾಳೆ, ಎಂ.ವೆಂಕಟಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ ತಮ್ಮ ಕಾರ್ಯಕರ್ತರನ್ನು  ಸಂಘಟಿಸುತ್ತಿದ್ದಾರೆ. ನಗರ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶವು ಬಿಬಿಎಂಪಿ ಚುನಾವಣೆ ಮತ್ತು ಮುಂದಿನ ವಿಧಾನಸಭಾ ಚುನಾವಣೆಗಳಿಗೆ ಮೆಟ್ಟಿಲಾಗಲಿವೆ. ಅಲ್ಲದೆ, ಈ ಸಣ್ಣ ಪಕ್ಷಗಳು ಯಾರ ಭವಿಷ್ಯವನ್ನು ಕಸಿದುಕೊಳ್ಳುತ್ತವೆ ಎಂಬುದರ ಬಗ್ಗೆ ಸುಳಿವು ನೀಡಬಹುದು.


ಇದನ್ನೂ ಓದಿ: ಸರ್ಕಾರಿ ಕಚೇರಿಗಳ ಹಲವು ಸಮಸ್ಯೆಗಳನ್ನು ಬಯಲಿಗೆಳೆಯುತ್ತಿರುವ KRS ಪಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸ್ಪರ್ಧೆಯ ಬಗ್ಗೆ ಯಾಕೆ ಉಲ್ಲೇಖಿಸಿಲ್ಲ?

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...