Homeಮುಖಪುಟರಾಜ್ಯ ಸ್ಥಳೀಯ ಸಂಸ್ಥೆ ಚುನಾವಣೆ: ದೊಡ್ಡ ಪಕ್ಷಗಳನ್ನು ಎದುರಿಸಲು ಸಿದ್ಧವಾಗಿವೆ ಸಣ್ಣ ಪಕ್ಷಗಳು

ರಾಜ್ಯ ಸ್ಥಳೀಯ ಸಂಸ್ಥೆ ಚುನಾವಣೆ: ದೊಡ್ಡ ಪಕ್ಷಗಳನ್ನು ಎದುರಿಸಲು ಸಿದ್ಧವಾಗಿವೆ ಸಣ್ಣ ಪಕ್ಷಗಳು

- Advertisement -
- Advertisement -

ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೂರು ಪ್ರಮುಖ ಪಕ್ಷಗಳು ಪ್ರಾಬಲ್ಯವಿರುವ ರಾಜಕೀಯ ಕಣವಾಗಿರುವ ಕರ್ನಾಟಕದಲ್ಲಿ ಯಾವುದೇ ಆಧಾರವಿಲ್ಲದ ಸಣ್ಣ ಪಕ್ಷಗಳು, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತಮ್ಮ ನೆಲೆಯನ್ನು ಕಂಡುಕೊಳ್ಳಲು ಸಿದ್ದತೆ ನಡೆಸುತ್ತಿವೆ.

ಸೆಪ್ಟೆಂಬರ್‌ ತಿಂಗಳಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ಆರಂಭವಾಗಲಿದ್ದು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ನಗರ ಪಾಲಿಕೆಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದೆ. ಅಲ್ಲಿಂದ ಬೆಂಗಳೂರಿನಲ್ಲಿ ವರ್ಷಾಂತ್ಯದಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದೆ.

ಆಮ್ ಆದ್ಮಿ ಪಕ್ಷ (ಎಎಪಿ) ಮೊದಲ ಬಾರಿಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. “ನಾವು ಸ್ಥಳದ ಐತಿಹಾಸಿಕ ಮಹತ್ವವನ್ನು ಎತ್ತಿ ತೋರಿಸುವ ಮೂಲಕ ವಿಶ್ವ ದರ್ಜೆಯ ನಗರಗಳ ನಿರ್ಮಾಣದ ಭರವಸೆಯನ್ನು ಹೊಂದಿದ್ದೇವೆ. ಮಹಿಳೆಯರು ಮತ್ತು ಯುವಕರ ಮತಗಳನ್ನು ಪಡೆಯಲು ಯೋಜನೆಗಳನ್ನು ರೂಪಿಸುತ್ತಿದ್ದೇವೆ. ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಅಲ್ಪಸಂಖ್ಯಾತರ ಮತಗಳನ್ನು ವಿಭಜಿಸಲು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರಬಹುದು, ಆದರೆ ನಾವು ಎಲ್ಲರನ್ನೂ ಒಳಗೊಳ್ಳುವ ರಾಜಕೀಯಕ್ಕಾಗಿ ಕಣಕ್ಕಿಳಿಯಲಿದ್ದೇವೆ” ಎಂದು ಎಎಪಿ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ವಿದ್ಯುತ್ ಮಸೂದೆ 2021; ಕೃಷಿಗೆ ಮತ್ತು ವಿದ್ಯುತ್ ವಲಯದ ಕಾರ್ಮಿಕರಿಗೆ ಮಾರಕ

ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆಗಳ  ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎಂಟು ವಾರ್ಡ್‌ಗಳಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಕೂಡ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. “ನಾವು ಪಕ್ಷದ ಬದ್ದತೆಯ ಕಾರ್ಯಕರ್ತರು. ಕೊಳ್ಳೇಗಾಲದ ಶಾಸಕ ಎನ್ ಮಹೇಶ್ ಅವರ ಉಚ್ಚಾಟಣೆಯಿಂದ ಪಕ್ಷವು ಶುದ್ದೀಕರಣಗೊಂಡಿದೆ. ಇದರಿಂದಾಗಿಜನರು ನಮ್ಮನ್ನು ಆರ್ಶೀವದಿಸುತ್ತಾರೆ” ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷ ಡಾ. ಕೃಷ್ಣಮೂರ್ತಿ ಹೇಳಿದ್ದಾರೆ.

“ಬಿಎಸ್‌ಪಿ ನಿರ್ದಿಷ್ಟ ಸಮುದಾಯದ ಮತಗಳ ವಿಭಜನೆ ಮಾಡುತ್ತದೆ ಎಂಬುದು ಅಪ್ರಸ್ತುತ. ಬದಲಾಗಿ, ಹಿಂದಿನ ಆಡಳಿತಗಳಲ್ಲಿ ಬಹುಜನರ (ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ) ಜೀವನವು ಹೇಗೆ ಸುಧಾರಿಸಿಲ್ಲ ಎಂಬುದನ್ನು ಬಿಎಸ್‌ಪಿ ಎತ್ತಿ ತೋರಿಸುತ್ತದೆ” ಎಂದು ಹೇಳಿದ್ದಾರೆ.

ಬಿಎಸ್‌ಪಿ ಪಕ್ಷವು ರಾಜ್ಯದಾದ್ಯಂತ ತನ್ನ ಕಾರ್ಯಕರ್ತರಿಗಾಗಿ ಸರಣಿ ಕಾರ್ಯಾಗಾರಗಳನ್ನು ನಡೆಸುತ್ತಿದೆ ಎಂದು ವರದಿಯಾಗುತ್ತಿದೆ. ಪಕ್ಷವು 2018 ರ ವಿಧಾನಸಭಾ ಚುನಾವಣೆಯಲ್ಲಿ ಕೊಳ್ಳೇಗಲ ಕ್ಷೇತ್ರವನ್ನು ಗೆಲ್ಲುವ ಮೂಲಕ ತನ್ನ ಮೊದಲ ಗೆಲುವನ್ನು ದಾಖಲಿಸುವಲ್ಲಿ ಯಶಸ್ವಿಯಾಗಿದೆ.

2004ರಲ್ಲಿ, ಪಕ್ಷದ ನಾಯಕಿ ಮಾಯಾವತಿ ಅವರ ಪ್ರಭಾವ ಉತ್ತುಂಗದಲ್ಲಿದ್ದಾಗ, ಬಿಎಸ್‌ಪಿ ಪಕ್ಷವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕೇವಲ 2.5% ಮತಗಳನ್ನು ಗಳಿಸುವ ಮೂಲಕ, ಸುಮಾರು 45 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಭವಿಷ್ಯದ ಮೇಲೆ ಪ್ರಭಾವ ಬೀರಿದೆ ಎಂದು ಹೇಳಲಾಗಿದೆ.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ), ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಾಳೆ, ಎಂ.ವೆಂಕಟಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ ತಮ್ಮ ಕಾರ್ಯಕರ್ತರನ್ನು  ಸಂಘಟಿಸುತ್ತಿದ್ದಾರೆ. ನಗರ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶವು ಬಿಬಿಎಂಪಿ ಚುನಾವಣೆ ಮತ್ತು ಮುಂದಿನ ವಿಧಾನಸಭಾ ಚುನಾವಣೆಗಳಿಗೆ ಮೆಟ್ಟಿಲಾಗಲಿವೆ. ಅಲ್ಲದೆ, ಈ ಸಣ್ಣ ಪಕ್ಷಗಳು ಯಾರ ಭವಿಷ್ಯವನ್ನು ಕಸಿದುಕೊಳ್ಳುತ್ತವೆ ಎಂಬುದರ ಬಗ್ಗೆ ಸುಳಿವು ನೀಡಬಹುದು.


ಇದನ್ನೂ ಓದಿ: ಸರ್ಕಾರಿ ಕಚೇರಿಗಳ ಹಲವು ಸಮಸ್ಯೆಗಳನ್ನು ಬಯಲಿಗೆಳೆಯುತ್ತಿರುವ KRS ಪಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸ್ಪರ್ಧೆಯ ಬಗ್ಗೆ ಯಾಕೆ ಉಲ್ಲೇಖಿಸಿಲ್ಲ?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...