Homeಮುಖಪುಟಮತದಾನಕ್ಕೆ ಹಣ ನೀಡುವಂತೆ ಆಗ್ರಹಿಸಿ ಸ್ಥಳೀಯರಿಂದ ಪ್ರತಿಭಟನೆ: ವಿಚಿತ್ರ ಘಟನೆ

ಮತದಾನಕ್ಕೆ ಹಣ ನೀಡುವಂತೆ ಆಗ್ರಹಿಸಿ ಸ್ಥಳೀಯರಿಂದ ಪ್ರತಿಭಟನೆ: ವಿಚಿತ್ರ ಘಟನೆ

- Advertisement -
- Advertisement -

ಆಂಧ್ರಪ್ರದೇಶದ ಹಲವೆಡೆ ಮತದಾನಕ್ಕೆ ನಮಗೆ ಹಣ ಕೊಟ್ಟಿಲ್ಲ ಎಂದು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿರುವ ವಿಚಿತ್ರ ಘಟನೆ ನಡೆದಿದೆ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಇಂದು ಆಂಧ್ರದಲ್ಲಿ ಮತದಾನ ನಡೆಯುತ್ತಿದ್ದು, ಚುನಾವಣೆಯ ಪಾರದರ್ಶಕತೆಯ ಬಗ್ಗೆ ಪ್ರಶ್ನೆ ಉದ್ಭವಿಸಿದೆ.

ಎನ್‌ಡಿಎ ಪ್ರಚಾರ ಸಭೆಗೆ 500ರೂ.ಹಣದ ಆಮಿಷ ನೀಡಿ ಕರೆದುಕೊಂಡು ಬಂದು ಹಣ ಕೊಡದೆ ವಂಚನೆ ಮಾಡಲಾಗಿದೆ ಎಂದು ಮಹಿಳೆಯರು ಮಹರಾಷ್ಟ್ರದ ಔರಂಗಾಬಾದ್‌ನಲ್ಲಿ ಇತ್ತೀಚೆಗೆ ಆರೋಪಿಸಿದ್ದರು. ಇದೀಗ ಆಂಧ್ರಪ್ರದೇಶದ ಪಲಂಡು ಜಿಲ್ಲೆಯ ಸತ್ತೇನಪಲ್ಲಿಯಲ್ಲಿ ಸ್ಥಳೀಯ ನಿವಾಸಿಗಳು ಮತದಾನಕ್ಕೆ ಮೊದಲು ಭರವಸೆ ನೀಡಿದ ಲಂಚದ ಹಣ ನಮಗೆ ಬಂದಿಲ್ಲ ಎಂದು ಪ್ರತಿಭಟನೆ ನಡೆಸಿದ್ದಾರೆ.

ನಿರ್ದಿಷ್ಟ ಅಭ್ಯರ್ಥಿಗೆ ಮತ ಹಾಕಲು ಹಣ ನೀಡುವುದಾಗಿ ಮುಖಂಡರೊಬ್ಬರು ಭರವಸೆ ನೀಡಿದ್ದಾರೆ. ಆದರೆ, ಭರವಸೆ ಈಡೇರಿಸುವಲ್ಲಿ ಅವರು ವಿಫಲರಾಗಿದ್ದಾರೆ ಎಂದು ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಆಂಧ್ರದ ಕನಿಷ್ಠ ಐದು ಕಡೆ ಈ ರೀತಿಯ ಬೆಳವಣಿಗೆ ನಡೆದಿದೆ. ಆಂಧ್ರ ಪ್ರದೇಶದಲ್ಲಿಇದು ಹೊಸ ಬೆಳವಣಿಗೆಯಲ್ಲದಿದ್ದರೂ, ವಿಧಾನಸಭಾ ಮತ್ತು ಲೋಕಸಭಾ ಕ್ಷೇತ್ರಗಳಲ್ಲಿ ಒಂದು ಮತಕ್ಕೆ ಒಂದು ಸಾವಿರದಿಂದ 6,000 ರೂ.ವರೆಗೆ ಬೆಲೆ ನಿಗದಿ ಮಾಡಲಾಗಿದೆ ಎನ್ನಲಾಗಿದೆ.

ಈ ಘಟನೆಯು ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ರಾಜಕಾರಣಿಗಳ ಹೊಣೆಗಾರಿಕೆಯ ಬಗ್ಗೆ ಪ್ರಶ್ನೆಯನ್ನು ಹುಟ್ಟುಹಾಕಿದೆ. ಅಧಿಕಾರಿಗಳು ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ಇನ್ನೂ ಮುಂದಾಗಿಲ್ಲ, ಆದರೆ ಪ್ರತಿಭಟನೆಯು ಚುನಾವಣೆಯಲ್ಲಿ ಪಾರದರ್ಶಕತೆ ಮತ್ತು ನೈತಿಕ ನಡವಳಿಕೆಯ ಅಗತ್ಯತೆಯ ಬಗ್ಗೆ ಗಮನ ಸೆಳೆದಿದೆ.

ಪೀತಂಪುರಂನಲ್ಲಿ ಅಭ್ಯರ್ಥಿಗಳ ಕಚೇರಿಗಳ ಮುಂದೆ ಮತದಾರರು ಹಣಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ. ಪಕ್ಷದ ಬೆಂಬಲಿಗರು ಪ್ರತಿ ಮತಕ್ಕೆ 5,000 ರೂ. ನೀಡುವ ಭರವಸೆ ನೀಡಿದ್ದು, ಮಹಿಳಾ ಮತದಾರರಿಗೆ ಹಣ ನೀಡಿಲ್ಲ ಎಂದು ಪ್ರತಿಭಟನೆ ನಡೆದಿದೆ. ಈ ವೇಳೆ ಗುಂಪು ಚದುರಿಸಲು ಪೊಲೀಸರು ಮಧ್ಯಪ್ರವೇಶಿಸಿದ್ದಾರೆ.

ಓಂಗೋಲ್‌ನಲ್ಲಿ ಪ್ರತಿ ಮತಕ್ಕೆ 5 ಸಾವಿರ ರೂ.ನಂತೆ ಹಣ ವಿತರಿಸಲಾಗಿದೆ. ಆದರೆ ಹಣ ಸಿಗದವರು ಪ್ರತಿಭಟನೆ ನಡೆಸಿದ್ದಾರೆ. ಇದಲ್ಲದೆ ಪೂರ್ವ ಗೋದಾವರಿ ಜಿಲ್ಲೆಯ ಕೊಂಡೇವರಂ ಗ್ರಾಮದಲ್ಲಿ ಮತದಾನ ಮಾಡಲು ಹಣಕ್ಕೆ ಬೇಡಿಕೆ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ವಿಜಯವಾಡದಲ್ಲೂ ಇದೇ ರೀತಿಯ ಬೆಳವಣಿಗೆ ಕಂಡು ಬಂದಿದ್ದು, ಪಾಲಿಕೆ ಸದಸ್ಯರ ಮನೆಯಲ್ಲಿ ಪ್ರತಿ ಮತಕ್ಕೆ ಒಂದು ಸಾವಿರ ರೂಪಾಯಿಯಂತೆ ವಿತರಿಸಲಾಗಿದೆ ಎಂದು ಹೇಳಲಾಗಿದೆ.

ಆಂಧ್ರಪ್ರದೇಶದಲ್ಲಿ ಇಂದು ಲೋಕಸಭೆಗೆ ಮತ್ತು ರಾಜ್ಯ ವಿಧಾನಸಭೆಗೆ ಮತದಾನ ನಡೆಯುತ್ತಿದೆ. ರಾಜ್ಯದ ಕೆಲವು ಮತಗಟ್ಟೆಗಳಲ್ಲಿ ಹಿಂಸಾಚಾರ ವರದಿಯಾಗಿದೆ. ಆಂಧ್ರಪ್ರದೇಶದ ಮುಖ್ಯ ಚುನಾವಣಾಧಿಕಾರಿ(ಸಿಇಒ) ಮುಕೇಶ್ ಕುಮಾರ್ ಮೀನಾ ಮಾತನಾಡಿ, ಚಿತ್ತೂರು ಜಿಲ್ಲೆಯಲ್ಲಿ ಅಪಹರಣಕ್ಕೊಳಗಾದ ಮೂವರು ಟಿಡಿಪಿ ಪೋಲಿಂಗ್ ಏಜೆಂಟ್‌ಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೋದಿ ಕೈಗೆ ಮತ್ತೆ ಅಧಿಕಾರ ಕೊಟ್ಟರೆ ಬಡವರು, ದಲಿತರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...