Homeಮುಖಪುಟ'ಕಳ್ಳತನ ನಡೆದ ಬಳಿಕ ಬೀಗ ಹಾಕಿದ್ದಾರೆ': ಚುನಾವಣಾ ಆಯೋಗದ ಹೊಸ 'ಇ-ಸೈನ್' ವೈಶಿಷ್ಟ್ಯ'ಕ್ಕೆ ರಾಹುಲ್ ಗಾಂಧಿ...

‘ಕಳ್ಳತನ ನಡೆದ ಬಳಿಕ ಬೀಗ ಹಾಕಿದ್ದಾರೆ’: ಚುನಾವಣಾ ಆಯೋಗದ ಹೊಸ ‘ಇ-ಸೈನ್’ ವೈಶಿಷ್ಟ್ಯ’ಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

- Advertisement -
- Advertisement -

ಆಳಂದಲ್ಲಿ ಮತಗಳ್ಳತನದ ಕುರಿತು ನಾವು ಆರೋಪ ಮಾಡಿದ ಬಳಿಕವಷ್ಟೇ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ‘ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆಗೆ’ ಹೊಸ ಕ್ರಮ ಪರಿಚಯಿಸಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಆಳಂದಲ್ಲಿ ಮತದಾರರ ಹೆಸರನ್ನು ಅವರಿಗೆ ಗೊತ್ತಿಲ್ಲದಂತೆ ಪಟ್ಟಿಯಿಂದ ಅಳಿಸಲಾಗಿದೆ ಎಂಬ ರಾಹುಲ್ ಗಾಂಧಿಯ ಆರೋಪದ ಬಳಿಕ, ಮತದಾರರ ಪಟ್ಟಿಯಿಂದ ಹೆಸರು ಅಳಿಸಲು ಹೊಸ ‘ಇ-ಸೈನ್’ ವೈಶಿಷ್ಟ್ಯ’ವನ್ನು ಚುನಾವಣಾ ಆಯೋಗ ಪರಿಚಯಿಸಿದೆ ಎಂಬ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ವರದಿಯನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ “ಜ್ಞಾನೇಶ್ ಕುಮಾರ್ ಅವರೇ ನಾವು ಕಳ್ಳತನ ಕಂಡು ಹಿಡಿದ ಬಳಿಕವಷ್ಟೇ ನಿಮಗೆ ಬೀಗ ಹಾಕಲು ನೆನಪಾಗಿದೆ. ನಾವು ಕಳ್ಳರನ್ನೂ ಹಿಡಿಯುತ್ತೇವೆ. ನೀವು ಸಿಐಡಿಗೆ ದತ್ತಾಂಶ ಯಾವಾಗ ಕೊಡುತ್ತೀರಿ? ಹೇಳಿ” ಎಂದು ಪ್ರಶ್ನಿಸಿದ್ದಾರೆ.

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದಲ್ಲಿ 5,994 ಮತದಾರರ ಹೆಸರುಗಳನ್ನು ಅವರಿಗೆ ಗೊತ್ತಿಲ್ಲದಂತೆ ನಕಲಿ ಫಾರ್ಮ್‌ 7 ಮೂಲಕ ಅಳಿಸಲು ಪ್ರಯತ್ನಿಸಿರುವುದು ಬೆಳಕಿಗೆ ಬಂದಿತ್ತು.

ಈ ಬಗ್ಗೆ ಕರ್ನಾಟಕ ಸಿಐಡಿ ತನಿಖೆ ನಡೆಸುತ್ತಿದೆ. ಆದರೆ, ತನಿಖೆಗೆ ನಿರ್ಣಾಯಕವಾದ ಡೆಸ್ಟಿನೇಶನ್ ಫೋರ್ಟ್ ಮತ್ತು ಡೆಸ್ಟಿನೇಶನ್ ಐಡಿ ಸೇರಿದಂತೆ ಪ್ರಮುಖ ದತ್ತಾಂಶಗಳನ್ನು ಚುನಾವಣಾ ಆಯೋಗ ಒದಗಿಸುತ್ತಿಲ್ಲ. ಇದರಿಂದ ತನಿಖೆ ಹಳ್ಳ ಹಿಡಿದಿದೆ ಎಂದು ಸೆಪ್ಟೆಂಬರ್ 7ರಂದು ದಿ ಹಿಂದೂ ಪತ್ರಿಕೆ ವರದಿ ಮಾಡಿತ್ತು.

ಸೆಪ್ಟೆಂಬರ್ 18ರಂದು ನವದೆಹಲ್ಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ ಮಾಡಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಮತಗಳ್ಳರನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ವ್ಯವಸ್ಥಿತವಾಗಿ ಅಳಿಸಲು ಕೇಂದ್ರೀಕೃತ ಸಾಫ್ಟ್‌ವೇರ್ ಪ್ರೋಗ್ರಾಂ ಅನ್ನು ಬಳಸಲಾಗುತ್ತಿದೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಯ ಆರೋಪವನ್ನು ಚುನಾವಣಾ ಆಯೋಗ ತಳ್ಳಿ ಹಾಕಿತ್ತು. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಪ್ರಕ್ರಿಯೆ ಕಾನೂನು ಬದ್ಧವಾಗಿದ್ದು, ಸಂಬಂಧಿತ ವ್ಯಕ್ತಿಗೆ ಮಾಹಿತಿ ನೀಡದೆ ಯಾವುದೇ ಅಳಿಸುವಿಕೆ ನಡೆಯುವುದಿಲ್ಲ ಎಂದಿತ್ತು.

ಹೊಸ ‘ಇ-ಸೈನ್’ ವೈಶಿಷ್ಟ್ಯ’

ಚುನಾವಣಾ ಆಯೋಗದ ECINET ಪೋರ್ಟಲ್‌ನಲ್ಲಿ ಹೊಸ ಮತದಾರರ ನೋಂದಣಿಗಾಗಿ ಫಾರ್ಮ್ 6, ಅಸ್ತಿತ್ವದಲ್ಲಿರುವ ಪಟ್ಟಿಗಳಲ್ಲಿ ಹೆಸರನ್ನು ಸೇರಿಸಲು ಮತ್ತು ಅಳಿಸುವುದಕ್ಕೆ ಆಕ್ಷೇಪಣೆ ಸಲ್ಲಿಸಲು ಫಾರ್ಮ್‌ 7 ಹಾಗೂ ನಮೂದುಗಳ ತಿದ್ದುಪಡಿಗಾಗಿ ಫಾರ್ಮ್ 8 ಭರ್ತಿ ಮಾಡಲು ಹೊಸದಾಗಿ ‘ಇ-ಸೈನ್’ ಕಡ್ಡಾಯಗೊಳಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಇ-ಸೈನ್ ವೈಶಿಷ್ಟ್ಯದಿಂದಾಗಿ ಈಗ ಅರ್ಜಿದಾರರು ಅರ್ಜಿಗೆ ಬಳಸುವ ಮತದಾರರ ಕಾರ್ಡ್‌ನಲ್ಲಿರುವ ಹೆಸರು ಅವರ ಆಧಾರ್ ಕಾರ್ಡ್‌ನಲ್ಲಿರುವ ಹೆಸರಿಗೆ ಹೊಂದಿಕೆಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಪೋರ್ಟಲ್ ಕೇಳುತ್ತದೆ. ಅಲ್ಲದೆ, ಅವರು ಬಳಸುತ್ತಿರುವ ಮೊಬೈಲ್ ಸಂಖ್ಯೆಯನ್ನು ಅವರ ಆಧಾರ್‌ಗೆ ಲಿಂಕ್ ಮಾಡಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವಂತೆಯೂ ಅದು ಕೇಳುತ್ತದೆ ಎಂದು ವರದಿ ವಿವರಿಸಿದೆ.

ಅರ್ಜಿದಾರರು ಫಾರ್ಮ್ ಭರ್ತಿ ಮಾಡಿದ ನಂತರ, ಅವರಿಗೆ ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ ಆಯೋಜಿಸಿರುವ ಬಾಹ್ಯ ಇ-ಸೈನ್ ಪೋರ್ಟಲ್ ಅನ್ನು ತೋರಿಸಲಾಗುತ್ತದೆ. ಇದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ.

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಈ ಪೋರ್ಟಲ್‌ನಲ್ಲಿ ‘ಆಧಾರ್ ಒಟಿಪಿ ರಚಿಸಬೇಕಾಗುತ್ತದೆ. ತರುವಾಯ, ಆ ಆಧಾರ್ ಸಂಖ್ಯೆಗೆ ಲಿಂಕ್ ಮಾಡಲಾದ ಫೋನ್ ಸಂಖ್ಯೆಗೆ ಒಟಿಪಿ ಕಳುಹಿಸಲಾಗುತ್ತದೆ.

ನಂತರ ಅರ್ಜಿದಾರರು ಆಧಾರ್ ಆಧಾರಿತ ದೃಢೀಕರಣಕ್ಕೆ ಒಪ್ಪಿಗೆ ನೀಡಬೇಕು ಮತ್ತು ಪರಿಶೀಲನೆಯನ್ನು ಪೂರ್ಣಗೊಳಿಸಬೇಕು. ಇದರ ನಂತರ, ಅರ್ಜಿದಾರರನ್ನು ಫಾರ್ಮ್ ಅನ್ನು ಸಲ್ಲಿಸಲು ECINET ಪೋರ್ಟಲ್‌ಗೆ ಮರುನಿರ್ದೇಶಿಸಲಾಗುತ್ತದೆ.

ಈ ವರ್ಷದ ಆರಂಭದಲ್ಲಿ ಪ್ರಾರಂಭಿಸಲಾದ ECINET,ಮತದಾರರು ಮತ್ತು ಅಧಿಕಾರಿಗಳಿಗೆ ಮೀಸಲಾದ 40ಕ್ಕೂ ಹೆಚ್ಚು ಚುನಾವಣಾ ಸಮಿತಿಯ ಅರ್ಜಿಗಳನ್ನು ಸಂಯೋಜಿಸುವ ಮತ್ತು ಮರುಪರಿಶೀಲಿಸುವ ವೇದಿಕೆಯಾಗಿದೆ.

ಬಿಹಾರ ಚುನಾವಣೆ ಮೋದಿ ಆಡಳಿತ ಅಂತ್ಯದ ಆರಂಭ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...