Homeಮುಖಪುಟ'ಕಳ್ಳತನ ನಡೆದ ಬಳಿಕ ಬೀಗ ಹಾಕಿದ್ದಾರೆ': ಚುನಾವಣಾ ಆಯೋಗದ ಹೊಸ 'ಇ-ಸೈನ್' ವೈಶಿಷ್ಟ್ಯ'ಕ್ಕೆ ರಾಹುಲ್ ಗಾಂಧಿ...

‘ಕಳ್ಳತನ ನಡೆದ ಬಳಿಕ ಬೀಗ ಹಾಕಿದ್ದಾರೆ’: ಚುನಾವಣಾ ಆಯೋಗದ ಹೊಸ ‘ಇ-ಸೈನ್’ ವೈಶಿಷ್ಟ್ಯ’ಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

- Advertisement -
- Advertisement -

ಆಳಂದಲ್ಲಿ ಮತಗಳ್ಳತನದ ಕುರಿತು ನಾವು ಆರೋಪ ಮಾಡಿದ ಬಳಿಕವಷ್ಟೇ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ‘ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆಗೆ’ ಹೊಸ ಕ್ರಮ ಪರಿಚಯಿಸಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಆಳಂದಲ್ಲಿ ಮತದಾರರ ಹೆಸರನ್ನು ಅವರಿಗೆ ಗೊತ್ತಿಲ್ಲದಂತೆ ಪಟ್ಟಿಯಿಂದ ಅಳಿಸಲಾಗಿದೆ ಎಂಬ ರಾಹುಲ್ ಗಾಂಧಿಯ ಆರೋಪದ ಬಳಿಕ, ಮತದಾರರ ಪಟ್ಟಿಯಿಂದ ಹೆಸರು ಅಳಿಸಲು ಹೊಸ ‘ಇ-ಸೈನ್’ ವೈಶಿಷ್ಟ್ಯ’ವನ್ನು ಚುನಾವಣಾ ಆಯೋಗ ಪರಿಚಯಿಸಿದೆ ಎಂಬ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ವರದಿಯನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ “ಜ್ಞಾನೇಶ್ ಕುಮಾರ್ ಅವರೇ ನಾವು ಕಳ್ಳತನ ಕಂಡು ಹಿಡಿದ ಬಳಿಕವಷ್ಟೇ ನಿಮಗೆ ಬೀಗ ಹಾಕಲು ನೆನಪಾಗಿದೆ. ನಾವು ಕಳ್ಳರನ್ನೂ ಹಿಡಿಯುತ್ತೇವೆ. ನೀವು ಸಿಐಡಿಗೆ ದತ್ತಾಂಶ ಯಾವಾಗ ಕೊಡುತ್ತೀರಿ? ಹೇಳಿ” ಎಂದು ಪ್ರಶ್ನಿಸಿದ್ದಾರೆ.

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದಲ್ಲಿ 5,994 ಮತದಾರರ ಹೆಸರುಗಳನ್ನು ಅವರಿಗೆ ಗೊತ್ತಿಲ್ಲದಂತೆ ನಕಲಿ ಫಾರ್ಮ್‌ 7 ಮೂಲಕ ಅಳಿಸಲು ಪ್ರಯತ್ನಿಸಿರುವುದು ಬೆಳಕಿಗೆ ಬಂದಿತ್ತು.

ಈ ಬಗ್ಗೆ ಕರ್ನಾಟಕ ಸಿಐಡಿ ತನಿಖೆ ನಡೆಸುತ್ತಿದೆ. ಆದರೆ, ತನಿಖೆಗೆ ನಿರ್ಣಾಯಕವಾದ ಡೆಸ್ಟಿನೇಶನ್ ಫೋರ್ಟ್ ಮತ್ತು ಡೆಸ್ಟಿನೇಶನ್ ಐಡಿ ಸೇರಿದಂತೆ ಪ್ರಮುಖ ದತ್ತಾಂಶಗಳನ್ನು ಚುನಾವಣಾ ಆಯೋಗ ಒದಗಿಸುತ್ತಿಲ್ಲ. ಇದರಿಂದ ತನಿಖೆ ಹಳ್ಳ ಹಿಡಿದಿದೆ ಎಂದು ಸೆಪ್ಟೆಂಬರ್ 7ರಂದು ದಿ ಹಿಂದೂ ಪತ್ರಿಕೆ ವರದಿ ಮಾಡಿತ್ತು.

ಸೆಪ್ಟೆಂಬರ್ 18ರಂದು ನವದೆಹಲ್ಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ ಮಾಡಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಮತಗಳ್ಳರನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ವ್ಯವಸ್ಥಿತವಾಗಿ ಅಳಿಸಲು ಕೇಂದ್ರೀಕೃತ ಸಾಫ್ಟ್‌ವೇರ್ ಪ್ರೋಗ್ರಾಂ ಅನ್ನು ಬಳಸಲಾಗುತ್ತಿದೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಯ ಆರೋಪವನ್ನು ಚುನಾವಣಾ ಆಯೋಗ ತಳ್ಳಿ ಹಾಕಿತ್ತು. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಪ್ರಕ್ರಿಯೆ ಕಾನೂನು ಬದ್ಧವಾಗಿದ್ದು, ಸಂಬಂಧಿತ ವ್ಯಕ್ತಿಗೆ ಮಾಹಿತಿ ನೀಡದೆ ಯಾವುದೇ ಅಳಿಸುವಿಕೆ ನಡೆಯುವುದಿಲ್ಲ ಎಂದಿತ್ತು.

ಹೊಸ ‘ಇ-ಸೈನ್’ ವೈಶಿಷ್ಟ್ಯ’

ಚುನಾವಣಾ ಆಯೋಗದ ECINET ಪೋರ್ಟಲ್‌ನಲ್ಲಿ ಹೊಸ ಮತದಾರರ ನೋಂದಣಿಗಾಗಿ ಫಾರ್ಮ್ 6, ಅಸ್ತಿತ್ವದಲ್ಲಿರುವ ಪಟ್ಟಿಗಳಲ್ಲಿ ಹೆಸರನ್ನು ಸೇರಿಸಲು ಮತ್ತು ಅಳಿಸುವುದಕ್ಕೆ ಆಕ್ಷೇಪಣೆ ಸಲ್ಲಿಸಲು ಫಾರ್ಮ್‌ 7 ಹಾಗೂ ನಮೂದುಗಳ ತಿದ್ದುಪಡಿಗಾಗಿ ಫಾರ್ಮ್ 8 ಭರ್ತಿ ಮಾಡಲು ಹೊಸದಾಗಿ ‘ಇ-ಸೈನ್’ ಕಡ್ಡಾಯಗೊಳಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಇ-ಸೈನ್ ವೈಶಿಷ್ಟ್ಯದಿಂದಾಗಿ ಈಗ ಅರ್ಜಿದಾರರು ಅರ್ಜಿಗೆ ಬಳಸುವ ಮತದಾರರ ಕಾರ್ಡ್‌ನಲ್ಲಿರುವ ಹೆಸರು ಅವರ ಆಧಾರ್ ಕಾರ್ಡ್‌ನಲ್ಲಿರುವ ಹೆಸರಿಗೆ ಹೊಂದಿಕೆಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಪೋರ್ಟಲ್ ಕೇಳುತ್ತದೆ. ಅಲ್ಲದೆ, ಅವರು ಬಳಸುತ್ತಿರುವ ಮೊಬೈಲ್ ಸಂಖ್ಯೆಯನ್ನು ಅವರ ಆಧಾರ್‌ಗೆ ಲಿಂಕ್ ಮಾಡಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವಂತೆಯೂ ಅದು ಕೇಳುತ್ತದೆ ಎಂದು ವರದಿ ವಿವರಿಸಿದೆ.

ಅರ್ಜಿದಾರರು ಫಾರ್ಮ್ ಭರ್ತಿ ಮಾಡಿದ ನಂತರ, ಅವರಿಗೆ ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ ಆಯೋಜಿಸಿರುವ ಬಾಹ್ಯ ಇ-ಸೈನ್ ಪೋರ್ಟಲ್ ಅನ್ನು ತೋರಿಸಲಾಗುತ್ತದೆ. ಇದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ.

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಈ ಪೋರ್ಟಲ್‌ನಲ್ಲಿ ‘ಆಧಾರ್ ಒಟಿಪಿ ರಚಿಸಬೇಕಾಗುತ್ತದೆ. ತರುವಾಯ, ಆ ಆಧಾರ್ ಸಂಖ್ಯೆಗೆ ಲಿಂಕ್ ಮಾಡಲಾದ ಫೋನ್ ಸಂಖ್ಯೆಗೆ ಒಟಿಪಿ ಕಳುಹಿಸಲಾಗುತ್ತದೆ.

ನಂತರ ಅರ್ಜಿದಾರರು ಆಧಾರ್ ಆಧಾರಿತ ದೃಢೀಕರಣಕ್ಕೆ ಒಪ್ಪಿಗೆ ನೀಡಬೇಕು ಮತ್ತು ಪರಿಶೀಲನೆಯನ್ನು ಪೂರ್ಣಗೊಳಿಸಬೇಕು. ಇದರ ನಂತರ, ಅರ್ಜಿದಾರರನ್ನು ಫಾರ್ಮ್ ಅನ್ನು ಸಲ್ಲಿಸಲು ECINET ಪೋರ್ಟಲ್‌ಗೆ ಮರುನಿರ್ದೇಶಿಸಲಾಗುತ್ತದೆ.

ಈ ವರ್ಷದ ಆರಂಭದಲ್ಲಿ ಪ್ರಾರಂಭಿಸಲಾದ ECINET,ಮತದಾರರು ಮತ್ತು ಅಧಿಕಾರಿಗಳಿಗೆ ಮೀಸಲಾದ 40ಕ್ಕೂ ಹೆಚ್ಚು ಚುನಾವಣಾ ಸಮಿತಿಯ ಅರ್ಜಿಗಳನ್ನು ಸಂಯೋಜಿಸುವ ಮತ್ತು ಮರುಪರಿಶೀಲಿಸುವ ವೇದಿಕೆಯಾಗಿದೆ.

ಬಿಹಾರ ಚುನಾವಣೆ ಮೋದಿ ಆಡಳಿತ ಅಂತ್ಯದ ಆರಂಭ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...