Homeಮುಖಪುಟ'ಕಳ್ಳತನ ನಡೆದ ಬಳಿಕ ಬೀಗ ಹಾಕಿದ್ದಾರೆ': ಚುನಾವಣಾ ಆಯೋಗದ ಹೊಸ 'ಇ-ಸೈನ್' ವೈಶಿಷ್ಟ್ಯ'ಕ್ಕೆ ರಾಹುಲ್ ಗಾಂಧಿ...

‘ಕಳ್ಳತನ ನಡೆದ ಬಳಿಕ ಬೀಗ ಹಾಕಿದ್ದಾರೆ’: ಚುನಾವಣಾ ಆಯೋಗದ ಹೊಸ ‘ಇ-ಸೈನ್’ ವೈಶಿಷ್ಟ್ಯ’ಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

- Advertisement -
- Advertisement -

ಆಳಂದಲ್ಲಿ ಮತಗಳ್ಳತನದ ಕುರಿತು ನಾವು ಆರೋಪ ಮಾಡಿದ ಬಳಿಕವಷ್ಟೇ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ‘ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆಗೆ’ ಹೊಸ ಕ್ರಮ ಪರಿಚಯಿಸಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಆಳಂದಲ್ಲಿ ಮತದಾರರ ಹೆಸರನ್ನು ಅವರಿಗೆ ಗೊತ್ತಿಲ್ಲದಂತೆ ಪಟ್ಟಿಯಿಂದ ಅಳಿಸಲಾಗಿದೆ ಎಂಬ ರಾಹುಲ್ ಗಾಂಧಿಯ ಆರೋಪದ ಬಳಿಕ, ಮತದಾರರ ಪಟ್ಟಿಯಿಂದ ಹೆಸರು ಅಳಿಸಲು ಹೊಸ ‘ಇ-ಸೈನ್’ ವೈಶಿಷ್ಟ್ಯ’ವನ್ನು ಚುನಾವಣಾ ಆಯೋಗ ಪರಿಚಯಿಸಿದೆ ಎಂಬ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ವರದಿಯನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ “ಜ್ಞಾನೇಶ್ ಕುಮಾರ್ ಅವರೇ ನಾವು ಕಳ್ಳತನ ಕಂಡು ಹಿಡಿದ ಬಳಿಕವಷ್ಟೇ ನಿಮಗೆ ಬೀಗ ಹಾಕಲು ನೆನಪಾಗಿದೆ. ನಾವು ಕಳ್ಳರನ್ನೂ ಹಿಡಿಯುತ್ತೇವೆ. ನೀವು ಸಿಐಡಿಗೆ ದತ್ತಾಂಶ ಯಾವಾಗ ಕೊಡುತ್ತೀರಿ? ಹೇಳಿ” ಎಂದು ಪ್ರಶ್ನಿಸಿದ್ದಾರೆ.

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದಲ್ಲಿ 5,994 ಮತದಾರರ ಹೆಸರುಗಳನ್ನು ಅವರಿಗೆ ಗೊತ್ತಿಲ್ಲದಂತೆ ನಕಲಿ ಫಾರ್ಮ್‌ 7 ಮೂಲಕ ಅಳಿಸಲು ಪ್ರಯತ್ನಿಸಿರುವುದು ಬೆಳಕಿಗೆ ಬಂದಿತ್ತು.

ಈ ಬಗ್ಗೆ ಕರ್ನಾಟಕ ಸಿಐಡಿ ತನಿಖೆ ನಡೆಸುತ್ತಿದೆ. ಆದರೆ, ತನಿಖೆಗೆ ನಿರ್ಣಾಯಕವಾದ ಡೆಸ್ಟಿನೇಶನ್ ಫೋರ್ಟ್ ಮತ್ತು ಡೆಸ್ಟಿನೇಶನ್ ಐಡಿ ಸೇರಿದಂತೆ ಪ್ರಮುಖ ದತ್ತಾಂಶಗಳನ್ನು ಚುನಾವಣಾ ಆಯೋಗ ಒದಗಿಸುತ್ತಿಲ್ಲ. ಇದರಿಂದ ತನಿಖೆ ಹಳ್ಳ ಹಿಡಿದಿದೆ ಎಂದು ಸೆಪ್ಟೆಂಬರ್ 7ರಂದು ದಿ ಹಿಂದೂ ಪತ್ರಿಕೆ ವರದಿ ಮಾಡಿತ್ತು.

ಸೆಪ್ಟೆಂಬರ್ 18ರಂದು ನವದೆಹಲ್ಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ ಮಾಡಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಮತಗಳ್ಳರನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ವ್ಯವಸ್ಥಿತವಾಗಿ ಅಳಿಸಲು ಕೇಂದ್ರೀಕೃತ ಸಾಫ್ಟ್‌ವೇರ್ ಪ್ರೋಗ್ರಾಂ ಅನ್ನು ಬಳಸಲಾಗುತ್ತಿದೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಯ ಆರೋಪವನ್ನು ಚುನಾವಣಾ ಆಯೋಗ ತಳ್ಳಿ ಹಾಕಿತ್ತು. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಪ್ರಕ್ರಿಯೆ ಕಾನೂನು ಬದ್ಧವಾಗಿದ್ದು, ಸಂಬಂಧಿತ ವ್ಯಕ್ತಿಗೆ ಮಾಹಿತಿ ನೀಡದೆ ಯಾವುದೇ ಅಳಿಸುವಿಕೆ ನಡೆಯುವುದಿಲ್ಲ ಎಂದಿತ್ತು.

ಹೊಸ ‘ಇ-ಸೈನ್’ ವೈಶಿಷ್ಟ್ಯ’

ಚುನಾವಣಾ ಆಯೋಗದ ECINET ಪೋರ್ಟಲ್‌ನಲ್ಲಿ ಹೊಸ ಮತದಾರರ ನೋಂದಣಿಗಾಗಿ ಫಾರ್ಮ್ 6, ಅಸ್ತಿತ್ವದಲ್ಲಿರುವ ಪಟ್ಟಿಗಳಲ್ಲಿ ಹೆಸರನ್ನು ಸೇರಿಸಲು ಮತ್ತು ಅಳಿಸುವುದಕ್ಕೆ ಆಕ್ಷೇಪಣೆ ಸಲ್ಲಿಸಲು ಫಾರ್ಮ್‌ 7 ಹಾಗೂ ನಮೂದುಗಳ ತಿದ್ದುಪಡಿಗಾಗಿ ಫಾರ್ಮ್ 8 ಭರ್ತಿ ಮಾಡಲು ಹೊಸದಾಗಿ ‘ಇ-ಸೈನ್’ ಕಡ್ಡಾಯಗೊಳಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಇ-ಸೈನ್ ವೈಶಿಷ್ಟ್ಯದಿಂದಾಗಿ ಈಗ ಅರ್ಜಿದಾರರು ಅರ್ಜಿಗೆ ಬಳಸುವ ಮತದಾರರ ಕಾರ್ಡ್‌ನಲ್ಲಿರುವ ಹೆಸರು ಅವರ ಆಧಾರ್ ಕಾರ್ಡ್‌ನಲ್ಲಿರುವ ಹೆಸರಿಗೆ ಹೊಂದಿಕೆಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಪೋರ್ಟಲ್ ಕೇಳುತ್ತದೆ. ಅಲ್ಲದೆ, ಅವರು ಬಳಸುತ್ತಿರುವ ಮೊಬೈಲ್ ಸಂಖ್ಯೆಯನ್ನು ಅವರ ಆಧಾರ್‌ಗೆ ಲಿಂಕ್ ಮಾಡಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವಂತೆಯೂ ಅದು ಕೇಳುತ್ತದೆ ಎಂದು ವರದಿ ವಿವರಿಸಿದೆ.

ಅರ್ಜಿದಾರರು ಫಾರ್ಮ್ ಭರ್ತಿ ಮಾಡಿದ ನಂತರ, ಅವರಿಗೆ ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ ಆಯೋಜಿಸಿರುವ ಬಾಹ್ಯ ಇ-ಸೈನ್ ಪೋರ್ಟಲ್ ಅನ್ನು ತೋರಿಸಲಾಗುತ್ತದೆ. ಇದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ.

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಈ ಪೋರ್ಟಲ್‌ನಲ್ಲಿ ‘ಆಧಾರ್ ಒಟಿಪಿ ರಚಿಸಬೇಕಾಗುತ್ತದೆ. ತರುವಾಯ, ಆ ಆಧಾರ್ ಸಂಖ್ಯೆಗೆ ಲಿಂಕ್ ಮಾಡಲಾದ ಫೋನ್ ಸಂಖ್ಯೆಗೆ ಒಟಿಪಿ ಕಳುಹಿಸಲಾಗುತ್ತದೆ.

ನಂತರ ಅರ್ಜಿದಾರರು ಆಧಾರ್ ಆಧಾರಿತ ದೃಢೀಕರಣಕ್ಕೆ ಒಪ್ಪಿಗೆ ನೀಡಬೇಕು ಮತ್ತು ಪರಿಶೀಲನೆಯನ್ನು ಪೂರ್ಣಗೊಳಿಸಬೇಕು. ಇದರ ನಂತರ, ಅರ್ಜಿದಾರರನ್ನು ಫಾರ್ಮ್ ಅನ್ನು ಸಲ್ಲಿಸಲು ECINET ಪೋರ್ಟಲ್‌ಗೆ ಮರುನಿರ್ದೇಶಿಸಲಾಗುತ್ತದೆ.

ಈ ವರ್ಷದ ಆರಂಭದಲ್ಲಿ ಪ್ರಾರಂಭಿಸಲಾದ ECINET,ಮತದಾರರು ಮತ್ತು ಅಧಿಕಾರಿಗಳಿಗೆ ಮೀಸಲಾದ 40ಕ್ಕೂ ಹೆಚ್ಚು ಚುನಾವಣಾ ಸಮಿತಿಯ ಅರ್ಜಿಗಳನ್ನು ಸಂಯೋಜಿಸುವ ಮತ್ತು ಮರುಪರಿಶೀಲಿಸುವ ವೇದಿಕೆಯಾಗಿದೆ.

ಬಿಹಾರ ಚುನಾವಣೆ ಮೋದಿ ಆಡಳಿತ ಅಂತ್ಯದ ಆರಂಭ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...