Homeಕರೋನಾ ತಲ್ಲಣಸೋಮವಾರದಿಂದ ಕರ್ನಾಟಕದಲ್ಲಿ ಅನ್ ಲಾಕ್-2.0 ಜಾರಿಗೆ

ಸೋಮವಾರದಿಂದ ಕರ್ನಾಟಕದಲ್ಲಿ ಅನ್ ಲಾಕ್-2.0 ಜಾರಿಗೆ

- Advertisement -
- Advertisement -

ದೇಶದಾದ್ಯಂತ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದಂತೆ ದೇಶದ ಹಲವು ರಾಜ್ಯಗಳು ಕೊರೊನಾ ಕಾರಣಕ್ಕೆ ಹೇರಲ್ಪಟ್ಟಿದ್ದ ಲಾಕ್‌ಡೌನ್‌ ಅನ್ನು ಹಂತ ಹಂತವಾಗಿ ತೆರವುಗೊಳಿಸುತ್ತಿವೆ. ಅದರಂತೆ ರಾಜ್ಯದಲ್ಲೂ ಮೊದಲ ಹಂತದ ಅನ್‌ಲಾಕ್‌ ಪ್ರಕ್ರಿಯೆ ಕಳೆದ ವಾರವೆ ಪ್ರಾರಂಭವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಲಾಕ್​ಡೌನ್​ ಸಡಿಲಗೊಳಿಸಲಾಗಿದೆ. ಈಗ ಎರಡನೇ ಹಂತದ ಅನ್​ಲಾಕ್​ ಮಾಡಲು ಸರ್ಕಾರ ಮುಂದಾಗಿದೆ.

ಜೂನ್​ 21 ರಿಂದ ಅನ್​ಲಾಕ್​ 2.0 ಜಾರಿಯಾಗಲಿದ್ದು, ಕೆಲವು ಕ್ಷೇತ್ರಗಳಿಗೆ ವಿನಾಯಿತಿ ಸಿಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. 2 ನೇ ಹಂತದ ಲಾಕ್​ಡೌನ್​ ಸಡಿಲಿಕೆಯಲ್ಲಿ ಯಾವುದಕ್ಕೆಲ್ಲಾ ಅನುಮತಿ ಇರುತ್ತದೆ ಮತ್ತು ಯಾವುದಕ್ಕೆಲ್ಲಾ ನಿರ್ಬಂಧ ಎಂಬುದನ್ನು ಇನ್ನಷ್ಟೆ ತಿಳಿಯಬೇಕಿದೆ. ಸೋಮವಾರದಿಂದ ಅನ್‌ಲಾಕ್ 2.O ಜಾರಿ ಹಿನ್ನಲೆ, ಅಂದಿನಿಂದ ಕರ್ನಾಟಕ ಸಹಜ ಸ್ಥಿತಿಗೆ ಮರಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬಸ್​ ಮತ್ತು ಮೆಟ್ರೋ ಸಂಚಾರದ ಬಗ್ಗೆ ಇಂದಿನ ಸಿಎಂ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.

ಜೂನ್‌ 21 ರಿಂದ ಅನ್​ಲಾಕ್​​‌ 2.O ಜಾರಿಯಾದರೆ ಬಿಎಂಟಿಸಿ, ಕೆಎಸ್ಆರ್ಟಿಸಿ, ಮೆಟ್ರೋ ಓಡಾಟವಿರುತ್ತದೆ ಎನ್ನಲಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಮೊದಲ ಹಂತದಲ್ಲಿ 1500-2000 ಬಸ್​ಗಳು ಓಡಾಟ ನಡೆಸಲಿವೆ. ಕೊರೋನಾ ಭೀತಿಯಿಂದಾಗಿ ಬಿಎಂಟಿಸಿ ಎಸಿ ವೋಲ್ವೋ ಬಸ್ಸುಗಳ ಸಂಚಾರ ಬಹುತೇಕ ಅನುಮಾನ ಎನ್ನಲಾಗುತ್ತಿದೆ.

ಇದನ್ನೂ ಓದಿ: 7 ವರ್ಷಗಳ ದುರಾಡಳಿತ, ಏಳಬೇಕೀಗ ಭಾರತ: ಡಾ. ಎಚ್ ವಿ ವಾಸು

ಬಸ್ಸುಗಳಲ್ಲಿ 50% ದಷ್ಟು ಪ್ರಯಾಣಿಕರಿಗೆ ಸಂಚಾರಕ್ಕೆ ಅನುಮತಿ ನೀಡಲಾಗುತ್ತದೆ ಎನ್ನಾಗಿದೆ. ಬಸ್ಸುಗಳಲ್ಲಿ ಒಂದು ಆಸನ ಬಿಟ್ಟು ಒಂದು ಆಸನದಲ್ಲಿ ಕುಳಿತು ಪ್ರಯಾಣಿಸಲು ಅವಕಾಶ ಇರಲಿದ್ದು, ನಿಂತುಕೊಂಡು ಪ್ರಯಾಣಿಸೋದಕ್ಕೆ ಅವಕಾಶ ಇಲ್ಲ. ಬಸ್​​ ನಿಲ್ದಾಣಗಳಲ್ಲಿ ಜನಸಂದಣಿ ಆಗದಂತೆ ನೋಡಿಕೊಳ್ಳುವ ಜವಬ್ದಾರಿ ಪೊಲೀಸ್​ ಇಲಾಖೆ ಮತ್ತು ಬಿಎಂಟಿಸಿ ಅಧಿಕಾರಿಗಳಿಗೆ ನೀಡಲಾಗಿದೆ.

ಇದರ ಜೊತೆಗೆ ಜೂನ್‌ 21ರಿಂದ ಕೆಎಸ್​ಆರ್​ಟಿಸಿ ಬಸ್​​ಗಳನ್ನು ರಸ್ತೆಗಿಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದಲ್ಲಿ ಒಟ್ಟು 8 ಸಾವಿರ ಕೆಎಸ್​ಆರ್​ಟಿಸಿ ಬಸ್ಸುಗಳಿದ್ದು, ಅದ್ರಲ್ಲಿ 2500 ರಿಂದ 3000 ಸಾವಿರ ಬಸ್ಸುಗಳನ್ನು ಮಾತ್ರ ರಸ್ತೆಗಿಳಿಸಲು ನಿರ್ಧಾರ ಮಾಡಲಾಗಿದೆ ಎಂದು ವರದಿಯಾಗಿದೆ.

ಅತೀ ಹೆಚ್ಚು ಸೋಂಕು ಇರುವ ಜಿಲ್ಲೆಗಳಿಗೆ ಕೆಎಸ್ಆರ್​​ಟಿಸಿ ಬಸ್ ಓಡಾಟ ಇರುವುದಿಲ್ಲ. ಸದ್ಯ ಹೊರ ರಾಜ್ಯಗಳಿಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಮಾಡುವ ಸಾಧ್ಯತೆ ಕಡಿಮೆ ಇದೆ. ಎಸಿ, ಸ್ಲೀಪರ್ ಬಸ್ಸುಗಳನ್ನು ರಸ್ತೆಗಿಳಿಸದಿರಲು ತೀರ್ಮಾನ ಮಾಡಲಾಗಿದೆ. ಕೆಎಸ್ ಆರ್ ಟಿಸಿ ಬಸ್​ಗಳಲ್ಲಿಯೂ ಬಿಎಂಟಿಸಿಯಂತೆ 50% ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...