Homeಕರೋನಾ ತಲ್ಲಣಸೋಮವಾರದಿಂದ ಕರ್ನಾಟಕದಲ್ಲಿ ಅನ್ ಲಾಕ್-2.0 ಜಾರಿಗೆ

ಸೋಮವಾರದಿಂದ ಕರ್ನಾಟಕದಲ್ಲಿ ಅನ್ ಲಾಕ್-2.0 ಜಾರಿಗೆ

- Advertisement -
- Advertisement -

ದೇಶದಾದ್ಯಂತ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದಂತೆ ದೇಶದ ಹಲವು ರಾಜ್ಯಗಳು ಕೊರೊನಾ ಕಾರಣಕ್ಕೆ ಹೇರಲ್ಪಟ್ಟಿದ್ದ ಲಾಕ್‌ಡೌನ್‌ ಅನ್ನು ಹಂತ ಹಂತವಾಗಿ ತೆರವುಗೊಳಿಸುತ್ತಿವೆ. ಅದರಂತೆ ರಾಜ್ಯದಲ್ಲೂ ಮೊದಲ ಹಂತದ ಅನ್‌ಲಾಕ್‌ ಪ್ರಕ್ರಿಯೆ ಕಳೆದ ವಾರವೆ ಪ್ರಾರಂಭವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಲಾಕ್​ಡೌನ್​ ಸಡಿಲಗೊಳಿಸಲಾಗಿದೆ. ಈಗ ಎರಡನೇ ಹಂತದ ಅನ್​ಲಾಕ್​ ಮಾಡಲು ಸರ್ಕಾರ ಮುಂದಾಗಿದೆ.

ಜೂನ್​ 21 ರಿಂದ ಅನ್​ಲಾಕ್​ 2.0 ಜಾರಿಯಾಗಲಿದ್ದು, ಕೆಲವು ಕ್ಷೇತ್ರಗಳಿಗೆ ವಿನಾಯಿತಿ ಸಿಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. 2 ನೇ ಹಂತದ ಲಾಕ್​ಡೌನ್​ ಸಡಿಲಿಕೆಯಲ್ಲಿ ಯಾವುದಕ್ಕೆಲ್ಲಾ ಅನುಮತಿ ಇರುತ್ತದೆ ಮತ್ತು ಯಾವುದಕ್ಕೆಲ್ಲಾ ನಿರ್ಬಂಧ ಎಂಬುದನ್ನು ಇನ್ನಷ್ಟೆ ತಿಳಿಯಬೇಕಿದೆ. ಸೋಮವಾರದಿಂದ ಅನ್‌ಲಾಕ್ 2.O ಜಾರಿ ಹಿನ್ನಲೆ, ಅಂದಿನಿಂದ ಕರ್ನಾಟಕ ಸಹಜ ಸ್ಥಿತಿಗೆ ಮರಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬಸ್​ ಮತ್ತು ಮೆಟ್ರೋ ಸಂಚಾರದ ಬಗ್ಗೆ ಇಂದಿನ ಸಿಎಂ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.

ಜೂನ್‌ 21 ರಿಂದ ಅನ್​ಲಾಕ್​​‌ 2.O ಜಾರಿಯಾದರೆ ಬಿಎಂಟಿಸಿ, ಕೆಎಸ್ಆರ್ಟಿಸಿ, ಮೆಟ್ರೋ ಓಡಾಟವಿರುತ್ತದೆ ಎನ್ನಲಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಮೊದಲ ಹಂತದಲ್ಲಿ 1500-2000 ಬಸ್​ಗಳು ಓಡಾಟ ನಡೆಸಲಿವೆ. ಕೊರೋನಾ ಭೀತಿಯಿಂದಾಗಿ ಬಿಎಂಟಿಸಿ ಎಸಿ ವೋಲ್ವೋ ಬಸ್ಸುಗಳ ಸಂಚಾರ ಬಹುತೇಕ ಅನುಮಾನ ಎನ್ನಲಾಗುತ್ತಿದೆ.

ಇದನ್ನೂ ಓದಿ: 7 ವರ್ಷಗಳ ದುರಾಡಳಿತ, ಏಳಬೇಕೀಗ ಭಾರತ: ಡಾ. ಎಚ್ ವಿ ವಾಸು

ಬಸ್ಸುಗಳಲ್ಲಿ 50% ದಷ್ಟು ಪ್ರಯಾಣಿಕರಿಗೆ ಸಂಚಾರಕ್ಕೆ ಅನುಮತಿ ನೀಡಲಾಗುತ್ತದೆ ಎನ್ನಾಗಿದೆ. ಬಸ್ಸುಗಳಲ್ಲಿ ಒಂದು ಆಸನ ಬಿಟ್ಟು ಒಂದು ಆಸನದಲ್ಲಿ ಕುಳಿತು ಪ್ರಯಾಣಿಸಲು ಅವಕಾಶ ಇರಲಿದ್ದು, ನಿಂತುಕೊಂಡು ಪ್ರಯಾಣಿಸೋದಕ್ಕೆ ಅವಕಾಶ ಇಲ್ಲ. ಬಸ್​​ ನಿಲ್ದಾಣಗಳಲ್ಲಿ ಜನಸಂದಣಿ ಆಗದಂತೆ ನೋಡಿಕೊಳ್ಳುವ ಜವಬ್ದಾರಿ ಪೊಲೀಸ್​ ಇಲಾಖೆ ಮತ್ತು ಬಿಎಂಟಿಸಿ ಅಧಿಕಾರಿಗಳಿಗೆ ನೀಡಲಾಗಿದೆ.

ಇದರ ಜೊತೆಗೆ ಜೂನ್‌ 21ರಿಂದ ಕೆಎಸ್​ಆರ್​ಟಿಸಿ ಬಸ್​​ಗಳನ್ನು ರಸ್ತೆಗಿಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದಲ್ಲಿ ಒಟ್ಟು 8 ಸಾವಿರ ಕೆಎಸ್​ಆರ್​ಟಿಸಿ ಬಸ್ಸುಗಳಿದ್ದು, ಅದ್ರಲ್ಲಿ 2500 ರಿಂದ 3000 ಸಾವಿರ ಬಸ್ಸುಗಳನ್ನು ಮಾತ್ರ ರಸ್ತೆಗಿಳಿಸಲು ನಿರ್ಧಾರ ಮಾಡಲಾಗಿದೆ ಎಂದು ವರದಿಯಾಗಿದೆ.

ಅತೀ ಹೆಚ್ಚು ಸೋಂಕು ಇರುವ ಜಿಲ್ಲೆಗಳಿಗೆ ಕೆಎಸ್ಆರ್​​ಟಿಸಿ ಬಸ್ ಓಡಾಟ ಇರುವುದಿಲ್ಲ. ಸದ್ಯ ಹೊರ ರಾಜ್ಯಗಳಿಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಮಾಡುವ ಸಾಧ್ಯತೆ ಕಡಿಮೆ ಇದೆ. ಎಸಿ, ಸ್ಲೀಪರ್ ಬಸ್ಸುಗಳನ್ನು ರಸ್ತೆಗಿಳಿಸದಿರಲು ತೀರ್ಮಾನ ಮಾಡಲಾಗಿದೆ. ಕೆಎಸ್ ಆರ್ ಟಿಸಿ ಬಸ್​ಗಳಲ್ಲಿಯೂ ಬಿಎಂಟಿಸಿಯಂತೆ 50% ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...