Homeಕರೋನಾ ತಲ್ಲಣಸೋಮವಾರದಿಂದ ಕರ್ನಾಟಕದಲ್ಲಿ ಅನ್ ಲಾಕ್-2.0 ಜಾರಿಗೆ

ಸೋಮವಾರದಿಂದ ಕರ್ನಾಟಕದಲ್ಲಿ ಅನ್ ಲಾಕ್-2.0 ಜಾರಿಗೆ

- Advertisement -
- Advertisement -

ದೇಶದಾದ್ಯಂತ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದಂತೆ ದೇಶದ ಹಲವು ರಾಜ್ಯಗಳು ಕೊರೊನಾ ಕಾರಣಕ್ಕೆ ಹೇರಲ್ಪಟ್ಟಿದ್ದ ಲಾಕ್‌ಡೌನ್‌ ಅನ್ನು ಹಂತ ಹಂತವಾಗಿ ತೆರವುಗೊಳಿಸುತ್ತಿವೆ. ಅದರಂತೆ ರಾಜ್ಯದಲ್ಲೂ ಮೊದಲ ಹಂತದ ಅನ್‌ಲಾಕ್‌ ಪ್ರಕ್ರಿಯೆ ಕಳೆದ ವಾರವೆ ಪ್ರಾರಂಭವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಲಾಕ್​ಡೌನ್​ ಸಡಿಲಗೊಳಿಸಲಾಗಿದೆ. ಈಗ ಎರಡನೇ ಹಂತದ ಅನ್​ಲಾಕ್​ ಮಾಡಲು ಸರ್ಕಾರ ಮುಂದಾಗಿದೆ.

ಜೂನ್​ 21 ರಿಂದ ಅನ್​ಲಾಕ್​ 2.0 ಜಾರಿಯಾಗಲಿದ್ದು, ಕೆಲವು ಕ್ಷೇತ್ರಗಳಿಗೆ ವಿನಾಯಿತಿ ಸಿಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. 2 ನೇ ಹಂತದ ಲಾಕ್​ಡೌನ್​ ಸಡಿಲಿಕೆಯಲ್ಲಿ ಯಾವುದಕ್ಕೆಲ್ಲಾ ಅನುಮತಿ ಇರುತ್ತದೆ ಮತ್ತು ಯಾವುದಕ್ಕೆಲ್ಲಾ ನಿರ್ಬಂಧ ಎಂಬುದನ್ನು ಇನ್ನಷ್ಟೆ ತಿಳಿಯಬೇಕಿದೆ. ಸೋಮವಾರದಿಂದ ಅನ್‌ಲಾಕ್ 2.O ಜಾರಿ ಹಿನ್ನಲೆ, ಅಂದಿನಿಂದ ಕರ್ನಾಟಕ ಸಹಜ ಸ್ಥಿತಿಗೆ ಮರಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬಸ್​ ಮತ್ತು ಮೆಟ್ರೋ ಸಂಚಾರದ ಬಗ್ಗೆ ಇಂದಿನ ಸಿಎಂ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.

ಜೂನ್‌ 21 ರಿಂದ ಅನ್​ಲಾಕ್​​‌ 2.O ಜಾರಿಯಾದರೆ ಬಿಎಂಟಿಸಿ, ಕೆಎಸ್ಆರ್ಟಿಸಿ, ಮೆಟ್ರೋ ಓಡಾಟವಿರುತ್ತದೆ ಎನ್ನಲಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಮೊದಲ ಹಂತದಲ್ಲಿ 1500-2000 ಬಸ್​ಗಳು ಓಡಾಟ ನಡೆಸಲಿವೆ. ಕೊರೋನಾ ಭೀತಿಯಿಂದಾಗಿ ಬಿಎಂಟಿಸಿ ಎಸಿ ವೋಲ್ವೋ ಬಸ್ಸುಗಳ ಸಂಚಾರ ಬಹುತೇಕ ಅನುಮಾನ ಎನ್ನಲಾಗುತ್ತಿದೆ.

ಇದನ್ನೂ ಓದಿ: 7 ವರ್ಷಗಳ ದುರಾಡಳಿತ, ಏಳಬೇಕೀಗ ಭಾರತ: ಡಾ. ಎಚ್ ವಿ ವಾಸು

ಬಸ್ಸುಗಳಲ್ಲಿ 50% ದಷ್ಟು ಪ್ರಯಾಣಿಕರಿಗೆ ಸಂಚಾರಕ್ಕೆ ಅನುಮತಿ ನೀಡಲಾಗುತ್ತದೆ ಎನ್ನಾಗಿದೆ. ಬಸ್ಸುಗಳಲ್ಲಿ ಒಂದು ಆಸನ ಬಿಟ್ಟು ಒಂದು ಆಸನದಲ್ಲಿ ಕುಳಿತು ಪ್ರಯಾಣಿಸಲು ಅವಕಾಶ ಇರಲಿದ್ದು, ನಿಂತುಕೊಂಡು ಪ್ರಯಾಣಿಸೋದಕ್ಕೆ ಅವಕಾಶ ಇಲ್ಲ. ಬಸ್​​ ನಿಲ್ದಾಣಗಳಲ್ಲಿ ಜನಸಂದಣಿ ಆಗದಂತೆ ನೋಡಿಕೊಳ್ಳುವ ಜವಬ್ದಾರಿ ಪೊಲೀಸ್​ ಇಲಾಖೆ ಮತ್ತು ಬಿಎಂಟಿಸಿ ಅಧಿಕಾರಿಗಳಿಗೆ ನೀಡಲಾಗಿದೆ.

ಇದರ ಜೊತೆಗೆ ಜೂನ್‌ 21ರಿಂದ ಕೆಎಸ್​ಆರ್​ಟಿಸಿ ಬಸ್​​ಗಳನ್ನು ರಸ್ತೆಗಿಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದಲ್ಲಿ ಒಟ್ಟು 8 ಸಾವಿರ ಕೆಎಸ್​ಆರ್​ಟಿಸಿ ಬಸ್ಸುಗಳಿದ್ದು, ಅದ್ರಲ್ಲಿ 2500 ರಿಂದ 3000 ಸಾವಿರ ಬಸ್ಸುಗಳನ್ನು ಮಾತ್ರ ರಸ್ತೆಗಿಳಿಸಲು ನಿರ್ಧಾರ ಮಾಡಲಾಗಿದೆ ಎಂದು ವರದಿಯಾಗಿದೆ.

ಅತೀ ಹೆಚ್ಚು ಸೋಂಕು ಇರುವ ಜಿಲ್ಲೆಗಳಿಗೆ ಕೆಎಸ್ಆರ್​​ಟಿಸಿ ಬಸ್ ಓಡಾಟ ಇರುವುದಿಲ್ಲ. ಸದ್ಯ ಹೊರ ರಾಜ್ಯಗಳಿಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಮಾಡುವ ಸಾಧ್ಯತೆ ಕಡಿಮೆ ಇದೆ. ಎಸಿ, ಸ್ಲೀಪರ್ ಬಸ್ಸುಗಳನ್ನು ರಸ್ತೆಗಿಳಿಸದಿರಲು ತೀರ್ಮಾನ ಮಾಡಲಾಗಿದೆ. ಕೆಎಸ್ ಆರ್ ಟಿಸಿ ಬಸ್​ಗಳಲ್ಲಿಯೂ ಬಿಎಂಟಿಸಿಯಂತೆ 50% ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...