Homeಕರೋನಾ ತಲ್ಲಣಲಾಕ್‌ಡೌನ್‌ ಸಂಕಷ್ಟ - ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮಿ. ಸೈಕಲ್‌ ಪ್ರಯಾಣ

ಲಾಕ್‌ಡೌನ್‌ ಸಂಕಷ್ಟ – ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮಿ. ಸೈಕಲ್‌ ಪ್ರಯಾಣ

- Advertisement -
- Advertisement -

ಕೊರೊನಾ ಹೆಸರಲ್ಲಿ ಸರ್ಕಾರಗಳು ಹೇರಿರುವ ಲಾಕ್‌ಡೌನ್‌‌‌‌ ಪ್ರತಿಯೊಬ್ಬರನ್ನು ವಿಭಿನ್ನ ತೊಂದರೆಗಳಿಗೆ ಸಿಲುಕಿಸಿದೆ. ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯ ಕೂಲಿ ಕೆಲಸಗಾರನಾದ 40 ವರ್ಷದ ದಿಲೀಪ್ ಯಾದವ್‌ ಅವರು ತನ್ನ ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮೀ ಸೈಕಲ್‌ ಪ್ರಯಾಣಿಸುವ ಸಂಕಷ್ಟಕ್ಕೆ ಲಾಕ್‌ಡೌನ್‌ ಅವರನ್ನು ದೂಡಿದೆ.

ದಿಲೀಪ್ ಅವರ ಐದು ವರ್ಷದ ಮಗ ವಿವೇಕ್‌ಗೆ ಥಲಸ್ಸೆಮಿಯಾ ಎಂಬ ಕಾಯಿಲೆ ಇದ್ದು, ಅದರ ಚಿಕಿತ್ಸೆಗಾಗಿ ರಕ್ತ ವರ್ಗಾವಣೆಯ ಅಗತ್ಯವಿರುತ್ತದೆ.

ದಿಲೀಪ್ ಪ್ರತಾಪುರ ಗ್ರಾಮದ ನಿವಾಸಿಯಾಗಿದ್ದು, ಅವರ ಮಗನ ರಕ್ತದ ಗುಂಪು A- ಆಗಿದೆ. ಇದು ಅಪರೂಪದ ರಕ್ತದ ಗುಂಪಾಗಿದ್ದು, ಅವರ ಜಿಲ್ಲೆಯಾದ ಗೊಡ್ಡಾದಲ್ಲಿ ಸಾರ್ವಕಾಲಿಕವಾಗಿ ಲಭ್ಯವಾಗುತ್ತಿಲ್ಲ. ಆದ್ದರಿಂದ, ಅವರು ತಮ್ಮ ಮಗನ ರಕ್ತದ ವರ್ಗಾವಣೆಗೆ ಇತರ ಜಿಲ್ಲೆಗಳಿಗೆ ಪ್ರಯಾಣಿಸಬೇಕಾಗುತ್ತದೆ.

ಇದನ್ನೂ ಓದಿ: ಉತ್ತರಾಖಂಡದಲ್ಲಿ ಮಾನವರ ಮೃತದೇಹಗಳನ್ನು ಕಿತ್ತು ತಿನ್ನುತ್ತಿರುವ ಬೀದಿ ನಾಯಿಗಳು

ಕಳೆದ ತಿಂಗಳು ಮೇ 25 ರಂದು ದಿಲೀಪ್‌ ಅವರು ತನ್ನ ಮಗನೊಂದಿಗೆ ಜಮ್ತರಾಕ್ಕೆ ಪ್ರಯಾಣ ಬೆಳೆಸಿ ಎರಡು ಯೂನಿಟ್‌ ರಕ್ತವನ್ನು ಪಡೆದು ಮೇ 31 ರಂದು ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ. ಏಪ್ರಿಲ್‌ನಲ್ಲಿಯೂ ಅವರು ಜಮ್ತರಾಕ್ಕೆ ಪ್ರಯಾಣ ಬೆಳೆಸಿದ್ದರು. ಅವರ ಬೈಸಿಕಲ್‌ನಲ್ಲಿ 200 ಕಿ.ಮೀ ದೂರವನ್ನು ಕ್ರಮಿಸಲು ಅವರಿಗೆ ಎರಡು ದಿನಗಳು ಬೇಕಾಗುತ್ತದೆ. ಲಾಕ್‌ಡೌನ್‌ ಕಾರಣಕ್ಕೆ ಸಾರ್ವಜನಿಕ ಸಾರಿಗೆಯನ್ನು ನಿರ್ಬಂಧಿಸಲಾಗಿದ್ದು, ಖಾಸಗಿ ಕ್ಯಾಬ್‌ ಅನ್ನು ಬಾಡಿಗೆಗೆ ಪಡೆಯಲು ಅವರು ಆರ್ಥಿಕವಾಗಿ ಶಕ್ತರಾಗಿಲ್ಲದ ಕಾರಣ ಸೈಕಲ್‌ನಲ್ಲೇ ಪ್ರಯಾಣಿಸಬೇಕಾಗುತ್ತದೆ.

“ಇಲ್ಲಿಯವರೆಗೆ, ನಾನು ನನ್ನ ಬೈಸಿಕಲ್‌ನಲ್ಲಿ ನಾಲ್ಕು ಟ್ರಿಪ್‌ಗಳನ್ನು ಮಾಡಿದ್ದೇನೆ. ಕಳೆದ ವರ್ಷ ದುಮ್ಕಾ ಮತ್ತು ದಿಯೋಘರ್‌‌ಗೆ ಪ್ರಯಾಣಿಸಿದ್ದೆ. ಈ ವರ್ಷ ಎರಡು ಬಾರಿ ಜಮ್ತಾರಾಗೆ ಪ್ರಯಾಣಿಸಿದ್ದೇನೆ” ಎಂದು ದಿಲೀಪ್‌‌ ಹೇಳುತ್ತಾರೆ.

ಕೊರೊನಾಕ್ಕೂ ಮೊದಲು, ಬಾಲಕ ವಿವೇಕ್‌ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಲ್ಲಿ ಅವರಿಗೆ ಉಚಿತ ರಕ್ತವನ್ನು ನೀಡಲಾಗಿತ್ತು. ಆದರೆ ಲಾಕ್ಡೌನ್ ಕಾರಣ ನಾವು ಕಳೆದ ವರ್ಷ ಅಲ್ಲಿಂದ ಮರಳಬೇಕಾಯಿತು ಎಂದು ದಿಲೀಪ್‌ ಹೇಳುತ್ತಾರೆ.

ಇದನ್ನೂ ಓದಿ: ಮಮತಾ v/s BJP – ಮಾಜಿ ಮುಖ್ಯಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ನೀಡಿದ ಕೇಂದ್ರ!

ಜಾರ್ಖಂಡ್‌ನ ಕೆಲವು ರಕ್ತದಾನ ಗುಂಪುಗಳ ಸಹಾಯದಿಂದ ಅವರು ತನ್ನ ಮಗನಿಗೆ ರಕ್ತವನ್ನು ವ್ಯವಸ್ಥೆ ಮಾಡುತ್ತಾರೆ. ಅಲ್ಲಿ A- ಗುಂಪಿನ ರಕ್ತ ಲಭ್ಯವಿದೆ ಎಂದು ತಿಳಿದ ನಂತರ, ಫೋನ್‌ನಲ್ಲಿ ಎಲ್ಲಾ ವ್ಯವಸ್ಥೆಯಾದ ನಂತರ ಅಲ್ಲಿಗೆ ಅವರು ಅಲ್ಲಿಗೆ ತೆರಳುತ್ತಾರೆ.

ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ ವೈದ್ಯರ ಪ್ರಕಾರ, ಬಾಲಕ ವಿವೇಕ್‌ನ ಶಾಶ್ವತ ಚಿಕಿತ್ಸೆಗಾಗಿ ಆಪರೇಷನ್ ಮಾಡಬೇಕಾಗಿದ್ದು, ಇದು ಸುಮಾರು 10 ಲಕ್ಷ ರೂ. ವೆಚ್ಚವಾಗಲಿದೆ ಎಂದು ಹೇಳಿದ್ದಾರೆ. ಆದರೆ ಕೂಲಿ ಕೆಲಸಗಾರರಾದ ದಿಲೀಪ್‌‌ ಈ ವೆಚ್ಚವನ್ನು ಭರಿಸಲು ಸಾಧ್ಯವಾಗಿಲ್ಲ.

ಇದಕ್ಕೂ ಮೊದಲು ಗೊಡ್ಡಾ ಸಂಸದ ನಿಶಿಕಾಂತ್ ದುಬೆ ಅವರ ಉಪಕ್ರಮದಲ್ಲಿ ವಿವೇಕ್ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು 3 ಲಕ್ಷ ರೂ. ಗಳನ್ನು ಬಿಡುಗಡೆ ಮಾಡಿತ್ತು. ಆದರೆ ದಿಲೀಪ್‌ ಅವರಿಗೆ ಉಳಿದ ಹಣವನ್ನು ವ್ಯವಸ್ಥೆ ಮಾಡಲು ಸಾಧ್ಯವಾಗದ ಕಾರಣ ಮೊತ್ತವು ಸಿಗದಂತಾಗಿದೆ.

ಗೊಡ್ಡಾ ಸಿವಿಲ್ ಸರ್ಜನ್ ಎಸ್ಪಿ ಮಿಶ್ರಾ ಅವರನ್ನು TNIE ಪತ್ರಿಕೆಯು ಸಂಪರ್ಕಿಸಿದಾಗ, ದಿಲೀಪ್‌ ಅವರ ಸಂಕಟದ ಬಗ್ಗೆ ತಿಳಿದಿಲ್ಲ, ಅಗತ್ಯವಿದ್ದಾಗ ವಿವೇಕ್‌ಗೆ A- ರಕ್ತವನ್ನು ವ್ಯವಸ್ಥೆಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...

ತಮಿಳುನಾಡು: ಜಾತಿ ಜಗಳದಲ್ಲಿ ದಲಿತ ವ್ಯಕ್ತಿ, ಒಡಿಶಾ ವಲಸೆ ಕಾರ್ಮಿಕನ ಹತ್ಯೆ; ಹಿಂದೆಯೂ ಜಾತಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪಿಗಳು

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ನಂಗುನೇರಿಯಿಂದ ಜಾತಿ ಹಿಂಸಾಚಾರದ ಭಯಾನಕ ಘಟನೆ ವರದಿಯಾಗಿದೆ, ಪೆರುಂಪತ್ತು ಗ್ರಾಮದಲ್ಲಿ ನಡೆದ ಕ್ರೂರ ದಾಳಿಯಲ್ಲಿ ಅಂಗವಿಕಲ ದಲಿತ ವ್ಯಕ್ತಿ ಮತ್ತು ಒಡಿಶಾದ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ.  ಆರೋಪಿಗಳಲ್ಲಿ ಇಬ್ಬರು ಕೆಲವು...

ರಾಜ್ಯಸಭಾ ಚುನಾವಣೆ: ಆರು ಜನರ ಹೆಸರು ಘೋಷಿಸಿದ ಕಾಂಗ್ರೆಸ್; ಸಿಂಘ್ವಿ-ನೇತಮ್ ಮರು ನಾಮನಿರ್ದೇಶನ

ರಾಜ್ಯಸಭೆಗೆ ಮುಂಬರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ಇಬ್ಬರು ಹಾಲಿ ಸದಸ್ಯರನ್ನು ಮತ್ತೆ ನಾಮನಿರ್ದೇಶನ ಮಾಡಿದ್ದು, ವಿವಿಧ ರಾಜ್ಯಗಳಿಂದ ಹಲವಾರು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ರಾಜ್ಯಸಭಾ ಸದಸ್ಯರಾದ ಅಭಿಷೇಕ್ ಮನು...

ರಾಷ್ಟ್ರ ರಾಜಕಾರಣಕ್ಕೆ ನಿತೀಶ್ ಕುಮಾರ್; ರಾಜ್ಯಸಭೆ ಪ್ರವೇಶ ದೃಢಪಡಿಸಿದ ಬಿಹಾರ ಸಿಎಂ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ನಿತೀಶ್ ಕುಮಾರ್, 20 ವರ್ಷಗಳಿಗೂ ಹೆಚ್ಚು ಕಾಲ ತಾವು ಹೊಂದಿದ್ದ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ತೆರಳುವುದಾಗಿ ದೃಢಪಡಿಸಿದ್ದಾರೆ. "ನನ್ನ ಸಂಸದೀಯ...

ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ : ಹಲವು ಅಧಿಕಾರಿಗಳ ಮನೆ, ಕಚೇರಿ ಶೋಧ

ರಾಜ್ಯಾದಾದ್ಯಂತ ವಿವಿಧ ಜಿಲ್ಲೆಗಳ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಗುರುವಾರ (ಮಾ.5) ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ,...

ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸಲು ಅಡ್ಡಿ : ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸುವ ಕಾನೂನಾತ್ಮಕ ಅವಕಾಶವನ್ನು ಕಿತ್ತುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದ್ದು, ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ದ ಗುರುವಾರ (ಮಾ.5) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಉರೂಸ್‌ ಸಂದರ್ಭದಲ್ಲಿ ಬಾಬಾ ಬುಡನ್‌ಗಿರಿಯ...

ಟ್ರಂಪ್ ಯುದ್ಧಾಧಿಕಾರಕ್ಕೆ ಬ್ರೇಕ್ ಹಾಕುವ ಪ್ರಯತ್ನಕ್ಕೆ ಹಿನ್ನಡೆ; ಸೆನೆಟ್‌ನಲ್ಲಿ ನಿರ್ಣಯಕ್ಕೆ ಸೋಲು 

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯುದ್ಧಾಧಿಕಾರಕ್ಕೆ ಲಗಾಮು ಹಾಕುವ ನಿರ್ಣಯಕ್ಕೆ ಅಮೆರಿಕ ಸೆನೆಟ್‌ನಲ್ಲಿ (ಸಂಸತ್ತಿನ ಮೇಲ್ಮನೆ) ಸೋಲಾಗಿದೆ. ಇದರಿಂದ ಪ್ರಸ್ತುತ ನಡೆಸುತ್ತಿರುವ ಇರಾನ್ ಮೇಲಿನ ದಾಳಿಯನ್ನು ಇನ್ನಷ್ಟು ಹೆಚ್ಚಿಸಲು ಟ್ರಂಪ್‌ಗೆ ಅನುಮತಿ ಸಿಕ್ಕಂತಾಗಿದೆ....

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...