Homeಕರೋನಾ ತಲ್ಲಣಲಾಕ್‌ಡೌನ್‌ ಸಂಕಷ್ಟ - ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮಿ. ಸೈಕಲ್‌ ಪ್ರಯಾಣ

ಲಾಕ್‌ಡೌನ್‌ ಸಂಕಷ್ಟ – ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮಿ. ಸೈಕಲ್‌ ಪ್ರಯಾಣ

- Advertisement -
- Advertisement -

ಕೊರೊನಾ ಹೆಸರಲ್ಲಿ ಸರ್ಕಾರಗಳು ಹೇರಿರುವ ಲಾಕ್‌ಡೌನ್‌‌‌‌ ಪ್ರತಿಯೊಬ್ಬರನ್ನು ವಿಭಿನ್ನ ತೊಂದರೆಗಳಿಗೆ ಸಿಲುಕಿಸಿದೆ. ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯ ಕೂಲಿ ಕೆಲಸಗಾರನಾದ 40 ವರ್ಷದ ದಿಲೀಪ್ ಯಾದವ್‌ ಅವರು ತನ್ನ ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮೀ ಸೈಕಲ್‌ ಪ್ರಯಾಣಿಸುವ ಸಂಕಷ್ಟಕ್ಕೆ ಲಾಕ್‌ಡೌನ್‌ ಅವರನ್ನು ದೂಡಿದೆ.

ದಿಲೀಪ್ ಅವರ ಐದು ವರ್ಷದ ಮಗ ವಿವೇಕ್‌ಗೆ ಥಲಸ್ಸೆಮಿಯಾ ಎಂಬ ಕಾಯಿಲೆ ಇದ್ದು, ಅದರ ಚಿಕಿತ್ಸೆಗಾಗಿ ರಕ್ತ ವರ್ಗಾವಣೆಯ ಅಗತ್ಯವಿರುತ್ತದೆ.

ದಿಲೀಪ್ ಪ್ರತಾಪುರ ಗ್ರಾಮದ ನಿವಾಸಿಯಾಗಿದ್ದು, ಅವರ ಮಗನ ರಕ್ತದ ಗುಂಪು A- ಆಗಿದೆ. ಇದು ಅಪರೂಪದ ರಕ್ತದ ಗುಂಪಾಗಿದ್ದು, ಅವರ ಜಿಲ್ಲೆಯಾದ ಗೊಡ್ಡಾದಲ್ಲಿ ಸಾರ್ವಕಾಲಿಕವಾಗಿ ಲಭ್ಯವಾಗುತ್ತಿಲ್ಲ. ಆದ್ದರಿಂದ, ಅವರು ತಮ್ಮ ಮಗನ ರಕ್ತದ ವರ್ಗಾವಣೆಗೆ ಇತರ ಜಿಲ್ಲೆಗಳಿಗೆ ಪ್ರಯಾಣಿಸಬೇಕಾಗುತ್ತದೆ.

ಇದನ್ನೂ ಓದಿ: ಉತ್ತರಾಖಂಡದಲ್ಲಿ ಮಾನವರ ಮೃತದೇಹಗಳನ್ನು ಕಿತ್ತು ತಿನ್ನುತ್ತಿರುವ ಬೀದಿ ನಾಯಿಗಳು

ಕಳೆದ ತಿಂಗಳು ಮೇ 25 ರಂದು ದಿಲೀಪ್‌ ಅವರು ತನ್ನ ಮಗನೊಂದಿಗೆ ಜಮ್ತರಾಕ್ಕೆ ಪ್ರಯಾಣ ಬೆಳೆಸಿ ಎರಡು ಯೂನಿಟ್‌ ರಕ್ತವನ್ನು ಪಡೆದು ಮೇ 31 ರಂದು ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ. ಏಪ್ರಿಲ್‌ನಲ್ಲಿಯೂ ಅವರು ಜಮ್ತರಾಕ್ಕೆ ಪ್ರಯಾಣ ಬೆಳೆಸಿದ್ದರು. ಅವರ ಬೈಸಿಕಲ್‌ನಲ್ಲಿ 200 ಕಿ.ಮೀ ದೂರವನ್ನು ಕ್ರಮಿಸಲು ಅವರಿಗೆ ಎರಡು ದಿನಗಳು ಬೇಕಾಗುತ್ತದೆ. ಲಾಕ್‌ಡೌನ್‌ ಕಾರಣಕ್ಕೆ ಸಾರ್ವಜನಿಕ ಸಾರಿಗೆಯನ್ನು ನಿರ್ಬಂಧಿಸಲಾಗಿದ್ದು, ಖಾಸಗಿ ಕ್ಯಾಬ್‌ ಅನ್ನು ಬಾಡಿಗೆಗೆ ಪಡೆಯಲು ಅವರು ಆರ್ಥಿಕವಾಗಿ ಶಕ್ತರಾಗಿಲ್ಲದ ಕಾರಣ ಸೈಕಲ್‌ನಲ್ಲೇ ಪ್ರಯಾಣಿಸಬೇಕಾಗುತ್ತದೆ.

“ಇಲ್ಲಿಯವರೆಗೆ, ನಾನು ನನ್ನ ಬೈಸಿಕಲ್‌ನಲ್ಲಿ ನಾಲ್ಕು ಟ್ರಿಪ್‌ಗಳನ್ನು ಮಾಡಿದ್ದೇನೆ. ಕಳೆದ ವರ್ಷ ದುಮ್ಕಾ ಮತ್ತು ದಿಯೋಘರ್‌‌ಗೆ ಪ್ರಯಾಣಿಸಿದ್ದೆ. ಈ ವರ್ಷ ಎರಡು ಬಾರಿ ಜಮ್ತಾರಾಗೆ ಪ್ರಯಾಣಿಸಿದ್ದೇನೆ” ಎಂದು ದಿಲೀಪ್‌‌ ಹೇಳುತ್ತಾರೆ.

ಕೊರೊನಾಕ್ಕೂ ಮೊದಲು, ಬಾಲಕ ವಿವೇಕ್‌ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಲ್ಲಿ ಅವರಿಗೆ ಉಚಿತ ರಕ್ತವನ್ನು ನೀಡಲಾಗಿತ್ತು. ಆದರೆ ಲಾಕ್ಡೌನ್ ಕಾರಣ ನಾವು ಕಳೆದ ವರ್ಷ ಅಲ್ಲಿಂದ ಮರಳಬೇಕಾಯಿತು ಎಂದು ದಿಲೀಪ್‌ ಹೇಳುತ್ತಾರೆ.

ಇದನ್ನೂ ಓದಿ: ಮಮತಾ v/s BJP – ಮಾಜಿ ಮುಖ್ಯಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ನೀಡಿದ ಕೇಂದ್ರ!

ಜಾರ್ಖಂಡ್‌ನ ಕೆಲವು ರಕ್ತದಾನ ಗುಂಪುಗಳ ಸಹಾಯದಿಂದ ಅವರು ತನ್ನ ಮಗನಿಗೆ ರಕ್ತವನ್ನು ವ್ಯವಸ್ಥೆ ಮಾಡುತ್ತಾರೆ. ಅಲ್ಲಿ A- ಗುಂಪಿನ ರಕ್ತ ಲಭ್ಯವಿದೆ ಎಂದು ತಿಳಿದ ನಂತರ, ಫೋನ್‌ನಲ್ಲಿ ಎಲ್ಲಾ ವ್ಯವಸ್ಥೆಯಾದ ನಂತರ ಅಲ್ಲಿಗೆ ಅವರು ಅಲ್ಲಿಗೆ ತೆರಳುತ್ತಾರೆ.

ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ ವೈದ್ಯರ ಪ್ರಕಾರ, ಬಾಲಕ ವಿವೇಕ್‌ನ ಶಾಶ್ವತ ಚಿಕಿತ್ಸೆಗಾಗಿ ಆಪರೇಷನ್ ಮಾಡಬೇಕಾಗಿದ್ದು, ಇದು ಸುಮಾರು 10 ಲಕ್ಷ ರೂ. ವೆಚ್ಚವಾಗಲಿದೆ ಎಂದು ಹೇಳಿದ್ದಾರೆ. ಆದರೆ ಕೂಲಿ ಕೆಲಸಗಾರರಾದ ದಿಲೀಪ್‌‌ ಈ ವೆಚ್ಚವನ್ನು ಭರಿಸಲು ಸಾಧ್ಯವಾಗಿಲ್ಲ.

ಇದಕ್ಕೂ ಮೊದಲು ಗೊಡ್ಡಾ ಸಂಸದ ನಿಶಿಕಾಂತ್ ದುಬೆ ಅವರ ಉಪಕ್ರಮದಲ್ಲಿ ವಿವೇಕ್ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು 3 ಲಕ್ಷ ರೂ. ಗಳನ್ನು ಬಿಡುಗಡೆ ಮಾಡಿತ್ತು. ಆದರೆ ದಿಲೀಪ್‌ ಅವರಿಗೆ ಉಳಿದ ಹಣವನ್ನು ವ್ಯವಸ್ಥೆ ಮಾಡಲು ಸಾಧ್ಯವಾಗದ ಕಾರಣ ಮೊತ್ತವು ಸಿಗದಂತಾಗಿದೆ.

ಗೊಡ್ಡಾ ಸಿವಿಲ್ ಸರ್ಜನ್ ಎಸ್ಪಿ ಮಿಶ್ರಾ ಅವರನ್ನು TNIE ಪತ್ರಿಕೆಯು ಸಂಪರ್ಕಿಸಿದಾಗ, ದಿಲೀಪ್‌ ಅವರ ಸಂಕಟದ ಬಗ್ಗೆ ತಿಳಿದಿಲ್ಲ, ಅಗತ್ಯವಿದ್ದಾಗ ವಿವೇಕ್‌ಗೆ A- ರಕ್ತವನ್ನು ವ್ಯವಸ್ಥೆಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...