Homeಕರೋನಾ ತಲ್ಲಣಲಾಕ್‌ಡೌನ್‌ ಸಂಕಷ್ಟ - ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮಿ. ಸೈಕಲ್‌ ಪ್ರಯಾಣ

ಲಾಕ್‌ಡೌನ್‌ ಸಂಕಷ್ಟ – ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮಿ. ಸೈಕಲ್‌ ಪ್ರಯಾಣ

- Advertisement -
- Advertisement -

ಕೊರೊನಾ ಹೆಸರಲ್ಲಿ ಸರ್ಕಾರಗಳು ಹೇರಿರುವ ಲಾಕ್‌ಡೌನ್‌‌‌‌ ಪ್ರತಿಯೊಬ್ಬರನ್ನು ವಿಭಿನ್ನ ತೊಂದರೆಗಳಿಗೆ ಸಿಲುಕಿಸಿದೆ. ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯ ಕೂಲಿ ಕೆಲಸಗಾರನಾದ 40 ವರ್ಷದ ದಿಲೀಪ್ ಯಾದವ್‌ ಅವರು ತನ್ನ ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮೀ ಸೈಕಲ್‌ ಪ್ರಯಾಣಿಸುವ ಸಂಕಷ್ಟಕ್ಕೆ ಲಾಕ್‌ಡೌನ್‌ ಅವರನ್ನು ದೂಡಿದೆ.

ದಿಲೀಪ್ ಅವರ ಐದು ವರ್ಷದ ಮಗ ವಿವೇಕ್‌ಗೆ ಥಲಸ್ಸೆಮಿಯಾ ಎಂಬ ಕಾಯಿಲೆ ಇದ್ದು, ಅದರ ಚಿಕಿತ್ಸೆಗಾಗಿ ರಕ್ತ ವರ್ಗಾವಣೆಯ ಅಗತ್ಯವಿರುತ್ತದೆ.

ದಿಲೀಪ್ ಪ್ರತಾಪುರ ಗ್ರಾಮದ ನಿವಾಸಿಯಾಗಿದ್ದು, ಅವರ ಮಗನ ರಕ್ತದ ಗುಂಪು A- ಆಗಿದೆ. ಇದು ಅಪರೂಪದ ರಕ್ತದ ಗುಂಪಾಗಿದ್ದು, ಅವರ ಜಿಲ್ಲೆಯಾದ ಗೊಡ್ಡಾದಲ್ಲಿ ಸಾರ್ವಕಾಲಿಕವಾಗಿ ಲಭ್ಯವಾಗುತ್ತಿಲ್ಲ. ಆದ್ದರಿಂದ, ಅವರು ತಮ್ಮ ಮಗನ ರಕ್ತದ ವರ್ಗಾವಣೆಗೆ ಇತರ ಜಿಲ್ಲೆಗಳಿಗೆ ಪ್ರಯಾಣಿಸಬೇಕಾಗುತ್ತದೆ.

ಇದನ್ನೂ ಓದಿ: ಉತ್ತರಾಖಂಡದಲ್ಲಿ ಮಾನವರ ಮೃತದೇಹಗಳನ್ನು ಕಿತ್ತು ತಿನ್ನುತ್ತಿರುವ ಬೀದಿ ನಾಯಿಗಳು

ಕಳೆದ ತಿಂಗಳು ಮೇ 25 ರಂದು ದಿಲೀಪ್‌ ಅವರು ತನ್ನ ಮಗನೊಂದಿಗೆ ಜಮ್ತರಾಕ್ಕೆ ಪ್ರಯಾಣ ಬೆಳೆಸಿ ಎರಡು ಯೂನಿಟ್‌ ರಕ್ತವನ್ನು ಪಡೆದು ಮೇ 31 ರಂದು ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ. ಏಪ್ರಿಲ್‌ನಲ್ಲಿಯೂ ಅವರು ಜಮ್ತರಾಕ್ಕೆ ಪ್ರಯಾಣ ಬೆಳೆಸಿದ್ದರು. ಅವರ ಬೈಸಿಕಲ್‌ನಲ್ಲಿ 200 ಕಿ.ಮೀ ದೂರವನ್ನು ಕ್ರಮಿಸಲು ಅವರಿಗೆ ಎರಡು ದಿನಗಳು ಬೇಕಾಗುತ್ತದೆ. ಲಾಕ್‌ಡೌನ್‌ ಕಾರಣಕ್ಕೆ ಸಾರ್ವಜನಿಕ ಸಾರಿಗೆಯನ್ನು ನಿರ್ಬಂಧಿಸಲಾಗಿದ್ದು, ಖಾಸಗಿ ಕ್ಯಾಬ್‌ ಅನ್ನು ಬಾಡಿಗೆಗೆ ಪಡೆಯಲು ಅವರು ಆರ್ಥಿಕವಾಗಿ ಶಕ್ತರಾಗಿಲ್ಲದ ಕಾರಣ ಸೈಕಲ್‌ನಲ್ಲೇ ಪ್ರಯಾಣಿಸಬೇಕಾಗುತ್ತದೆ.

“ಇಲ್ಲಿಯವರೆಗೆ, ನಾನು ನನ್ನ ಬೈಸಿಕಲ್‌ನಲ್ಲಿ ನಾಲ್ಕು ಟ್ರಿಪ್‌ಗಳನ್ನು ಮಾಡಿದ್ದೇನೆ. ಕಳೆದ ವರ್ಷ ದುಮ್ಕಾ ಮತ್ತು ದಿಯೋಘರ್‌‌ಗೆ ಪ್ರಯಾಣಿಸಿದ್ದೆ. ಈ ವರ್ಷ ಎರಡು ಬಾರಿ ಜಮ್ತಾರಾಗೆ ಪ್ರಯಾಣಿಸಿದ್ದೇನೆ” ಎಂದು ದಿಲೀಪ್‌‌ ಹೇಳುತ್ತಾರೆ.

ಕೊರೊನಾಕ್ಕೂ ಮೊದಲು, ಬಾಲಕ ವಿವೇಕ್‌ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಲ್ಲಿ ಅವರಿಗೆ ಉಚಿತ ರಕ್ತವನ್ನು ನೀಡಲಾಗಿತ್ತು. ಆದರೆ ಲಾಕ್ಡೌನ್ ಕಾರಣ ನಾವು ಕಳೆದ ವರ್ಷ ಅಲ್ಲಿಂದ ಮರಳಬೇಕಾಯಿತು ಎಂದು ದಿಲೀಪ್‌ ಹೇಳುತ್ತಾರೆ.

ಇದನ್ನೂ ಓದಿ: ಮಮತಾ v/s BJP – ಮಾಜಿ ಮುಖ್ಯಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ನೀಡಿದ ಕೇಂದ್ರ!

ಜಾರ್ಖಂಡ್‌ನ ಕೆಲವು ರಕ್ತದಾನ ಗುಂಪುಗಳ ಸಹಾಯದಿಂದ ಅವರು ತನ್ನ ಮಗನಿಗೆ ರಕ್ತವನ್ನು ವ್ಯವಸ್ಥೆ ಮಾಡುತ್ತಾರೆ. ಅಲ್ಲಿ A- ಗುಂಪಿನ ರಕ್ತ ಲಭ್ಯವಿದೆ ಎಂದು ತಿಳಿದ ನಂತರ, ಫೋನ್‌ನಲ್ಲಿ ಎಲ್ಲಾ ವ್ಯವಸ್ಥೆಯಾದ ನಂತರ ಅಲ್ಲಿಗೆ ಅವರು ಅಲ್ಲಿಗೆ ತೆರಳುತ್ತಾರೆ.

ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ ವೈದ್ಯರ ಪ್ರಕಾರ, ಬಾಲಕ ವಿವೇಕ್‌ನ ಶಾಶ್ವತ ಚಿಕಿತ್ಸೆಗಾಗಿ ಆಪರೇಷನ್ ಮಾಡಬೇಕಾಗಿದ್ದು, ಇದು ಸುಮಾರು 10 ಲಕ್ಷ ರೂ. ವೆಚ್ಚವಾಗಲಿದೆ ಎಂದು ಹೇಳಿದ್ದಾರೆ. ಆದರೆ ಕೂಲಿ ಕೆಲಸಗಾರರಾದ ದಿಲೀಪ್‌‌ ಈ ವೆಚ್ಚವನ್ನು ಭರಿಸಲು ಸಾಧ್ಯವಾಗಿಲ್ಲ.

ಇದಕ್ಕೂ ಮೊದಲು ಗೊಡ್ಡಾ ಸಂಸದ ನಿಶಿಕಾಂತ್ ದುಬೆ ಅವರ ಉಪಕ್ರಮದಲ್ಲಿ ವಿವೇಕ್ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು 3 ಲಕ್ಷ ರೂ. ಗಳನ್ನು ಬಿಡುಗಡೆ ಮಾಡಿತ್ತು. ಆದರೆ ದಿಲೀಪ್‌ ಅವರಿಗೆ ಉಳಿದ ಹಣವನ್ನು ವ್ಯವಸ್ಥೆ ಮಾಡಲು ಸಾಧ್ಯವಾಗದ ಕಾರಣ ಮೊತ್ತವು ಸಿಗದಂತಾಗಿದೆ.

ಗೊಡ್ಡಾ ಸಿವಿಲ್ ಸರ್ಜನ್ ಎಸ್ಪಿ ಮಿಶ್ರಾ ಅವರನ್ನು TNIE ಪತ್ರಿಕೆಯು ಸಂಪರ್ಕಿಸಿದಾಗ, ದಿಲೀಪ್‌ ಅವರ ಸಂಕಟದ ಬಗ್ಗೆ ತಿಳಿದಿಲ್ಲ, ಅಗತ್ಯವಿದ್ದಾಗ ವಿವೇಕ್‌ಗೆ A- ರಕ್ತವನ್ನು ವ್ಯವಸ್ಥೆಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...