Homeಕರೋನಾ ತಲ್ಲಣಲಾಕ್‌ಡೌನ್‌ ಸಂಕಷ್ಟ - ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮಿ. ಸೈಕಲ್‌ ಪ್ರಯಾಣ

ಲಾಕ್‌ಡೌನ್‌ ಸಂಕಷ್ಟ – ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮಿ. ಸೈಕಲ್‌ ಪ್ರಯಾಣ

- Advertisement -
- Advertisement -

ಕೊರೊನಾ ಹೆಸರಲ್ಲಿ ಸರ್ಕಾರಗಳು ಹೇರಿರುವ ಲಾಕ್‌ಡೌನ್‌‌‌‌ ಪ್ರತಿಯೊಬ್ಬರನ್ನು ವಿಭಿನ್ನ ತೊಂದರೆಗಳಿಗೆ ಸಿಲುಕಿಸಿದೆ. ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯ ಕೂಲಿ ಕೆಲಸಗಾರನಾದ 40 ವರ್ಷದ ದಿಲೀಪ್ ಯಾದವ್‌ ಅವರು ತನ್ನ ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮೀ ಸೈಕಲ್‌ ಪ್ರಯಾಣಿಸುವ ಸಂಕಷ್ಟಕ್ಕೆ ಲಾಕ್‌ಡೌನ್‌ ಅವರನ್ನು ದೂಡಿದೆ.

ದಿಲೀಪ್ ಅವರ ಐದು ವರ್ಷದ ಮಗ ವಿವೇಕ್‌ಗೆ ಥಲಸ್ಸೆಮಿಯಾ ಎಂಬ ಕಾಯಿಲೆ ಇದ್ದು, ಅದರ ಚಿಕಿತ್ಸೆಗಾಗಿ ರಕ್ತ ವರ್ಗಾವಣೆಯ ಅಗತ್ಯವಿರುತ್ತದೆ.

ದಿಲೀಪ್ ಪ್ರತಾಪುರ ಗ್ರಾಮದ ನಿವಾಸಿಯಾಗಿದ್ದು, ಅವರ ಮಗನ ರಕ್ತದ ಗುಂಪು A- ಆಗಿದೆ. ಇದು ಅಪರೂಪದ ರಕ್ತದ ಗುಂಪಾಗಿದ್ದು, ಅವರ ಜಿಲ್ಲೆಯಾದ ಗೊಡ್ಡಾದಲ್ಲಿ ಸಾರ್ವಕಾಲಿಕವಾಗಿ ಲಭ್ಯವಾಗುತ್ತಿಲ್ಲ. ಆದ್ದರಿಂದ, ಅವರು ತಮ್ಮ ಮಗನ ರಕ್ತದ ವರ್ಗಾವಣೆಗೆ ಇತರ ಜಿಲ್ಲೆಗಳಿಗೆ ಪ್ರಯಾಣಿಸಬೇಕಾಗುತ್ತದೆ.

ಇದನ್ನೂ ಓದಿ: ಉತ್ತರಾಖಂಡದಲ್ಲಿ ಮಾನವರ ಮೃತದೇಹಗಳನ್ನು ಕಿತ್ತು ತಿನ್ನುತ್ತಿರುವ ಬೀದಿ ನಾಯಿಗಳು

ಕಳೆದ ತಿಂಗಳು ಮೇ 25 ರಂದು ದಿಲೀಪ್‌ ಅವರು ತನ್ನ ಮಗನೊಂದಿಗೆ ಜಮ್ತರಾಕ್ಕೆ ಪ್ರಯಾಣ ಬೆಳೆಸಿ ಎರಡು ಯೂನಿಟ್‌ ರಕ್ತವನ್ನು ಪಡೆದು ಮೇ 31 ರಂದು ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ. ಏಪ್ರಿಲ್‌ನಲ್ಲಿಯೂ ಅವರು ಜಮ್ತರಾಕ್ಕೆ ಪ್ರಯಾಣ ಬೆಳೆಸಿದ್ದರು. ಅವರ ಬೈಸಿಕಲ್‌ನಲ್ಲಿ 200 ಕಿ.ಮೀ ದೂರವನ್ನು ಕ್ರಮಿಸಲು ಅವರಿಗೆ ಎರಡು ದಿನಗಳು ಬೇಕಾಗುತ್ತದೆ. ಲಾಕ್‌ಡೌನ್‌ ಕಾರಣಕ್ಕೆ ಸಾರ್ವಜನಿಕ ಸಾರಿಗೆಯನ್ನು ನಿರ್ಬಂಧಿಸಲಾಗಿದ್ದು, ಖಾಸಗಿ ಕ್ಯಾಬ್‌ ಅನ್ನು ಬಾಡಿಗೆಗೆ ಪಡೆಯಲು ಅವರು ಆರ್ಥಿಕವಾಗಿ ಶಕ್ತರಾಗಿಲ್ಲದ ಕಾರಣ ಸೈಕಲ್‌ನಲ್ಲೇ ಪ್ರಯಾಣಿಸಬೇಕಾಗುತ್ತದೆ.

“ಇಲ್ಲಿಯವರೆಗೆ, ನಾನು ನನ್ನ ಬೈಸಿಕಲ್‌ನಲ್ಲಿ ನಾಲ್ಕು ಟ್ರಿಪ್‌ಗಳನ್ನು ಮಾಡಿದ್ದೇನೆ. ಕಳೆದ ವರ್ಷ ದುಮ್ಕಾ ಮತ್ತು ದಿಯೋಘರ್‌‌ಗೆ ಪ್ರಯಾಣಿಸಿದ್ದೆ. ಈ ವರ್ಷ ಎರಡು ಬಾರಿ ಜಮ್ತಾರಾಗೆ ಪ್ರಯಾಣಿಸಿದ್ದೇನೆ” ಎಂದು ದಿಲೀಪ್‌‌ ಹೇಳುತ್ತಾರೆ.

ಕೊರೊನಾಕ್ಕೂ ಮೊದಲು, ಬಾಲಕ ವಿವೇಕ್‌ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಲ್ಲಿ ಅವರಿಗೆ ಉಚಿತ ರಕ್ತವನ್ನು ನೀಡಲಾಗಿತ್ತು. ಆದರೆ ಲಾಕ್ಡೌನ್ ಕಾರಣ ನಾವು ಕಳೆದ ವರ್ಷ ಅಲ್ಲಿಂದ ಮರಳಬೇಕಾಯಿತು ಎಂದು ದಿಲೀಪ್‌ ಹೇಳುತ್ತಾರೆ.

ಇದನ್ನೂ ಓದಿ: ಮಮತಾ v/s BJP – ಮಾಜಿ ಮುಖ್ಯಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ನೀಡಿದ ಕೇಂದ್ರ!

ಜಾರ್ಖಂಡ್‌ನ ಕೆಲವು ರಕ್ತದಾನ ಗುಂಪುಗಳ ಸಹಾಯದಿಂದ ಅವರು ತನ್ನ ಮಗನಿಗೆ ರಕ್ತವನ್ನು ವ್ಯವಸ್ಥೆ ಮಾಡುತ್ತಾರೆ. ಅಲ್ಲಿ A- ಗುಂಪಿನ ರಕ್ತ ಲಭ್ಯವಿದೆ ಎಂದು ತಿಳಿದ ನಂತರ, ಫೋನ್‌ನಲ್ಲಿ ಎಲ್ಲಾ ವ್ಯವಸ್ಥೆಯಾದ ನಂತರ ಅಲ್ಲಿಗೆ ಅವರು ಅಲ್ಲಿಗೆ ತೆರಳುತ್ತಾರೆ.

ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ ವೈದ್ಯರ ಪ್ರಕಾರ, ಬಾಲಕ ವಿವೇಕ್‌ನ ಶಾಶ್ವತ ಚಿಕಿತ್ಸೆಗಾಗಿ ಆಪರೇಷನ್ ಮಾಡಬೇಕಾಗಿದ್ದು, ಇದು ಸುಮಾರು 10 ಲಕ್ಷ ರೂ. ವೆಚ್ಚವಾಗಲಿದೆ ಎಂದು ಹೇಳಿದ್ದಾರೆ. ಆದರೆ ಕೂಲಿ ಕೆಲಸಗಾರರಾದ ದಿಲೀಪ್‌‌ ಈ ವೆಚ್ಚವನ್ನು ಭರಿಸಲು ಸಾಧ್ಯವಾಗಿಲ್ಲ.

ಇದಕ್ಕೂ ಮೊದಲು ಗೊಡ್ಡಾ ಸಂಸದ ನಿಶಿಕಾಂತ್ ದುಬೆ ಅವರ ಉಪಕ್ರಮದಲ್ಲಿ ವಿವೇಕ್ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು 3 ಲಕ್ಷ ರೂ. ಗಳನ್ನು ಬಿಡುಗಡೆ ಮಾಡಿತ್ತು. ಆದರೆ ದಿಲೀಪ್‌ ಅವರಿಗೆ ಉಳಿದ ಹಣವನ್ನು ವ್ಯವಸ್ಥೆ ಮಾಡಲು ಸಾಧ್ಯವಾಗದ ಕಾರಣ ಮೊತ್ತವು ಸಿಗದಂತಾಗಿದೆ.

ಗೊಡ್ಡಾ ಸಿವಿಲ್ ಸರ್ಜನ್ ಎಸ್ಪಿ ಮಿಶ್ರಾ ಅವರನ್ನು TNIE ಪತ್ರಿಕೆಯು ಸಂಪರ್ಕಿಸಿದಾಗ, ದಿಲೀಪ್‌ ಅವರ ಸಂಕಟದ ಬಗ್ಗೆ ತಿಳಿದಿಲ್ಲ, ಅಗತ್ಯವಿದ್ದಾಗ ವಿವೇಕ್‌ಗೆ A- ರಕ್ತವನ್ನು ವ್ಯವಸ್ಥೆಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...