Homeಕರೋನಾ ತಲ್ಲಣಲಾಕ್‌ಡೌನ್‌ ಸಂಕಷ್ಟ - ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮಿ. ಸೈಕಲ್‌ ಪ್ರಯಾಣ

ಲಾಕ್‌ಡೌನ್‌ ಸಂಕಷ್ಟ – ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮಿ. ಸೈಕಲ್‌ ಪ್ರಯಾಣ

- Advertisement -
- Advertisement -

ಕೊರೊನಾ ಹೆಸರಲ್ಲಿ ಸರ್ಕಾರಗಳು ಹೇರಿರುವ ಲಾಕ್‌ಡೌನ್‌‌‌‌ ಪ್ರತಿಯೊಬ್ಬರನ್ನು ವಿಭಿನ್ನ ತೊಂದರೆಗಳಿಗೆ ಸಿಲುಕಿಸಿದೆ. ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯ ಕೂಲಿ ಕೆಲಸಗಾರನಾದ 40 ವರ್ಷದ ದಿಲೀಪ್ ಯಾದವ್‌ ಅವರು ತನ್ನ ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮೀ ಸೈಕಲ್‌ ಪ್ರಯಾಣಿಸುವ ಸಂಕಷ್ಟಕ್ಕೆ ಲಾಕ್‌ಡೌನ್‌ ಅವರನ್ನು ದೂಡಿದೆ.

ದಿಲೀಪ್ ಅವರ ಐದು ವರ್ಷದ ಮಗ ವಿವೇಕ್‌ಗೆ ಥಲಸ್ಸೆಮಿಯಾ ಎಂಬ ಕಾಯಿಲೆ ಇದ್ದು, ಅದರ ಚಿಕಿತ್ಸೆಗಾಗಿ ರಕ್ತ ವರ್ಗಾವಣೆಯ ಅಗತ್ಯವಿರುತ್ತದೆ.

ದಿಲೀಪ್ ಪ್ರತಾಪುರ ಗ್ರಾಮದ ನಿವಾಸಿಯಾಗಿದ್ದು, ಅವರ ಮಗನ ರಕ್ತದ ಗುಂಪು A- ಆಗಿದೆ. ಇದು ಅಪರೂಪದ ರಕ್ತದ ಗುಂಪಾಗಿದ್ದು, ಅವರ ಜಿಲ್ಲೆಯಾದ ಗೊಡ್ಡಾದಲ್ಲಿ ಸಾರ್ವಕಾಲಿಕವಾಗಿ ಲಭ್ಯವಾಗುತ್ತಿಲ್ಲ. ಆದ್ದರಿಂದ, ಅವರು ತಮ್ಮ ಮಗನ ರಕ್ತದ ವರ್ಗಾವಣೆಗೆ ಇತರ ಜಿಲ್ಲೆಗಳಿಗೆ ಪ್ರಯಾಣಿಸಬೇಕಾಗುತ್ತದೆ.

ಇದನ್ನೂ ಓದಿ: ಉತ್ತರಾಖಂಡದಲ್ಲಿ ಮಾನವರ ಮೃತದೇಹಗಳನ್ನು ಕಿತ್ತು ತಿನ್ನುತ್ತಿರುವ ಬೀದಿ ನಾಯಿಗಳು

ಕಳೆದ ತಿಂಗಳು ಮೇ 25 ರಂದು ದಿಲೀಪ್‌ ಅವರು ತನ್ನ ಮಗನೊಂದಿಗೆ ಜಮ್ತರಾಕ್ಕೆ ಪ್ರಯಾಣ ಬೆಳೆಸಿ ಎರಡು ಯೂನಿಟ್‌ ರಕ್ತವನ್ನು ಪಡೆದು ಮೇ 31 ರಂದು ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ. ಏಪ್ರಿಲ್‌ನಲ್ಲಿಯೂ ಅವರು ಜಮ್ತರಾಕ್ಕೆ ಪ್ರಯಾಣ ಬೆಳೆಸಿದ್ದರು. ಅವರ ಬೈಸಿಕಲ್‌ನಲ್ಲಿ 200 ಕಿ.ಮೀ ದೂರವನ್ನು ಕ್ರಮಿಸಲು ಅವರಿಗೆ ಎರಡು ದಿನಗಳು ಬೇಕಾಗುತ್ತದೆ. ಲಾಕ್‌ಡೌನ್‌ ಕಾರಣಕ್ಕೆ ಸಾರ್ವಜನಿಕ ಸಾರಿಗೆಯನ್ನು ನಿರ್ಬಂಧಿಸಲಾಗಿದ್ದು, ಖಾಸಗಿ ಕ್ಯಾಬ್‌ ಅನ್ನು ಬಾಡಿಗೆಗೆ ಪಡೆಯಲು ಅವರು ಆರ್ಥಿಕವಾಗಿ ಶಕ್ತರಾಗಿಲ್ಲದ ಕಾರಣ ಸೈಕಲ್‌ನಲ್ಲೇ ಪ್ರಯಾಣಿಸಬೇಕಾಗುತ್ತದೆ.

“ಇಲ್ಲಿಯವರೆಗೆ, ನಾನು ನನ್ನ ಬೈಸಿಕಲ್‌ನಲ್ಲಿ ನಾಲ್ಕು ಟ್ರಿಪ್‌ಗಳನ್ನು ಮಾಡಿದ್ದೇನೆ. ಕಳೆದ ವರ್ಷ ದುಮ್ಕಾ ಮತ್ತು ದಿಯೋಘರ್‌‌ಗೆ ಪ್ರಯಾಣಿಸಿದ್ದೆ. ಈ ವರ್ಷ ಎರಡು ಬಾರಿ ಜಮ್ತಾರಾಗೆ ಪ್ರಯಾಣಿಸಿದ್ದೇನೆ” ಎಂದು ದಿಲೀಪ್‌‌ ಹೇಳುತ್ತಾರೆ.

ಕೊರೊನಾಕ್ಕೂ ಮೊದಲು, ಬಾಲಕ ವಿವೇಕ್‌ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಲ್ಲಿ ಅವರಿಗೆ ಉಚಿತ ರಕ್ತವನ್ನು ನೀಡಲಾಗಿತ್ತು. ಆದರೆ ಲಾಕ್ಡೌನ್ ಕಾರಣ ನಾವು ಕಳೆದ ವರ್ಷ ಅಲ್ಲಿಂದ ಮರಳಬೇಕಾಯಿತು ಎಂದು ದಿಲೀಪ್‌ ಹೇಳುತ್ತಾರೆ.

ಇದನ್ನೂ ಓದಿ: ಮಮತಾ v/s BJP – ಮಾಜಿ ಮುಖ್ಯಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ನೀಡಿದ ಕೇಂದ್ರ!

ಜಾರ್ಖಂಡ್‌ನ ಕೆಲವು ರಕ್ತದಾನ ಗುಂಪುಗಳ ಸಹಾಯದಿಂದ ಅವರು ತನ್ನ ಮಗನಿಗೆ ರಕ್ತವನ್ನು ವ್ಯವಸ್ಥೆ ಮಾಡುತ್ತಾರೆ. ಅಲ್ಲಿ A- ಗುಂಪಿನ ರಕ್ತ ಲಭ್ಯವಿದೆ ಎಂದು ತಿಳಿದ ನಂತರ, ಫೋನ್‌ನಲ್ಲಿ ಎಲ್ಲಾ ವ್ಯವಸ್ಥೆಯಾದ ನಂತರ ಅಲ್ಲಿಗೆ ಅವರು ಅಲ್ಲಿಗೆ ತೆರಳುತ್ತಾರೆ.

ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ ವೈದ್ಯರ ಪ್ರಕಾರ, ಬಾಲಕ ವಿವೇಕ್‌ನ ಶಾಶ್ವತ ಚಿಕಿತ್ಸೆಗಾಗಿ ಆಪರೇಷನ್ ಮಾಡಬೇಕಾಗಿದ್ದು, ಇದು ಸುಮಾರು 10 ಲಕ್ಷ ರೂ. ವೆಚ್ಚವಾಗಲಿದೆ ಎಂದು ಹೇಳಿದ್ದಾರೆ. ಆದರೆ ಕೂಲಿ ಕೆಲಸಗಾರರಾದ ದಿಲೀಪ್‌‌ ಈ ವೆಚ್ಚವನ್ನು ಭರಿಸಲು ಸಾಧ್ಯವಾಗಿಲ್ಲ.

ಇದಕ್ಕೂ ಮೊದಲು ಗೊಡ್ಡಾ ಸಂಸದ ನಿಶಿಕಾಂತ್ ದುಬೆ ಅವರ ಉಪಕ್ರಮದಲ್ಲಿ ವಿವೇಕ್ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು 3 ಲಕ್ಷ ರೂ. ಗಳನ್ನು ಬಿಡುಗಡೆ ಮಾಡಿತ್ತು. ಆದರೆ ದಿಲೀಪ್‌ ಅವರಿಗೆ ಉಳಿದ ಹಣವನ್ನು ವ್ಯವಸ್ಥೆ ಮಾಡಲು ಸಾಧ್ಯವಾಗದ ಕಾರಣ ಮೊತ್ತವು ಸಿಗದಂತಾಗಿದೆ.

ಗೊಡ್ಡಾ ಸಿವಿಲ್ ಸರ್ಜನ್ ಎಸ್ಪಿ ಮಿಶ್ರಾ ಅವರನ್ನು TNIE ಪತ್ರಿಕೆಯು ಸಂಪರ್ಕಿಸಿದಾಗ, ದಿಲೀಪ್‌ ಅವರ ಸಂಕಟದ ಬಗ್ಗೆ ತಿಳಿದಿಲ್ಲ, ಅಗತ್ಯವಿದ್ದಾಗ ವಿವೇಕ್‌ಗೆ A- ರಕ್ತವನ್ನು ವ್ಯವಸ್ಥೆಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...