Homeಕರೋನಾ ತಲ್ಲಣಲಾಕ್‌ಡೌನ್‌ ಸಂಕಷ್ಟ - ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮಿ. ಸೈಕಲ್‌ ಪ್ರಯಾಣ

ಲಾಕ್‌ಡೌನ್‌ ಸಂಕಷ್ಟ – ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮಿ. ಸೈಕಲ್‌ ಪ್ರಯಾಣ

- Advertisement -
- Advertisement -

ಕೊರೊನಾ ಹೆಸರಲ್ಲಿ ಸರ್ಕಾರಗಳು ಹೇರಿರುವ ಲಾಕ್‌ಡೌನ್‌‌‌‌ ಪ್ರತಿಯೊಬ್ಬರನ್ನು ವಿಭಿನ್ನ ತೊಂದರೆಗಳಿಗೆ ಸಿಲುಕಿಸಿದೆ. ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯ ಕೂಲಿ ಕೆಲಸಗಾರನಾದ 40 ವರ್ಷದ ದಿಲೀಪ್ ಯಾದವ್‌ ಅವರು ತನ್ನ ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮೀ ಸೈಕಲ್‌ ಪ್ರಯಾಣಿಸುವ ಸಂಕಷ್ಟಕ್ಕೆ ಲಾಕ್‌ಡೌನ್‌ ಅವರನ್ನು ದೂಡಿದೆ.

ದಿಲೀಪ್ ಅವರ ಐದು ವರ್ಷದ ಮಗ ವಿವೇಕ್‌ಗೆ ಥಲಸ್ಸೆಮಿಯಾ ಎಂಬ ಕಾಯಿಲೆ ಇದ್ದು, ಅದರ ಚಿಕಿತ್ಸೆಗಾಗಿ ರಕ್ತ ವರ್ಗಾವಣೆಯ ಅಗತ್ಯವಿರುತ್ತದೆ.

ದಿಲೀಪ್ ಪ್ರತಾಪುರ ಗ್ರಾಮದ ನಿವಾಸಿಯಾಗಿದ್ದು, ಅವರ ಮಗನ ರಕ್ತದ ಗುಂಪು A- ಆಗಿದೆ. ಇದು ಅಪರೂಪದ ರಕ್ತದ ಗುಂಪಾಗಿದ್ದು, ಅವರ ಜಿಲ್ಲೆಯಾದ ಗೊಡ್ಡಾದಲ್ಲಿ ಸಾರ್ವಕಾಲಿಕವಾಗಿ ಲಭ್ಯವಾಗುತ್ತಿಲ್ಲ. ಆದ್ದರಿಂದ, ಅವರು ತಮ್ಮ ಮಗನ ರಕ್ತದ ವರ್ಗಾವಣೆಗೆ ಇತರ ಜಿಲ್ಲೆಗಳಿಗೆ ಪ್ರಯಾಣಿಸಬೇಕಾಗುತ್ತದೆ.

ಇದನ್ನೂ ಓದಿ: ಉತ್ತರಾಖಂಡದಲ್ಲಿ ಮಾನವರ ಮೃತದೇಹಗಳನ್ನು ಕಿತ್ತು ತಿನ್ನುತ್ತಿರುವ ಬೀದಿ ನಾಯಿಗಳು

ಕಳೆದ ತಿಂಗಳು ಮೇ 25 ರಂದು ದಿಲೀಪ್‌ ಅವರು ತನ್ನ ಮಗನೊಂದಿಗೆ ಜಮ್ತರಾಕ್ಕೆ ಪ್ರಯಾಣ ಬೆಳೆಸಿ ಎರಡು ಯೂನಿಟ್‌ ರಕ್ತವನ್ನು ಪಡೆದು ಮೇ 31 ರಂದು ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ. ಏಪ್ರಿಲ್‌ನಲ್ಲಿಯೂ ಅವರು ಜಮ್ತರಾಕ್ಕೆ ಪ್ರಯಾಣ ಬೆಳೆಸಿದ್ದರು. ಅವರ ಬೈಸಿಕಲ್‌ನಲ್ಲಿ 200 ಕಿ.ಮೀ ದೂರವನ್ನು ಕ್ರಮಿಸಲು ಅವರಿಗೆ ಎರಡು ದಿನಗಳು ಬೇಕಾಗುತ್ತದೆ. ಲಾಕ್‌ಡೌನ್‌ ಕಾರಣಕ್ಕೆ ಸಾರ್ವಜನಿಕ ಸಾರಿಗೆಯನ್ನು ನಿರ್ಬಂಧಿಸಲಾಗಿದ್ದು, ಖಾಸಗಿ ಕ್ಯಾಬ್‌ ಅನ್ನು ಬಾಡಿಗೆಗೆ ಪಡೆಯಲು ಅವರು ಆರ್ಥಿಕವಾಗಿ ಶಕ್ತರಾಗಿಲ್ಲದ ಕಾರಣ ಸೈಕಲ್‌ನಲ್ಲೇ ಪ್ರಯಾಣಿಸಬೇಕಾಗುತ್ತದೆ.

“ಇಲ್ಲಿಯವರೆಗೆ, ನಾನು ನನ್ನ ಬೈಸಿಕಲ್‌ನಲ್ಲಿ ನಾಲ್ಕು ಟ್ರಿಪ್‌ಗಳನ್ನು ಮಾಡಿದ್ದೇನೆ. ಕಳೆದ ವರ್ಷ ದುಮ್ಕಾ ಮತ್ತು ದಿಯೋಘರ್‌‌ಗೆ ಪ್ರಯಾಣಿಸಿದ್ದೆ. ಈ ವರ್ಷ ಎರಡು ಬಾರಿ ಜಮ್ತಾರಾಗೆ ಪ್ರಯಾಣಿಸಿದ್ದೇನೆ” ಎಂದು ದಿಲೀಪ್‌‌ ಹೇಳುತ್ತಾರೆ.

ಕೊರೊನಾಕ್ಕೂ ಮೊದಲು, ಬಾಲಕ ವಿವೇಕ್‌ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಲ್ಲಿ ಅವರಿಗೆ ಉಚಿತ ರಕ್ತವನ್ನು ನೀಡಲಾಗಿತ್ತು. ಆದರೆ ಲಾಕ್ಡೌನ್ ಕಾರಣ ನಾವು ಕಳೆದ ವರ್ಷ ಅಲ್ಲಿಂದ ಮರಳಬೇಕಾಯಿತು ಎಂದು ದಿಲೀಪ್‌ ಹೇಳುತ್ತಾರೆ.

ಇದನ್ನೂ ಓದಿ: ಮಮತಾ v/s BJP – ಮಾಜಿ ಮುಖ್ಯಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ನೀಡಿದ ಕೇಂದ್ರ!

ಜಾರ್ಖಂಡ್‌ನ ಕೆಲವು ರಕ್ತದಾನ ಗುಂಪುಗಳ ಸಹಾಯದಿಂದ ಅವರು ತನ್ನ ಮಗನಿಗೆ ರಕ್ತವನ್ನು ವ್ಯವಸ್ಥೆ ಮಾಡುತ್ತಾರೆ. ಅಲ್ಲಿ A- ಗುಂಪಿನ ರಕ್ತ ಲಭ್ಯವಿದೆ ಎಂದು ತಿಳಿದ ನಂತರ, ಫೋನ್‌ನಲ್ಲಿ ಎಲ್ಲಾ ವ್ಯವಸ್ಥೆಯಾದ ನಂತರ ಅಲ್ಲಿಗೆ ಅವರು ಅಲ್ಲಿಗೆ ತೆರಳುತ್ತಾರೆ.

ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ ವೈದ್ಯರ ಪ್ರಕಾರ, ಬಾಲಕ ವಿವೇಕ್‌ನ ಶಾಶ್ವತ ಚಿಕಿತ್ಸೆಗಾಗಿ ಆಪರೇಷನ್ ಮಾಡಬೇಕಾಗಿದ್ದು, ಇದು ಸುಮಾರು 10 ಲಕ್ಷ ರೂ. ವೆಚ್ಚವಾಗಲಿದೆ ಎಂದು ಹೇಳಿದ್ದಾರೆ. ಆದರೆ ಕೂಲಿ ಕೆಲಸಗಾರರಾದ ದಿಲೀಪ್‌‌ ಈ ವೆಚ್ಚವನ್ನು ಭರಿಸಲು ಸಾಧ್ಯವಾಗಿಲ್ಲ.

ಇದಕ್ಕೂ ಮೊದಲು ಗೊಡ್ಡಾ ಸಂಸದ ನಿಶಿಕಾಂತ್ ದುಬೆ ಅವರ ಉಪಕ್ರಮದಲ್ಲಿ ವಿವೇಕ್ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು 3 ಲಕ್ಷ ರೂ. ಗಳನ್ನು ಬಿಡುಗಡೆ ಮಾಡಿತ್ತು. ಆದರೆ ದಿಲೀಪ್‌ ಅವರಿಗೆ ಉಳಿದ ಹಣವನ್ನು ವ್ಯವಸ್ಥೆ ಮಾಡಲು ಸಾಧ್ಯವಾಗದ ಕಾರಣ ಮೊತ್ತವು ಸಿಗದಂತಾಗಿದೆ.

ಗೊಡ್ಡಾ ಸಿವಿಲ್ ಸರ್ಜನ್ ಎಸ್ಪಿ ಮಿಶ್ರಾ ಅವರನ್ನು TNIE ಪತ್ರಿಕೆಯು ಸಂಪರ್ಕಿಸಿದಾಗ, ದಿಲೀಪ್‌ ಅವರ ಸಂಕಟದ ಬಗ್ಗೆ ತಿಳಿದಿಲ್ಲ, ಅಗತ್ಯವಿದ್ದಾಗ ವಿವೇಕ್‌ಗೆ A- ರಕ್ತವನ್ನು ವ್ಯವಸ್ಥೆಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...