Homeಕರೋನಾ ತಲ್ಲಣಲಾಕ್‌ಡೌನ್‌ ಸಂಕಷ್ಟ - ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮಿ. ಸೈಕಲ್‌ ಪ್ರಯಾಣ

ಲಾಕ್‌ಡೌನ್‌ ಸಂಕಷ್ಟ – ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮಿ. ಸೈಕಲ್‌ ಪ್ರಯಾಣ

- Advertisement -
- Advertisement -

ಕೊರೊನಾ ಹೆಸರಲ್ಲಿ ಸರ್ಕಾರಗಳು ಹೇರಿರುವ ಲಾಕ್‌ಡೌನ್‌‌‌‌ ಪ್ರತಿಯೊಬ್ಬರನ್ನು ವಿಭಿನ್ನ ತೊಂದರೆಗಳಿಗೆ ಸಿಲುಕಿಸಿದೆ. ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯ ಕೂಲಿ ಕೆಲಸಗಾರನಾದ 40 ವರ್ಷದ ದಿಲೀಪ್ ಯಾದವ್‌ ಅವರು ತನ್ನ ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮೀ ಸೈಕಲ್‌ ಪ್ರಯಾಣಿಸುವ ಸಂಕಷ್ಟಕ್ಕೆ ಲಾಕ್‌ಡೌನ್‌ ಅವರನ್ನು ದೂಡಿದೆ.

ದಿಲೀಪ್ ಅವರ ಐದು ವರ್ಷದ ಮಗ ವಿವೇಕ್‌ಗೆ ಥಲಸ್ಸೆಮಿಯಾ ಎಂಬ ಕಾಯಿಲೆ ಇದ್ದು, ಅದರ ಚಿಕಿತ್ಸೆಗಾಗಿ ರಕ್ತ ವರ್ಗಾವಣೆಯ ಅಗತ್ಯವಿರುತ್ತದೆ.

ದಿಲೀಪ್ ಪ್ರತಾಪುರ ಗ್ರಾಮದ ನಿವಾಸಿಯಾಗಿದ್ದು, ಅವರ ಮಗನ ರಕ್ತದ ಗುಂಪು A- ಆಗಿದೆ. ಇದು ಅಪರೂಪದ ರಕ್ತದ ಗುಂಪಾಗಿದ್ದು, ಅವರ ಜಿಲ್ಲೆಯಾದ ಗೊಡ್ಡಾದಲ್ಲಿ ಸಾರ್ವಕಾಲಿಕವಾಗಿ ಲಭ್ಯವಾಗುತ್ತಿಲ್ಲ. ಆದ್ದರಿಂದ, ಅವರು ತಮ್ಮ ಮಗನ ರಕ್ತದ ವರ್ಗಾವಣೆಗೆ ಇತರ ಜಿಲ್ಲೆಗಳಿಗೆ ಪ್ರಯಾಣಿಸಬೇಕಾಗುತ್ತದೆ.

ಇದನ್ನೂ ಓದಿ: ಉತ್ತರಾಖಂಡದಲ್ಲಿ ಮಾನವರ ಮೃತದೇಹಗಳನ್ನು ಕಿತ್ತು ತಿನ್ನುತ್ತಿರುವ ಬೀದಿ ನಾಯಿಗಳು

ಕಳೆದ ತಿಂಗಳು ಮೇ 25 ರಂದು ದಿಲೀಪ್‌ ಅವರು ತನ್ನ ಮಗನೊಂದಿಗೆ ಜಮ್ತರಾಕ್ಕೆ ಪ್ರಯಾಣ ಬೆಳೆಸಿ ಎರಡು ಯೂನಿಟ್‌ ರಕ್ತವನ್ನು ಪಡೆದು ಮೇ 31 ರಂದು ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ. ಏಪ್ರಿಲ್‌ನಲ್ಲಿಯೂ ಅವರು ಜಮ್ತರಾಕ್ಕೆ ಪ್ರಯಾಣ ಬೆಳೆಸಿದ್ದರು. ಅವರ ಬೈಸಿಕಲ್‌ನಲ್ಲಿ 200 ಕಿ.ಮೀ ದೂರವನ್ನು ಕ್ರಮಿಸಲು ಅವರಿಗೆ ಎರಡು ದಿನಗಳು ಬೇಕಾಗುತ್ತದೆ. ಲಾಕ್‌ಡೌನ್‌ ಕಾರಣಕ್ಕೆ ಸಾರ್ವಜನಿಕ ಸಾರಿಗೆಯನ್ನು ನಿರ್ಬಂಧಿಸಲಾಗಿದ್ದು, ಖಾಸಗಿ ಕ್ಯಾಬ್‌ ಅನ್ನು ಬಾಡಿಗೆಗೆ ಪಡೆಯಲು ಅವರು ಆರ್ಥಿಕವಾಗಿ ಶಕ್ತರಾಗಿಲ್ಲದ ಕಾರಣ ಸೈಕಲ್‌ನಲ್ಲೇ ಪ್ರಯಾಣಿಸಬೇಕಾಗುತ್ತದೆ.

“ಇಲ್ಲಿಯವರೆಗೆ, ನಾನು ನನ್ನ ಬೈಸಿಕಲ್‌ನಲ್ಲಿ ನಾಲ್ಕು ಟ್ರಿಪ್‌ಗಳನ್ನು ಮಾಡಿದ್ದೇನೆ. ಕಳೆದ ವರ್ಷ ದುಮ್ಕಾ ಮತ್ತು ದಿಯೋಘರ್‌‌ಗೆ ಪ್ರಯಾಣಿಸಿದ್ದೆ. ಈ ವರ್ಷ ಎರಡು ಬಾರಿ ಜಮ್ತಾರಾಗೆ ಪ್ರಯಾಣಿಸಿದ್ದೇನೆ” ಎಂದು ದಿಲೀಪ್‌‌ ಹೇಳುತ್ತಾರೆ.

ಕೊರೊನಾಕ್ಕೂ ಮೊದಲು, ಬಾಲಕ ವಿವೇಕ್‌ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಲ್ಲಿ ಅವರಿಗೆ ಉಚಿತ ರಕ್ತವನ್ನು ನೀಡಲಾಗಿತ್ತು. ಆದರೆ ಲಾಕ್ಡೌನ್ ಕಾರಣ ನಾವು ಕಳೆದ ವರ್ಷ ಅಲ್ಲಿಂದ ಮರಳಬೇಕಾಯಿತು ಎಂದು ದಿಲೀಪ್‌ ಹೇಳುತ್ತಾರೆ.

ಇದನ್ನೂ ಓದಿ: ಮಮತಾ v/s BJP – ಮಾಜಿ ಮುಖ್ಯಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ನೀಡಿದ ಕೇಂದ್ರ!

ಜಾರ್ಖಂಡ್‌ನ ಕೆಲವು ರಕ್ತದಾನ ಗುಂಪುಗಳ ಸಹಾಯದಿಂದ ಅವರು ತನ್ನ ಮಗನಿಗೆ ರಕ್ತವನ್ನು ವ್ಯವಸ್ಥೆ ಮಾಡುತ್ತಾರೆ. ಅಲ್ಲಿ A- ಗುಂಪಿನ ರಕ್ತ ಲಭ್ಯವಿದೆ ಎಂದು ತಿಳಿದ ನಂತರ, ಫೋನ್‌ನಲ್ಲಿ ಎಲ್ಲಾ ವ್ಯವಸ್ಥೆಯಾದ ನಂತರ ಅಲ್ಲಿಗೆ ಅವರು ಅಲ್ಲಿಗೆ ತೆರಳುತ್ತಾರೆ.

ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ ವೈದ್ಯರ ಪ್ರಕಾರ, ಬಾಲಕ ವಿವೇಕ್‌ನ ಶಾಶ್ವತ ಚಿಕಿತ್ಸೆಗಾಗಿ ಆಪರೇಷನ್ ಮಾಡಬೇಕಾಗಿದ್ದು, ಇದು ಸುಮಾರು 10 ಲಕ್ಷ ರೂ. ವೆಚ್ಚವಾಗಲಿದೆ ಎಂದು ಹೇಳಿದ್ದಾರೆ. ಆದರೆ ಕೂಲಿ ಕೆಲಸಗಾರರಾದ ದಿಲೀಪ್‌‌ ಈ ವೆಚ್ಚವನ್ನು ಭರಿಸಲು ಸಾಧ್ಯವಾಗಿಲ್ಲ.

ಇದಕ್ಕೂ ಮೊದಲು ಗೊಡ್ಡಾ ಸಂಸದ ನಿಶಿಕಾಂತ್ ದುಬೆ ಅವರ ಉಪಕ್ರಮದಲ್ಲಿ ವಿವೇಕ್ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು 3 ಲಕ್ಷ ರೂ. ಗಳನ್ನು ಬಿಡುಗಡೆ ಮಾಡಿತ್ತು. ಆದರೆ ದಿಲೀಪ್‌ ಅವರಿಗೆ ಉಳಿದ ಹಣವನ್ನು ವ್ಯವಸ್ಥೆ ಮಾಡಲು ಸಾಧ್ಯವಾಗದ ಕಾರಣ ಮೊತ್ತವು ಸಿಗದಂತಾಗಿದೆ.

ಗೊಡ್ಡಾ ಸಿವಿಲ್ ಸರ್ಜನ್ ಎಸ್ಪಿ ಮಿಶ್ರಾ ಅವರನ್ನು TNIE ಪತ್ರಿಕೆಯು ಸಂಪರ್ಕಿಸಿದಾಗ, ದಿಲೀಪ್‌ ಅವರ ಸಂಕಟದ ಬಗ್ಗೆ ತಿಳಿದಿಲ್ಲ, ಅಗತ್ಯವಿದ್ದಾಗ ವಿವೇಕ್‌ಗೆ A- ರಕ್ತವನ್ನು ವ್ಯವಸ್ಥೆಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...