Homeಮುಖಪುಟಲಾಕ್‌ಡೌನ್ ಎಫೆಕ್ಟ್‌: ಶಾಲೆಯಿಂದ ಹೊರಗುಳಿದ 10 ಲಕ್ಷ ಮಕ್ಕಳು!

ಲಾಕ್‌ಡೌನ್ ಎಫೆಕ್ಟ್‌: ಶಾಲೆಯಿಂದ ಹೊರಗುಳಿದ 10 ಲಕ್ಷ ಮಕ್ಕಳು!

- Advertisement -
- Advertisement -

ಕೊರೊನಾ ಲಾಕ್‌ಡೌನ್ ಪರಿಣಾಮದಿಂದಾಗಿ ಬಿಹಾರದ ವಿವಿಧ ಜಿಲ್ಲೆಗಳ ಸುಮಾರು 10 ಲಕ್ಷ ಮಕ್ಕಳು ಶಾಲೆಯಿಂದ ಹೊರಗುಳಿಯುವಂತಾಗಿದೆ ಎಂದು ರಾಜ್ಯದ ಅಧಿಕೃತ ಅಂಕಿಅಂಶಗಳಿಂದ ಬಹಿರಂಗವಾಗಿದೆ.

ಸರ್ಕಾರಿ ಶಾಲೆಗಳಲ್ಲಿ 5 ರಿಂದ 6 ನೇ ತರಗತಿಗೆ ದಾಖಲಾದ 6 ಲಕ್ಷ ಮಕ್ಕಳು, 8 ಮತ್ತು 9 ನೇ ತರಗತಿಯ 4 ಲಕ್ಷ ಮಕ್ಕಳು ಶಾಲೆಗಳನ್ನು ತೊರೆದಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ವಿದ್ಯಾರ್ಥಿಗಳನ್ನು ಮತ್ತೆ ತರಗತಿಗಳಿಗೆ ಕರೆತರಲು ಬಿಹಾರ ಸರ್ಕಾರದ ಶಿಕ್ಷಣ ಇಲಾಖೆ ಏಪ್ರಿಲ್ 1 ರಿಂದ ರಾಜ್ಯಾದ್ಯಂತ ‘ದಾಖಲಾತಿ ಪ್ರಕ್ರಿಯೆ’ ಪ್ರಾರಂಭಿಸಲು ನಿರ್ಧರಿಸಿದೆ.

ಈ ಮಾಹಿತಿಯನ್ನು ಪ್ರಕಟಿಸಿದ ಪ್ರಾಥಮಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ರಂಜಿತ್ ಕೆ ಸಿಂಗ್, “ಎಲ್ಲಾ ಡ್ರಾಪ್‌ ಔಟ್‌ಗಳನ್ನು ಮತ್ತೆ ಶಾಲೆಗೆ ಕರೆತರುವ ವಿಶೇಷ ದಾಖಲಾತಿ ಪ್ರಕ್ರಿಯೆಗೆ ಚಾಲನೆಯನ್ನು ಏಪ್ರಿಲ್‌ನಿಂದ ಕೈಗೊಳ್ಳಲಾಗುವುದು. ಪ್ರಾಥಮಿಕ ಹಂತದಿಂದ ಪ್ರೌಢ ಶಾಲಾ ಹಂತದ ಶಾಲಾ ಮುಖ್ಯೋಪಾಧ್ಯಾಯರಿಗೆ ವಿದ್ಯಾರ್ಥಿಗಳ ಹೊರಗುಳಿಯುವಿಕೆಯನ್ನು ಕಡಿಮೆ ಮಾಡಲು ದೊಡ್ಡ ಪ್ರಮಾಣದಲ್ಲಿ ದಾಖಲಾತಿ ಪ್ರಕ್ರಿಯೆಗೆ ಚಾಲನೆ ನೀಡುವ ಕೆಲಸವನ್ನು ನೀಡಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ತೆರೆಯದ ಸರ್ಕಾರಿ ವಸತಿ ಶಾಲೆಗಳು: 30,000 ಕ್ಕೂ ಹೆಚ್ಚು ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

“ಶಾಲೆಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಸೇತುಬಂಧ-ಕೋರ್ಸ್‌ಗಳನ್ನು ನಡೆಸಲು ನಾವು ನಿರ್ಧರಿಸಿದ್ದೇವೆ, ರಾಜ್ಯದಲ್ಲಿ ಲಾಕ್‌ಡೌನ್ ಇದ್ದುದರಿಂದ ಪಾಠಗಳನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಎಲ್ಲಾ ತರಗತಿಗಳಿಗೆ ಸೇತುಬಂಧ ಕೋರ್ಸ್ ಏಪ್ರಿಲ್ ಮತ್ತು ಜೂನ್ ನಡುವೆ ಮೂರು ತಿಂಗಳು ಮುಂದುವರಿಯಲಿದೆ” ಎಂದು ಅವರು ಹೇಳಿದರು.

ಕೊರೊನಾ ಸಾಂಕ್ರಾಮಿಕ ರೋಗವು ಶಿಕ್ಷಣ ಕ್ಷೇತ್ರದ ಮೇಲೆ ಅಗಾಧವಾದ ಪ್ರತಿಕೂಲ ಪರಿಣಾಮ ಬೀರಿದ್ದು, ಕಳೆದ ವರ್ಷ ಯಾವುದೇ ಶೈಕ್ಷಣಿಕ ಕಾರ್ಯಕ್ರಮಗಳೂ ಸಹ ಪೂರ್ಣಗೊಳ್ಳಲು ಸಾಧ್ಯವಾಗಿಲ್ಲ. ಲಾಕ್‌ಡೌನ್‌ನಿಂದ ಉಂಟಾದ ಸಮಸ್ಯೆಗಳನ್ನು ಖಾಸಗೀ ಶಾಲಾ ಕಾಲೇಜುಗಳು ಆನ್‌ಲೈನ್ ತರಗತಿಗಳ ಮೂಲಕ ಭರಿಸಿಕೊಂಡವು. ಆದರೆ ಸರ್ಕಾರಿ ಶಾಲೆಗಳಿಗೆ ಇದು ಸಾಧ್ಯವಾಗಲಿಲ್ಲ.

ದೇಶದಲ್ಲಿ ಹಲವು ಕಡೆ ಇನ್ನೂ ಕೂಡ 1 ರಿಂದ 8ನೇ ತರಗತಿಯವರೆಗ ಶಾಲೆಗಳು ಆರಂಭವಾಗಿಲ್ಲ. ಇದರಿಂದ ಶಾಲೆಯಿಂದ ಹೊರಗುಳಿಯುವಿಕೆಯ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಸಾಕಷ್ಟು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...