Homeಮುಖಪುಟಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್!

ಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್!

- Advertisement -
- Advertisement -

ಭಾರತ ನಿಜಕ್ಕೂ ಕೊರೋನಾಗೆ ಬೆಚ್ಚಿ ಬಿದ್ದಿದೆಯೋ ಇಲ್ಲವೋ? ಆದರೆ, ಬೆಂಗಳೂರಿನಂತಹ ಮಹಾ ನಗರಗಳಲ್ಲಿ ವಾಸಿಸುವ ಸಮಾಜದ ತಳವರ್ಗದ ಜನ ಒಪ್ಪೊತ್ತಿನ ಊಟಕ್ಕೂ ಪರದಾಡುವಂತೆ ಮಾಡಿರುವ ಲಾಕ್‌ಡೌನ್‌ಗೆ  ಬೆಚ್ಚಿದ್ದಾರೆ.

ಭಾರತದಂತಹ ದೇಶದಲ್ಲಿ ಲಾಕ್‌ಡೌನ್ ಘೋಷಿಸುವುದು ಸುಲಭ. ಆದರೆ, ದಿನನಿತ್ಯದ ಆಹಾರಕ್ಕೆ ಅದೇ ದಿನ ದುಡಿಯುವ ಅನಿವಾರ್ಯತೆಗೆ ಸಿಲುಕಿ ಬದುಕುತ್ತಿರುವ ಜನರಿಗೆ ಸತತ 21 ದಿನಗಳ ಕಾಲ ಎರಡು ಹೊತ್ತಿನ ಊಟ ಹಾಗೂ ಆರೋಗ್ಯ ಸಲಕರಣೆಗಳನ್ನು ಒದಗಿಸುವುದು ಅಷ್ಟು ಸುಲಭದ ಕೆಲಸವಲ್ಲ.

ಬೆಂಗಳೂರಿನಲ್ಲೇ ಸುಮಾರು ಸಾವಿರದಷ್ಟು ಬಡಜನರ, ಶ್ರಮಿಕರ ಏರಿಯಾಗಳಿವೆ. ಇಲ್ಲಿನ ಬಡ ಜನರಿಗೆ ಊಟ ಒದಗಿಸುವುದು ಅವರ ಕಷ್ಟಕ್ಕೆ ಸ್ಪಂದಿಸುವುದು ಕೇವಲ ಸರ್ಕಾರದಿಂದ ಮಾತ್ರ ಆಗುವ ಕೆಲಸವಲ್ಲ. ಇಂತಹ ಕೆಲಸಕ್ಕೆಂದೆ ತನ್ನನ್ನು ಮುಡಿಪಾಗಿಟ್ಟುಕೊಂಡು ಇಂತಹ ಸಂದಿಗ್ಧ ಸಂದರ್ಭದಲ್ಲಿ ಸ್ಲಂ ಭಾಗದ ಬಡ ವರ್ಗದ ಜನರ ಹೊಟ್ಟೆ ತುಂಬಿಸುತ್ತಿರುವ ಎನ್‌ಜಿಓ ಸಂಸ್ಥೆಯೇ Mercy Mission.

ಪ್ರತಿನಿತ್ಯ ಸಾವಿರಾರು ಬಡವರ ಹೊಟ್ಟೆ ತುಂಬಿಸುತ್ತಿದೆ ಈ Mercy Mission!

Mercy Mission ಎಂಬುದು ಕೇವಲ ಒಂದು ಸ್ವಯಂ ಸೇವಾ ಸಂಘವಲ್ಲ. ಬದಲಿಗೆ ಜನಪರ ಕೆಲಸದಲ್ಲಿ ತೊಡಗಿರುವ ಸುಮಾರು 25ಕ್ಕೂ ಹೆಚ್ಚು ಜನಪರ ಸಂಘಟನೆಗಳ ಒಂದು ಒಕ್ಕೂಟ. ಭಾರತದಲ್ಲಿ ಕಳೆದ ಒಂದು ವಾರದಿಂದ ಲಾಕ್‌ಡೌನ್ ಘೋಷಿಸಲಾಗಿದೆ. ಜನರ ಒಪ್ಪೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಆದರೆ, ಇಂತಹ ಸಂದಿಗ್ಧ ಕಾಲದಲ್ಲಿ ಮರ್ಸಿ ಮೆಷಿನ್ ನಡೆಸುತ್ತಿರುವ ಕಾರ್ಯ ನಿಜಕ್ಕೂ ಶ್ಲಾಘನೀಯ.

ಲಾಕ್‌ಡೌನ್ ‌ನಿದಾಗಿ ಹಸಿದಿರುವವರಿಗೆ ಆಹಾರ ನೀಡಲೆಂದೆ Mercy Mission ಬೆಂಗಳೂರಿನಲ್ಲಿ ಎರಡು ಕಡೆ “ಕಮ್ಯೂನಿಟಿ ಕಿಚನ್” ಹೊಂದಿದೆ. ಉತ್ತರ ಬೆಂಗಳೂರಿಗೆ ಡಿಜೆ ಹಳ್ಳಿ ಹಾಗೂ ದಕ್ಷಿಣ ಬೆಂಗಳೂರಿಗೆ ಈಜಿಪುರದಲ್ಲಿ ಕಮ್ಯೂನಿಟಿ ಕಿಚನ್ ಸ್ಥಾಪಿಸಲಾಗಿದೆ. ಇಲ್ಲಿನ ಅಡಿಗೆ ಮನೆಗಳಲ್ಲಿ ಪ್ರತಿ ಹೊತ್ತಿಗೆ ತಲಾ 2,000 ಜನರಿಗೆ ಆಹಾರ ಸಿದ್ದಪಡಿಸಿ ಹಂಚಲಾಗುತ್ತಿದೆ.

Mercy Mission ಸ್ವಯಂ ಸೇವಾ ಸಂಘಟನೆಯಲ್ಲಿ ದೊಡ್ಡ ಸಂಖ್ಯೆಯ ಸ್ವಯಂ ಸೇವಕರಿದ್ದಾರೆ. ಈ ಸ್ವಯಂ ಸೇವಕರ ಪೈಕಿ ಪ್ರತಿಯೊಬ್ಬರೂ ಪ್ರತಿದಿನ ಇಂತಿಷ್ಟು ಜನರಿಗೆ ಆಹಾರ ತಲುಪಿಸಬೇಕೆಂಬ ಗುರಿ ನೀಡಲಾಗುತ್ತಿದೆ. ಆದಷ್ಟು ಸ್ಲಂ ಭಾಗಕ್ಕೆ ತಮ್ಮದೇ ವಾಹನಗಳಲ್ಲಿ ತೆರಳುತ್ತಿರುವ ಈ ಕಾರ್ಯಕರ್ತರು ಬಡ ಜನರಿಗೆ ಆಹಾರ ಪೂರೈಸುವ ಕೆಲಸಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಂತಹ ಮಹಾನಗರದಲ್ಲಿ ಮೂರು ಹೊತ್ತು ತಲಾ 2000 ಸಾವಿರ ಜನರ ಹೊಟ್ಟೆ ತುಂಬಿಸುವುದು ಎಂದರೆ ಸುಮ್ಮನೆ ಮಾತಲ್ಲ.

ಇದಲ್ಲದೆ, ಕೆಲವು ಫಾರ್ಮಸಿಗಳಿಂದ ರಿಯಾಯಿತಿ ದರದಲ್ಲಿ ಔಷಧ ಸಾಮಾಗ್ರಿಗಳನ್ನು ಕೊಂಡು ಅದನ್ನು ಬಡವರಿಗೆ ಉಚಿತವಾಗಿ ನೀಡುವ ಕೆಲಸವನ್ನೂ ಈ Mercy Mission ಮಾಡುತ್ತಿದೆ. ಶುಗರ್ ಬಿಪಿಯಂತಹ ಎಲ್ಲಾ ತರದ ಖಾಯಿಲೆ ಹೊಂದಿರುವ ಬಡವರಿಗೂ ಈ ಸೌಲಭ್ಯವನ್ನು ಮರ್ಸಿ ಮಿಷಿನ್ ನೀಡುತ್ತಿದೆ.

ಈ ಕುರಿತು ನಾನುಗೌರಿ.ಕಾಂ Mercy Mission ಸಂಸ್ಥೆ ಪದಾಧಿಕಾರಿಗಳಲ್ಲೊಬ್ಬರಾದ ತೌಸಿಫ್‌ರವರನ್ನು ಮಾತನಾಡಿಸಿತು. ಅವರು “ಈ ಸಂಸ್ಥೆ ಹಲವಾರು ವರ್ಷಗಳಿಂದ ಯಾವುದೇ ಪ್ರಚಾರ ಇಲ್ಲದೆ ಸಮಾಜಮುಖಿ ಕೆಲಸದಲ್ಲಿ ತೊಡಗಿದೆ. ಲಾಕ್‌ಡೌನ್ ಘೋಷಿಸಿದ ನಂತರದ ಕಳೆದ ಒಂದು ವಾರದ ಅವಧಿಯಲ್ಲಿ ಸಾವಿರಾರು ಜನರ ಹಸಿವನ್ನು ನೀಗಿಸಿದೆ. ಆದರೆ, ಸಹಾಯ ಹಸ್ತ ನೀಡುವ ಸಂದರ್ಭದಲ್ಲಿ ನಾವು ಎಲ್ಲಿಯೂ ಸಹ ಹಿಂದೂ-ಮುಸ್ಲಿಂ ಎಂದು ಬೇಧ ಮಾಡುವ ಕೆಲಸಕ್ಕೆ ಮುಂದಾಗಿಲ್ಲ. ಇದು ಬೇಧ ಮಾಡುವ ಸಮಯವಲ್ಲ. ಇಡೀ ಭಾರತ ಒಟ್ಟಾಗಿ ನಿಲ್ಲಬೇಕಾದ ಸಮಯ” ಎನ್ನುತ್ತಾರೆ ಅವರು.

ಒಟ್ಟಾರೆ ಲಾಕ್‌ಡೌನ್‌ನಿಂದಾಗಿ ಮೇಲ್ ಮತ್ತು ಮಧ್ಯಮ ವರ್ಗಕ್ಕಿಂತ ಅಧಿಕ ಪೆಟ್ಟು ತಿನ್ನುತ್ತಿರುವುದು ಸಮಾಜದ ಕೆಳ ಮತ್ತು ಕೂಲಿ ಕಾರ್ಮಿಕ ವರ್ಗ. ಇಂತಹ ಜನರಿಗೆ ದಿನನಿತ್ಯ ಆಹಾರ ಪೂರೈಸುತ್ತಿರುವ Mercy Mission ಕಾರ್ಯ ನಿಜಕ್ಕೂ ಶ್ಲಾಘನೀಯ.


ಇದನ್ನೂ ಓದಿ: ಅಂದು ನೋಟುರದ್ದು, ಇಂದು ಮಹಾವಲಸೆ – ಬಡಜನತೆಯ ನಡು ಮುರಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...