Homeಮುಖಪುಟಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್!

ಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್!

- Advertisement -
- Advertisement -

ಭಾರತ ನಿಜಕ್ಕೂ ಕೊರೋನಾಗೆ ಬೆಚ್ಚಿ ಬಿದ್ದಿದೆಯೋ ಇಲ್ಲವೋ? ಆದರೆ, ಬೆಂಗಳೂರಿನಂತಹ ಮಹಾ ನಗರಗಳಲ್ಲಿ ವಾಸಿಸುವ ಸಮಾಜದ ತಳವರ್ಗದ ಜನ ಒಪ್ಪೊತ್ತಿನ ಊಟಕ್ಕೂ ಪರದಾಡುವಂತೆ ಮಾಡಿರುವ ಲಾಕ್‌ಡೌನ್‌ಗೆ  ಬೆಚ್ಚಿದ್ದಾರೆ.

ಭಾರತದಂತಹ ದೇಶದಲ್ಲಿ ಲಾಕ್‌ಡೌನ್ ಘೋಷಿಸುವುದು ಸುಲಭ. ಆದರೆ, ದಿನನಿತ್ಯದ ಆಹಾರಕ್ಕೆ ಅದೇ ದಿನ ದುಡಿಯುವ ಅನಿವಾರ್ಯತೆಗೆ ಸಿಲುಕಿ ಬದುಕುತ್ತಿರುವ ಜನರಿಗೆ ಸತತ 21 ದಿನಗಳ ಕಾಲ ಎರಡು ಹೊತ್ತಿನ ಊಟ ಹಾಗೂ ಆರೋಗ್ಯ ಸಲಕರಣೆಗಳನ್ನು ಒದಗಿಸುವುದು ಅಷ್ಟು ಸುಲಭದ ಕೆಲಸವಲ್ಲ.

ಬೆಂಗಳೂರಿನಲ್ಲೇ ಸುಮಾರು ಸಾವಿರದಷ್ಟು ಬಡಜನರ, ಶ್ರಮಿಕರ ಏರಿಯಾಗಳಿವೆ. ಇಲ್ಲಿನ ಬಡ ಜನರಿಗೆ ಊಟ ಒದಗಿಸುವುದು ಅವರ ಕಷ್ಟಕ್ಕೆ ಸ್ಪಂದಿಸುವುದು ಕೇವಲ ಸರ್ಕಾರದಿಂದ ಮಾತ್ರ ಆಗುವ ಕೆಲಸವಲ್ಲ. ಇಂತಹ ಕೆಲಸಕ್ಕೆಂದೆ ತನ್ನನ್ನು ಮುಡಿಪಾಗಿಟ್ಟುಕೊಂಡು ಇಂತಹ ಸಂದಿಗ್ಧ ಸಂದರ್ಭದಲ್ಲಿ ಸ್ಲಂ ಭಾಗದ ಬಡ ವರ್ಗದ ಜನರ ಹೊಟ್ಟೆ ತುಂಬಿಸುತ್ತಿರುವ ಎನ್‌ಜಿಓ ಸಂಸ್ಥೆಯೇ Mercy Mission.

ಪ್ರತಿನಿತ್ಯ ಸಾವಿರಾರು ಬಡವರ ಹೊಟ್ಟೆ ತುಂಬಿಸುತ್ತಿದೆ ಈ Mercy Mission!

Mercy Mission ಎಂಬುದು ಕೇವಲ ಒಂದು ಸ್ವಯಂ ಸೇವಾ ಸಂಘವಲ್ಲ. ಬದಲಿಗೆ ಜನಪರ ಕೆಲಸದಲ್ಲಿ ತೊಡಗಿರುವ ಸುಮಾರು 25ಕ್ಕೂ ಹೆಚ್ಚು ಜನಪರ ಸಂಘಟನೆಗಳ ಒಂದು ಒಕ್ಕೂಟ. ಭಾರತದಲ್ಲಿ ಕಳೆದ ಒಂದು ವಾರದಿಂದ ಲಾಕ್‌ಡೌನ್ ಘೋಷಿಸಲಾಗಿದೆ. ಜನರ ಒಪ್ಪೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಆದರೆ, ಇಂತಹ ಸಂದಿಗ್ಧ ಕಾಲದಲ್ಲಿ ಮರ್ಸಿ ಮೆಷಿನ್ ನಡೆಸುತ್ತಿರುವ ಕಾರ್ಯ ನಿಜಕ್ಕೂ ಶ್ಲಾಘನೀಯ.

ಲಾಕ್‌ಡೌನ್ ‌ನಿದಾಗಿ ಹಸಿದಿರುವವರಿಗೆ ಆಹಾರ ನೀಡಲೆಂದೆ Mercy Mission ಬೆಂಗಳೂರಿನಲ್ಲಿ ಎರಡು ಕಡೆ “ಕಮ್ಯೂನಿಟಿ ಕಿಚನ್” ಹೊಂದಿದೆ. ಉತ್ತರ ಬೆಂಗಳೂರಿಗೆ ಡಿಜೆ ಹಳ್ಳಿ ಹಾಗೂ ದಕ್ಷಿಣ ಬೆಂಗಳೂರಿಗೆ ಈಜಿಪುರದಲ್ಲಿ ಕಮ್ಯೂನಿಟಿ ಕಿಚನ್ ಸ್ಥಾಪಿಸಲಾಗಿದೆ. ಇಲ್ಲಿನ ಅಡಿಗೆ ಮನೆಗಳಲ್ಲಿ ಪ್ರತಿ ಹೊತ್ತಿಗೆ ತಲಾ 2,000 ಜನರಿಗೆ ಆಹಾರ ಸಿದ್ದಪಡಿಸಿ ಹಂಚಲಾಗುತ್ತಿದೆ.

Mercy Mission ಸ್ವಯಂ ಸೇವಾ ಸಂಘಟನೆಯಲ್ಲಿ ದೊಡ್ಡ ಸಂಖ್ಯೆಯ ಸ್ವಯಂ ಸೇವಕರಿದ್ದಾರೆ. ಈ ಸ್ವಯಂ ಸೇವಕರ ಪೈಕಿ ಪ್ರತಿಯೊಬ್ಬರೂ ಪ್ರತಿದಿನ ಇಂತಿಷ್ಟು ಜನರಿಗೆ ಆಹಾರ ತಲುಪಿಸಬೇಕೆಂಬ ಗುರಿ ನೀಡಲಾಗುತ್ತಿದೆ. ಆದಷ್ಟು ಸ್ಲಂ ಭಾಗಕ್ಕೆ ತಮ್ಮದೇ ವಾಹನಗಳಲ್ಲಿ ತೆರಳುತ್ತಿರುವ ಈ ಕಾರ್ಯಕರ್ತರು ಬಡ ಜನರಿಗೆ ಆಹಾರ ಪೂರೈಸುವ ಕೆಲಸಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಂತಹ ಮಹಾನಗರದಲ್ಲಿ ಮೂರು ಹೊತ್ತು ತಲಾ 2000 ಸಾವಿರ ಜನರ ಹೊಟ್ಟೆ ತುಂಬಿಸುವುದು ಎಂದರೆ ಸುಮ್ಮನೆ ಮಾತಲ್ಲ.

ಇದಲ್ಲದೆ, ಕೆಲವು ಫಾರ್ಮಸಿಗಳಿಂದ ರಿಯಾಯಿತಿ ದರದಲ್ಲಿ ಔಷಧ ಸಾಮಾಗ್ರಿಗಳನ್ನು ಕೊಂಡು ಅದನ್ನು ಬಡವರಿಗೆ ಉಚಿತವಾಗಿ ನೀಡುವ ಕೆಲಸವನ್ನೂ ಈ Mercy Mission ಮಾಡುತ್ತಿದೆ. ಶುಗರ್ ಬಿಪಿಯಂತಹ ಎಲ್ಲಾ ತರದ ಖಾಯಿಲೆ ಹೊಂದಿರುವ ಬಡವರಿಗೂ ಈ ಸೌಲಭ್ಯವನ್ನು ಮರ್ಸಿ ಮಿಷಿನ್ ನೀಡುತ್ತಿದೆ.

ಈ ಕುರಿತು ನಾನುಗೌರಿ.ಕಾಂ Mercy Mission ಸಂಸ್ಥೆ ಪದಾಧಿಕಾರಿಗಳಲ್ಲೊಬ್ಬರಾದ ತೌಸಿಫ್‌ರವರನ್ನು ಮಾತನಾಡಿಸಿತು. ಅವರು “ಈ ಸಂಸ್ಥೆ ಹಲವಾರು ವರ್ಷಗಳಿಂದ ಯಾವುದೇ ಪ್ರಚಾರ ಇಲ್ಲದೆ ಸಮಾಜಮುಖಿ ಕೆಲಸದಲ್ಲಿ ತೊಡಗಿದೆ. ಲಾಕ್‌ಡೌನ್ ಘೋಷಿಸಿದ ನಂತರದ ಕಳೆದ ಒಂದು ವಾರದ ಅವಧಿಯಲ್ಲಿ ಸಾವಿರಾರು ಜನರ ಹಸಿವನ್ನು ನೀಗಿಸಿದೆ. ಆದರೆ, ಸಹಾಯ ಹಸ್ತ ನೀಡುವ ಸಂದರ್ಭದಲ್ಲಿ ನಾವು ಎಲ್ಲಿಯೂ ಸಹ ಹಿಂದೂ-ಮುಸ್ಲಿಂ ಎಂದು ಬೇಧ ಮಾಡುವ ಕೆಲಸಕ್ಕೆ ಮುಂದಾಗಿಲ್ಲ. ಇದು ಬೇಧ ಮಾಡುವ ಸಮಯವಲ್ಲ. ಇಡೀ ಭಾರತ ಒಟ್ಟಾಗಿ ನಿಲ್ಲಬೇಕಾದ ಸಮಯ” ಎನ್ನುತ್ತಾರೆ ಅವರು.

ಒಟ್ಟಾರೆ ಲಾಕ್‌ಡೌನ್‌ನಿಂದಾಗಿ ಮೇಲ್ ಮತ್ತು ಮಧ್ಯಮ ವರ್ಗಕ್ಕಿಂತ ಅಧಿಕ ಪೆಟ್ಟು ತಿನ್ನುತ್ತಿರುವುದು ಸಮಾಜದ ಕೆಳ ಮತ್ತು ಕೂಲಿ ಕಾರ್ಮಿಕ ವರ್ಗ. ಇಂತಹ ಜನರಿಗೆ ದಿನನಿತ್ಯ ಆಹಾರ ಪೂರೈಸುತ್ತಿರುವ Mercy Mission ಕಾರ್ಯ ನಿಜಕ್ಕೂ ಶ್ಲಾಘನೀಯ.


ಇದನ್ನೂ ಓದಿ: ಅಂದು ನೋಟುರದ್ದು, ಇಂದು ಮಹಾವಲಸೆ – ಬಡಜನತೆಯ ನಡು ಮುರಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...