Homeಮುಖಪುಟಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್!

ಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್!

- Advertisement -
- Advertisement -

ಭಾರತ ನಿಜಕ್ಕೂ ಕೊರೋನಾಗೆ ಬೆಚ್ಚಿ ಬಿದ್ದಿದೆಯೋ ಇಲ್ಲವೋ? ಆದರೆ, ಬೆಂಗಳೂರಿನಂತಹ ಮಹಾ ನಗರಗಳಲ್ಲಿ ವಾಸಿಸುವ ಸಮಾಜದ ತಳವರ್ಗದ ಜನ ಒಪ್ಪೊತ್ತಿನ ಊಟಕ್ಕೂ ಪರದಾಡುವಂತೆ ಮಾಡಿರುವ ಲಾಕ್‌ಡೌನ್‌ಗೆ  ಬೆಚ್ಚಿದ್ದಾರೆ.

ಭಾರತದಂತಹ ದೇಶದಲ್ಲಿ ಲಾಕ್‌ಡೌನ್ ಘೋಷಿಸುವುದು ಸುಲಭ. ಆದರೆ, ದಿನನಿತ್ಯದ ಆಹಾರಕ್ಕೆ ಅದೇ ದಿನ ದುಡಿಯುವ ಅನಿವಾರ್ಯತೆಗೆ ಸಿಲುಕಿ ಬದುಕುತ್ತಿರುವ ಜನರಿಗೆ ಸತತ 21 ದಿನಗಳ ಕಾಲ ಎರಡು ಹೊತ್ತಿನ ಊಟ ಹಾಗೂ ಆರೋಗ್ಯ ಸಲಕರಣೆಗಳನ್ನು ಒದಗಿಸುವುದು ಅಷ್ಟು ಸುಲಭದ ಕೆಲಸವಲ್ಲ.

ಬೆಂಗಳೂರಿನಲ್ಲೇ ಸುಮಾರು ಸಾವಿರದಷ್ಟು ಬಡಜನರ, ಶ್ರಮಿಕರ ಏರಿಯಾಗಳಿವೆ. ಇಲ್ಲಿನ ಬಡ ಜನರಿಗೆ ಊಟ ಒದಗಿಸುವುದು ಅವರ ಕಷ್ಟಕ್ಕೆ ಸ್ಪಂದಿಸುವುದು ಕೇವಲ ಸರ್ಕಾರದಿಂದ ಮಾತ್ರ ಆಗುವ ಕೆಲಸವಲ್ಲ. ಇಂತಹ ಕೆಲಸಕ್ಕೆಂದೆ ತನ್ನನ್ನು ಮುಡಿಪಾಗಿಟ್ಟುಕೊಂಡು ಇಂತಹ ಸಂದಿಗ್ಧ ಸಂದರ್ಭದಲ್ಲಿ ಸ್ಲಂ ಭಾಗದ ಬಡ ವರ್ಗದ ಜನರ ಹೊಟ್ಟೆ ತುಂಬಿಸುತ್ತಿರುವ ಎನ್‌ಜಿಓ ಸಂಸ್ಥೆಯೇ Mercy Mission.

ಪ್ರತಿನಿತ್ಯ ಸಾವಿರಾರು ಬಡವರ ಹೊಟ್ಟೆ ತುಂಬಿಸುತ್ತಿದೆ ಈ Mercy Mission!

Mercy Mission ಎಂಬುದು ಕೇವಲ ಒಂದು ಸ್ವಯಂ ಸೇವಾ ಸಂಘವಲ್ಲ. ಬದಲಿಗೆ ಜನಪರ ಕೆಲಸದಲ್ಲಿ ತೊಡಗಿರುವ ಸುಮಾರು 25ಕ್ಕೂ ಹೆಚ್ಚು ಜನಪರ ಸಂಘಟನೆಗಳ ಒಂದು ಒಕ್ಕೂಟ. ಭಾರತದಲ್ಲಿ ಕಳೆದ ಒಂದು ವಾರದಿಂದ ಲಾಕ್‌ಡೌನ್ ಘೋಷಿಸಲಾಗಿದೆ. ಜನರ ಒಪ್ಪೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಆದರೆ, ಇಂತಹ ಸಂದಿಗ್ಧ ಕಾಲದಲ್ಲಿ ಮರ್ಸಿ ಮೆಷಿನ್ ನಡೆಸುತ್ತಿರುವ ಕಾರ್ಯ ನಿಜಕ್ಕೂ ಶ್ಲಾಘನೀಯ.

ಲಾಕ್‌ಡೌನ್ ‌ನಿದಾಗಿ ಹಸಿದಿರುವವರಿಗೆ ಆಹಾರ ನೀಡಲೆಂದೆ Mercy Mission ಬೆಂಗಳೂರಿನಲ್ಲಿ ಎರಡು ಕಡೆ “ಕಮ್ಯೂನಿಟಿ ಕಿಚನ್” ಹೊಂದಿದೆ. ಉತ್ತರ ಬೆಂಗಳೂರಿಗೆ ಡಿಜೆ ಹಳ್ಳಿ ಹಾಗೂ ದಕ್ಷಿಣ ಬೆಂಗಳೂರಿಗೆ ಈಜಿಪುರದಲ್ಲಿ ಕಮ್ಯೂನಿಟಿ ಕಿಚನ್ ಸ್ಥಾಪಿಸಲಾಗಿದೆ. ಇಲ್ಲಿನ ಅಡಿಗೆ ಮನೆಗಳಲ್ಲಿ ಪ್ರತಿ ಹೊತ್ತಿಗೆ ತಲಾ 2,000 ಜನರಿಗೆ ಆಹಾರ ಸಿದ್ದಪಡಿಸಿ ಹಂಚಲಾಗುತ್ತಿದೆ.

Mercy Mission ಸ್ವಯಂ ಸೇವಾ ಸಂಘಟನೆಯಲ್ಲಿ ದೊಡ್ಡ ಸಂಖ್ಯೆಯ ಸ್ವಯಂ ಸೇವಕರಿದ್ದಾರೆ. ಈ ಸ್ವಯಂ ಸೇವಕರ ಪೈಕಿ ಪ್ರತಿಯೊಬ್ಬರೂ ಪ್ರತಿದಿನ ಇಂತಿಷ್ಟು ಜನರಿಗೆ ಆಹಾರ ತಲುಪಿಸಬೇಕೆಂಬ ಗುರಿ ನೀಡಲಾಗುತ್ತಿದೆ. ಆದಷ್ಟು ಸ್ಲಂ ಭಾಗಕ್ಕೆ ತಮ್ಮದೇ ವಾಹನಗಳಲ್ಲಿ ತೆರಳುತ್ತಿರುವ ಈ ಕಾರ್ಯಕರ್ತರು ಬಡ ಜನರಿಗೆ ಆಹಾರ ಪೂರೈಸುವ ಕೆಲಸಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಂತಹ ಮಹಾನಗರದಲ್ಲಿ ಮೂರು ಹೊತ್ತು ತಲಾ 2000 ಸಾವಿರ ಜನರ ಹೊಟ್ಟೆ ತುಂಬಿಸುವುದು ಎಂದರೆ ಸುಮ್ಮನೆ ಮಾತಲ್ಲ.

ಇದಲ್ಲದೆ, ಕೆಲವು ಫಾರ್ಮಸಿಗಳಿಂದ ರಿಯಾಯಿತಿ ದರದಲ್ಲಿ ಔಷಧ ಸಾಮಾಗ್ರಿಗಳನ್ನು ಕೊಂಡು ಅದನ್ನು ಬಡವರಿಗೆ ಉಚಿತವಾಗಿ ನೀಡುವ ಕೆಲಸವನ್ನೂ ಈ Mercy Mission ಮಾಡುತ್ತಿದೆ. ಶುಗರ್ ಬಿಪಿಯಂತಹ ಎಲ್ಲಾ ತರದ ಖಾಯಿಲೆ ಹೊಂದಿರುವ ಬಡವರಿಗೂ ಈ ಸೌಲಭ್ಯವನ್ನು ಮರ್ಸಿ ಮಿಷಿನ್ ನೀಡುತ್ತಿದೆ.

ಈ ಕುರಿತು ನಾನುಗೌರಿ.ಕಾಂ Mercy Mission ಸಂಸ್ಥೆ ಪದಾಧಿಕಾರಿಗಳಲ್ಲೊಬ್ಬರಾದ ತೌಸಿಫ್‌ರವರನ್ನು ಮಾತನಾಡಿಸಿತು. ಅವರು “ಈ ಸಂಸ್ಥೆ ಹಲವಾರು ವರ್ಷಗಳಿಂದ ಯಾವುದೇ ಪ್ರಚಾರ ಇಲ್ಲದೆ ಸಮಾಜಮುಖಿ ಕೆಲಸದಲ್ಲಿ ತೊಡಗಿದೆ. ಲಾಕ್‌ಡೌನ್ ಘೋಷಿಸಿದ ನಂತರದ ಕಳೆದ ಒಂದು ವಾರದ ಅವಧಿಯಲ್ಲಿ ಸಾವಿರಾರು ಜನರ ಹಸಿವನ್ನು ನೀಗಿಸಿದೆ. ಆದರೆ, ಸಹಾಯ ಹಸ್ತ ನೀಡುವ ಸಂದರ್ಭದಲ್ಲಿ ನಾವು ಎಲ್ಲಿಯೂ ಸಹ ಹಿಂದೂ-ಮುಸ್ಲಿಂ ಎಂದು ಬೇಧ ಮಾಡುವ ಕೆಲಸಕ್ಕೆ ಮುಂದಾಗಿಲ್ಲ. ಇದು ಬೇಧ ಮಾಡುವ ಸಮಯವಲ್ಲ. ಇಡೀ ಭಾರತ ಒಟ್ಟಾಗಿ ನಿಲ್ಲಬೇಕಾದ ಸಮಯ” ಎನ್ನುತ್ತಾರೆ ಅವರು.

ಒಟ್ಟಾರೆ ಲಾಕ್‌ಡೌನ್‌ನಿಂದಾಗಿ ಮೇಲ್ ಮತ್ತು ಮಧ್ಯಮ ವರ್ಗಕ್ಕಿಂತ ಅಧಿಕ ಪೆಟ್ಟು ತಿನ್ನುತ್ತಿರುವುದು ಸಮಾಜದ ಕೆಳ ಮತ್ತು ಕೂಲಿ ಕಾರ್ಮಿಕ ವರ್ಗ. ಇಂತಹ ಜನರಿಗೆ ದಿನನಿತ್ಯ ಆಹಾರ ಪೂರೈಸುತ್ತಿರುವ Mercy Mission ಕಾರ್ಯ ನಿಜಕ್ಕೂ ಶ್ಲಾಘನೀಯ.


ಇದನ್ನೂ ಓದಿ: ಅಂದು ನೋಟುರದ್ದು, ಇಂದು ಮಹಾವಲಸೆ – ಬಡಜನತೆಯ ನಡು ಮುರಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...