Homeಮುಖಪುಟಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್!

ಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್!

- Advertisement -
- Advertisement -

ಭಾರತ ನಿಜಕ್ಕೂ ಕೊರೋನಾಗೆ ಬೆಚ್ಚಿ ಬಿದ್ದಿದೆಯೋ ಇಲ್ಲವೋ? ಆದರೆ, ಬೆಂಗಳೂರಿನಂತಹ ಮಹಾ ನಗರಗಳಲ್ಲಿ ವಾಸಿಸುವ ಸಮಾಜದ ತಳವರ್ಗದ ಜನ ಒಪ್ಪೊತ್ತಿನ ಊಟಕ್ಕೂ ಪರದಾಡುವಂತೆ ಮಾಡಿರುವ ಲಾಕ್‌ಡೌನ್‌ಗೆ  ಬೆಚ್ಚಿದ್ದಾರೆ.

ಭಾರತದಂತಹ ದೇಶದಲ್ಲಿ ಲಾಕ್‌ಡೌನ್ ಘೋಷಿಸುವುದು ಸುಲಭ. ಆದರೆ, ದಿನನಿತ್ಯದ ಆಹಾರಕ್ಕೆ ಅದೇ ದಿನ ದುಡಿಯುವ ಅನಿವಾರ್ಯತೆಗೆ ಸಿಲುಕಿ ಬದುಕುತ್ತಿರುವ ಜನರಿಗೆ ಸತತ 21 ದಿನಗಳ ಕಾಲ ಎರಡು ಹೊತ್ತಿನ ಊಟ ಹಾಗೂ ಆರೋಗ್ಯ ಸಲಕರಣೆಗಳನ್ನು ಒದಗಿಸುವುದು ಅಷ್ಟು ಸುಲಭದ ಕೆಲಸವಲ್ಲ.

ಬೆಂಗಳೂರಿನಲ್ಲೇ ಸುಮಾರು ಸಾವಿರದಷ್ಟು ಬಡಜನರ, ಶ್ರಮಿಕರ ಏರಿಯಾಗಳಿವೆ. ಇಲ್ಲಿನ ಬಡ ಜನರಿಗೆ ಊಟ ಒದಗಿಸುವುದು ಅವರ ಕಷ್ಟಕ್ಕೆ ಸ್ಪಂದಿಸುವುದು ಕೇವಲ ಸರ್ಕಾರದಿಂದ ಮಾತ್ರ ಆಗುವ ಕೆಲಸವಲ್ಲ. ಇಂತಹ ಕೆಲಸಕ್ಕೆಂದೆ ತನ್ನನ್ನು ಮುಡಿಪಾಗಿಟ್ಟುಕೊಂಡು ಇಂತಹ ಸಂದಿಗ್ಧ ಸಂದರ್ಭದಲ್ಲಿ ಸ್ಲಂ ಭಾಗದ ಬಡ ವರ್ಗದ ಜನರ ಹೊಟ್ಟೆ ತುಂಬಿಸುತ್ತಿರುವ ಎನ್‌ಜಿಓ ಸಂಸ್ಥೆಯೇ Mercy Mission.

ಪ್ರತಿನಿತ್ಯ ಸಾವಿರಾರು ಬಡವರ ಹೊಟ್ಟೆ ತುಂಬಿಸುತ್ತಿದೆ ಈ Mercy Mission!

Mercy Mission ಎಂಬುದು ಕೇವಲ ಒಂದು ಸ್ವಯಂ ಸೇವಾ ಸಂಘವಲ್ಲ. ಬದಲಿಗೆ ಜನಪರ ಕೆಲಸದಲ್ಲಿ ತೊಡಗಿರುವ ಸುಮಾರು 25ಕ್ಕೂ ಹೆಚ್ಚು ಜನಪರ ಸಂಘಟನೆಗಳ ಒಂದು ಒಕ್ಕೂಟ. ಭಾರತದಲ್ಲಿ ಕಳೆದ ಒಂದು ವಾರದಿಂದ ಲಾಕ್‌ಡೌನ್ ಘೋಷಿಸಲಾಗಿದೆ. ಜನರ ಒಪ್ಪೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಆದರೆ, ಇಂತಹ ಸಂದಿಗ್ಧ ಕಾಲದಲ್ಲಿ ಮರ್ಸಿ ಮೆಷಿನ್ ನಡೆಸುತ್ತಿರುವ ಕಾರ್ಯ ನಿಜಕ್ಕೂ ಶ್ಲಾಘನೀಯ.

ಲಾಕ್‌ಡೌನ್ ‌ನಿದಾಗಿ ಹಸಿದಿರುವವರಿಗೆ ಆಹಾರ ನೀಡಲೆಂದೆ Mercy Mission ಬೆಂಗಳೂರಿನಲ್ಲಿ ಎರಡು ಕಡೆ “ಕಮ್ಯೂನಿಟಿ ಕಿಚನ್” ಹೊಂದಿದೆ. ಉತ್ತರ ಬೆಂಗಳೂರಿಗೆ ಡಿಜೆ ಹಳ್ಳಿ ಹಾಗೂ ದಕ್ಷಿಣ ಬೆಂಗಳೂರಿಗೆ ಈಜಿಪುರದಲ್ಲಿ ಕಮ್ಯೂನಿಟಿ ಕಿಚನ್ ಸ್ಥಾಪಿಸಲಾಗಿದೆ. ಇಲ್ಲಿನ ಅಡಿಗೆ ಮನೆಗಳಲ್ಲಿ ಪ್ರತಿ ಹೊತ್ತಿಗೆ ತಲಾ 2,000 ಜನರಿಗೆ ಆಹಾರ ಸಿದ್ದಪಡಿಸಿ ಹಂಚಲಾಗುತ್ತಿದೆ.

Mercy Mission ಸ್ವಯಂ ಸೇವಾ ಸಂಘಟನೆಯಲ್ಲಿ ದೊಡ್ಡ ಸಂಖ್ಯೆಯ ಸ್ವಯಂ ಸೇವಕರಿದ್ದಾರೆ. ಈ ಸ್ವಯಂ ಸೇವಕರ ಪೈಕಿ ಪ್ರತಿಯೊಬ್ಬರೂ ಪ್ರತಿದಿನ ಇಂತಿಷ್ಟು ಜನರಿಗೆ ಆಹಾರ ತಲುಪಿಸಬೇಕೆಂಬ ಗುರಿ ನೀಡಲಾಗುತ್ತಿದೆ. ಆದಷ್ಟು ಸ್ಲಂ ಭಾಗಕ್ಕೆ ತಮ್ಮದೇ ವಾಹನಗಳಲ್ಲಿ ತೆರಳುತ್ತಿರುವ ಈ ಕಾರ್ಯಕರ್ತರು ಬಡ ಜನರಿಗೆ ಆಹಾರ ಪೂರೈಸುವ ಕೆಲಸಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಂತಹ ಮಹಾನಗರದಲ್ಲಿ ಮೂರು ಹೊತ್ತು ತಲಾ 2000 ಸಾವಿರ ಜನರ ಹೊಟ್ಟೆ ತುಂಬಿಸುವುದು ಎಂದರೆ ಸುಮ್ಮನೆ ಮಾತಲ್ಲ.

ಇದಲ್ಲದೆ, ಕೆಲವು ಫಾರ್ಮಸಿಗಳಿಂದ ರಿಯಾಯಿತಿ ದರದಲ್ಲಿ ಔಷಧ ಸಾಮಾಗ್ರಿಗಳನ್ನು ಕೊಂಡು ಅದನ್ನು ಬಡವರಿಗೆ ಉಚಿತವಾಗಿ ನೀಡುವ ಕೆಲಸವನ್ನೂ ಈ Mercy Mission ಮಾಡುತ್ತಿದೆ. ಶುಗರ್ ಬಿಪಿಯಂತಹ ಎಲ್ಲಾ ತರದ ಖಾಯಿಲೆ ಹೊಂದಿರುವ ಬಡವರಿಗೂ ಈ ಸೌಲಭ್ಯವನ್ನು ಮರ್ಸಿ ಮಿಷಿನ್ ನೀಡುತ್ತಿದೆ.

ಈ ಕುರಿತು ನಾನುಗೌರಿ.ಕಾಂ Mercy Mission ಸಂಸ್ಥೆ ಪದಾಧಿಕಾರಿಗಳಲ್ಲೊಬ್ಬರಾದ ತೌಸಿಫ್‌ರವರನ್ನು ಮಾತನಾಡಿಸಿತು. ಅವರು “ಈ ಸಂಸ್ಥೆ ಹಲವಾರು ವರ್ಷಗಳಿಂದ ಯಾವುದೇ ಪ್ರಚಾರ ಇಲ್ಲದೆ ಸಮಾಜಮುಖಿ ಕೆಲಸದಲ್ಲಿ ತೊಡಗಿದೆ. ಲಾಕ್‌ಡೌನ್ ಘೋಷಿಸಿದ ನಂತರದ ಕಳೆದ ಒಂದು ವಾರದ ಅವಧಿಯಲ್ಲಿ ಸಾವಿರಾರು ಜನರ ಹಸಿವನ್ನು ನೀಗಿಸಿದೆ. ಆದರೆ, ಸಹಾಯ ಹಸ್ತ ನೀಡುವ ಸಂದರ್ಭದಲ್ಲಿ ನಾವು ಎಲ್ಲಿಯೂ ಸಹ ಹಿಂದೂ-ಮುಸ್ಲಿಂ ಎಂದು ಬೇಧ ಮಾಡುವ ಕೆಲಸಕ್ಕೆ ಮುಂದಾಗಿಲ್ಲ. ಇದು ಬೇಧ ಮಾಡುವ ಸಮಯವಲ್ಲ. ಇಡೀ ಭಾರತ ಒಟ್ಟಾಗಿ ನಿಲ್ಲಬೇಕಾದ ಸಮಯ” ಎನ್ನುತ್ತಾರೆ ಅವರು.

ಒಟ್ಟಾರೆ ಲಾಕ್‌ಡೌನ್‌ನಿಂದಾಗಿ ಮೇಲ್ ಮತ್ತು ಮಧ್ಯಮ ವರ್ಗಕ್ಕಿಂತ ಅಧಿಕ ಪೆಟ್ಟು ತಿನ್ನುತ್ತಿರುವುದು ಸಮಾಜದ ಕೆಳ ಮತ್ತು ಕೂಲಿ ಕಾರ್ಮಿಕ ವರ್ಗ. ಇಂತಹ ಜನರಿಗೆ ದಿನನಿತ್ಯ ಆಹಾರ ಪೂರೈಸುತ್ತಿರುವ Mercy Mission ಕಾರ್ಯ ನಿಜಕ್ಕೂ ಶ್ಲಾಘನೀಯ.


ಇದನ್ನೂ ಓದಿ: ಅಂದು ನೋಟುರದ್ದು, ಇಂದು ಮಹಾವಲಸೆ – ಬಡಜನತೆಯ ನಡು ಮುರಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...