Homeಮುಖಪುಟಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್!

ಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್!

- Advertisement -
- Advertisement -

ಭಾರತ ನಿಜಕ್ಕೂ ಕೊರೋನಾಗೆ ಬೆಚ್ಚಿ ಬಿದ್ದಿದೆಯೋ ಇಲ್ಲವೋ? ಆದರೆ, ಬೆಂಗಳೂರಿನಂತಹ ಮಹಾ ನಗರಗಳಲ್ಲಿ ವಾಸಿಸುವ ಸಮಾಜದ ತಳವರ್ಗದ ಜನ ಒಪ್ಪೊತ್ತಿನ ಊಟಕ್ಕೂ ಪರದಾಡುವಂತೆ ಮಾಡಿರುವ ಲಾಕ್‌ಡೌನ್‌ಗೆ  ಬೆಚ್ಚಿದ್ದಾರೆ.

ಭಾರತದಂತಹ ದೇಶದಲ್ಲಿ ಲಾಕ್‌ಡೌನ್ ಘೋಷಿಸುವುದು ಸುಲಭ. ಆದರೆ, ದಿನನಿತ್ಯದ ಆಹಾರಕ್ಕೆ ಅದೇ ದಿನ ದುಡಿಯುವ ಅನಿವಾರ್ಯತೆಗೆ ಸಿಲುಕಿ ಬದುಕುತ್ತಿರುವ ಜನರಿಗೆ ಸತತ 21 ದಿನಗಳ ಕಾಲ ಎರಡು ಹೊತ್ತಿನ ಊಟ ಹಾಗೂ ಆರೋಗ್ಯ ಸಲಕರಣೆಗಳನ್ನು ಒದಗಿಸುವುದು ಅಷ್ಟು ಸುಲಭದ ಕೆಲಸವಲ್ಲ.

ಬೆಂಗಳೂರಿನಲ್ಲೇ ಸುಮಾರು ಸಾವಿರದಷ್ಟು ಬಡಜನರ, ಶ್ರಮಿಕರ ಏರಿಯಾಗಳಿವೆ. ಇಲ್ಲಿನ ಬಡ ಜನರಿಗೆ ಊಟ ಒದಗಿಸುವುದು ಅವರ ಕಷ್ಟಕ್ಕೆ ಸ್ಪಂದಿಸುವುದು ಕೇವಲ ಸರ್ಕಾರದಿಂದ ಮಾತ್ರ ಆಗುವ ಕೆಲಸವಲ್ಲ. ಇಂತಹ ಕೆಲಸಕ್ಕೆಂದೆ ತನ್ನನ್ನು ಮುಡಿಪಾಗಿಟ್ಟುಕೊಂಡು ಇಂತಹ ಸಂದಿಗ್ಧ ಸಂದರ್ಭದಲ್ಲಿ ಸ್ಲಂ ಭಾಗದ ಬಡ ವರ್ಗದ ಜನರ ಹೊಟ್ಟೆ ತುಂಬಿಸುತ್ತಿರುವ ಎನ್‌ಜಿಓ ಸಂಸ್ಥೆಯೇ Mercy Mission.

ಪ್ರತಿನಿತ್ಯ ಸಾವಿರಾರು ಬಡವರ ಹೊಟ್ಟೆ ತುಂಬಿಸುತ್ತಿದೆ ಈ Mercy Mission!

Mercy Mission ಎಂಬುದು ಕೇವಲ ಒಂದು ಸ್ವಯಂ ಸೇವಾ ಸಂಘವಲ್ಲ. ಬದಲಿಗೆ ಜನಪರ ಕೆಲಸದಲ್ಲಿ ತೊಡಗಿರುವ ಸುಮಾರು 25ಕ್ಕೂ ಹೆಚ್ಚು ಜನಪರ ಸಂಘಟನೆಗಳ ಒಂದು ಒಕ್ಕೂಟ. ಭಾರತದಲ್ಲಿ ಕಳೆದ ಒಂದು ವಾರದಿಂದ ಲಾಕ್‌ಡೌನ್ ಘೋಷಿಸಲಾಗಿದೆ. ಜನರ ಒಪ್ಪೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಆದರೆ, ಇಂತಹ ಸಂದಿಗ್ಧ ಕಾಲದಲ್ಲಿ ಮರ್ಸಿ ಮೆಷಿನ್ ನಡೆಸುತ್ತಿರುವ ಕಾರ್ಯ ನಿಜಕ್ಕೂ ಶ್ಲಾಘನೀಯ.

ಲಾಕ್‌ಡೌನ್ ‌ನಿದಾಗಿ ಹಸಿದಿರುವವರಿಗೆ ಆಹಾರ ನೀಡಲೆಂದೆ Mercy Mission ಬೆಂಗಳೂರಿನಲ್ಲಿ ಎರಡು ಕಡೆ “ಕಮ್ಯೂನಿಟಿ ಕಿಚನ್” ಹೊಂದಿದೆ. ಉತ್ತರ ಬೆಂಗಳೂರಿಗೆ ಡಿಜೆ ಹಳ್ಳಿ ಹಾಗೂ ದಕ್ಷಿಣ ಬೆಂಗಳೂರಿಗೆ ಈಜಿಪುರದಲ್ಲಿ ಕಮ್ಯೂನಿಟಿ ಕಿಚನ್ ಸ್ಥಾಪಿಸಲಾಗಿದೆ. ಇಲ್ಲಿನ ಅಡಿಗೆ ಮನೆಗಳಲ್ಲಿ ಪ್ರತಿ ಹೊತ್ತಿಗೆ ತಲಾ 2,000 ಜನರಿಗೆ ಆಹಾರ ಸಿದ್ದಪಡಿಸಿ ಹಂಚಲಾಗುತ್ತಿದೆ.

Mercy Mission ಸ್ವಯಂ ಸೇವಾ ಸಂಘಟನೆಯಲ್ಲಿ ದೊಡ್ಡ ಸಂಖ್ಯೆಯ ಸ್ವಯಂ ಸೇವಕರಿದ್ದಾರೆ. ಈ ಸ್ವಯಂ ಸೇವಕರ ಪೈಕಿ ಪ್ರತಿಯೊಬ್ಬರೂ ಪ್ರತಿದಿನ ಇಂತಿಷ್ಟು ಜನರಿಗೆ ಆಹಾರ ತಲುಪಿಸಬೇಕೆಂಬ ಗುರಿ ನೀಡಲಾಗುತ್ತಿದೆ. ಆದಷ್ಟು ಸ್ಲಂ ಭಾಗಕ್ಕೆ ತಮ್ಮದೇ ವಾಹನಗಳಲ್ಲಿ ತೆರಳುತ್ತಿರುವ ಈ ಕಾರ್ಯಕರ್ತರು ಬಡ ಜನರಿಗೆ ಆಹಾರ ಪೂರೈಸುವ ಕೆಲಸಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಂತಹ ಮಹಾನಗರದಲ್ಲಿ ಮೂರು ಹೊತ್ತು ತಲಾ 2000 ಸಾವಿರ ಜನರ ಹೊಟ್ಟೆ ತುಂಬಿಸುವುದು ಎಂದರೆ ಸುಮ್ಮನೆ ಮಾತಲ್ಲ.

ಇದಲ್ಲದೆ, ಕೆಲವು ಫಾರ್ಮಸಿಗಳಿಂದ ರಿಯಾಯಿತಿ ದರದಲ್ಲಿ ಔಷಧ ಸಾಮಾಗ್ರಿಗಳನ್ನು ಕೊಂಡು ಅದನ್ನು ಬಡವರಿಗೆ ಉಚಿತವಾಗಿ ನೀಡುವ ಕೆಲಸವನ್ನೂ ಈ Mercy Mission ಮಾಡುತ್ತಿದೆ. ಶುಗರ್ ಬಿಪಿಯಂತಹ ಎಲ್ಲಾ ತರದ ಖಾಯಿಲೆ ಹೊಂದಿರುವ ಬಡವರಿಗೂ ಈ ಸೌಲಭ್ಯವನ್ನು ಮರ್ಸಿ ಮಿಷಿನ್ ನೀಡುತ್ತಿದೆ.

ಈ ಕುರಿತು ನಾನುಗೌರಿ.ಕಾಂ Mercy Mission ಸಂಸ್ಥೆ ಪದಾಧಿಕಾರಿಗಳಲ್ಲೊಬ್ಬರಾದ ತೌಸಿಫ್‌ರವರನ್ನು ಮಾತನಾಡಿಸಿತು. ಅವರು “ಈ ಸಂಸ್ಥೆ ಹಲವಾರು ವರ್ಷಗಳಿಂದ ಯಾವುದೇ ಪ್ರಚಾರ ಇಲ್ಲದೆ ಸಮಾಜಮುಖಿ ಕೆಲಸದಲ್ಲಿ ತೊಡಗಿದೆ. ಲಾಕ್‌ಡೌನ್ ಘೋಷಿಸಿದ ನಂತರದ ಕಳೆದ ಒಂದು ವಾರದ ಅವಧಿಯಲ್ಲಿ ಸಾವಿರಾರು ಜನರ ಹಸಿವನ್ನು ನೀಗಿಸಿದೆ. ಆದರೆ, ಸಹಾಯ ಹಸ್ತ ನೀಡುವ ಸಂದರ್ಭದಲ್ಲಿ ನಾವು ಎಲ್ಲಿಯೂ ಸಹ ಹಿಂದೂ-ಮುಸ್ಲಿಂ ಎಂದು ಬೇಧ ಮಾಡುವ ಕೆಲಸಕ್ಕೆ ಮುಂದಾಗಿಲ್ಲ. ಇದು ಬೇಧ ಮಾಡುವ ಸಮಯವಲ್ಲ. ಇಡೀ ಭಾರತ ಒಟ್ಟಾಗಿ ನಿಲ್ಲಬೇಕಾದ ಸಮಯ” ಎನ್ನುತ್ತಾರೆ ಅವರು.

ಒಟ್ಟಾರೆ ಲಾಕ್‌ಡೌನ್‌ನಿಂದಾಗಿ ಮೇಲ್ ಮತ್ತು ಮಧ್ಯಮ ವರ್ಗಕ್ಕಿಂತ ಅಧಿಕ ಪೆಟ್ಟು ತಿನ್ನುತ್ತಿರುವುದು ಸಮಾಜದ ಕೆಳ ಮತ್ತು ಕೂಲಿ ಕಾರ್ಮಿಕ ವರ್ಗ. ಇಂತಹ ಜನರಿಗೆ ದಿನನಿತ್ಯ ಆಹಾರ ಪೂರೈಸುತ್ತಿರುವ Mercy Mission ಕಾರ್ಯ ನಿಜಕ್ಕೂ ಶ್ಲಾಘನೀಯ.


ಇದನ್ನೂ ಓದಿ: ಅಂದು ನೋಟುರದ್ದು, ಇಂದು ಮಹಾವಲಸೆ – ಬಡಜನತೆಯ ನಡು ಮುರಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...