Homeಮುಖಪುಟಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್!

ಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್!

- Advertisement -
- Advertisement -

ಭಾರತ ನಿಜಕ್ಕೂ ಕೊರೋನಾಗೆ ಬೆಚ್ಚಿ ಬಿದ್ದಿದೆಯೋ ಇಲ್ಲವೋ? ಆದರೆ, ಬೆಂಗಳೂರಿನಂತಹ ಮಹಾ ನಗರಗಳಲ್ಲಿ ವಾಸಿಸುವ ಸಮಾಜದ ತಳವರ್ಗದ ಜನ ಒಪ್ಪೊತ್ತಿನ ಊಟಕ್ಕೂ ಪರದಾಡುವಂತೆ ಮಾಡಿರುವ ಲಾಕ್‌ಡೌನ್‌ಗೆ  ಬೆಚ್ಚಿದ್ದಾರೆ.

ಭಾರತದಂತಹ ದೇಶದಲ್ಲಿ ಲಾಕ್‌ಡೌನ್ ಘೋಷಿಸುವುದು ಸುಲಭ. ಆದರೆ, ದಿನನಿತ್ಯದ ಆಹಾರಕ್ಕೆ ಅದೇ ದಿನ ದುಡಿಯುವ ಅನಿವಾರ್ಯತೆಗೆ ಸಿಲುಕಿ ಬದುಕುತ್ತಿರುವ ಜನರಿಗೆ ಸತತ 21 ದಿನಗಳ ಕಾಲ ಎರಡು ಹೊತ್ತಿನ ಊಟ ಹಾಗೂ ಆರೋಗ್ಯ ಸಲಕರಣೆಗಳನ್ನು ಒದಗಿಸುವುದು ಅಷ್ಟು ಸುಲಭದ ಕೆಲಸವಲ್ಲ.

ಬೆಂಗಳೂರಿನಲ್ಲೇ ಸುಮಾರು ಸಾವಿರದಷ್ಟು ಬಡಜನರ, ಶ್ರಮಿಕರ ಏರಿಯಾಗಳಿವೆ. ಇಲ್ಲಿನ ಬಡ ಜನರಿಗೆ ಊಟ ಒದಗಿಸುವುದು ಅವರ ಕಷ್ಟಕ್ಕೆ ಸ್ಪಂದಿಸುವುದು ಕೇವಲ ಸರ್ಕಾರದಿಂದ ಮಾತ್ರ ಆಗುವ ಕೆಲಸವಲ್ಲ. ಇಂತಹ ಕೆಲಸಕ್ಕೆಂದೆ ತನ್ನನ್ನು ಮುಡಿಪಾಗಿಟ್ಟುಕೊಂಡು ಇಂತಹ ಸಂದಿಗ್ಧ ಸಂದರ್ಭದಲ್ಲಿ ಸ್ಲಂ ಭಾಗದ ಬಡ ವರ್ಗದ ಜನರ ಹೊಟ್ಟೆ ತುಂಬಿಸುತ್ತಿರುವ ಎನ್‌ಜಿಓ ಸಂಸ್ಥೆಯೇ Mercy Mission.

ಪ್ರತಿನಿತ್ಯ ಸಾವಿರಾರು ಬಡವರ ಹೊಟ್ಟೆ ತುಂಬಿಸುತ್ತಿದೆ ಈ Mercy Mission!

Mercy Mission ಎಂಬುದು ಕೇವಲ ಒಂದು ಸ್ವಯಂ ಸೇವಾ ಸಂಘವಲ್ಲ. ಬದಲಿಗೆ ಜನಪರ ಕೆಲಸದಲ್ಲಿ ತೊಡಗಿರುವ ಸುಮಾರು 25ಕ್ಕೂ ಹೆಚ್ಚು ಜನಪರ ಸಂಘಟನೆಗಳ ಒಂದು ಒಕ್ಕೂಟ. ಭಾರತದಲ್ಲಿ ಕಳೆದ ಒಂದು ವಾರದಿಂದ ಲಾಕ್‌ಡೌನ್ ಘೋಷಿಸಲಾಗಿದೆ. ಜನರ ಒಪ್ಪೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಆದರೆ, ಇಂತಹ ಸಂದಿಗ್ಧ ಕಾಲದಲ್ಲಿ ಮರ್ಸಿ ಮೆಷಿನ್ ನಡೆಸುತ್ತಿರುವ ಕಾರ್ಯ ನಿಜಕ್ಕೂ ಶ್ಲಾಘನೀಯ.

ಲಾಕ್‌ಡೌನ್ ‌ನಿದಾಗಿ ಹಸಿದಿರುವವರಿಗೆ ಆಹಾರ ನೀಡಲೆಂದೆ Mercy Mission ಬೆಂಗಳೂರಿನಲ್ಲಿ ಎರಡು ಕಡೆ “ಕಮ್ಯೂನಿಟಿ ಕಿಚನ್” ಹೊಂದಿದೆ. ಉತ್ತರ ಬೆಂಗಳೂರಿಗೆ ಡಿಜೆ ಹಳ್ಳಿ ಹಾಗೂ ದಕ್ಷಿಣ ಬೆಂಗಳೂರಿಗೆ ಈಜಿಪುರದಲ್ಲಿ ಕಮ್ಯೂನಿಟಿ ಕಿಚನ್ ಸ್ಥಾಪಿಸಲಾಗಿದೆ. ಇಲ್ಲಿನ ಅಡಿಗೆ ಮನೆಗಳಲ್ಲಿ ಪ್ರತಿ ಹೊತ್ತಿಗೆ ತಲಾ 2,000 ಜನರಿಗೆ ಆಹಾರ ಸಿದ್ದಪಡಿಸಿ ಹಂಚಲಾಗುತ್ತಿದೆ.

Mercy Mission ಸ್ವಯಂ ಸೇವಾ ಸಂಘಟನೆಯಲ್ಲಿ ದೊಡ್ಡ ಸಂಖ್ಯೆಯ ಸ್ವಯಂ ಸೇವಕರಿದ್ದಾರೆ. ಈ ಸ್ವಯಂ ಸೇವಕರ ಪೈಕಿ ಪ್ರತಿಯೊಬ್ಬರೂ ಪ್ರತಿದಿನ ಇಂತಿಷ್ಟು ಜನರಿಗೆ ಆಹಾರ ತಲುಪಿಸಬೇಕೆಂಬ ಗುರಿ ನೀಡಲಾಗುತ್ತಿದೆ. ಆದಷ್ಟು ಸ್ಲಂ ಭಾಗಕ್ಕೆ ತಮ್ಮದೇ ವಾಹನಗಳಲ್ಲಿ ತೆರಳುತ್ತಿರುವ ಈ ಕಾರ್ಯಕರ್ತರು ಬಡ ಜನರಿಗೆ ಆಹಾರ ಪೂರೈಸುವ ಕೆಲಸಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಂತಹ ಮಹಾನಗರದಲ್ಲಿ ಮೂರು ಹೊತ್ತು ತಲಾ 2000 ಸಾವಿರ ಜನರ ಹೊಟ್ಟೆ ತುಂಬಿಸುವುದು ಎಂದರೆ ಸುಮ್ಮನೆ ಮಾತಲ್ಲ.

ಇದಲ್ಲದೆ, ಕೆಲವು ಫಾರ್ಮಸಿಗಳಿಂದ ರಿಯಾಯಿತಿ ದರದಲ್ಲಿ ಔಷಧ ಸಾಮಾಗ್ರಿಗಳನ್ನು ಕೊಂಡು ಅದನ್ನು ಬಡವರಿಗೆ ಉಚಿತವಾಗಿ ನೀಡುವ ಕೆಲಸವನ್ನೂ ಈ Mercy Mission ಮಾಡುತ್ತಿದೆ. ಶುಗರ್ ಬಿಪಿಯಂತಹ ಎಲ್ಲಾ ತರದ ಖಾಯಿಲೆ ಹೊಂದಿರುವ ಬಡವರಿಗೂ ಈ ಸೌಲಭ್ಯವನ್ನು ಮರ್ಸಿ ಮಿಷಿನ್ ನೀಡುತ್ತಿದೆ.

ಈ ಕುರಿತು ನಾನುಗೌರಿ.ಕಾಂ Mercy Mission ಸಂಸ್ಥೆ ಪದಾಧಿಕಾರಿಗಳಲ್ಲೊಬ್ಬರಾದ ತೌಸಿಫ್‌ರವರನ್ನು ಮಾತನಾಡಿಸಿತು. ಅವರು “ಈ ಸಂಸ್ಥೆ ಹಲವಾರು ವರ್ಷಗಳಿಂದ ಯಾವುದೇ ಪ್ರಚಾರ ಇಲ್ಲದೆ ಸಮಾಜಮುಖಿ ಕೆಲಸದಲ್ಲಿ ತೊಡಗಿದೆ. ಲಾಕ್‌ಡೌನ್ ಘೋಷಿಸಿದ ನಂತರದ ಕಳೆದ ಒಂದು ವಾರದ ಅವಧಿಯಲ್ಲಿ ಸಾವಿರಾರು ಜನರ ಹಸಿವನ್ನು ನೀಗಿಸಿದೆ. ಆದರೆ, ಸಹಾಯ ಹಸ್ತ ನೀಡುವ ಸಂದರ್ಭದಲ್ಲಿ ನಾವು ಎಲ್ಲಿಯೂ ಸಹ ಹಿಂದೂ-ಮುಸ್ಲಿಂ ಎಂದು ಬೇಧ ಮಾಡುವ ಕೆಲಸಕ್ಕೆ ಮುಂದಾಗಿಲ್ಲ. ಇದು ಬೇಧ ಮಾಡುವ ಸಮಯವಲ್ಲ. ಇಡೀ ಭಾರತ ಒಟ್ಟಾಗಿ ನಿಲ್ಲಬೇಕಾದ ಸಮಯ” ಎನ್ನುತ್ತಾರೆ ಅವರು.

ಒಟ್ಟಾರೆ ಲಾಕ್‌ಡೌನ್‌ನಿಂದಾಗಿ ಮೇಲ್ ಮತ್ತು ಮಧ್ಯಮ ವರ್ಗಕ್ಕಿಂತ ಅಧಿಕ ಪೆಟ್ಟು ತಿನ್ನುತ್ತಿರುವುದು ಸಮಾಜದ ಕೆಳ ಮತ್ತು ಕೂಲಿ ಕಾರ್ಮಿಕ ವರ್ಗ. ಇಂತಹ ಜನರಿಗೆ ದಿನನಿತ್ಯ ಆಹಾರ ಪೂರೈಸುತ್ತಿರುವ Mercy Mission ಕಾರ್ಯ ನಿಜಕ್ಕೂ ಶ್ಲಾಘನೀಯ.


ಇದನ್ನೂ ಓದಿ: ಅಂದು ನೋಟುರದ್ದು, ಇಂದು ಮಹಾವಲಸೆ – ಬಡಜನತೆಯ ನಡು ಮುರಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...