Homeಮುಖಪುಟಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್!

ಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್!

- Advertisement -
- Advertisement -

ಭಾರತ ನಿಜಕ್ಕೂ ಕೊರೋನಾಗೆ ಬೆಚ್ಚಿ ಬಿದ್ದಿದೆಯೋ ಇಲ್ಲವೋ? ಆದರೆ, ಬೆಂಗಳೂರಿನಂತಹ ಮಹಾ ನಗರಗಳಲ್ಲಿ ವಾಸಿಸುವ ಸಮಾಜದ ತಳವರ್ಗದ ಜನ ಒಪ್ಪೊತ್ತಿನ ಊಟಕ್ಕೂ ಪರದಾಡುವಂತೆ ಮಾಡಿರುವ ಲಾಕ್‌ಡೌನ್‌ಗೆ  ಬೆಚ್ಚಿದ್ದಾರೆ.

ಭಾರತದಂತಹ ದೇಶದಲ್ಲಿ ಲಾಕ್‌ಡೌನ್ ಘೋಷಿಸುವುದು ಸುಲಭ. ಆದರೆ, ದಿನನಿತ್ಯದ ಆಹಾರಕ್ಕೆ ಅದೇ ದಿನ ದುಡಿಯುವ ಅನಿವಾರ್ಯತೆಗೆ ಸಿಲುಕಿ ಬದುಕುತ್ತಿರುವ ಜನರಿಗೆ ಸತತ 21 ದಿನಗಳ ಕಾಲ ಎರಡು ಹೊತ್ತಿನ ಊಟ ಹಾಗೂ ಆರೋಗ್ಯ ಸಲಕರಣೆಗಳನ್ನು ಒದಗಿಸುವುದು ಅಷ್ಟು ಸುಲಭದ ಕೆಲಸವಲ್ಲ.

ಬೆಂಗಳೂರಿನಲ್ಲೇ ಸುಮಾರು ಸಾವಿರದಷ್ಟು ಬಡಜನರ, ಶ್ರಮಿಕರ ಏರಿಯಾಗಳಿವೆ. ಇಲ್ಲಿನ ಬಡ ಜನರಿಗೆ ಊಟ ಒದಗಿಸುವುದು ಅವರ ಕಷ್ಟಕ್ಕೆ ಸ್ಪಂದಿಸುವುದು ಕೇವಲ ಸರ್ಕಾರದಿಂದ ಮಾತ್ರ ಆಗುವ ಕೆಲಸವಲ್ಲ. ಇಂತಹ ಕೆಲಸಕ್ಕೆಂದೆ ತನ್ನನ್ನು ಮುಡಿಪಾಗಿಟ್ಟುಕೊಂಡು ಇಂತಹ ಸಂದಿಗ್ಧ ಸಂದರ್ಭದಲ್ಲಿ ಸ್ಲಂ ಭಾಗದ ಬಡ ವರ್ಗದ ಜನರ ಹೊಟ್ಟೆ ತುಂಬಿಸುತ್ತಿರುವ ಎನ್‌ಜಿಓ ಸಂಸ್ಥೆಯೇ Mercy Mission.

ಪ್ರತಿನಿತ್ಯ ಸಾವಿರಾರು ಬಡವರ ಹೊಟ್ಟೆ ತುಂಬಿಸುತ್ತಿದೆ ಈ Mercy Mission!

Mercy Mission ಎಂಬುದು ಕೇವಲ ಒಂದು ಸ್ವಯಂ ಸೇವಾ ಸಂಘವಲ್ಲ. ಬದಲಿಗೆ ಜನಪರ ಕೆಲಸದಲ್ಲಿ ತೊಡಗಿರುವ ಸುಮಾರು 25ಕ್ಕೂ ಹೆಚ್ಚು ಜನಪರ ಸಂಘಟನೆಗಳ ಒಂದು ಒಕ್ಕೂಟ. ಭಾರತದಲ್ಲಿ ಕಳೆದ ಒಂದು ವಾರದಿಂದ ಲಾಕ್‌ಡೌನ್ ಘೋಷಿಸಲಾಗಿದೆ. ಜನರ ಒಪ್ಪೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಆದರೆ, ಇಂತಹ ಸಂದಿಗ್ಧ ಕಾಲದಲ್ಲಿ ಮರ್ಸಿ ಮೆಷಿನ್ ನಡೆಸುತ್ತಿರುವ ಕಾರ್ಯ ನಿಜಕ್ಕೂ ಶ್ಲಾಘನೀಯ.

ಲಾಕ್‌ಡೌನ್ ‌ನಿದಾಗಿ ಹಸಿದಿರುವವರಿಗೆ ಆಹಾರ ನೀಡಲೆಂದೆ Mercy Mission ಬೆಂಗಳೂರಿನಲ್ಲಿ ಎರಡು ಕಡೆ “ಕಮ್ಯೂನಿಟಿ ಕಿಚನ್” ಹೊಂದಿದೆ. ಉತ್ತರ ಬೆಂಗಳೂರಿಗೆ ಡಿಜೆ ಹಳ್ಳಿ ಹಾಗೂ ದಕ್ಷಿಣ ಬೆಂಗಳೂರಿಗೆ ಈಜಿಪುರದಲ್ಲಿ ಕಮ್ಯೂನಿಟಿ ಕಿಚನ್ ಸ್ಥಾಪಿಸಲಾಗಿದೆ. ಇಲ್ಲಿನ ಅಡಿಗೆ ಮನೆಗಳಲ್ಲಿ ಪ್ರತಿ ಹೊತ್ತಿಗೆ ತಲಾ 2,000 ಜನರಿಗೆ ಆಹಾರ ಸಿದ್ದಪಡಿಸಿ ಹಂಚಲಾಗುತ್ತಿದೆ.

Mercy Mission ಸ್ವಯಂ ಸೇವಾ ಸಂಘಟನೆಯಲ್ಲಿ ದೊಡ್ಡ ಸಂಖ್ಯೆಯ ಸ್ವಯಂ ಸೇವಕರಿದ್ದಾರೆ. ಈ ಸ್ವಯಂ ಸೇವಕರ ಪೈಕಿ ಪ್ರತಿಯೊಬ್ಬರೂ ಪ್ರತಿದಿನ ಇಂತಿಷ್ಟು ಜನರಿಗೆ ಆಹಾರ ತಲುಪಿಸಬೇಕೆಂಬ ಗುರಿ ನೀಡಲಾಗುತ್ತಿದೆ. ಆದಷ್ಟು ಸ್ಲಂ ಭಾಗಕ್ಕೆ ತಮ್ಮದೇ ವಾಹನಗಳಲ್ಲಿ ತೆರಳುತ್ತಿರುವ ಈ ಕಾರ್ಯಕರ್ತರು ಬಡ ಜನರಿಗೆ ಆಹಾರ ಪೂರೈಸುವ ಕೆಲಸಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಂತಹ ಮಹಾನಗರದಲ್ಲಿ ಮೂರು ಹೊತ್ತು ತಲಾ 2000 ಸಾವಿರ ಜನರ ಹೊಟ್ಟೆ ತುಂಬಿಸುವುದು ಎಂದರೆ ಸುಮ್ಮನೆ ಮಾತಲ್ಲ.

ಇದಲ್ಲದೆ, ಕೆಲವು ಫಾರ್ಮಸಿಗಳಿಂದ ರಿಯಾಯಿತಿ ದರದಲ್ಲಿ ಔಷಧ ಸಾಮಾಗ್ರಿಗಳನ್ನು ಕೊಂಡು ಅದನ್ನು ಬಡವರಿಗೆ ಉಚಿತವಾಗಿ ನೀಡುವ ಕೆಲಸವನ್ನೂ ಈ Mercy Mission ಮಾಡುತ್ತಿದೆ. ಶುಗರ್ ಬಿಪಿಯಂತಹ ಎಲ್ಲಾ ತರದ ಖಾಯಿಲೆ ಹೊಂದಿರುವ ಬಡವರಿಗೂ ಈ ಸೌಲಭ್ಯವನ್ನು ಮರ್ಸಿ ಮಿಷಿನ್ ನೀಡುತ್ತಿದೆ.

ಈ ಕುರಿತು ನಾನುಗೌರಿ.ಕಾಂ Mercy Mission ಸಂಸ್ಥೆ ಪದಾಧಿಕಾರಿಗಳಲ್ಲೊಬ್ಬರಾದ ತೌಸಿಫ್‌ರವರನ್ನು ಮಾತನಾಡಿಸಿತು. ಅವರು “ಈ ಸಂಸ್ಥೆ ಹಲವಾರು ವರ್ಷಗಳಿಂದ ಯಾವುದೇ ಪ್ರಚಾರ ಇಲ್ಲದೆ ಸಮಾಜಮುಖಿ ಕೆಲಸದಲ್ಲಿ ತೊಡಗಿದೆ. ಲಾಕ್‌ಡೌನ್ ಘೋಷಿಸಿದ ನಂತರದ ಕಳೆದ ಒಂದು ವಾರದ ಅವಧಿಯಲ್ಲಿ ಸಾವಿರಾರು ಜನರ ಹಸಿವನ್ನು ನೀಗಿಸಿದೆ. ಆದರೆ, ಸಹಾಯ ಹಸ್ತ ನೀಡುವ ಸಂದರ್ಭದಲ್ಲಿ ನಾವು ಎಲ್ಲಿಯೂ ಸಹ ಹಿಂದೂ-ಮುಸ್ಲಿಂ ಎಂದು ಬೇಧ ಮಾಡುವ ಕೆಲಸಕ್ಕೆ ಮುಂದಾಗಿಲ್ಲ. ಇದು ಬೇಧ ಮಾಡುವ ಸಮಯವಲ್ಲ. ಇಡೀ ಭಾರತ ಒಟ್ಟಾಗಿ ನಿಲ್ಲಬೇಕಾದ ಸಮಯ” ಎನ್ನುತ್ತಾರೆ ಅವರು.

ಒಟ್ಟಾರೆ ಲಾಕ್‌ಡೌನ್‌ನಿಂದಾಗಿ ಮೇಲ್ ಮತ್ತು ಮಧ್ಯಮ ವರ್ಗಕ್ಕಿಂತ ಅಧಿಕ ಪೆಟ್ಟು ತಿನ್ನುತ್ತಿರುವುದು ಸಮಾಜದ ಕೆಳ ಮತ್ತು ಕೂಲಿ ಕಾರ್ಮಿಕ ವರ್ಗ. ಇಂತಹ ಜನರಿಗೆ ದಿನನಿತ್ಯ ಆಹಾರ ಪೂರೈಸುತ್ತಿರುವ Mercy Mission ಕಾರ್ಯ ನಿಜಕ್ಕೂ ಶ್ಲಾಘನೀಯ.


ಇದನ್ನೂ ಓದಿ: ಅಂದು ನೋಟುರದ್ದು, ಇಂದು ಮಹಾವಲಸೆ – ಬಡಜನತೆಯ ನಡು ಮುರಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...