Homeಮುಖಪುಟಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್!

ಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್!

- Advertisement -
- Advertisement -

ಭಾರತ ನಿಜಕ್ಕೂ ಕೊರೋನಾಗೆ ಬೆಚ್ಚಿ ಬಿದ್ದಿದೆಯೋ ಇಲ್ಲವೋ? ಆದರೆ, ಬೆಂಗಳೂರಿನಂತಹ ಮಹಾ ನಗರಗಳಲ್ಲಿ ವಾಸಿಸುವ ಸಮಾಜದ ತಳವರ್ಗದ ಜನ ಒಪ್ಪೊತ್ತಿನ ಊಟಕ್ಕೂ ಪರದಾಡುವಂತೆ ಮಾಡಿರುವ ಲಾಕ್‌ಡೌನ್‌ಗೆ  ಬೆಚ್ಚಿದ್ದಾರೆ.

ಭಾರತದಂತಹ ದೇಶದಲ್ಲಿ ಲಾಕ್‌ಡೌನ್ ಘೋಷಿಸುವುದು ಸುಲಭ. ಆದರೆ, ದಿನನಿತ್ಯದ ಆಹಾರಕ್ಕೆ ಅದೇ ದಿನ ದುಡಿಯುವ ಅನಿವಾರ್ಯತೆಗೆ ಸಿಲುಕಿ ಬದುಕುತ್ತಿರುವ ಜನರಿಗೆ ಸತತ 21 ದಿನಗಳ ಕಾಲ ಎರಡು ಹೊತ್ತಿನ ಊಟ ಹಾಗೂ ಆರೋಗ್ಯ ಸಲಕರಣೆಗಳನ್ನು ಒದಗಿಸುವುದು ಅಷ್ಟು ಸುಲಭದ ಕೆಲಸವಲ್ಲ.

ಬೆಂಗಳೂರಿನಲ್ಲೇ ಸುಮಾರು ಸಾವಿರದಷ್ಟು ಬಡಜನರ, ಶ್ರಮಿಕರ ಏರಿಯಾಗಳಿವೆ. ಇಲ್ಲಿನ ಬಡ ಜನರಿಗೆ ಊಟ ಒದಗಿಸುವುದು ಅವರ ಕಷ್ಟಕ್ಕೆ ಸ್ಪಂದಿಸುವುದು ಕೇವಲ ಸರ್ಕಾರದಿಂದ ಮಾತ್ರ ಆಗುವ ಕೆಲಸವಲ್ಲ. ಇಂತಹ ಕೆಲಸಕ್ಕೆಂದೆ ತನ್ನನ್ನು ಮುಡಿಪಾಗಿಟ್ಟುಕೊಂಡು ಇಂತಹ ಸಂದಿಗ್ಧ ಸಂದರ್ಭದಲ್ಲಿ ಸ್ಲಂ ಭಾಗದ ಬಡ ವರ್ಗದ ಜನರ ಹೊಟ್ಟೆ ತುಂಬಿಸುತ್ತಿರುವ ಎನ್‌ಜಿಓ ಸಂಸ್ಥೆಯೇ Mercy Mission.

ಪ್ರತಿನಿತ್ಯ ಸಾವಿರಾರು ಬಡವರ ಹೊಟ್ಟೆ ತುಂಬಿಸುತ್ತಿದೆ ಈ Mercy Mission!

Mercy Mission ಎಂಬುದು ಕೇವಲ ಒಂದು ಸ್ವಯಂ ಸೇವಾ ಸಂಘವಲ್ಲ. ಬದಲಿಗೆ ಜನಪರ ಕೆಲಸದಲ್ಲಿ ತೊಡಗಿರುವ ಸುಮಾರು 25ಕ್ಕೂ ಹೆಚ್ಚು ಜನಪರ ಸಂಘಟನೆಗಳ ಒಂದು ಒಕ್ಕೂಟ. ಭಾರತದಲ್ಲಿ ಕಳೆದ ಒಂದು ವಾರದಿಂದ ಲಾಕ್‌ಡೌನ್ ಘೋಷಿಸಲಾಗಿದೆ. ಜನರ ಒಪ್ಪೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಆದರೆ, ಇಂತಹ ಸಂದಿಗ್ಧ ಕಾಲದಲ್ಲಿ ಮರ್ಸಿ ಮೆಷಿನ್ ನಡೆಸುತ್ತಿರುವ ಕಾರ್ಯ ನಿಜಕ್ಕೂ ಶ್ಲಾಘನೀಯ.

ಲಾಕ್‌ಡೌನ್ ‌ನಿದಾಗಿ ಹಸಿದಿರುವವರಿಗೆ ಆಹಾರ ನೀಡಲೆಂದೆ Mercy Mission ಬೆಂಗಳೂರಿನಲ್ಲಿ ಎರಡು ಕಡೆ “ಕಮ್ಯೂನಿಟಿ ಕಿಚನ್” ಹೊಂದಿದೆ. ಉತ್ತರ ಬೆಂಗಳೂರಿಗೆ ಡಿಜೆ ಹಳ್ಳಿ ಹಾಗೂ ದಕ್ಷಿಣ ಬೆಂಗಳೂರಿಗೆ ಈಜಿಪುರದಲ್ಲಿ ಕಮ್ಯೂನಿಟಿ ಕಿಚನ್ ಸ್ಥಾಪಿಸಲಾಗಿದೆ. ಇಲ್ಲಿನ ಅಡಿಗೆ ಮನೆಗಳಲ್ಲಿ ಪ್ರತಿ ಹೊತ್ತಿಗೆ ತಲಾ 2,000 ಜನರಿಗೆ ಆಹಾರ ಸಿದ್ದಪಡಿಸಿ ಹಂಚಲಾಗುತ್ತಿದೆ.

Mercy Mission ಸ್ವಯಂ ಸೇವಾ ಸಂಘಟನೆಯಲ್ಲಿ ದೊಡ್ಡ ಸಂಖ್ಯೆಯ ಸ್ವಯಂ ಸೇವಕರಿದ್ದಾರೆ. ಈ ಸ್ವಯಂ ಸೇವಕರ ಪೈಕಿ ಪ್ರತಿಯೊಬ್ಬರೂ ಪ್ರತಿದಿನ ಇಂತಿಷ್ಟು ಜನರಿಗೆ ಆಹಾರ ತಲುಪಿಸಬೇಕೆಂಬ ಗುರಿ ನೀಡಲಾಗುತ್ತಿದೆ. ಆದಷ್ಟು ಸ್ಲಂ ಭಾಗಕ್ಕೆ ತಮ್ಮದೇ ವಾಹನಗಳಲ್ಲಿ ತೆರಳುತ್ತಿರುವ ಈ ಕಾರ್ಯಕರ್ತರು ಬಡ ಜನರಿಗೆ ಆಹಾರ ಪೂರೈಸುವ ಕೆಲಸಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಂತಹ ಮಹಾನಗರದಲ್ಲಿ ಮೂರು ಹೊತ್ತು ತಲಾ 2000 ಸಾವಿರ ಜನರ ಹೊಟ್ಟೆ ತುಂಬಿಸುವುದು ಎಂದರೆ ಸುಮ್ಮನೆ ಮಾತಲ್ಲ.

ಇದಲ್ಲದೆ, ಕೆಲವು ಫಾರ್ಮಸಿಗಳಿಂದ ರಿಯಾಯಿತಿ ದರದಲ್ಲಿ ಔಷಧ ಸಾಮಾಗ್ರಿಗಳನ್ನು ಕೊಂಡು ಅದನ್ನು ಬಡವರಿಗೆ ಉಚಿತವಾಗಿ ನೀಡುವ ಕೆಲಸವನ್ನೂ ಈ Mercy Mission ಮಾಡುತ್ತಿದೆ. ಶುಗರ್ ಬಿಪಿಯಂತಹ ಎಲ್ಲಾ ತರದ ಖಾಯಿಲೆ ಹೊಂದಿರುವ ಬಡವರಿಗೂ ಈ ಸೌಲಭ್ಯವನ್ನು ಮರ್ಸಿ ಮಿಷಿನ್ ನೀಡುತ್ತಿದೆ.

ಈ ಕುರಿತು ನಾನುಗೌರಿ.ಕಾಂ Mercy Mission ಸಂಸ್ಥೆ ಪದಾಧಿಕಾರಿಗಳಲ್ಲೊಬ್ಬರಾದ ತೌಸಿಫ್‌ರವರನ್ನು ಮಾತನಾಡಿಸಿತು. ಅವರು “ಈ ಸಂಸ್ಥೆ ಹಲವಾರು ವರ್ಷಗಳಿಂದ ಯಾವುದೇ ಪ್ರಚಾರ ಇಲ್ಲದೆ ಸಮಾಜಮುಖಿ ಕೆಲಸದಲ್ಲಿ ತೊಡಗಿದೆ. ಲಾಕ್‌ಡೌನ್ ಘೋಷಿಸಿದ ನಂತರದ ಕಳೆದ ಒಂದು ವಾರದ ಅವಧಿಯಲ್ಲಿ ಸಾವಿರಾರು ಜನರ ಹಸಿವನ್ನು ನೀಗಿಸಿದೆ. ಆದರೆ, ಸಹಾಯ ಹಸ್ತ ನೀಡುವ ಸಂದರ್ಭದಲ್ಲಿ ನಾವು ಎಲ್ಲಿಯೂ ಸಹ ಹಿಂದೂ-ಮುಸ್ಲಿಂ ಎಂದು ಬೇಧ ಮಾಡುವ ಕೆಲಸಕ್ಕೆ ಮುಂದಾಗಿಲ್ಲ. ಇದು ಬೇಧ ಮಾಡುವ ಸಮಯವಲ್ಲ. ಇಡೀ ಭಾರತ ಒಟ್ಟಾಗಿ ನಿಲ್ಲಬೇಕಾದ ಸಮಯ” ಎನ್ನುತ್ತಾರೆ ಅವರು.

ಒಟ್ಟಾರೆ ಲಾಕ್‌ಡೌನ್‌ನಿಂದಾಗಿ ಮೇಲ್ ಮತ್ತು ಮಧ್ಯಮ ವರ್ಗಕ್ಕಿಂತ ಅಧಿಕ ಪೆಟ್ಟು ತಿನ್ನುತ್ತಿರುವುದು ಸಮಾಜದ ಕೆಳ ಮತ್ತು ಕೂಲಿ ಕಾರ್ಮಿಕ ವರ್ಗ. ಇಂತಹ ಜನರಿಗೆ ದಿನನಿತ್ಯ ಆಹಾರ ಪೂರೈಸುತ್ತಿರುವ Mercy Mission ಕಾರ್ಯ ನಿಜಕ್ಕೂ ಶ್ಲಾಘನೀಯ.


ಇದನ್ನೂ ಓದಿ: ಅಂದು ನೋಟುರದ್ದು, ಇಂದು ಮಹಾವಲಸೆ – ಬಡಜನತೆಯ ನಡು ಮುರಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...