Homeಮುಖಪುಟಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್!

ಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್!

- Advertisement -
- Advertisement -

ಭಾರತ ನಿಜಕ್ಕೂ ಕೊರೋನಾಗೆ ಬೆಚ್ಚಿ ಬಿದ್ದಿದೆಯೋ ಇಲ್ಲವೋ? ಆದರೆ, ಬೆಂಗಳೂರಿನಂತಹ ಮಹಾ ನಗರಗಳಲ್ಲಿ ವಾಸಿಸುವ ಸಮಾಜದ ತಳವರ್ಗದ ಜನ ಒಪ್ಪೊತ್ತಿನ ಊಟಕ್ಕೂ ಪರದಾಡುವಂತೆ ಮಾಡಿರುವ ಲಾಕ್‌ಡೌನ್‌ಗೆ  ಬೆಚ್ಚಿದ್ದಾರೆ.

ಭಾರತದಂತಹ ದೇಶದಲ್ಲಿ ಲಾಕ್‌ಡೌನ್ ಘೋಷಿಸುವುದು ಸುಲಭ. ಆದರೆ, ದಿನನಿತ್ಯದ ಆಹಾರಕ್ಕೆ ಅದೇ ದಿನ ದುಡಿಯುವ ಅನಿವಾರ್ಯತೆಗೆ ಸಿಲುಕಿ ಬದುಕುತ್ತಿರುವ ಜನರಿಗೆ ಸತತ 21 ದಿನಗಳ ಕಾಲ ಎರಡು ಹೊತ್ತಿನ ಊಟ ಹಾಗೂ ಆರೋಗ್ಯ ಸಲಕರಣೆಗಳನ್ನು ಒದಗಿಸುವುದು ಅಷ್ಟು ಸುಲಭದ ಕೆಲಸವಲ್ಲ.

ಬೆಂಗಳೂರಿನಲ್ಲೇ ಸುಮಾರು ಸಾವಿರದಷ್ಟು ಬಡಜನರ, ಶ್ರಮಿಕರ ಏರಿಯಾಗಳಿವೆ. ಇಲ್ಲಿನ ಬಡ ಜನರಿಗೆ ಊಟ ಒದಗಿಸುವುದು ಅವರ ಕಷ್ಟಕ್ಕೆ ಸ್ಪಂದಿಸುವುದು ಕೇವಲ ಸರ್ಕಾರದಿಂದ ಮಾತ್ರ ಆಗುವ ಕೆಲಸವಲ್ಲ. ಇಂತಹ ಕೆಲಸಕ್ಕೆಂದೆ ತನ್ನನ್ನು ಮುಡಿಪಾಗಿಟ್ಟುಕೊಂಡು ಇಂತಹ ಸಂದಿಗ್ಧ ಸಂದರ್ಭದಲ್ಲಿ ಸ್ಲಂ ಭಾಗದ ಬಡ ವರ್ಗದ ಜನರ ಹೊಟ್ಟೆ ತುಂಬಿಸುತ್ತಿರುವ ಎನ್‌ಜಿಓ ಸಂಸ್ಥೆಯೇ Mercy Mission.

ಪ್ರತಿನಿತ್ಯ ಸಾವಿರಾರು ಬಡವರ ಹೊಟ್ಟೆ ತುಂಬಿಸುತ್ತಿದೆ ಈ Mercy Mission!

Mercy Mission ಎಂಬುದು ಕೇವಲ ಒಂದು ಸ್ವಯಂ ಸೇವಾ ಸಂಘವಲ್ಲ. ಬದಲಿಗೆ ಜನಪರ ಕೆಲಸದಲ್ಲಿ ತೊಡಗಿರುವ ಸುಮಾರು 25ಕ್ಕೂ ಹೆಚ್ಚು ಜನಪರ ಸಂಘಟನೆಗಳ ಒಂದು ಒಕ್ಕೂಟ. ಭಾರತದಲ್ಲಿ ಕಳೆದ ಒಂದು ವಾರದಿಂದ ಲಾಕ್‌ಡೌನ್ ಘೋಷಿಸಲಾಗಿದೆ. ಜನರ ಒಪ್ಪೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಆದರೆ, ಇಂತಹ ಸಂದಿಗ್ಧ ಕಾಲದಲ್ಲಿ ಮರ್ಸಿ ಮೆಷಿನ್ ನಡೆಸುತ್ತಿರುವ ಕಾರ್ಯ ನಿಜಕ್ಕೂ ಶ್ಲಾಘನೀಯ.

ಲಾಕ್‌ಡೌನ್ ‌ನಿದಾಗಿ ಹಸಿದಿರುವವರಿಗೆ ಆಹಾರ ನೀಡಲೆಂದೆ Mercy Mission ಬೆಂಗಳೂರಿನಲ್ಲಿ ಎರಡು ಕಡೆ “ಕಮ್ಯೂನಿಟಿ ಕಿಚನ್” ಹೊಂದಿದೆ. ಉತ್ತರ ಬೆಂಗಳೂರಿಗೆ ಡಿಜೆ ಹಳ್ಳಿ ಹಾಗೂ ದಕ್ಷಿಣ ಬೆಂಗಳೂರಿಗೆ ಈಜಿಪುರದಲ್ಲಿ ಕಮ್ಯೂನಿಟಿ ಕಿಚನ್ ಸ್ಥಾಪಿಸಲಾಗಿದೆ. ಇಲ್ಲಿನ ಅಡಿಗೆ ಮನೆಗಳಲ್ಲಿ ಪ್ರತಿ ಹೊತ್ತಿಗೆ ತಲಾ 2,000 ಜನರಿಗೆ ಆಹಾರ ಸಿದ್ದಪಡಿಸಿ ಹಂಚಲಾಗುತ್ತಿದೆ.

Mercy Mission ಸ್ವಯಂ ಸೇವಾ ಸಂಘಟನೆಯಲ್ಲಿ ದೊಡ್ಡ ಸಂಖ್ಯೆಯ ಸ್ವಯಂ ಸೇವಕರಿದ್ದಾರೆ. ಈ ಸ್ವಯಂ ಸೇವಕರ ಪೈಕಿ ಪ್ರತಿಯೊಬ್ಬರೂ ಪ್ರತಿದಿನ ಇಂತಿಷ್ಟು ಜನರಿಗೆ ಆಹಾರ ತಲುಪಿಸಬೇಕೆಂಬ ಗುರಿ ನೀಡಲಾಗುತ್ತಿದೆ. ಆದಷ್ಟು ಸ್ಲಂ ಭಾಗಕ್ಕೆ ತಮ್ಮದೇ ವಾಹನಗಳಲ್ಲಿ ತೆರಳುತ್ತಿರುವ ಈ ಕಾರ್ಯಕರ್ತರು ಬಡ ಜನರಿಗೆ ಆಹಾರ ಪೂರೈಸುವ ಕೆಲಸಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಂತಹ ಮಹಾನಗರದಲ್ಲಿ ಮೂರು ಹೊತ್ತು ತಲಾ 2000 ಸಾವಿರ ಜನರ ಹೊಟ್ಟೆ ತುಂಬಿಸುವುದು ಎಂದರೆ ಸುಮ್ಮನೆ ಮಾತಲ್ಲ.

ಇದಲ್ಲದೆ, ಕೆಲವು ಫಾರ್ಮಸಿಗಳಿಂದ ರಿಯಾಯಿತಿ ದರದಲ್ಲಿ ಔಷಧ ಸಾಮಾಗ್ರಿಗಳನ್ನು ಕೊಂಡು ಅದನ್ನು ಬಡವರಿಗೆ ಉಚಿತವಾಗಿ ನೀಡುವ ಕೆಲಸವನ್ನೂ ಈ Mercy Mission ಮಾಡುತ್ತಿದೆ. ಶುಗರ್ ಬಿಪಿಯಂತಹ ಎಲ್ಲಾ ತರದ ಖಾಯಿಲೆ ಹೊಂದಿರುವ ಬಡವರಿಗೂ ಈ ಸೌಲಭ್ಯವನ್ನು ಮರ್ಸಿ ಮಿಷಿನ್ ನೀಡುತ್ತಿದೆ.

ಈ ಕುರಿತು ನಾನುಗೌರಿ.ಕಾಂ Mercy Mission ಸಂಸ್ಥೆ ಪದಾಧಿಕಾರಿಗಳಲ್ಲೊಬ್ಬರಾದ ತೌಸಿಫ್‌ರವರನ್ನು ಮಾತನಾಡಿಸಿತು. ಅವರು “ಈ ಸಂಸ್ಥೆ ಹಲವಾರು ವರ್ಷಗಳಿಂದ ಯಾವುದೇ ಪ್ರಚಾರ ಇಲ್ಲದೆ ಸಮಾಜಮುಖಿ ಕೆಲಸದಲ್ಲಿ ತೊಡಗಿದೆ. ಲಾಕ್‌ಡೌನ್ ಘೋಷಿಸಿದ ನಂತರದ ಕಳೆದ ಒಂದು ವಾರದ ಅವಧಿಯಲ್ಲಿ ಸಾವಿರಾರು ಜನರ ಹಸಿವನ್ನು ನೀಗಿಸಿದೆ. ಆದರೆ, ಸಹಾಯ ಹಸ್ತ ನೀಡುವ ಸಂದರ್ಭದಲ್ಲಿ ನಾವು ಎಲ್ಲಿಯೂ ಸಹ ಹಿಂದೂ-ಮುಸ್ಲಿಂ ಎಂದು ಬೇಧ ಮಾಡುವ ಕೆಲಸಕ್ಕೆ ಮುಂದಾಗಿಲ್ಲ. ಇದು ಬೇಧ ಮಾಡುವ ಸಮಯವಲ್ಲ. ಇಡೀ ಭಾರತ ಒಟ್ಟಾಗಿ ನಿಲ್ಲಬೇಕಾದ ಸಮಯ” ಎನ್ನುತ್ತಾರೆ ಅವರು.

ಒಟ್ಟಾರೆ ಲಾಕ್‌ಡೌನ್‌ನಿಂದಾಗಿ ಮೇಲ್ ಮತ್ತು ಮಧ್ಯಮ ವರ್ಗಕ್ಕಿಂತ ಅಧಿಕ ಪೆಟ್ಟು ತಿನ್ನುತ್ತಿರುವುದು ಸಮಾಜದ ಕೆಳ ಮತ್ತು ಕೂಲಿ ಕಾರ್ಮಿಕ ವರ್ಗ. ಇಂತಹ ಜನರಿಗೆ ದಿನನಿತ್ಯ ಆಹಾರ ಪೂರೈಸುತ್ತಿರುವ Mercy Mission ಕಾರ್ಯ ನಿಜಕ್ಕೂ ಶ್ಲಾಘನೀಯ.


ಇದನ್ನೂ ಓದಿ: ಅಂದು ನೋಟುರದ್ದು, ಇಂದು ಮಹಾವಲಸೆ – ಬಡಜನತೆಯ ನಡು ಮುರಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...