Homeಮುಖಪುಟಲಾಕ್‌ಡೌನ್ ಪ್ರಜಾಪ್ರಭುತ್ವಕ್ಕೆ ಹಾನಿಮಾಡುವ ಅಪಾಯಕಾರಿ ಪ್ರಯೋಗ : ಎ.ಪಿ. ಶಾ

ಲಾಕ್‌ಡೌನ್ ಪ್ರಜಾಪ್ರಭುತ್ವಕ್ಕೆ ಹಾನಿಮಾಡುವ ಅಪಾಯಕಾರಿ ಪ್ರಯೋಗ : ಎ.ಪಿ. ಶಾ

- Advertisement -
- Advertisement -

ದಿನನಿತ್ಯದ ಊಟದ ಅಗತ್ಯವಿರುವಂತೆಯೇ ದಿನನಿತ್ಯದ ನ್ಯಾಯವೂ ಅಗತ್ಯ ಮತ್ತು ಅದು ದಿನದ ಕೆಲವು ಹೊತ್ತು ಕೂಡಾ ಅಗತ್ಯ ಎಂದು ನಾಟಕಕಾರ ಬರ್ಟೋಲ್ಡ್ ಬ್ರೆಷ್ಟ್ (ಬ್ರೆಕ್ಟ್- Bertolt Brecht) ಹೇಳಿದ್ದಾನೆ. ಸುಪ್ರೀಂಕೋರ್ಟ್ ಈ ವಿಷಯವನ್ನು ನೆನಪಿಡದಿದ್ದಲ್ಲಿ ಜಾರ್ಜ್ ಓರ್ವೆಲ್‌ನ ದಬ್ಬಾಳಿಕೆಯ ಪ್ರಪಂಚವು ಸುಲಭದಲ್ಲಿ ನಿಜವಾಗಬಹುದು.

ಎ.ಪಿ. ಶಾ (ದಿಲ್ಲಿ ಹೈಕೋರ್ಟಿನ ನಿವೃತ್ತ ಮುಖ್ಯ ನ್ಯಾಯಧೀಶರು)

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ನಾವು ಉದಾಸೀನದಿಂದ ಕಾಣುತ್ತಿರುವ ಅನೇಕ ಸ್ವಾತಂತ್ರ್ಯಗಳು ಅಭದ್ರ ನೆಲದ ಮೇಲೆ ನಿಂತಿವೆ ಎಂದು ಇತ್ತೀಚಿನ ಹಲವಾರು ಘಟನೆಗಳು ಸೂಚಿಸುತ್ತವೆ. ಸುಪ್ರೀಂಕೋರ್ಟ್ ನಿಜವಾಗಿಯೂ ನಮ್ಮ ಹಕ್ಕುಗಳನ್ನು ರಕ್ಷಿಸಲು ಸಮರ್ಥವೇ ಇಲ್ಲವೇ ಎಂದು ನಾವು ಸಂಶಯಪಡುವಂತೆ ಮಾಡಿವೆ. ಕಳೆದ ಕೆಲವು ತಿಂಗಳುಗಳಿಂದ ಸುಪ್ರೀಂಕೋರ್ಟಿನ ಆದ್ಯತೆಗಳು ಪರಿಹಾರ ಕಾಣಬೇಕಾದ ವಿಷಯಗಳಿಗೆ ಸರಿಹೊಂದುವಂತೆಯೂ ಕಾಣುತ್ತಿಲ್ಲ. ಉದಾಹರಣೆಗೆ ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ)ಗೆ ಸಂಬಂಧಪಟ್ಟ ಪ್ರಕರಣಗಳು, 6,000 ಕೋಟಿ ರೂ.ಗಳನ್ನು ಸಂಗ್ರಹಿಸಲಾದ ಚುನಾವಣಾ ಬಾಂಡ್‌ಗಳ ಪ್ರಕರಣಗಳು ಯಾವುದೇ ಪ್ರಜಾಪ್ರಭುತ್ವವಾದಿ ಸಂಸ್ಥೆಗೆ ಕಾಳಜಿಯ ವಿಷಯವಾಗಿರಬೇಕಿತ್ತು.

1952ರಷ್ಟು ಹಿಂದೆಯೇ ಮದ್ರಾಸ್ ಸರಕಾರ ವಿರುದ್ಧ ವಿ.ಜಿ. ರಾವ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತನ್ನನ್ನು “ನಾಗರಿಕರ ಮೂಲಭೂತ ಹಕ್ಕುಗಳ ಸದಾ ಜಾಗೃತ (qui vive) ಕಾವಲುಗಾರ” ಎಂದು ಪರಿಗಣಿಸಿತ್ತು. ಆದರೆ, ಇಂದು ಈ ಕಾವಲುಗಾರ ಜಾಗೃತವಾಗಿರುವುದು ಹೌದೆ? ಆದುದರಿಂದಲೇ, ಕೇವಲ ಈಗಿನ ಕೋವಿಡ್- 19 ಪಿಡುಡು ಮಾತ್ರವಲ್ಲ, ಅದಕ್ಕಿಂತ ಸ್ವಲ್ಪ ಹಿಂದಿನ ಬಿಕ್ಕಟ್ಟುಗಳಲ್ಲಿ ಸುಪ್ರೀಂಕೋರ್ಟಿನ ಕಾರ್ಯಾಚರಣೆಯ ಕುರಿತು ಗಮನಹರಿಸಲು ನಾನು ನಿರ್ಧರಿಸಿದೆ.

“ಯುದ್ಧದ ಸಮಯದಲ್ಲಿ ಕಾನೂನು ಮೌನವಾಗುತ್ತದೆ (Inter arma enim silent lēgēs) ಎಂಬ ಪ್ರಖ್ಯಾತ ಮಾತುಗಳನ್ನು ರೋಮನ್ ಮುತ್ಸದ್ಧಿ, ತತ್ವಶಾಸ್ತ್ರಜ್ಞ ಸಿಸೆರೊ (Cicero) ಹೇಳಿದ್ದನೆಂದು ನಂಬಲಾಗಿದೆ. ಆದರೆ, ಈ ಹೇಳಿಕೆಯನ್ನು- ಕನಿಷ್ಟ ಆಧುನಿಕ ಕಾಲದಲ್ಲಾದರೂ- ಮತ್ತೆ ಮತ್ತೆ ತಿರಸ್ಕರಿಸಲಾಗಿದೆ. ಇವುಗಳಲ್ಲಿ “ಶಸ್ತ್ರಗಳ ತಾಕಲಾಟದ ನಡುವೆ ಕಾನೂನುಗಳು ಮೌನವಾಗಿಲ್ಲ” ಎಂಬ ಬ್ರಿಟನ್‌ನ ಲಾರ್ಡ್ ಅಟ್ಕಿನ್ ಹೇಳಿಕೆ ಹೆಚ್ಚು ಪರಿಚಿತ.

ದಶಕಗಳ ನಂತರ ಎಡಿಎಂ ಜಬ್ಬಲ್ಪುರ್ ಪ್ರಕರಣದ ತನ್ನ ಸ್ಮರಣಾರ್ಹ ಬಿನ್ನಮತದ ತೀರ್ಪಿನಲ್ಲಿ ನ್ಯಾಯಮೂರ್ತಿ ಎಚ್.ಆರ್. ಖನ್ನಾ ಇದೇ ಭಾವನೆಯನ್ನು ನಮಗೆ ಮತ್ತೊಮ್ಮೆ ನೆನಪಿಸಿದ್ದಾರೆ. “ಸರಕಾರದ ಉದ್ದೇಶಗಳು ಉದಾರವಾದಿಯಾಗಿದ್ದಾಗ ಸ್ವಾತಂತ್ರ್ಯವನ್ನು ರಕ್ಷಿಸಿಕೊಳ್ಳಲು ನಾವು ಹೆಚ್ಚು ಎಚ್ಚರದಲ್ಲಿರಬೇಕು ಎಂದು ಅನುಭವವವು ನಮಗೆ ಕಲಿಸಬೇಕಾಗಿದೆ…..ಸ್ವಾತಂತ್ರ್ಯಕ್ಕೆ ಅತೀದೊಡ್ಡ ಅಪಾಯವಿರುವುದು ಕಾನೂನಿನ ಆಡಳಿತದ ಬಗ್ಗೆ ಗೌರವವಿಲ್ಲದ ಅತ್ಯುತ್ಸಾಹದ ವ್ಯಕ್ತಿಗಳು- ಅವರ ಉದ್ದೇಶವು ಎಷ್ಟೇ ಒಳ್ಳೆಯದಾಗಿದ್ದರೂ ಕೂಡಾ- ಕಪಟದಿಂದ ಅದನ್ನು ಆಕ್ರಮಿಸಿಕೊಳ್ಳುವುದು” ಎಂದು ಅವರು ಹೇಳಿದ್ದಾರೆ. ವಕೀಲ ಉಪೇಂದ್ರ ಬಕ್ಷಿ ಅವರೂ ಈ ಮಾತುಗಳನ್ನು ಪ್ರತಿಧ್ವನಿಸುತ್ತಾರೆ. ಸಿಸೆರೋನ ಮಾತುಗಳನ್ನು ನಾವು ಒಕ್ಕೊರಲಿನಿಂದ ಇಂದು ನಾವು ವಿರೋಧಿಸಬೇಕಾದ ಅಗತ್ಯವಿದೆ ಎಂದು ಅವರು ಹೇಳುತ್ತಾರೆ.

ಇವೆಲ್ಲವೂ ಈಗ ಏಕೆ ಪ್ರಸ್ತುತ? ನಾವೀಗ ಯುದ್ಧದಲ್ಲಿ ಇಲ್ಲದೇ ಇರಬಹುದು ಆದರೆ, ಹಿಂದೆಂದೂ ಕಾಣದಷ್ಟು ದೊಡ್ಡ ತುರ್ತು ಸ್ಥಿತಿಯಲ್ಲಿ ಇದ್ದೇವೆ. ಇಂತಹಾ ಸಮಯದಲ್ಲಿ ಶಾಸಕಾಂಗ ಮತ್ತು ನ್ಯಾಯಾಂಗದ ಮಧ್ಯಪ್ರವೇಶ ಅಥವಾ ಮೇಲುಸ್ತುವಾರಿ ಇಲ್ಲದೆ ಕಾರ್ಯಾಂಗವು ಎಷ್ಟರ ಮಟ್ಟಿನ ಅನಿರ್ಬಂಧಿತ ಅಧಿಕಾರವನ್ನು ಹೊಂದಿರಬೇಕು ಎಂಬ ಪ್ರಶ್ನೆ ಎದುರಾಗುತ್ತದೆ. ಇದು ರಾಜಕೀಯ ಮತ್ತು ನೀತಿ ನಿರೂಪಕರ ವಲಯದಲ್ಲಿ ಮಾತ್ರವಲ್ಲ, ಕಾನೂನು ವಲಯದಲ್ಲಿಯೂ ಚರ್ಚೆಗಳನ್ನು ಹುಟ್ಟುಹಾಕಿದೆ.

ಸಕ್ರಿಯವಾಗಿರುವ ವಕೀಲರ ನಡುವೆಯಂತೂ ಇದು ಎರಡು ಧ್ರುವಗಳಷ್ಟು ತದ್ವಿರುದ್ಧವಾದ ಅಭಿಪ್ರಾಯಗಳಿಗೆ ಕಾರಣವಾಗಿದೆ. ವಕೀಲ ದುಷ್ಯಂತ ದವೆ ಹೇಳುತ್ತಾರೆ- “ಕಾರ್ಯಾಂಗ ಮಾತ್ರ ಅದರ ಕೆಲಸವನ್ನು ಮಾಡಲು ಪ್ರಯತ್ನಿಸುತ್ತಿದೆ. ಸಂಸತ್ತು ವಿರಾಮದಲ್ಲಿದೆ. ನ್ಯಾಯಾಂಗವು ಕೊಮಾದಲ್ಲಿದೆ”. “ಕೋಟ್ಯಂತರ ಜನರ ಪ್ರಸ್ತುತ ಸಂಕಷ್ಟಗಳ ಬಗ್ಗೆ ಸಂಸತ್ತು ಮತ್ತು ನ್ಯಾಯಾಂಗ ಏಕೆ ಸಂಪೂರ್ಣ ಮೌನವಹಿಸಿವೆ?” ಎಂದವರು ಕೇಳುತ್ತಾರೆ. ಇದಕ್ಕೆ ವ್ಯತಿರಿಕ್ತವಾಗಿ ಹರೀಶ್ ಸಾಳ್ವೆ ಅವರು- ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನಿಸ್ಪಕ್ಷಪಾತದ ಆಡಳಿತದಲ್ಲಿ ಕಾರ್ಯಾಂಗದ ವಿವೇಚನೆಯು ನ್ಯಾಯಾಂಗದ ಮಧ್ಯಪ್ರವೇಶಕ್ಕೆ ಒಳಪಟ್ಟಿರಬಾರದು ಎಂಬ ಅಭಿಪ್ರಾಯ ಹೊಂದಿದ್ದಾರೆ.

ದವೆ ಮತ್ತು ಸಾಳ್ವೆ ಅವರಿಬ್ಬರೂ ನೇರವಾಗಿ ಯಾವುದೇ ಪ್ರಕರಣವನ್ನು ಉಲ್ಲೇಖಿಸಿಲ್ಲ. ಆದರೆ, ಅವರಿಬ್ಬರೂ ವಲಸೆ ಕಾರ್ಮಿಕರ ಸಂಕಷ್ಟಗಳ ಬಗ್ಗೆ ಸಲ್ಲಿಸಲಾದ ಸುಪ್ರೀಂಕೋರ್ಟ್ ಪ್ರಕರಣಗಳನ್ನು ಉಲ್ಲೇಖಿಸುತ್ತಿದ್ದಾರೆಂದು ನಾವು ಊಹಿಸಬಹುದು. ನಾನು ಈ ಅರ್ಜಿಗಳು ಮತ್ತು ಸಾರ್ವಜನಿಕ ಆರೋಗ್ಯ ಬಿಕ್ಕಟ್ಟು ಅನಗತ್ಯವಾಗಿ ಇಸ್ಲಾಮೋಫೋಬಿಕ್ ತಿರುವನ್ನು ಪಡೆದ ಹಿನ್ನೆಲೆಯಲ್ಲಿ ನಾನಿಲ್ಲಿ ಚರ್ಚಿಸುತ್ತೇನೆ.

ಮಾರ್ಚ್ 25, 2020ರಿಂದ ಆರಂಭಗೊಂಡ ಹಠಾತ್ ಲಾಕ್‌ಡೌನ್‌ನಿಂದಾಗಿ, ಕೆಲಸ ಹುಡುಕಿಕೊಂಡು ದೇಶದಾದ್ಯಂತ ಪ್ರಯಾಣಬೆಳೆಸಿದ್ದ ಲಕ್ಷಾಂತರ, ಬಹುಶಃ ಕೋಟ್ಯಂತರ ವಲಸೆ ಕಾರ್ಮಿಕರು ಜೀವನೋಪಾಯ, ಆದಾಯ, ಭದ್ರತೆ ಮತ್ತು ಗೌರವ ಎಲ್ಲವನ್ನೂ ಕಳೆದುಕೊಂಡರು. ಇವೆಲ್ಲವೂ ಕೇವಲ ಒಂದು ತಿಂಗಳ ಒಳಗಾಗಿ ನಡೆಯಿತು. ತಾವು ಅನಿರ್ದಿಷ್ಟಾವಧಿಗೆ ಯಾವುದೇ ಆಹಾರ, ಆಶ್ರಯ, ಸಾರಿಗೆ ಇಲ್ಲದೇ ಉಪವಾಸ ಕಳೆಯಬೇಕಾಗಬಹುದು ಎಂದು ಅವರಲ್ಲಿ ಬಹುತೇಕರು ಊಹಿಸಿಯೇ ಇರಲಾರರು.

ಇವೆಲ್ಲವೂ ಎಪ್ರಿಲ್ 1ರಂದು ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಮೂಲಕ ಒಂದು ಪ್ರಮುಖ ಪ್ರಶ್ನೆಯಾಯಿತು. ವಲಸೆ ಕಾರ್ಮಿಕರಿಗೆ ಕನಿಷ್ಟ ವೇತನ ಪಾವತಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡುವಂತೆ ಈ ಅರ್ಜಿ ಕೋರಿತ್ತು.  ರಾಷ್ಟ್ರೀಯ ವಿಕೋಪ ನಿರ್ವಹಣಾ ಕಾಯಿದೆಯ ಅನ್ವಯ ಹೇರಲಾದ ರಾಷ್ಟ್ರವ್ಯಾಪಿ ಲಾಕ್‌ಡೌನ್ ಮೂಲಕ ಸಂವಿಧಾನದ ವಿಧಿ 21ರಲ್ಲಿ ಖಾತರಿಪಡಿಸಲಾದ ವಲಸೆ ಕಾರ್ಮಿಕರ ಜೀವನೋಪಾಯದ ಹಕ್ಕನ್ನು ಉಲ್ಲಂಘಿಸಲಾಗಿದೆ ಈ ಅರ್ಜಿಯಲ್ಲಿ ವಾದಿಸಲಾಗಿತ್ತು.

ಆದರೆ, ವಿಚಾರಣೆಯ ವೇಳೆಯಲ್ಲಿ ಸುಪ್ರೀಂಕೋರ್ಟ್ ಹೇಳಿಕೆಯು ವಿಶೇಷವಾಗಿ ನಿರಾಶಾದಾಯಕವಾಗಿತ್ತು. “ಮುಂದಿನ ಕೆಲವು ಕಾಲ ಮಧ್ಯಪ್ರವೇಶ ಮಾಡಲು” ತನಗೆ ಮನಸ್ಸಿಲ್ಲ ಎಂದು ಅದು ಹೇಳಿತು. ಇದು ಸರಕಾರದ ಧೋರಣೆಗೆ ಸಂಬಂಧಪಟ್ಟ ವಿಷಯವಾಗಿದ್ದು, ನ್ಯಾಯಾಲಯವು ಅತಿಕ್ರಮಣ ಮಾಡಲು ಬಯಸುವುದಿಲ್ಲ ಎಂದು ಕೂಡಾ ಹೇಳಿತು. ಅದು ಕೇಳಿದ ಇನ್ನೊಂದು ಪ್ರಶ್ನೆಯೆಂದರೆ, “ಸರಕಾರವೇ ಊಟಕೊಡುತ್ತಿರುವಾಗ, ವೇತನದ ಅಗತ್ಯವೇನು?” (ಸರಕಾರದ ಊಟದ ವಿಷಯ ಎಲ್ಲರಿಗೂ ಗೊತ್ತಿರುವಂತದ್ದೇ!)

ಸಾಂವಿಧಾನಿಕ ವಿದ್ವಾಂಸ ಗೌತಮ್ ಭಾಟಿಯಾ ಅವರು ಹೇಳುವಂತೆ, ಸರಕಾರದ ಕಾರ್ಯಾಚರಣೆಯು ವಲಸೆ ಕಾರ್ಮಿಕರ ಜೀವನೋಪಾಯ ನಷ್ಟಕ್ಕೆ ನೇರ ಹೊಣೆ. ಲಾಕ್‌ಡೌನ್ ಎಲ್ಲಾ ಸಂಪನ್ಮೂಲ ಮತ್ತು ಸಂಚಾರಕ್ಕೆ ತಡೆಯೊಡ್ಡಿತು. ಭಾರತದಾದ್ಯಂತ ಸುಮಾರು ನಾಲ್ಕು ಕೋಟಿಗಳಷ್ಟಿರುವ ವಲಸೆ ಕಾರ್ಮಿಕರು- ಮೊದಲಾಗಿ ಮತ್ತು ಅತ್ಯಂತ ಹೆಚ್ಚು ಬಾಧಿತರು. ಲಾಕ್‌ಡೌನ್ ಒಂದು ಧೋರಣಾತ್ಮಕ ನಿರ್ಧಾರವಾಗಿರಬಹುದು. ಆದರೆ, ಈ ಧೋರಣಾತ್ಮಕ ನಿರ್ಧಾರವು ಸಂವಿಧಾನದ ವಿಧಿ 21ರಲ್ಲಿ ಪ್ರತಿಷ್ಟಾಪಿಸಲಾಗಿರುವ ವಲಸೆ ಕಾರ್ಮಿಕರ ಜೀವನೋಪಾಯದ ಹಕ್ಕನ್ನು ಉಲ್ಲಂಘಿಸುತ್ತದೆ. ವ್ಯಾವಹಾರಿಕವಾಗಿ ನೋಡಿದರೆ, ಸುಪ್ರೀಂಕೋರ್ಟ್ ಸರಕಾರದ ಕಾರ್ಯವನ್ನು ಪರಿಶೀಲಿಸಿ ಸಾಂವಿಧಾನಿಕ ಮಾನದಂಡದೊಂದಿಗೆ ತುಲನೆ ಮಾಡಲು ಕರ್ತವ್ಯಬದ್ಧವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....