Homeಮುಖಪುಟಲಾಕ್‌ಡೌನ್ ಪ್ರಜಾಪ್ರಭುತ್ವಕ್ಕೆ ಹಾನಿಮಾಡುವ ಅಪಾಯಕಾರಿ ಪ್ರಯೋಗ : ಎ.ಪಿ. ಶಾ

ಲಾಕ್‌ಡೌನ್ ಪ್ರಜಾಪ್ರಭುತ್ವಕ್ಕೆ ಹಾನಿಮಾಡುವ ಅಪಾಯಕಾರಿ ಪ್ರಯೋಗ : ಎ.ಪಿ. ಶಾ

- Advertisement -
- Advertisement -

ದಿನನಿತ್ಯದ ಊಟದ ಅಗತ್ಯವಿರುವಂತೆಯೇ ದಿನನಿತ್ಯದ ನ್ಯಾಯವೂ ಅಗತ್ಯ ಮತ್ತು ಅದು ದಿನದ ಕೆಲವು ಹೊತ್ತು ಕೂಡಾ ಅಗತ್ಯ ಎಂದು ನಾಟಕಕಾರ ಬರ್ಟೋಲ್ಡ್ ಬ್ರೆಷ್ಟ್ (ಬ್ರೆಕ್ಟ್- Bertolt Brecht) ಹೇಳಿದ್ದಾನೆ. ಸುಪ್ರೀಂಕೋರ್ಟ್ ಈ ವಿಷಯವನ್ನು ನೆನಪಿಡದಿದ್ದಲ್ಲಿ ಜಾರ್ಜ್ ಓರ್ವೆಲ್‌ನ ದಬ್ಬಾಳಿಕೆಯ ಪ್ರಪಂಚವು ಸುಲಭದಲ್ಲಿ ನಿಜವಾಗಬಹುದು.

ಎ.ಪಿ. ಶಾ (ದಿಲ್ಲಿ ಹೈಕೋರ್ಟಿನ ನಿವೃತ್ತ ಮುಖ್ಯ ನ್ಯಾಯಧೀಶರು)

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ನಾವು ಉದಾಸೀನದಿಂದ ಕಾಣುತ್ತಿರುವ ಅನೇಕ ಸ್ವಾತಂತ್ರ್ಯಗಳು ಅಭದ್ರ ನೆಲದ ಮೇಲೆ ನಿಂತಿವೆ ಎಂದು ಇತ್ತೀಚಿನ ಹಲವಾರು ಘಟನೆಗಳು ಸೂಚಿಸುತ್ತವೆ. ಸುಪ್ರೀಂಕೋರ್ಟ್ ನಿಜವಾಗಿಯೂ ನಮ್ಮ ಹಕ್ಕುಗಳನ್ನು ರಕ್ಷಿಸಲು ಸಮರ್ಥವೇ ಇಲ್ಲವೇ ಎಂದು ನಾವು ಸಂಶಯಪಡುವಂತೆ ಮಾಡಿವೆ. ಕಳೆದ ಕೆಲವು ತಿಂಗಳುಗಳಿಂದ ಸುಪ್ರೀಂಕೋರ್ಟಿನ ಆದ್ಯತೆಗಳು ಪರಿಹಾರ ಕಾಣಬೇಕಾದ ವಿಷಯಗಳಿಗೆ ಸರಿಹೊಂದುವಂತೆಯೂ ಕಾಣುತ್ತಿಲ್ಲ. ಉದಾಹರಣೆಗೆ ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ)ಗೆ ಸಂಬಂಧಪಟ್ಟ ಪ್ರಕರಣಗಳು, 6,000 ಕೋಟಿ ರೂ.ಗಳನ್ನು ಸಂಗ್ರಹಿಸಲಾದ ಚುನಾವಣಾ ಬಾಂಡ್‌ಗಳ ಪ್ರಕರಣಗಳು ಯಾವುದೇ ಪ್ರಜಾಪ್ರಭುತ್ವವಾದಿ ಸಂಸ್ಥೆಗೆ ಕಾಳಜಿಯ ವಿಷಯವಾಗಿರಬೇಕಿತ್ತು.

1952ರಷ್ಟು ಹಿಂದೆಯೇ ಮದ್ರಾಸ್ ಸರಕಾರ ವಿರುದ್ಧ ವಿ.ಜಿ. ರಾವ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತನ್ನನ್ನು “ನಾಗರಿಕರ ಮೂಲಭೂತ ಹಕ್ಕುಗಳ ಸದಾ ಜಾಗೃತ (qui vive) ಕಾವಲುಗಾರ” ಎಂದು ಪರಿಗಣಿಸಿತ್ತು. ಆದರೆ, ಇಂದು ಈ ಕಾವಲುಗಾರ ಜಾಗೃತವಾಗಿರುವುದು ಹೌದೆ? ಆದುದರಿಂದಲೇ, ಕೇವಲ ಈಗಿನ ಕೋವಿಡ್- 19 ಪಿಡುಡು ಮಾತ್ರವಲ್ಲ, ಅದಕ್ಕಿಂತ ಸ್ವಲ್ಪ ಹಿಂದಿನ ಬಿಕ್ಕಟ್ಟುಗಳಲ್ಲಿ ಸುಪ್ರೀಂಕೋರ್ಟಿನ ಕಾರ್ಯಾಚರಣೆಯ ಕುರಿತು ಗಮನಹರಿಸಲು ನಾನು ನಿರ್ಧರಿಸಿದೆ.

“ಯುದ್ಧದ ಸಮಯದಲ್ಲಿ ಕಾನೂನು ಮೌನವಾಗುತ್ತದೆ (Inter arma enim silent lēgēs) ಎಂಬ ಪ್ರಖ್ಯಾತ ಮಾತುಗಳನ್ನು ರೋಮನ್ ಮುತ್ಸದ್ಧಿ, ತತ್ವಶಾಸ್ತ್ರಜ್ಞ ಸಿಸೆರೊ (Cicero) ಹೇಳಿದ್ದನೆಂದು ನಂಬಲಾಗಿದೆ. ಆದರೆ, ಈ ಹೇಳಿಕೆಯನ್ನು- ಕನಿಷ್ಟ ಆಧುನಿಕ ಕಾಲದಲ್ಲಾದರೂ- ಮತ್ತೆ ಮತ್ತೆ ತಿರಸ್ಕರಿಸಲಾಗಿದೆ. ಇವುಗಳಲ್ಲಿ “ಶಸ್ತ್ರಗಳ ತಾಕಲಾಟದ ನಡುವೆ ಕಾನೂನುಗಳು ಮೌನವಾಗಿಲ್ಲ” ಎಂಬ ಬ್ರಿಟನ್‌ನ ಲಾರ್ಡ್ ಅಟ್ಕಿನ್ ಹೇಳಿಕೆ ಹೆಚ್ಚು ಪರಿಚಿತ.

ದಶಕಗಳ ನಂತರ ಎಡಿಎಂ ಜಬ್ಬಲ್ಪುರ್ ಪ್ರಕರಣದ ತನ್ನ ಸ್ಮರಣಾರ್ಹ ಬಿನ್ನಮತದ ತೀರ್ಪಿನಲ್ಲಿ ನ್ಯಾಯಮೂರ್ತಿ ಎಚ್.ಆರ್. ಖನ್ನಾ ಇದೇ ಭಾವನೆಯನ್ನು ನಮಗೆ ಮತ್ತೊಮ್ಮೆ ನೆನಪಿಸಿದ್ದಾರೆ. “ಸರಕಾರದ ಉದ್ದೇಶಗಳು ಉದಾರವಾದಿಯಾಗಿದ್ದಾಗ ಸ್ವಾತಂತ್ರ್ಯವನ್ನು ರಕ್ಷಿಸಿಕೊಳ್ಳಲು ನಾವು ಹೆಚ್ಚು ಎಚ್ಚರದಲ್ಲಿರಬೇಕು ಎಂದು ಅನುಭವವವು ನಮಗೆ ಕಲಿಸಬೇಕಾಗಿದೆ…..ಸ್ವಾತಂತ್ರ್ಯಕ್ಕೆ ಅತೀದೊಡ್ಡ ಅಪಾಯವಿರುವುದು ಕಾನೂನಿನ ಆಡಳಿತದ ಬಗ್ಗೆ ಗೌರವವಿಲ್ಲದ ಅತ್ಯುತ್ಸಾಹದ ವ್ಯಕ್ತಿಗಳು- ಅವರ ಉದ್ದೇಶವು ಎಷ್ಟೇ ಒಳ್ಳೆಯದಾಗಿದ್ದರೂ ಕೂಡಾ- ಕಪಟದಿಂದ ಅದನ್ನು ಆಕ್ರಮಿಸಿಕೊಳ್ಳುವುದು” ಎಂದು ಅವರು ಹೇಳಿದ್ದಾರೆ. ವಕೀಲ ಉಪೇಂದ್ರ ಬಕ್ಷಿ ಅವರೂ ಈ ಮಾತುಗಳನ್ನು ಪ್ರತಿಧ್ವನಿಸುತ್ತಾರೆ. ಸಿಸೆರೋನ ಮಾತುಗಳನ್ನು ನಾವು ಒಕ್ಕೊರಲಿನಿಂದ ಇಂದು ನಾವು ವಿರೋಧಿಸಬೇಕಾದ ಅಗತ್ಯವಿದೆ ಎಂದು ಅವರು ಹೇಳುತ್ತಾರೆ.

ಇವೆಲ್ಲವೂ ಈಗ ಏಕೆ ಪ್ರಸ್ತುತ? ನಾವೀಗ ಯುದ್ಧದಲ್ಲಿ ಇಲ್ಲದೇ ಇರಬಹುದು ಆದರೆ, ಹಿಂದೆಂದೂ ಕಾಣದಷ್ಟು ದೊಡ್ಡ ತುರ್ತು ಸ್ಥಿತಿಯಲ್ಲಿ ಇದ್ದೇವೆ. ಇಂತಹಾ ಸಮಯದಲ್ಲಿ ಶಾಸಕಾಂಗ ಮತ್ತು ನ್ಯಾಯಾಂಗದ ಮಧ್ಯಪ್ರವೇಶ ಅಥವಾ ಮೇಲುಸ್ತುವಾರಿ ಇಲ್ಲದೆ ಕಾರ್ಯಾಂಗವು ಎಷ್ಟರ ಮಟ್ಟಿನ ಅನಿರ್ಬಂಧಿತ ಅಧಿಕಾರವನ್ನು ಹೊಂದಿರಬೇಕು ಎಂಬ ಪ್ರಶ್ನೆ ಎದುರಾಗುತ್ತದೆ. ಇದು ರಾಜಕೀಯ ಮತ್ತು ನೀತಿ ನಿರೂಪಕರ ವಲಯದಲ್ಲಿ ಮಾತ್ರವಲ್ಲ, ಕಾನೂನು ವಲಯದಲ್ಲಿಯೂ ಚರ್ಚೆಗಳನ್ನು ಹುಟ್ಟುಹಾಕಿದೆ.

ಸಕ್ರಿಯವಾಗಿರುವ ವಕೀಲರ ನಡುವೆಯಂತೂ ಇದು ಎರಡು ಧ್ರುವಗಳಷ್ಟು ತದ್ವಿರುದ್ಧವಾದ ಅಭಿಪ್ರಾಯಗಳಿಗೆ ಕಾರಣವಾಗಿದೆ. ವಕೀಲ ದುಷ್ಯಂತ ದವೆ ಹೇಳುತ್ತಾರೆ- “ಕಾರ್ಯಾಂಗ ಮಾತ್ರ ಅದರ ಕೆಲಸವನ್ನು ಮಾಡಲು ಪ್ರಯತ್ನಿಸುತ್ತಿದೆ. ಸಂಸತ್ತು ವಿರಾಮದಲ್ಲಿದೆ. ನ್ಯಾಯಾಂಗವು ಕೊಮಾದಲ್ಲಿದೆ”. “ಕೋಟ್ಯಂತರ ಜನರ ಪ್ರಸ್ತುತ ಸಂಕಷ್ಟಗಳ ಬಗ್ಗೆ ಸಂಸತ್ತು ಮತ್ತು ನ್ಯಾಯಾಂಗ ಏಕೆ ಸಂಪೂರ್ಣ ಮೌನವಹಿಸಿವೆ?” ಎಂದವರು ಕೇಳುತ್ತಾರೆ. ಇದಕ್ಕೆ ವ್ಯತಿರಿಕ್ತವಾಗಿ ಹರೀಶ್ ಸಾಳ್ವೆ ಅವರು- ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನಿಸ್ಪಕ್ಷಪಾತದ ಆಡಳಿತದಲ್ಲಿ ಕಾರ್ಯಾಂಗದ ವಿವೇಚನೆಯು ನ್ಯಾಯಾಂಗದ ಮಧ್ಯಪ್ರವೇಶಕ್ಕೆ ಒಳಪಟ್ಟಿರಬಾರದು ಎಂಬ ಅಭಿಪ್ರಾಯ ಹೊಂದಿದ್ದಾರೆ.

ದವೆ ಮತ್ತು ಸಾಳ್ವೆ ಅವರಿಬ್ಬರೂ ನೇರವಾಗಿ ಯಾವುದೇ ಪ್ರಕರಣವನ್ನು ಉಲ್ಲೇಖಿಸಿಲ್ಲ. ಆದರೆ, ಅವರಿಬ್ಬರೂ ವಲಸೆ ಕಾರ್ಮಿಕರ ಸಂಕಷ್ಟಗಳ ಬಗ್ಗೆ ಸಲ್ಲಿಸಲಾದ ಸುಪ್ರೀಂಕೋರ್ಟ್ ಪ್ರಕರಣಗಳನ್ನು ಉಲ್ಲೇಖಿಸುತ್ತಿದ್ದಾರೆಂದು ನಾವು ಊಹಿಸಬಹುದು. ನಾನು ಈ ಅರ್ಜಿಗಳು ಮತ್ತು ಸಾರ್ವಜನಿಕ ಆರೋಗ್ಯ ಬಿಕ್ಕಟ್ಟು ಅನಗತ್ಯವಾಗಿ ಇಸ್ಲಾಮೋಫೋಬಿಕ್ ತಿರುವನ್ನು ಪಡೆದ ಹಿನ್ನೆಲೆಯಲ್ಲಿ ನಾನಿಲ್ಲಿ ಚರ್ಚಿಸುತ್ತೇನೆ.

ಮಾರ್ಚ್ 25, 2020ರಿಂದ ಆರಂಭಗೊಂಡ ಹಠಾತ್ ಲಾಕ್‌ಡೌನ್‌ನಿಂದಾಗಿ, ಕೆಲಸ ಹುಡುಕಿಕೊಂಡು ದೇಶದಾದ್ಯಂತ ಪ್ರಯಾಣಬೆಳೆಸಿದ್ದ ಲಕ್ಷಾಂತರ, ಬಹುಶಃ ಕೋಟ್ಯಂತರ ವಲಸೆ ಕಾರ್ಮಿಕರು ಜೀವನೋಪಾಯ, ಆದಾಯ, ಭದ್ರತೆ ಮತ್ತು ಗೌರವ ಎಲ್ಲವನ್ನೂ ಕಳೆದುಕೊಂಡರು. ಇವೆಲ್ಲವೂ ಕೇವಲ ಒಂದು ತಿಂಗಳ ಒಳಗಾಗಿ ನಡೆಯಿತು. ತಾವು ಅನಿರ್ದಿಷ್ಟಾವಧಿಗೆ ಯಾವುದೇ ಆಹಾರ, ಆಶ್ರಯ, ಸಾರಿಗೆ ಇಲ್ಲದೇ ಉಪವಾಸ ಕಳೆಯಬೇಕಾಗಬಹುದು ಎಂದು ಅವರಲ್ಲಿ ಬಹುತೇಕರು ಊಹಿಸಿಯೇ ಇರಲಾರರು.

ಇವೆಲ್ಲವೂ ಎಪ್ರಿಲ್ 1ರಂದು ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಮೂಲಕ ಒಂದು ಪ್ರಮುಖ ಪ್ರಶ್ನೆಯಾಯಿತು. ವಲಸೆ ಕಾರ್ಮಿಕರಿಗೆ ಕನಿಷ್ಟ ವೇತನ ಪಾವತಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡುವಂತೆ ಈ ಅರ್ಜಿ ಕೋರಿತ್ತು.  ರಾಷ್ಟ್ರೀಯ ವಿಕೋಪ ನಿರ್ವಹಣಾ ಕಾಯಿದೆಯ ಅನ್ವಯ ಹೇರಲಾದ ರಾಷ್ಟ್ರವ್ಯಾಪಿ ಲಾಕ್‌ಡೌನ್ ಮೂಲಕ ಸಂವಿಧಾನದ ವಿಧಿ 21ರಲ್ಲಿ ಖಾತರಿಪಡಿಸಲಾದ ವಲಸೆ ಕಾರ್ಮಿಕರ ಜೀವನೋಪಾಯದ ಹಕ್ಕನ್ನು ಉಲ್ಲಂಘಿಸಲಾಗಿದೆ ಈ ಅರ್ಜಿಯಲ್ಲಿ ವಾದಿಸಲಾಗಿತ್ತು.

ಆದರೆ, ವಿಚಾರಣೆಯ ವೇಳೆಯಲ್ಲಿ ಸುಪ್ರೀಂಕೋರ್ಟ್ ಹೇಳಿಕೆಯು ವಿಶೇಷವಾಗಿ ನಿರಾಶಾದಾಯಕವಾಗಿತ್ತು. “ಮುಂದಿನ ಕೆಲವು ಕಾಲ ಮಧ್ಯಪ್ರವೇಶ ಮಾಡಲು” ತನಗೆ ಮನಸ್ಸಿಲ್ಲ ಎಂದು ಅದು ಹೇಳಿತು. ಇದು ಸರಕಾರದ ಧೋರಣೆಗೆ ಸಂಬಂಧಪಟ್ಟ ವಿಷಯವಾಗಿದ್ದು, ನ್ಯಾಯಾಲಯವು ಅತಿಕ್ರಮಣ ಮಾಡಲು ಬಯಸುವುದಿಲ್ಲ ಎಂದು ಕೂಡಾ ಹೇಳಿತು. ಅದು ಕೇಳಿದ ಇನ್ನೊಂದು ಪ್ರಶ್ನೆಯೆಂದರೆ, “ಸರಕಾರವೇ ಊಟಕೊಡುತ್ತಿರುವಾಗ, ವೇತನದ ಅಗತ್ಯವೇನು?” (ಸರಕಾರದ ಊಟದ ವಿಷಯ ಎಲ್ಲರಿಗೂ ಗೊತ್ತಿರುವಂತದ್ದೇ!)

ಸಾಂವಿಧಾನಿಕ ವಿದ್ವಾಂಸ ಗೌತಮ್ ಭಾಟಿಯಾ ಅವರು ಹೇಳುವಂತೆ, ಸರಕಾರದ ಕಾರ್ಯಾಚರಣೆಯು ವಲಸೆ ಕಾರ್ಮಿಕರ ಜೀವನೋಪಾಯ ನಷ್ಟಕ್ಕೆ ನೇರ ಹೊಣೆ. ಲಾಕ್‌ಡೌನ್ ಎಲ್ಲಾ ಸಂಪನ್ಮೂಲ ಮತ್ತು ಸಂಚಾರಕ್ಕೆ ತಡೆಯೊಡ್ಡಿತು. ಭಾರತದಾದ್ಯಂತ ಸುಮಾರು ನಾಲ್ಕು ಕೋಟಿಗಳಷ್ಟಿರುವ ವಲಸೆ ಕಾರ್ಮಿಕರು- ಮೊದಲಾಗಿ ಮತ್ತು ಅತ್ಯಂತ ಹೆಚ್ಚು ಬಾಧಿತರು. ಲಾಕ್‌ಡೌನ್ ಒಂದು ಧೋರಣಾತ್ಮಕ ನಿರ್ಧಾರವಾಗಿರಬಹುದು. ಆದರೆ, ಈ ಧೋರಣಾತ್ಮಕ ನಿರ್ಧಾರವು ಸಂವಿಧಾನದ ವಿಧಿ 21ರಲ್ಲಿ ಪ್ರತಿಷ್ಟಾಪಿಸಲಾಗಿರುವ ವಲಸೆ ಕಾರ್ಮಿಕರ ಜೀವನೋಪಾಯದ ಹಕ್ಕನ್ನು ಉಲ್ಲಂಘಿಸುತ್ತದೆ. ವ್ಯಾವಹಾರಿಕವಾಗಿ ನೋಡಿದರೆ, ಸುಪ್ರೀಂಕೋರ್ಟ್ ಸರಕಾರದ ಕಾರ್ಯವನ್ನು ಪರಿಶೀಲಿಸಿ ಸಾಂವಿಧಾನಿಕ ಮಾನದಂಡದೊಂದಿಗೆ ತುಲನೆ ಮಾಡಲು ಕರ್ತವ್ಯಬದ್ಧವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...