Homeಮುಖಪುಟಕೊರೊನಾ ಸಮಸ್ಯೆಗೆ ಲಾಕ್‌ಡೌನ್‌ ಪರಿಹಾರವಲ್ಲ: ರಾಹುಲ್ ಗಾಂಧಿ

ಕೊರೊನಾ ಸಮಸ್ಯೆಗೆ ಲಾಕ್‌ಡೌನ್‌ ಪರಿಹಾರವಲ್ಲ: ರಾಹುಲ್ ಗಾಂಧಿ

- Advertisement -
- Advertisement -

ದೇಶವ್ಯಾಪಿ ಲಾಕ್ ಡೌನ್ ವಿಸ್ತರಿಸಿರುವುದು ವಿರಾಮ ಕಾಲದಂತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇದು ಸಧ್ಯದ ಬಿಕ್ಕಟ್ಟನ್ನು ಪರಿಹರಿಸಲು ಸಹಾಯ ಮಾಡುವುದಿಲ್ಲ, ಹಾಗಾಗಿ ಕೋವಿಡ್-19 ವಿರುದ್ದದ ತಂತ್ರಗಾರಿಕೆಯನ್ನು ವಿಕೇಂದ್ರೀಕರಣ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ರಾಹುಲ್ ಗಾಂಧಿ ದೇಶದಲ್ಲಿ ಕೊರನಾ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಹೆಚ್ಚಿಸಬೇಕು. ನಾವು ತುಂಬ ಅಪಾಯದ ಪರಿಸ್ಥಿತಿಯಲ್ಲಿದ್ದೇವೆ ಆದ್ದರಿಂದ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗೂಡಿ ಕೆಲಸ ಮಾಡವ ಮೂಲಕ ನಾವು ವೈರಸ್ ನ್ನು ಸೋಲಿಸಬೇಕು ಎಂದು ಹೇಳಿದರು.

ಲಾಕ್ ಡೌನ್ ಸಮಯದಲ್ಲಿ ವೈದ್ಯಕೀಯ ಸಂಪನ್ಮೂಲವನ್ನು ಸರಿಯಾಗಿ ಬಳಸಬೇಕು. ವೈದ್ಯಕೀಯ ಸಿಬ್ಬಂದಿಗಳಿಗೆ ಬೇಕಾದ ಸಲಕರಣೆಗಳು ಒದಗಿಸಬೇಕು. ದೇಶಾದ್ಯಂತ ಆಸ್ಪತ್ರೆಗಳನ್ನು ನಿರ್ಮಿಸಬೇಕು. ಪರೀಕ್ಷೆಗಳನ್ನು ಹೆಚ್ಚಿಸಿ ವೈರಸನ್ನು ನಿರ್ಮೂಲನೆ ಮಾಡಬೇಕಾಗಿದೆ ಎಂದು ಸಲಹೆ ನೀಡಿದರು.

ಕೇಂದ್ರ ಸರ್ಕಾರವು ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ ಯಂತ್ರೋಪಕರಣಗಳನ್ನು ಸಶಕ್ತಗೊಳಿಸಬೇಕು. ಕೊರೊನಾ ವಿರುದ್ದ ಹೋರಾಟ ನಡೆಸುತ್ತಿರುವುದು ರಾಜ್ಯಗಳೇ ಆಗಿವೆ. ಕೇರಳದಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡ ತುರ್ತು ಕ್ರಮದಿಂದ ಕೊರೊನಾ ಯಶಸ್ವಿಯಾಗಿ ನಿಯಂತ್ರಿಸಲು ಸಾಧ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯಗಳಿಗೆ ಬಲವನ್ನು ತುಂಬಬೇಕು ಎಂದು ಹೇಳಿದರು

ಕೊರೊನಾದಿಂದ ಉಂಟಾಗಿರುವ ತುರ್ತುಪರಿಸ್ಥಿತಿ ವಿರುದ್ದ ಹೋರಾಟ ಮಾಡಲು ದೇಶದ ಜನ ಒಗ್ಗೂಡಬೇಕು. ಮೊಂಡು ವಾದ್ಯಗಳು, ಸಲಕರಣೆಗಳಿಂದ ವೈರಸ್ ಓಡಿಸಲು ಸಾಧ್ಯವಿಲ್ಲ. ಹಾಗಾಗಿ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ದೇಶದಲ್ಲಿ ಆಹಾರಕ್ಕೇನೂ ಕೊರತೆ ಇಲ್ಲ, ಇಲ್ಲಿ ಸಾಕಷ್ಟು ಧಾನ್ಯಗಳಿವೆ. ನಾವು ಅದನ್ನು ವಿತರಿಸಬೇಕು. ಬಡವರಿಗೆ ಉಚಿತ ಪರಿತರ ಕೊಡಬೇಕು. ಇದಕ್ಕೂ ಮೊದಲು ನಾವು ಆಹಾರ ಸುರಕ್ಷಾ ಜಾಲವನ್ನಾಗಿ ಮಾಡಿಕೊಂಡು ಮುಂದುವರಿಯಬೇಕು ಎಂದು ರಾಹುಲ್ ಗಾಂಧಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...