Homeಕರ್ನಾಟಕರಾಜ್ಯದಲ್ಲಿ ಮತ್ತೆ 14 ದಿನ ಲಾಕ್‌ಡೌನ್ ವಿಸ್ತರಣೆ- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ರಾಜ್ಯದಲ್ಲಿ ಮತ್ತೆ 14 ದಿನ ಲಾಕ್‌ಡೌನ್ ವಿಸ್ತರಣೆ- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಹೇರಲಾಗಿದ್ದ 14 ದಿನಗಳ ಲಾಕ್‌ಡೌನ್ ಅನ್ನು ಮತ್ತೆ ಮೇ 25 ರಿಂದ ಜೂನ್ 07 ರ ವರೆಗೆ (14 ದಿನಗಳು) ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಶುಕ್ರವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಈಗ ವಿಧಿಸಿರುವ ಲಾಕ್‌ಡೌನ್ ಮೇ.24ಕ್ಕೆ ಅಂತ್ಯವಾಗಲಿದ್ದು, ಮತ್ತೆ 14 ದಿನಗಳು ( ಮೇ 25 ರಿಂದ ಜೂನ್ 7ರ ವರೆಗೆ) ಲಾಕ್‌ಡೌನ್ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.

ಈಗ ಜಾರಿಯಲ್ಲಿ ಇರುವ ಲಾಕ್‌ಡೌನ್ ಮಾರ್ಗಸೂಚಿಗಳೇ ಜೂನ್ 7ರವರೆಗೂ ಮುಂದುವರೆಯಲಿದೆ. ಜನಸಾಮಾನ್ಯರು ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೂ ಅಗತ್ಯವಸ್ತುಗಳನ್ನು ಖರೀದಿ ಮಾಡಬಹುದಾಗಿದೆ. 10 ಗಂಟೆಯ ನಂತರ ಕಠಿಣ ನಿಯಮ ಜಾರಿಯಿರಲಿದೆ.

ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆ ನಂತರವೂ ಜನರು ಓಡಾಡುತ್ತಿದ್ದಾರೆ. 9.45ಕ್ಕೆ ಮನೆಗಳಿಗೆ ಹೋಗಲು ತಯಾರಾಗಬೇಕು ಆದರೆ, ಜನ  10 ಗಂಟೆಯಾದರೂ ಸುತ್ತುತ್ತಲೇ ಇದ್ದಾರೆ. ಲಾಕ್‌ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿಲ್ಲ. ಈ ವಿಚಾರವಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಮೊದಲಿನಂತೆಯೇ ಮುಂದುವರೆದಿರುವ ಕಾರಣ, ಬಿಗಿಯಾದ ಕ್ರಮ ಅನಿವಾರ್ಯ ಎಂದಿರುವ ಮುಖ್ಯಮಂತ್ರಿ, ಹಿಂದೆ ನೀಡಿದ್ದ ಮಾರ್ಗಸೂಚಿಯೇ ಮುಂದುವರೆಯಲಿದೆ. ವಿಪತ್ತು ನಿರ್ವಹಣಾ ಸಮಿತಿ ಶಿಫಾರಸ್ಸಿನಂತೆ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ ಎಂದಿದ್ದಾರೆ. ಜೊತೆಗೆ ಜನರು ಕೊರೊನಾ ನಿಯಮಗಳನ್ನು ಪಾಲಿಸುವಂತೆ, ಹೆಚ್ಚಿನ ನಿಗಾ ವಹಿಸುವಂತೆ ಮನವಿ ಮಾಡಿದ್ದಾರೆ.

ಹಳ್ಳಿಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಬಗ್ಗೆ ಸಭೆಯಲ್ಲಿ ಆತಂಕ ವ್ಯಕ್ತವಾಗಿದೆ. ಲಾಕ್‌ಡೌನ್ ತೆರವುಗೊಳಿಸಿದರೆ ನಗರ ಪ್ರದೇಶಗಳಲ್ಲಿ ಸೋಂಕು ಹೆಚ್ಚಾಗಬಹುದು. ಈಗ ಸಾವಿನ ಸಂಖ್ಯೆಯು ಹೆಚ್ಚಾಗಿದೆ. ಹಳ್ಳಿಗಳಲ್ಲಿ ಸೋಂಕು ಕಡಿಮೆಯಾಗುವವರೆಗೂ ಲಾಕ್‌ಡೌನ್ ಮುಂದುವರೆಯಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಲಾಕ್‌ಡೌನ್ ವಿಸ್ತರಿಸುವ ಬಗ್ಗೆ ಹಲವು ಶಾಸಕರು, ಸಚಿವರು ಒಮ್ಮತ ಸೂಚಿಸಿದ್ದರು. ಕಂದಾಯ ಸಚಿವ ಆರ್‌.ಅಶೋಕ್, ರಾಜ್ಯದ ಪ್ರಸ್ತುತ ಸನ್ನಿವೇಶದಲ್ಲಿ ರಾಜ್ಯದಲ್ಲಿ ಲಾಕ್​ಡೌನ್ ಮುಂದುವರಿಯುವ ಅವಶ್ಯಕತೆ ಇದೆ. ಲಾಕ್‌ಡೌನ್ ಮಾಡಿರುವುದರಿಂದ ಕೊರೊನಾ ಪ್ರಕರಣಗಳಲ್ಲಿ ಕಡಿಮೆಯಾಗುತ್ತಿದೆ. ಹೀಗಾಗಿ ಲಾಕ್‌ಡೌನ್ ಮುಗಿಯುವ 3-4 ದಿನಗಳ ಮೊದಲು ಮುಖ್ಯಮಂತ್ರಿಗಳು ಸಭೆ ಕರೆಯಲಿದ್ದಾರೆ. ಸಭೆಯಲ್ಲಿ ಲಾಕ್​​ಡೌನ್ ಮುಂದುವರಿಸುವ ಬಗ್ಗೆಯೇ ಸಲಹೆ ನೀಡುತ್ತೇನೆ ಎಂದು ಹೇಳಿದ್ದರು.


ಇದನ್ನೂ ಓದಿ: ಕೋವಿಶೀಲ್ಡ್ V/s ಕೋವ್ಯಾಕ್ಸಿನ್: ಎರಡು ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ, ಕುಮಾರಸ್ವಾಮಿಯವರು ಗಮನಿಸಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...