Homeಕರ್ನಾಟಕರಾಜ್ಯದಲ್ಲಿ ಮತ್ತೆ 14 ದಿನ ಲಾಕ್‌ಡೌನ್ ವಿಸ್ತರಣೆ- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ರಾಜ್ಯದಲ್ಲಿ ಮತ್ತೆ 14 ದಿನ ಲಾಕ್‌ಡೌನ್ ವಿಸ್ತರಣೆ- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಹೇರಲಾಗಿದ್ದ 14 ದಿನಗಳ ಲಾಕ್‌ಡೌನ್ ಅನ್ನು ಮತ್ತೆ ಮೇ 25 ರಿಂದ ಜೂನ್ 07 ರ ವರೆಗೆ (14 ದಿನಗಳು) ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಶುಕ್ರವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಈಗ ವಿಧಿಸಿರುವ ಲಾಕ್‌ಡೌನ್ ಮೇ.24ಕ್ಕೆ ಅಂತ್ಯವಾಗಲಿದ್ದು, ಮತ್ತೆ 14 ದಿನಗಳು ( ಮೇ 25 ರಿಂದ ಜೂನ್ 7ರ ವರೆಗೆ) ಲಾಕ್‌ಡೌನ್ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.

ಈಗ ಜಾರಿಯಲ್ಲಿ ಇರುವ ಲಾಕ್‌ಡೌನ್ ಮಾರ್ಗಸೂಚಿಗಳೇ ಜೂನ್ 7ರವರೆಗೂ ಮುಂದುವರೆಯಲಿದೆ. ಜನಸಾಮಾನ್ಯರು ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೂ ಅಗತ್ಯವಸ್ತುಗಳನ್ನು ಖರೀದಿ ಮಾಡಬಹುದಾಗಿದೆ. 10 ಗಂಟೆಯ ನಂತರ ಕಠಿಣ ನಿಯಮ ಜಾರಿಯಿರಲಿದೆ.

ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆ ನಂತರವೂ ಜನರು ಓಡಾಡುತ್ತಿದ್ದಾರೆ. 9.45ಕ್ಕೆ ಮನೆಗಳಿಗೆ ಹೋಗಲು ತಯಾರಾಗಬೇಕು ಆದರೆ, ಜನ  10 ಗಂಟೆಯಾದರೂ ಸುತ್ತುತ್ತಲೇ ಇದ್ದಾರೆ. ಲಾಕ್‌ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿಲ್ಲ. ಈ ವಿಚಾರವಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಮೊದಲಿನಂತೆಯೇ ಮುಂದುವರೆದಿರುವ ಕಾರಣ, ಬಿಗಿಯಾದ ಕ್ರಮ ಅನಿವಾರ್ಯ ಎಂದಿರುವ ಮುಖ್ಯಮಂತ್ರಿ, ಹಿಂದೆ ನೀಡಿದ್ದ ಮಾರ್ಗಸೂಚಿಯೇ ಮುಂದುವರೆಯಲಿದೆ. ವಿಪತ್ತು ನಿರ್ವಹಣಾ ಸಮಿತಿ ಶಿಫಾರಸ್ಸಿನಂತೆ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ ಎಂದಿದ್ದಾರೆ. ಜೊತೆಗೆ ಜನರು ಕೊರೊನಾ ನಿಯಮಗಳನ್ನು ಪಾಲಿಸುವಂತೆ, ಹೆಚ್ಚಿನ ನಿಗಾ ವಹಿಸುವಂತೆ ಮನವಿ ಮಾಡಿದ್ದಾರೆ.

ಹಳ್ಳಿಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಬಗ್ಗೆ ಸಭೆಯಲ್ಲಿ ಆತಂಕ ವ್ಯಕ್ತವಾಗಿದೆ. ಲಾಕ್‌ಡೌನ್ ತೆರವುಗೊಳಿಸಿದರೆ ನಗರ ಪ್ರದೇಶಗಳಲ್ಲಿ ಸೋಂಕು ಹೆಚ್ಚಾಗಬಹುದು. ಈಗ ಸಾವಿನ ಸಂಖ್ಯೆಯು ಹೆಚ್ಚಾಗಿದೆ. ಹಳ್ಳಿಗಳಲ್ಲಿ ಸೋಂಕು ಕಡಿಮೆಯಾಗುವವರೆಗೂ ಲಾಕ್‌ಡೌನ್ ಮುಂದುವರೆಯಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಲಾಕ್‌ಡೌನ್ ವಿಸ್ತರಿಸುವ ಬಗ್ಗೆ ಹಲವು ಶಾಸಕರು, ಸಚಿವರು ಒಮ್ಮತ ಸೂಚಿಸಿದ್ದರು. ಕಂದಾಯ ಸಚಿವ ಆರ್‌.ಅಶೋಕ್, ರಾಜ್ಯದ ಪ್ರಸ್ತುತ ಸನ್ನಿವೇಶದಲ್ಲಿ ರಾಜ್ಯದಲ್ಲಿ ಲಾಕ್​ಡೌನ್ ಮುಂದುವರಿಯುವ ಅವಶ್ಯಕತೆ ಇದೆ. ಲಾಕ್‌ಡೌನ್ ಮಾಡಿರುವುದರಿಂದ ಕೊರೊನಾ ಪ್ರಕರಣಗಳಲ್ಲಿ ಕಡಿಮೆಯಾಗುತ್ತಿದೆ. ಹೀಗಾಗಿ ಲಾಕ್‌ಡೌನ್ ಮುಗಿಯುವ 3-4 ದಿನಗಳ ಮೊದಲು ಮುಖ್ಯಮಂತ್ರಿಗಳು ಸಭೆ ಕರೆಯಲಿದ್ದಾರೆ. ಸಭೆಯಲ್ಲಿ ಲಾಕ್​​ಡೌನ್ ಮುಂದುವರಿಸುವ ಬಗ್ಗೆಯೇ ಸಲಹೆ ನೀಡುತ್ತೇನೆ ಎಂದು ಹೇಳಿದ್ದರು.


ಇದನ್ನೂ ಓದಿ: ಕೋವಿಶೀಲ್ಡ್ V/s ಕೋವ್ಯಾಕ್ಸಿನ್: ಎರಡು ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ, ಕುಮಾರಸ್ವಾಮಿಯವರು ಗಮನಿಸಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...