HomeUncategorizedಲಾಕ್‌ಡೌನ್‌ನಿಂದ ರೈತರಿಗೆ ಸಮಸ್ಯೆ: ಮುಖ್ಯಮಂತ್ರಿಗಳನ್ನು ತರಾಟೆಗೆ ತೆಗೆದುಕೊಂಡ ರೈತ ಹೋರಾಟಗಾರರು & ಕೃಷಿ ತಜ್ಞರು

ಲಾಕ್‌ಡೌನ್‌ನಿಂದ ರೈತರಿಗೆ ಸಮಸ್ಯೆ: ಮುಖ್ಯಮಂತ್ರಿಗಳನ್ನು ತರಾಟೆಗೆ ತೆಗೆದುಕೊಂಡ ರೈತ ಹೋರಾಟಗಾರರು & ಕೃಷಿ ತಜ್ಞರು

ಸಭೆ ನಡೆಸಿ ಯಡಿಯೂರಪ್ಪನವರು ಮುಂದಿಟ್ಟ ಪರಿಹಾರ ಕ್ರಮಗಳ ಬಗ್ಗೆ ಯಾರಿಗೂ ಸಹಮತವಿದ್ದಂತಿಲ್ಲ. ಇದ್ದುದರಲ್ಲಿ ಹಾಲಿನ ವಿಚಾರಕ್ಕೆ ಒಳ್ಳೆಯ ಕ್ರಮ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಅದನ್ನು ಬಿಟ್ಟರೆ ರೈಲೇ ಓಡದಿದ್ದಾಗ, ರೈಲಿನಲ್ಲಿ ಸಾಗಿಸುತ್ತೇವೆ ಎನ್ನುವುದು ಹಾಸ್ಯಾಸ್ಪದ ಎನ್ನುವುದು ಕೇಳಿ ಬಂದಿದೆ.

- Advertisement -
- Advertisement -

ದೇಶದಾದ್ಯಂತ ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ರಾಜ್ಯದ ರೈತರು ತಾವು ಬೆಳೆದ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲಾಗದೆ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪನವರು ಸರ್ಕಾರ ರೈತರ ನೆರವಿಗಿದೆ ಎಂದು ಹೇಳಿ ಹಲವು ಅಂಶಗಳ ಬಗ್ಗೆ ಹೇಳಿದ್ದಾರೆ. ಈ ಬಗ್ಗೆ ಹಲವು ಕೃಷಿ ಕ್ಷೇತ್ರದ ತಜ್ಙರು ಹಾಗೂ ಗಣ್ಯರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್‌ನಿಂದ ಆದ ರೈತರ ಸಮಸ್ಯೆಗಳಿಗೆ ಸರಕಾರ ನೆರವಾಗುತ್ತೇವೆ- ಯಡಿಯೂರಪ್ಪ

ಕರ್ನಾಟಕ ಪ್ರಾಂತ ರೈತ ಸಂಘದ ಬಯ್ಯಾರೆಡ್ಡಿ ಅವರು ಪ್ರತಿಕ್ರಿಯಿಸಿದ್ದು “ಇವೆಲ್ಲವು ಕಾಗದದಲ್ಲೇ ಉಳಿಯುತ್ತವೆ, ಪ್ರಾಕ್ಟಿಕಲ್ಲಾಗಿ ಜಾರಿಯಾಗುವ ಬಗ್ಗೆ ಸಿಕ್ಕಾಪಟ್ಟೆ ಸಮಸ್ಯೆಗಳಿವೆ. ವಾಸ್ತವವಾಗಿ ನಮ್ಮ ಸರ್ಕಾರ ರೈತರಿಂದಲೇ ನೇರವಾಗಿ ಖರೀದಿ ಮಾಡಿದ್ದರೆ ರೈತರಿಗೂ ಸ್ವಲ್ಪ ಅನುಕೂಲವಾಗುತ್ತಿತ್ತು. ಈಗಾಗಲೇ ನಾವು ಅದನ್ನು ಪ್ರಾರಂಭಿಸಿದ್ದೇವೆ ಎಂದು ಹೇಳುತ್ತಿದ್ದರೂ ಕಾರ್ಯರೂಪಕ್ಕೆ ಬರಲು ಸಾಕಷ್ಟು ಸಮಸ್ಯೆಗಳಿವೆ. ಹೇಗೆಂದರೆ ಉದಾಹರಣೆಗೆ ಕೋಲಾರದ ರೈತರ ಬೆಳೆಗಳು ಮಾರಾಟವಾಗಬೇಕಾದರೆ ಆಂಧ್ರಪ್ರದೇಶದಿಂದ ಹಾಗು ತಮಿಳುನಾಡಿನಿಂದ ವ್ಯಾಪಾರಿಗಳು ಬರಬೇಕಾಗುತ್ತದೆ, ಆದರೆ ಲಾಕ್‌ಡೌನ್‌ನಿಂದ ಅವರು ವ್ಯಾಪಾರಕ್ಕೆ ಬರುತ್ತಿಲ್ಲ. ಆದರೆ ಇಲ್ಲಿಂದ ಅಲ್ಲಿಗೆ ಸಾಗಿಸಲು ಗಡಿಗಳು ತೆರೆದಿದೆಯೆ ಇಲ್ಲವೆ ಎಂಬ ಅನಿಶ್ಚಿತತೆ ಇದೆ. ಆದ್ದರಿಂದ ಸರ್ಕಾರ ಇಲಾಖೆಗಳ ಮೂಲಕ ಏನಾದರು ಮಾಡಿರುತ್ತಿದ್ದರೆ ರೈತರಿಗೆ ಉಪಯೋಗ ಆಗುತ್ತಿತ್ತು” ಎಂದು ಹೇಳಿದ್ದಾರೆ.

“ಹಾಲಿಗೆ ಸಂಬಂಧಿಸಿದಂತೆ ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ. ಇಲಾಖೆಗಳಲ್ಲೇ ಈಗ ಸುಮ್ಮನೆ ಬಿದ್ದಿರುವ ವಾಹನಗಳನ್ನೇ ಬಳಸಿ ರೈತರ ಬೆಳೆಗಳನ್ನು ಸಾಗಿಸಬಹುದಿತ್ತು. ಉತ್ತರ ಕರ್ನಾಟಕದ ಕಡೆ ಆಂಧ್ರದಿಂದ ಕಟಾವು ಯಂತ್ರಗಳು ಬರದೆ ಬೆಳೆಗಳು ಹಾಗೆ ಇದೆ, ಈ ಸಮಸ್ಯೆ ಹೋಗಲಾಡಿಸಲು ಹಳ್ಳಿಗಳಲ್ಲಿ ನಿರುದ್ಯೋಗದಿಂದ ಇರುವ ಕೂಲಿ ಕಾರ್ಮಿಕರನ್ನು ಬಳಸಿ ಕಟಾವು ಆಗದಿರುವ ಬೆಳೆಗಳನ್ನು ಕಟಾವು ಮಾಡಿಸಿ, ಉದ್ಯೋಗ ಖಾತರಿ ಯೋಜನೆಯನ್ನುಇದಕ್ಕೂ ವಿಸ್ತರಿಸಿ ಕಾರ್ಮಿಕರಿಗೂ ಉದ್ಯೋಗವನ್ನು ಕೊಡಬಹುದಿತ್ತು. ಆದ್ದರಿಂದ ಈಗಾಗಲೆ ಸರ್ಕಾರ ಹೇಳಿರುವ ಈ ಯಾವುದೇ ಅಂಶಗಳು ಕಾರ್ಯಸಾಧುವಲ್ಲ” ಎಂದು ಬಯ್ಯಾರೆಡ್ಡಿ ಹೇಳಿದ್ದಾರೆ.

ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ತಜ್ಞ ಕೆ.ಪಿ. ಸುರೇಶ್ “ಸರ್ಕಾರ ಹೀಗೆ ಹೇಳಿದ ಮಾತ್ರಕ್ಕೆ ಕುಸಿದ ಮಾರುಕಟ್ಟೆಗಳೇನು ಎದ್ದು ನಿಲ್ಲುವುದಿಲ್ಲ. ಯಾಕೆಂದರೆ ಸಾಗಣೆ ಮತ್ತು ಪೂರೈಕೆಯಿಲ್ಲದೆ ಸಂಪೂರ್ಣ ಕುಸಿದು ಬಿದ್ದಿರುವ ಮಾರುಕಟ್ಟೆಯಲ್ಲಿ ಸರಕುಗಳನ್ನು ಖರೀದಿಸಿ, ದಾಸ್ತಾನು ಇಟ್ಟು ವಿಲೇವಾರಿ ಮಾಡುವ ಕಷ್ಟದ ಪ್ರಯತ್ನ ಯಾರೂ ಮಾಡುವುದಿಲ್ಲ. ಈ ಸತ್ಯ ಸರ್ಕಾರಕ್ಕೆ ಗೊತ್ತಿದೆ ಆದರೂ ಸರ್ಕಾರ ಸುಳ್ಳು ಹೇಳುತ್ತಿದೆ. ರೈಲುಗಳ ಮೂಲಕ ಕಳುಹಿಸುತ್ತೇನೆ ಎನ್ನುವ ಸರಕಾರ ರೈಲುಗಳು ಸಂಪೂರ್ಣವಾಗಿ ಬಂದ್‌ ಆಗಿರುವಾಗ ಎಲ್ಲಿಗೆ ಕಳುಹಿಸುತ್ತಾರೆ? ಬೇರೆ ರಾಜ್ಯಗಳಲ್ಲಿ ಇದಕ್ಕಿಂತಲೂ ಕಷ್ಟಕರವಾದ ಪರಿಸ್ಥಿತಿಯಿದೆ” ಎಂದು ಹೇಳಿದರು.

“ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ಬೆಳೆಗಳನ್ನು ಕೊಂಡುಕೊಳ್ಳಬೇಕಾಗಿದೆ, ಇದಕ್ಕೆ ರೈತರ ಬಳಿಯಿರುವ ಸ್ಮಾರ್ಟ್‌ಫೋನುಗಳನ್ನು ಬಳಸಿಕೊಂಡು ತೋಟಗಾರಿಕಾ ಕೃಷಿ ಮತ್ತು ಕೃಷಿ ಮಾರುಕಟ್ಟೆ ಇಲಾಖೆಯ ಮೂಲಕ ಮಾರುಕಟ್ಟೆ ಮಧ್ಯಪ್ರವೇಶ ನೀತಿಯ ಅನ್ವಯ, ರೈತ ತನ್ನ ಬೆಳೆಯ ಬಗ್ಗೆ ಇಲಾಖೆಗೆ ಮಾಹಿತಿ ಕೊಟ್ಟರೆ, ಇಲಾಖೆ ವಾಟ್ಸಪ್ ಮೂಲಕ ಲೊಕೇಶನ್ ಕಳುಹಿಸಬೇಕು. ಅಲ್ಲಿಗೆ ರೈತ ತಲುಪಿಸಿದರೆ ಅದನ್ನು ಕೊಳ್ಳುವ ವ್ಯವಸ್ಥೆ ಇಲಾಖೆ ಮಾಡಬೇಕಾಗುತ್ತದೆ. ಸರಕಾರ ಹಾಲಿನ ಬಗ್ಗೆ ತೆಗೆದುಕೊಂಡ ನೀತಿಯಂತೆ ಹಾಳಾಗಿ ಹೋಗುತ್ತಿರುವ ಹಣ್ಣುಗಳನ್ನು ಇದೇ ರೀತಿ ಬಡವರಿಗೆ ಹಂಚಬಹುದು. ಕಟಾವು ಮಾಡುವ ಮೊದಲು ರೈತ ಸರಕಾರಕ್ಕೆ ತಿಳಿಸಿದರೆ ಸರ್ಕಾರ ಹೇಳುವ ಕಡೆಗೆ ರೈತನೇ ತಂದು ಕೊಡುವಂತೆ ನೀತಿಗಳನ್ನು ಕೈಗೊಳ್ಳಬೇಕು. ಇದನ್ನು ನಡೆಸಲು ಸರಕಾರ ಮಧ್ಯಪ್ರವೇಶ ಮಾಡಬೇಕು” ಎಂದು ಕೆ.ಪಿ.ಸುರೇಶ್ ಹೇಳಿದ್ದಾರೆ.

ಕೃಷಿ ಅರ್ಥಶಾಸ್ತ್ರಜ್ಞ ಮತ್ತು ಕರ್ನಾಟಕ ಸರ್ಕಾರದ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಮ್ಮರಡಿ ಅವರು “ಈಗಾಗಲೇ ರೈತರು ತಾವು ಬೆಳೆಗಳನ್ನು ಬೆಳೆದು ಒದ್ದಾಡುತ್ತಿದ್ದಾರೆ. ರೈತರಿಗೆ ತಮ್ಮ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲು ಈ ಹಿಂದೆಯೆ ಸಮಸ್ಯೆಗಳಿದ್ದವು ಈಗ ಇನ್ನೂ ಸಮಸ್ಯೆಗಳು ಜಾಸ್ತಿಯಾಗಿವೆ. ಈ ನಿಷೇಧಗಳು ತೆಗೆದ ತಕ್ಷಣ ಸಮಸ್ಯೆಗಳು ಬಗೆಹರಿಯುವುದಿಲ್ಲ” ಎಂದು ಹೇಳಿದ್ದಾರೆ.

’ಈಗ ಸರ್ಕಾರ ಮಾಡಬೇಕಾಗಿರುವುದೇನೆಂದರೆ ರೈತರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ತರತಕ್ಕಂತಹ ಸಾಗಾಣಿಕೆಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು, ಯಾಕೆಂದರೆ ದೇಶಕ್ಕೆ ಅನ್ನ ಹಾಕುವುದು ಸರ್ಕಾರದ ಜವಾಬ್ದಾರಿ. ಇದಕ್ಕೆಲ್ಲ ಹೆಚ್ಚೆಂದರೆ ಸರ್ಕಾರಕ್ಕೆ 200 ಕೋಟಿಯಷ್ಟು ಖರ್ಚಾಗುತ್ತದೆ. ಹಳ್ಳಿಗಳಲ್ಲಿ ಇರುವ ಎಲ್ಲಾ ವಾಹನಗಳನ್ನು ಇದಕ್ಕೆ ಬಳಸಬಹುದು, ಇದರಿಂದ ಅವರಿಗೂ ಆದಾಯವಾಗುತ್ತದೆ. ಬೆಂಬಲ ಬೆಲೆ ಇಲ್ಲದ ಹಣ್ಣು-ತರಕಾರಿಗಳಿಗೆ ಅವುಗಳನ್ನು ಬೆಳೆಯಲು ಖರ್ಚಾದ ಹಣವನ್ನಾದರು ನೀಡುವಂತಿರಬೇಕು. ಎಪಿಎಂಸಿಗಳಲ್ಲಿ ಶೀತಲಿಕರಣದ ವ್ಯವಸ್ಥೆ ಸರ್ಕಾರ ಮಾಡಬೇಕು. ಅಲ್ಲದೆ ಅಡಮಾನ ಸಾಲಗಳನ್ನು ಬಡ್ಡಿರಹಿತವಾಗಿ ನೀಡಬೇಕು. ಇದರಿದಾಗಿ ರೈತರಿಗೆ ಉಪಕಾರವಾಗುತ್ತದೆ” ಎಂದು ಪ್ರಕಾಶ್ ಕಮ್ಮರಡಿ ಅಭಿಪ್ರಾಯ ಪಟ್ಟರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಇವರು ಮಾತನಾಡಿ “ಒಂದು ಕಡೆ ಲಾಕ್‌ಡೌನಾಗಿ ಜನರು ಕಷ್ಟ ಪಡುತ್ತಿದ್ದಾರೆ. ಈಗ ಹಣ್ಣು ತರಕಾರಿ ನೇರ ಮಾರುಕಟ್ಟೆಗೆ ದಾಸ್ತಾನು ಮಾಡುವಂತೆ ಕೇಳಿಕೊಂಡಿದ್ದೇವೆ. ಇದನ್ನು ಸರ್ಕಾರ ಮಾಡಬಹುದಾಗಿದೆ. ಈ ತಾತ್ಕಾಲಿಕ ಸಮಸ್ಯೆಗಳನ್ನು ಬಗೆಹರಿಸಲು ಅದದೇ ಸ್ಥಳಗಳಲ್ಲಿ ಬೆಳೆಗಳನ್ನು ನೇರವಾಗಿ ಖರೀದಿ ಮಾಡಿ ಸರ್ಕಾರವೇ ಬೇಕಾದ ಕಡೆಗೆ ಸಾಗಿಸಬೇಕು. ಇರುವಂತಹ ಸಂಪನ್ಮೂಲವನ್ನು ಕ್ರೋಢೀಕರಿಸಿ ಅದನ್ನು ತಲುಪಿಸಬೇಕು. ಈಗ ಹೇಳಿರುವ ವಿಷಯಗಳೆಲ್ಲವೂ ಯಥಾಸ್ಥಿತಿವಾದವಾಗಿದೆ. ಇವೆಲ್ಲ ಪರಿಣಾಮಕಾರಿಯಾಗಿದೆ ಎಂದು ನನಗೆ ಅನಿಸುತ್ತಿಲ್ಲ. ಗಡಿಗಳೆಲ್ಲಾ ಮುಚ್ಚಲ್ಪಟ್ಟಿರುವುದರಿಂದ ತುಂಬಾ ಸಮಸ್ಯೆಗಳಾಗಿವೆ. ಕೇರಳ ಸರ್ಕಾರದ ಮಾದರಿಯಲ್ಲಿ ನಮ್ಮ ಸರ್ಕಾರವು ಕೆಲಸ ಮಾಡಬೇಕು. ಮುಖ್ಯಮಂತ್ರಿಗಳು ಕಾಳಜಿಯಿಂದ ಕೆಲಸ ಮಾಡಿದ್ದಾರೆ ಎಂದು ಕಾಣುತ್ತದೆ. ಆದರೆ ಸಮಸ್ಯೆಗಳು ಹಾಗೆಯೇ ಉಳಿಯುತ್ತದೆ” ಎಂದು ಹೇಳಿದ್ದಾರೆ.

ಮಾಜಿ ಶಾಸಕರಾದ ಬಿ.ಆರ್‌.ಪಾಟಿಲ್ ಅವರು “ಸರ್ಕಾರ ಒಂದು ಕಡೆ ಹಣ್ಣು ತರಕಾರಿಗೆ ಬೇಡಿಕೆ ಕುಸಿದಿದೆ ಎಂದು ಹೇಳುತ್ತಿದೆ, ಆದರೆ ಸರಿಪಡಿಸಲು ಏನೂ ಮಾಡುತ್ತಿಲ್ಲ. ಅವರಿಗೆ ಬೆಂಬಲ ಬೆಲೆ ಕೊಟ್ಟು ಖರೀದಿಸುವ ಬಗ್ಗೆ ಎಲ್ಲಿಯು ಹೇಳುತ್ತಿಲ್ಲ. ರೈತರ ಬೆಳೆಗಳನ್ನು ರೈಲುಗಳಲ್ಲಿ ಕಳುಹಿಸುವ ಬಗ್ಗೆ ಸರ್ಕಾರ ಹೇಳುತ್ತಿದೆ ಆದರೆ ಈಗ ರೈಲು ಸಂಚಾರವೆ ಇಲ್ಲ. ಅಲ್ಲದೆ ದೊಡ್ಡ ಮಟ್ಟದಲ್ಲಿ ಖರೀದಿ ಮಾಡಿದರೆ, ಶೀತಲೀಕರಣ ಮಾಡುವ ವ್ಯವಸ್ಥೆ ಕೂಡಾ ಇಲ್ಲ. ಸರ್ಕಾರ ಹೇಳುವ ಯಾವುದೇ ವಿಷಯ ಕಾರ್ಯಸಾಧುವಲ್ಲ. ಟೊಮೆಟೊ ಸಂಸ್ಕರಣೆ ಬಗ್ಗೆ ಹೇಳಿದ್ದಾರೆ ಆದರೆ ಅದು ಒಂದು ಉದ್ದಿಮೆ, ಅದನ್ನು ಮಾಡುವವರು ಮಾಡೆ ಮಾಡುತ್ತಾರೆ. ಹಾಪ್‌ಕಾಮ್ಸ್ ಖರೀದಿ ಮಾಡುವ ಬಗ್ಗೆ ಹೇಳುತ್ತಾರೆ. ಆದರೆ ಹಾಪ್‌ಕಾಮ್ಸ್ ಹಳೆ ಮೈಸೂರು ಪ್ರದೇಶದಲ್ಲಿ ಮಾತ್ರ ಜಾಸ್ತಿ ಹಿಡಿತ ಹೊಂದಿದೆ ಮತ್ತು ಕಲ್ಯಾಣ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದಲ್ಲಿ ಹಾಪ್‌ಕಾಮ್ಸ್‌ ಇಲ್ಲ. ಆದರೆ ಇದರ ಬಗ್ಗೆ ಸರ್ಕಾರ ಮಾತನಾಡುವುದಿಲ್ಲ” ಎಂದು ಹೇಳಿದ್ದಾರೆ.

”ದಿನಸಿ ಅಂಗಡಿಗಳಲ್ಲಿ ಈಗಾಗಲೆ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ, ಆದರೆ ಅದರ ವಿರುದ್ದ ಇಲ್ಲಿವರೆಗು ಎಲ್ಲಿಯು ಒಂದೇ ಒಂದು ಪ್ರಕರಣ ದಾಖಲಾಗಿಲ್ಲ. ಮುಖ್ಯವಾಗಿ ಸರ್ಕಾರ ಯಾವುದೆ ಹಣಕಾಸಿನ ತೊಂದರೆಯನ್ನು ತೆಗೆದುಕೊಂಡಿಲ್ಲ. ಬಿತ್ತನೆ ಬೀಜ,ರಸಗೊಬ್ಬರಗಳ ಬಗ್ಗೆ ಹೇಳಿದೆಯಾದರು ಅವೆಲ್ಲ ಪ್ರತೀ ವರ್ಷ ಇರುವಂತಹದ್ದು. ರೈಸ್ ಮಿಲ್ಲುಗಳನ್ನು ನಡೆಸುವಂತೆ ಸರ್ಕಾರ ಹೇಳಿದೆ. ಆದರೆ ಬೇಡಿಕೆ ಇದ್ದರೆ ಮಿಲ್ಲುಗಳು ಅದಾಗಿಯೆ ನಡೆಯುತ್ತವೆ. ಬೇಡಿಕೆ ಇಲ್ಲವೆಂದರೂ ಮಿಲ್ಲುಗಳನ್ನು ನಡೆಸಿ ನಾವು ಇದ್ದೇವೆ ಎಂದು ಸರ್ಕಾರ ಹೇಳುವುದಿಲ್ಲ. ಈಗಾಗಲೇ ಗುಲ್ಬರ್ಗಾದಲ್ಲಿ ಮುನ್ನೂರು ತೊಗರಿಬೇಳೆ ಮಿಲ್ಲುಗಳು ಬಂದ್ ಆಗಿವೆ, ಈ ಮಿಲ್ಲುಗಳ ಅಸೋಸಿಯೆಶನ್‌ಗಳು ಸರ್ಕಾರಕ್ಕೆ ಬೇಡಿಕೆಗೆ ಸಲ್ಲಿಸಿದ್ದರೂ ಸರ್ಕಾಕ್ಕೆ ಅದರ ಬಗ್ಗೆ ಕಾಳಜಿ ಇಲ್ಲ. ಸರ್ಕಾರ ಇಲ್ಲಿಯೆ ಖರೀದಿ ಮಾಡಿ ಪಡಿತರ ಮೂಲಕ ಎರಡೆರಡು ಕೇಜಿ ಕೊಟ್ಟರೂ ಸಮಸ್ಯೆ ಪರಿಹಾರವಾಗುತ್ತದೆ. ಸರ್ಕಾರದ ಈ ನಿಲುವುಗಳಲ್ಲಿ ಯಾವುದೇ ವಿಶೇಷತೆ ಇಲ್ಲ” ಎಂದು ಬಿ.ಆರ್‌.ಪಾಟಿಲ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...