Homeಕರೋನಾ ತಲ್ಲಣಮೇ 10 ರಿಂದ ಲಾಕ್‌ಡೌನ್‌‌‌ - ‘ಜನ ಹೊಟ್ಟೆಗೆ ಏನು ತಿಂತಾರೆ?’; ಆಕ್ರೋಶ

ಮೇ 10 ರಿಂದ ಲಾಕ್‌ಡೌನ್‌‌‌ – ‘ಜನ ಹೊಟ್ಟೆಗೆ ಏನು ತಿಂತಾರೆ?’; ಆಕ್ರೋಶ

ತಮಿಳುನಾಡು ಮತ್ತು ಕೇರಳ ರಾಜ್ಯಗಳು ಲಾಕ್‌ಡೌನ್‌ ಹೇರುವುದರ ಜೊತೆಗೆ ಜನರಿಗೆ ಕೊರೊನಾ ಪರಿಹಾರವಾಗಿ ನಗದು ಮತ್ತು ದಿನಸಿಗಳನ್ನು ಪಡಿತರ ವ್ಯವಸ್ಥೆಯ ಮೂಲಕ ನೀಡುತ್ತಿದೆ.

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆಯು ತೀವ್ರಗೊಂಡ ಪರಿಣಾಮ ಆರೋಗ್ಯ ಸೌಲಭ್ಯಗಳು ಸಿಗದೆ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಅಘೋಷಿತ ಲಾಕ್‌ಡೌನ್ ಇದೆ. ಶುಕ್ರವಾರ ಸಚಿವ ಸಂಪುಟ ಹಾಗೂ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಯಡಿಯೂರಪ್ಪ ಮೇ 10 ರಿಂದ 24 ರವೆಗೆ ‘ಸಂಪೂರ್ಣ ಲಾಕ್‌ಡೌನ್‌’ ಹೇರಿದ್ದಾರೆ. ಆದರೆ ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಆಕ್ರೋಶಗಳೆದ್ದಿದ್ದು ಸರ್ಕಾರವನ್ನು ತಾರಾಟೆಗೆ ತೆಗೆದುಕೊಂಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅಘೋಷಿತ ಲಾಕ್‌ಡೌನ್‌ ಬಗ್ಗೆ ಮಾತನಾಡಿದ ಸಿಎಂ, “ಕರ್ಫ್ಯೂ ವಿಧಿಸಿರುವುದು ಹೆಚ್ಚಿನ ಪರಿಣಾಮ ಬೀರಿಲ್ಲ. ಜನರು ನಿಯಮ ಉಲ್ಲಂಘಿಸಿ ಓಡಾಡುತ್ತಿರುವುದು ಕಂಡು ಬಂದಿದೆ. ಆದ್ದರಿಂದ 10 ರಿಂದ 24 ರವರೆಗೆ ಲಾಕ್‌ಡೌನ್‌ ಘೋಷಿಸಲಾಗುವುದು. ಈ ಸಮಯದಲ್ಲಿ ಹಾಲು, ಹಣ್ಣು, ತರಕಾರಿ, ಮಾಂಸ, ದಿನಸಿ ವಸ್ತುಗಳ ಮಾರಾಟಕ್ಕೆ ಬೆಳಿಗ್ಗೆ 6 ರಿಂದ 10 ರವರೆಗೆ ಅವಕಾಶವಿದೆ. ತಳ್ಳು ಗಾಡಿಯ ಮೂಲಕ ಹಣ್ಣು ತರಕಾರಿ ಮಾರಾಟಕ್ಕೆ ಅವಕಾಶ ಇದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಉಳಿದಂತೆ, ಲಾಕ್‌ಡೌನ್‌ನಲ್ಲಿ ಏನಿದೆ ಏನಿಲ್ಲ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದರು. ಅದನ್ನು ಕೆಳಗಿನ ಚಿತ್ರದಲ್ಲಿ ನೋಡಬಹುದಾಗಿದೆ.

ಮುಖ್ಯಮಂತ್ರಿ ಲಾಕ್‌ಡೌನ್‌ ಹೇರುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳೆದ್ದಿದೆ. ಕೇವಲ ಲಾಕ್‌ಡೌನ್‌ ಹೇರಿದರೆ ಮುಗಿಯಿತೆ, ಜನರು ಕೆಲಸವಿಲ್ಲದೆ ಬದುಕುವುದಾರೂ ಹೇಗೆ? ತಮಿಳುನಾಡು ಮತ್ತು ಕೇರಳ ರಾಜ್ಯಗಳು ಲಾಕ್‌ಡೌನ್‌ ಹೇರುವುದರ ಜೊತೆಗೆ ಜನರಿಗೆ ಕೊರೊನಾ ಪರಿಹಾರವಾಗಿ ನಗದು ಮತ್ತು ದಿನಸಿಗಳನ್ನು ಪಡಿತರ ವ್ಯವಸ್ಥೆಯ ಮೂಲಕ ನೀಡುತ್ತಿದೆ. ಆದರೆ ಯಡಿಯುರಪ್ಪ ನೇತೃತ್ವದ ರಾಜ್ಯ ಸರ್ಕಾರ ಇದು ಯಾವುದನ್ನೂ ಮಾಡದೆ ಕೇವಲ ಲಾಕ್‌ಡೌನ್‌ ಹೇರಿ ಸುಮ್ಮನಿದ್ದರೆ ಸಾಕೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬೆಡ್‌‌ಗೆ ಪರದಾಟ; ತನ್ನ ಪತಿಗಾಗಿ ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟಿಸಿದ ಮಹಿಳೆ

ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿರುವ ಇರ್ಫಾನ್ ಹಕ್, “ಮುಖ್ಯಮಂತ್ರಿ ಬಡ ಜನರಿಗೆ ಪರಿಹಾರವೇನು ಎಂದು ಕೇಳಿದರೆ, ಮಾರ್ಗಸೂಚಿ ಆಮೇಲೆ ಬಿಡುಗಡೆ ಮಾಡ್ತೀವಿ ಅಂತ ಮುಖ ತಿರುಗಿಸಿ ಹೋಗುತ್ತಾರೆ. ಪರಿಹಾರಗಳಿಲ್ಲದ ಲಾಕ್‌ಡೌನ್‌ ಬಡವರಿಗೆ ಬಹಳ ತೊಂದರೆ ನೀಡಲಿದೆ. ನೆರೆಯ ಸರಕಾರಗಳು ಜನರ ಕಷ್ಟಗಳಿಗೆ ಈ ರೀತಿ ಸ್ಪಂದಿಸುತ್ತಿದ್ದಾರೆ. ನಮ್ಮವರು ಬೆಳಿಗ್ಗೆಯೊಮ್ಮೆ, ಸಂಜೆಗೊಮ್ಮೆ ಮಾರ್ಗಸೂಚಿ ಬದಲಾಯಿಸಲು ಲಾಯಕ್ಕು” ಎಂದು ತಮಿಳುನಾಡು ಮತ್ತು ಕೇರಳ ಸರ್ಕಾರದ ಕೊರೊನಾ ಪರಿಹಾರದ ಸುದ್ದಿಯ ಚಿತ್ರವನ್ನು ಹಂಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ನಮ್ಮ ಮಾತನ್ನೂ ಕೇಳಿ’- ಪ್ರಧಾನಿ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಾರ್ಖಂಡ್ ಸಿಎಂ

ಸಮುದ್ಯತಾ ರಾಜೇಶ್ ಅವರು, “ಹೀಗೇ ಲಾಕ್‌ಡೌನ್ ಮಾಡ್ತಾ ಇದ್ರೆ. ಆಮೇಲೆ ಜನರು #Act1978 ಸಿನಿಮಾದಲ್ಲಿ ಬರುವ ದೃಶ್ಯದ ಥರ ಬಾಂಬ್ ಕಟ್ಕೊಂಡು ಬಂದು ಮನೆ ಅಡ್ರೆಸ್ ಕೊಟ್ಟು ಬಾಡಿಗೆ, ಕರೆಂಟ್ ಬಿಲ್, ವಾಟರ್ ಬಿಲ್ ಕಟ್ಟಿ ಅಂತ ರಾಜಕಾರಣಿಗಳಿಗೆ ಹೇಳಬಹುದು. ಇರೋ ಅಕ್ಕಿನೂ ಕಿತ್ಕೊಂಡು ಏನೂ ನೆರವಾಗದೇ ಮನೆಲಿ‌ ಇರು ಅಂದ್ರೆ ಜನ ಹೊಟ್ಟೆಗೆ ಏನು ತಿಂತಾರೆ?? ಲಾಕ್‌ಡೌನ್ ಒಂದೇ ಪರಿಹಾರ ಅಂತಾದ್ರೆ‌ ಅದಕ್ಕೆ ಸರಿಯಾದ ವ್ಯವಸ್ಥೆ ಕೂಡ ಮಾಡಬೇಕಲ್ವಾ?” ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಸಾಹಕಾರ್‌ ಅಚ್ಚು, “ನಿರ್ದಿಷ್ಟ ಸಮಯದ ನಂತರ ಜನರು ರಸ್ತೆಗಿಳಿಯುವಂತಿಲ್ಲ. ಹಾಲಿನ ಬೂತ್ ಪೂರ್ತಿ ತೆರೆದಿರುತ್ತದೆ. ಬಹುಷಃ ಬೆಕ್ಕಿಗಾಗಿ ಇರಬಹುದು” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ರಾಜ್ಯಕ್ಕೆ ಆಮ್ಲಜನಕ ನೀಡುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶ- ’ಬೆಡ್’ ವಿಚಾರದಲ್ಲೇ ಇರುವ BJP ಸಂಸದರು!

ಕನ್ನಡಪರ ಹೋರಾಟಗಾರ ದಿನೇಶ್ ಕುಮಾರ್‌ ಅವರು, “ಲಾಕ್ ಡೌನ್ ಮಾಡಿದ್ದೀರಿ, ಮಾಡ್ಕೊಳ್ಳಿ. ನಿಮ್ದು,‌ ಮೀಡಿಯಾಗಳದ್ದು ಬಿಟ್ಟಿ ಉಪದೇಶಗಳ ಜಾತ್ರೆ ನಡೀತಾ ಇದೆ. ನಡೀಲಿ. ನಮ್ಮ ಜವಾಬ್ದಾರಿ ನಾವು ಪಾಲಿಸುತ್ತೇವೆ. ನೀವು ಒಂದೇ ಒಂದು‌ ಕೆಲಸ ಮಾಡಿಬಿಡಿ. ಹೇಗೂ ಈ ತಿಂಗಳ ಅಂತ್ಯದವರೆಗೆ ಲಾಕ್ ಡೌನ್ ಇರುತ್ತೆ.‌ ನಾವು ಮನೆಗಳ ಒಳಗೆ ಇರ‌್ತೀವಿ. ಅದೇನು ಮಾಡ್ತೀರೋ ಮಾಡಿ, ಹದಿನೆಂಟು ವಯಸ್ಸು ದಾಟಿದ ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೆ ಮನೆಮನೆಗೆ ಹೋಗಿ ಕೋವಿಡ್ ಲಸಿಕೆ ಕೊಟ್ಟುಬಿಡಿ. ಎರಡನೇ ಅಲೆಯಿಂದ ಬದುಕಿ‌ ಉಳಿದವರು ಮೂರನೇ ಅಲೆಯಲ್ಲಿ ಜೀವ ಉಳಿಸಿಕೊಳ್ಳುವ ಪ್ರಯತ್ನನಾದ್ರೂ ಮಾಡ್ತೀವಿ. ಇದೊಂದೇ ಕೆಲಸ ಮಾಡಿಬಿಡಿ. ಎಲ್ಲ ಜನಗಳ ಮೇಲೆ ಜವಾಬ್ದಾರಿ ಹೊರೆಸಿದರೆ ಮುಗೀತಾ? ನೀವು ಏನನ್ನೂ ಮಾಡೋದಿಲ್ವಾ? ನಾಚಿಗೆಗೆಟ್ಟೋರೇ, ಇಷ್ಟನ್ನಾದ್ರೂ ಮಾಡಿ ಅಥವಾ ನಾವು ಅಯೋಗ್ಯರು ಅಂತ ಒಪ್ಪಿಕೊಂಡು ತಲೆತಗ್ಗಿಸಿ ನಿಂತುಕೊಳ್ಳಿ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....