Homeಕರೋನಾ ತಲ್ಲಣಮೇ 10 ರಿಂದ ಲಾಕ್‌ಡೌನ್‌‌‌ - ‘ಜನ ಹೊಟ್ಟೆಗೆ ಏನು ತಿಂತಾರೆ?’; ಆಕ್ರೋಶ

ಮೇ 10 ರಿಂದ ಲಾಕ್‌ಡೌನ್‌‌‌ – ‘ಜನ ಹೊಟ್ಟೆಗೆ ಏನು ತಿಂತಾರೆ?’; ಆಕ್ರೋಶ

ತಮಿಳುನಾಡು ಮತ್ತು ಕೇರಳ ರಾಜ್ಯಗಳು ಲಾಕ್‌ಡೌನ್‌ ಹೇರುವುದರ ಜೊತೆಗೆ ಜನರಿಗೆ ಕೊರೊನಾ ಪರಿಹಾರವಾಗಿ ನಗದು ಮತ್ತು ದಿನಸಿಗಳನ್ನು ಪಡಿತರ ವ್ಯವಸ್ಥೆಯ ಮೂಲಕ ನೀಡುತ್ತಿದೆ.

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆಯು ತೀವ್ರಗೊಂಡ ಪರಿಣಾಮ ಆರೋಗ್ಯ ಸೌಲಭ್ಯಗಳು ಸಿಗದೆ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಅಘೋಷಿತ ಲಾಕ್‌ಡೌನ್ ಇದೆ. ಶುಕ್ರವಾರ ಸಚಿವ ಸಂಪುಟ ಹಾಗೂ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಯಡಿಯೂರಪ್ಪ ಮೇ 10 ರಿಂದ 24 ರವೆಗೆ ‘ಸಂಪೂರ್ಣ ಲಾಕ್‌ಡೌನ್‌’ ಹೇರಿದ್ದಾರೆ. ಆದರೆ ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಆಕ್ರೋಶಗಳೆದ್ದಿದ್ದು ಸರ್ಕಾರವನ್ನು ತಾರಾಟೆಗೆ ತೆಗೆದುಕೊಂಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅಘೋಷಿತ ಲಾಕ್‌ಡೌನ್‌ ಬಗ್ಗೆ ಮಾತನಾಡಿದ ಸಿಎಂ, “ಕರ್ಫ್ಯೂ ವಿಧಿಸಿರುವುದು ಹೆಚ್ಚಿನ ಪರಿಣಾಮ ಬೀರಿಲ್ಲ. ಜನರು ನಿಯಮ ಉಲ್ಲಂಘಿಸಿ ಓಡಾಡುತ್ತಿರುವುದು ಕಂಡು ಬಂದಿದೆ. ಆದ್ದರಿಂದ 10 ರಿಂದ 24 ರವರೆಗೆ ಲಾಕ್‌ಡೌನ್‌ ಘೋಷಿಸಲಾಗುವುದು. ಈ ಸಮಯದಲ್ಲಿ ಹಾಲು, ಹಣ್ಣು, ತರಕಾರಿ, ಮಾಂಸ, ದಿನಸಿ ವಸ್ತುಗಳ ಮಾರಾಟಕ್ಕೆ ಬೆಳಿಗ್ಗೆ 6 ರಿಂದ 10 ರವರೆಗೆ ಅವಕಾಶವಿದೆ. ತಳ್ಳು ಗಾಡಿಯ ಮೂಲಕ ಹಣ್ಣು ತರಕಾರಿ ಮಾರಾಟಕ್ಕೆ ಅವಕಾಶ ಇದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಉಳಿದಂತೆ, ಲಾಕ್‌ಡೌನ್‌ನಲ್ಲಿ ಏನಿದೆ ಏನಿಲ್ಲ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದರು. ಅದನ್ನು ಕೆಳಗಿನ ಚಿತ್ರದಲ್ಲಿ ನೋಡಬಹುದಾಗಿದೆ.

ಮುಖ್ಯಮಂತ್ರಿ ಲಾಕ್‌ಡೌನ್‌ ಹೇರುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳೆದ್ದಿದೆ. ಕೇವಲ ಲಾಕ್‌ಡೌನ್‌ ಹೇರಿದರೆ ಮುಗಿಯಿತೆ, ಜನರು ಕೆಲಸವಿಲ್ಲದೆ ಬದುಕುವುದಾರೂ ಹೇಗೆ? ತಮಿಳುನಾಡು ಮತ್ತು ಕೇರಳ ರಾಜ್ಯಗಳು ಲಾಕ್‌ಡೌನ್‌ ಹೇರುವುದರ ಜೊತೆಗೆ ಜನರಿಗೆ ಕೊರೊನಾ ಪರಿಹಾರವಾಗಿ ನಗದು ಮತ್ತು ದಿನಸಿಗಳನ್ನು ಪಡಿತರ ವ್ಯವಸ್ಥೆಯ ಮೂಲಕ ನೀಡುತ್ತಿದೆ. ಆದರೆ ಯಡಿಯುರಪ್ಪ ನೇತೃತ್ವದ ರಾಜ್ಯ ಸರ್ಕಾರ ಇದು ಯಾವುದನ್ನೂ ಮಾಡದೆ ಕೇವಲ ಲಾಕ್‌ಡೌನ್‌ ಹೇರಿ ಸುಮ್ಮನಿದ್ದರೆ ಸಾಕೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬೆಡ್‌‌ಗೆ ಪರದಾಟ; ತನ್ನ ಪತಿಗಾಗಿ ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟಿಸಿದ ಮಹಿಳೆ

ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿರುವ ಇರ್ಫಾನ್ ಹಕ್, “ಮುಖ್ಯಮಂತ್ರಿ ಬಡ ಜನರಿಗೆ ಪರಿಹಾರವೇನು ಎಂದು ಕೇಳಿದರೆ, ಮಾರ್ಗಸೂಚಿ ಆಮೇಲೆ ಬಿಡುಗಡೆ ಮಾಡ್ತೀವಿ ಅಂತ ಮುಖ ತಿರುಗಿಸಿ ಹೋಗುತ್ತಾರೆ. ಪರಿಹಾರಗಳಿಲ್ಲದ ಲಾಕ್‌ಡೌನ್‌ ಬಡವರಿಗೆ ಬಹಳ ತೊಂದರೆ ನೀಡಲಿದೆ. ನೆರೆಯ ಸರಕಾರಗಳು ಜನರ ಕಷ್ಟಗಳಿಗೆ ಈ ರೀತಿ ಸ್ಪಂದಿಸುತ್ತಿದ್ದಾರೆ. ನಮ್ಮವರು ಬೆಳಿಗ್ಗೆಯೊಮ್ಮೆ, ಸಂಜೆಗೊಮ್ಮೆ ಮಾರ್ಗಸೂಚಿ ಬದಲಾಯಿಸಲು ಲಾಯಕ್ಕು” ಎಂದು ತಮಿಳುನಾಡು ಮತ್ತು ಕೇರಳ ಸರ್ಕಾರದ ಕೊರೊನಾ ಪರಿಹಾರದ ಸುದ್ದಿಯ ಚಿತ್ರವನ್ನು ಹಂಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ನಮ್ಮ ಮಾತನ್ನೂ ಕೇಳಿ’- ಪ್ರಧಾನಿ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಾರ್ಖಂಡ್ ಸಿಎಂ

ಸಮುದ್ಯತಾ ರಾಜೇಶ್ ಅವರು, “ಹೀಗೇ ಲಾಕ್‌ಡೌನ್ ಮಾಡ್ತಾ ಇದ್ರೆ. ಆಮೇಲೆ ಜನರು #Act1978 ಸಿನಿಮಾದಲ್ಲಿ ಬರುವ ದೃಶ್ಯದ ಥರ ಬಾಂಬ್ ಕಟ್ಕೊಂಡು ಬಂದು ಮನೆ ಅಡ್ರೆಸ್ ಕೊಟ್ಟು ಬಾಡಿಗೆ, ಕರೆಂಟ್ ಬಿಲ್, ವಾಟರ್ ಬಿಲ್ ಕಟ್ಟಿ ಅಂತ ರಾಜಕಾರಣಿಗಳಿಗೆ ಹೇಳಬಹುದು. ಇರೋ ಅಕ್ಕಿನೂ ಕಿತ್ಕೊಂಡು ಏನೂ ನೆರವಾಗದೇ ಮನೆಲಿ‌ ಇರು ಅಂದ್ರೆ ಜನ ಹೊಟ್ಟೆಗೆ ಏನು ತಿಂತಾರೆ?? ಲಾಕ್‌ಡೌನ್ ಒಂದೇ ಪರಿಹಾರ ಅಂತಾದ್ರೆ‌ ಅದಕ್ಕೆ ಸರಿಯಾದ ವ್ಯವಸ್ಥೆ ಕೂಡ ಮಾಡಬೇಕಲ್ವಾ?” ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಸಾಹಕಾರ್‌ ಅಚ್ಚು, “ನಿರ್ದಿಷ್ಟ ಸಮಯದ ನಂತರ ಜನರು ರಸ್ತೆಗಿಳಿಯುವಂತಿಲ್ಲ. ಹಾಲಿನ ಬೂತ್ ಪೂರ್ತಿ ತೆರೆದಿರುತ್ತದೆ. ಬಹುಷಃ ಬೆಕ್ಕಿಗಾಗಿ ಇರಬಹುದು” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ರಾಜ್ಯಕ್ಕೆ ಆಮ್ಲಜನಕ ನೀಡುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶ- ’ಬೆಡ್’ ವಿಚಾರದಲ್ಲೇ ಇರುವ BJP ಸಂಸದರು!

ಕನ್ನಡಪರ ಹೋರಾಟಗಾರ ದಿನೇಶ್ ಕುಮಾರ್‌ ಅವರು, “ಲಾಕ್ ಡೌನ್ ಮಾಡಿದ್ದೀರಿ, ಮಾಡ್ಕೊಳ್ಳಿ. ನಿಮ್ದು,‌ ಮೀಡಿಯಾಗಳದ್ದು ಬಿಟ್ಟಿ ಉಪದೇಶಗಳ ಜಾತ್ರೆ ನಡೀತಾ ಇದೆ. ನಡೀಲಿ. ನಮ್ಮ ಜವಾಬ್ದಾರಿ ನಾವು ಪಾಲಿಸುತ್ತೇವೆ. ನೀವು ಒಂದೇ ಒಂದು‌ ಕೆಲಸ ಮಾಡಿಬಿಡಿ. ಹೇಗೂ ಈ ತಿಂಗಳ ಅಂತ್ಯದವರೆಗೆ ಲಾಕ್ ಡೌನ್ ಇರುತ್ತೆ.‌ ನಾವು ಮನೆಗಳ ಒಳಗೆ ಇರ‌್ತೀವಿ. ಅದೇನು ಮಾಡ್ತೀರೋ ಮಾಡಿ, ಹದಿನೆಂಟು ವಯಸ್ಸು ದಾಟಿದ ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೆ ಮನೆಮನೆಗೆ ಹೋಗಿ ಕೋವಿಡ್ ಲಸಿಕೆ ಕೊಟ್ಟುಬಿಡಿ. ಎರಡನೇ ಅಲೆಯಿಂದ ಬದುಕಿ‌ ಉಳಿದವರು ಮೂರನೇ ಅಲೆಯಲ್ಲಿ ಜೀವ ಉಳಿಸಿಕೊಳ್ಳುವ ಪ್ರಯತ್ನನಾದ್ರೂ ಮಾಡ್ತೀವಿ. ಇದೊಂದೇ ಕೆಲಸ ಮಾಡಿಬಿಡಿ. ಎಲ್ಲ ಜನಗಳ ಮೇಲೆ ಜವಾಬ್ದಾರಿ ಹೊರೆಸಿದರೆ ಮುಗೀತಾ? ನೀವು ಏನನ್ನೂ ಮಾಡೋದಿಲ್ವಾ? ನಾಚಿಗೆಗೆಟ್ಟೋರೇ, ಇಷ್ಟನ್ನಾದ್ರೂ ಮಾಡಿ ಅಥವಾ ನಾವು ಅಯೋಗ್ಯರು ಅಂತ ಒಪ್ಪಿಕೊಂಡು ತಲೆತಗ್ಗಿಸಿ ನಿಂತುಕೊಳ್ಳಿ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...