Homeಕರೋನಾ ತಲ್ಲಣಮೇ 10 ರಿಂದ ಲಾಕ್‌ಡೌನ್‌‌‌ - ‘ಜನ ಹೊಟ್ಟೆಗೆ ಏನು ತಿಂತಾರೆ?’; ಆಕ್ರೋಶ

ಮೇ 10 ರಿಂದ ಲಾಕ್‌ಡೌನ್‌‌‌ – ‘ಜನ ಹೊಟ್ಟೆಗೆ ಏನು ತಿಂತಾರೆ?’; ಆಕ್ರೋಶ

ತಮಿಳುನಾಡು ಮತ್ತು ಕೇರಳ ರಾಜ್ಯಗಳು ಲಾಕ್‌ಡೌನ್‌ ಹೇರುವುದರ ಜೊತೆಗೆ ಜನರಿಗೆ ಕೊರೊನಾ ಪರಿಹಾರವಾಗಿ ನಗದು ಮತ್ತು ದಿನಸಿಗಳನ್ನು ಪಡಿತರ ವ್ಯವಸ್ಥೆಯ ಮೂಲಕ ನೀಡುತ್ತಿದೆ.

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆಯು ತೀವ್ರಗೊಂಡ ಪರಿಣಾಮ ಆರೋಗ್ಯ ಸೌಲಭ್ಯಗಳು ಸಿಗದೆ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಅಘೋಷಿತ ಲಾಕ್‌ಡೌನ್ ಇದೆ. ಶುಕ್ರವಾರ ಸಚಿವ ಸಂಪುಟ ಹಾಗೂ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಯಡಿಯೂರಪ್ಪ ಮೇ 10 ರಿಂದ 24 ರವೆಗೆ ‘ಸಂಪೂರ್ಣ ಲಾಕ್‌ಡೌನ್‌’ ಹೇರಿದ್ದಾರೆ. ಆದರೆ ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಆಕ್ರೋಶಗಳೆದ್ದಿದ್ದು ಸರ್ಕಾರವನ್ನು ತಾರಾಟೆಗೆ ತೆಗೆದುಕೊಂಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅಘೋಷಿತ ಲಾಕ್‌ಡೌನ್‌ ಬಗ್ಗೆ ಮಾತನಾಡಿದ ಸಿಎಂ, “ಕರ್ಫ್ಯೂ ವಿಧಿಸಿರುವುದು ಹೆಚ್ಚಿನ ಪರಿಣಾಮ ಬೀರಿಲ್ಲ. ಜನರು ನಿಯಮ ಉಲ್ಲಂಘಿಸಿ ಓಡಾಡುತ್ತಿರುವುದು ಕಂಡು ಬಂದಿದೆ. ಆದ್ದರಿಂದ 10 ರಿಂದ 24 ರವರೆಗೆ ಲಾಕ್‌ಡೌನ್‌ ಘೋಷಿಸಲಾಗುವುದು. ಈ ಸಮಯದಲ್ಲಿ ಹಾಲು, ಹಣ್ಣು, ತರಕಾರಿ, ಮಾಂಸ, ದಿನಸಿ ವಸ್ತುಗಳ ಮಾರಾಟಕ್ಕೆ ಬೆಳಿಗ್ಗೆ 6 ರಿಂದ 10 ರವರೆಗೆ ಅವಕಾಶವಿದೆ. ತಳ್ಳು ಗಾಡಿಯ ಮೂಲಕ ಹಣ್ಣು ತರಕಾರಿ ಮಾರಾಟಕ್ಕೆ ಅವಕಾಶ ಇದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಉಳಿದಂತೆ, ಲಾಕ್‌ಡೌನ್‌ನಲ್ಲಿ ಏನಿದೆ ಏನಿಲ್ಲ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದರು. ಅದನ್ನು ಕೆಳಗಿನ ಚಿತ್ರದಲ್ಲಿ ನೋಡಬಹುದಾಗಿದೆ.

ಮುಖ್ಯಮಂತ್ರಿ ಲಾಕ್‌ಡೌನ್‌ ಹೇರುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳೆದ್ದಿದೆ. ಕೇವಲ ಲಾಕ್‌ಡೌನ್‌ ಹೇರಿದರೆ ಮುಗಿಯಿತೆ, ಜನರು ಕೆಲಸವಿಲ್ಲದೆ ಬದುಕುವುದಾರೂ ಹೇಗೆ? ತಮಿಳುನಾಡು ಮತ್ತು ಕೇರಳ ರಾಜ್ಯಗಳು ಲಾಕ್‌ಡೌನ್‌ ಹೇರುವುದರ ಜೊತೆಗೆ ಜನರಿಗೆ ಕೊರೊನಾ ಪರಿಹಾರವಾಗಿ ನಗದು ಮತ್ತು ದಿನಸಿಗಳನ್ನು ಪಡಿತರ ವ್ಯವಸ್ಥೆಯ ಮೂಲಕ ನೀಡುತ್ತಿದೆ. ಆದರೆ ಯಡಿಯುರಪ್ಪ ನೇತೃತ್ವದ ರಾಜ್ಯ ಸರ್ಕಾರ ಇದು ಯಾವುದನ್ನೂ ಮಾಡದೆ ಕೇವಲ ಲಾಕ್‌ಡೌನ್‌ ಹೇರಿ ಸುಮ್ಮನಿದ್ದರೆ ಸಾಕೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬೆಡ್‌‌ಗೆ ಪರದಾಟ; ತನ್ನ ಪತಿಗಾಗಿ ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟಿಸಿದ ಮಹಿಳೆ

ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿರುವ ಇರ್ಫಾನ್ ಹಕ್, “ಮುಖ್ಯಮಂತ್ರಿ ಬಡ ಜನರಿಗೆ ಪರಿಹಾರವೇನು ಎಂದು ಕೇಳಿದರೆ, ಮಾರ್ಗಸೂಚಿ ಆಮೇಲೆ ಬಿಡುಗಡೆ ಮಾಡ್ತೀವಿ ಅಂತ ಮುಖ ತಿರುಗಿಸಿ ಹೋಗುತ್ತಾರೆ. ಪರಿಹಾರಗಳಿಲ್ಲದ ಲಾಕ್‌ಡೌನ್‌ ಬಡವರಿಗೆ ಬಹಳ ತೊಂದರೆ ನೀಡಲಿದೆ. ನೆರೆಯ ಸರಕಾರಗಳು ಜನರ ಕಷ್ಟಗಳಿಗೆ ಈ ರೀತಿ ಸ್ಪಂದಿಸುತ್ತಿದ್ದಾರೆ. ನಮ್ಮವರು ಬೆಳಿಗ್ಗೆಯೊಮ್ಮೆ, ಸಂಜೆಗೊಮ್ಮೆ ಮಾರ್ಗಸೂಚಿ ಬದಲಾಯಿಸಲು ಲಾಯಕ್ಕು” ಎಂದು ತಮಿಳುನಾಡು ಮತ್ತು ಕೇರಳ ಸರ್ಕಾರದ ಕೊರೊನಾ ಪರಿಹಾರದ ಸುದ್ದಿಯ ಚಿತ್ರವನ್ನು ಹಂಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ನಮ್ಮ ಮಾತನ್ನೂ ಕೇಳಿ’- ಪ್ರಧಾನಿ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಾರ್ಖಂಡ್ ಸಿಎಂ

ಸಮುದ್ಯತಾ ರಾಜೇಶ್ ಅವರು, “ಹೀಗೇ ಲಾಕ್‌ಡೌನ್ ಮಾಡ್ತಾ ಇದ್ರೆ. ಆಮೇಲೆ ಜನರು #Act1978 ಸಿನಿಮಾದಲ್ಲಿ ಬರುವ ದೃಶ್ಯದ ಥರ ಬಾಂಬ್ ಕಟ್ಕೊಂಡು ಬಂದು ಮನೆ ಅಡ್ರೆಸ್ ಕೊಟ್ಟು ಬಾಡಿಗೆ, ಕರೆಂಟ್ ಬಿಲ್, ವಾಟರ್ ಬಿಲ್ ಕಟ್ಟಿ ಅಂತ ರಾಜಕಾರಣಿಗಳಿಗೆ ಹೇಳಬಹುದು. ಇರೋ ಅಕ್ಕಿನೂ ಕಿತ್ಕೊಂಡು ಏನೂ ನೆರವಾಗದೇ ಮನೆಲಿ‌ ಇರು ಅಂದ್ರೆ ಜನ ಹೊಟ್ಟೆಗೆ ಏನು ತಿಂತಾರೆ?? ಲಾಕ್‌ಡೌನ್ ಒಂದೇ ಪರಿಹಾರ ಅಂತಾದ್ರೆ‌ ಅದಕ್ಕೆ ಸರಿಯಾದ ವ್ಯವಸ್ಥೆ ಕೂಡ ಮಾಡಬೇಕಲ್ವಾ?” ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಸಾಹಕಾರ್‌ ಅಚ್ಚು, “ನಿರ್ದಿಷ್ಟ ಸಮಯದ ನಂತರ ಜನರು ರಸ್ತೆಗಿಳಿಯುವಂತಿಲ್ಲ. ಹಾಲಿನ ಬೂತ್ ಪೂರ್ತಿ ತೆರೆದಿರುತ್ತದೆ. ಬಹುಷಃ ಬೆಕ್ಕಿಗಾಗಿ ಇರಬಹುದು” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ರಾಜ್ಯಕ್ಕೆ ಆಮ್ಲಜನಕ ನೀಡುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶ- ’ಬೆಡ್’ ವಿಚಾರದಲ್ಲೇ ಇರುವ BJP ಸಂಸದರು!

ಕನ್ನಡಪರ ಹೋರಾಟಗಾರ ದಿನೇಶ್ ಕುಮಾರ್‌ ಅವರು, “ಲಾಕ್ ಡೌನ್ ಮಾಡಿದ್ದೀರಿ, ಮಾಡ್ಕೊಳ್ಳಿ. ನಿಮ್ದು,‌ ಮೀಡಿಯಾಗಳದ್ದು ಬಿಟ್ಟಿ ಉಪದೇಶಗಳ ಜಾತ್ರೆ ನಡೀತಾ ಇದೆ. ನಡೀಲಿ. ನಮ್ಮ ಜವಾಬ್ದಾರಿ ನಾವು ಪಾಲಿಸುತ್ತೇವೆ. ನೀವು ಒಂದೇ ಒಂದು‌ ಕೆಲಸ ಮಾಡಿಬಿಡಿ. ಹೇಗೂ ಈ ತಿಂಗಳ ಅಂತ್ಯದವರೆಗೆ ಲಾಕ್ ಡೌನ್ ಇರುತ್ತೆ.‌ ನಾವು ಮನೆಗಳ ಒಳಗೆ ಇರ‌್ತೀವಿ. ಅದೇನು ಮಾಡ್ತೀರೋ ಮಾಡಿ, ಹದಿನೆಂಟು ವಯಸ್ಸು ದಾಟಿದ ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೆ ಮನೆಮನೆಗೆ ಹೋಗಿ ಕೋವಿಡ್ ಲಸಿಕೆ ಕೊಟ್ಟುಬಿಡಿ. ಎರಡನೇ ಅಲೆಯಿಂದ ಬದುಕಿ‌ ಉಳಿದವರು ಮೂರನೇ ಅಲೆಯಲ್ಲಿ ಜೀವ ಉಳಿಸಿಕೊಳ್ಳುವ ಪ್ರಯತ್ನನಾದ್ರೂ ಮಾಡ್ತೀವಿ. ಇದೊಂದೇ ಕೆಲಸ ಮಾಡಿಬಿಡಿ. ಎಲ್ಲ ಜನಗಳ ಮೇಲೆ ಜವಾಬ್ದಾರಿ ಹೊರೆಸಿದರೆ ಮುಗೀತಾ? ನೀವು ಏನನ್ನೂ ಮಾಡೋದಿಲ್ವಾ? ನಾಚಿಗೆಗೆಟ್ಟೋರೇ, ಇಷ್ಟನ್ನಾದ್ರೂ ಮಾಡಿ ಅಥವಾ ನಾವು ಅಯೋಗ್ಯರು ಅಂತ ಒಪ್ಪಿಕೊಂಡು ತಲೆತಗ್ಗಿಸಿ ನಿಂತುಕೊಳ್ಳಿ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...