Homeಕರೋನಾ ತಲ್ಲಣಮೇ 10 ರಿಂದ ಲಾಕ್‌ಡೌನ್‌‌‌ - ‘ಜನ ಹೊಟ್ಟೆಗೆ ಏನು ತಿಂತಾರೆ?’; ಆಕ್ರೋಶ

ಮೇ 10 ರಿಂದ ಲಾಕ್‌ಡೌನ್‌‌‌ – ‘ಜನ ಹೊಟ್ಟೆಗೆ ಏನು ತಿಂತಾರೆ?’; ಆಕ್ರೋಶ

ತಮಿಳುನಾಡು ಮತ್ತು ಕೇರಳ ರಾಜ್ಯಗಳು ಲಾಕ್‌ಡೌನ್‌ ಹೇರುವುದರ ಜೊತೆಗೆ ಜನರಿಗೆ ಕೊರೊನಾ ಪರಿಹಾರವಾಗಿ ನಗದು ಮತ್ತು ದಿನಸಿಗಳನ್ನು ಪಡಿತರ ವ್ಯವಸ್ಥೆಯ ಮೂಲಕ ನೀಡುತ್ತಿದೆ.

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆಯು ತೀವ್ರಗೊಂಡ ಪರಿಣಾಮ ಆರೋಗ್ಯ ಸೌಲಭ್ಯಗಳು ಸಿಗದೆ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಅಘೋಷಿತ ಲಾಕ್‌ಡೌನ್ ಇದೆ. ಶುಕ್ರವಾರ ಸಚಿವ ಸಂಪುಟ ಹಾಗೂ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಯಡಿಯೂರಪ್ಪ ಮೇ 10 ರಿಂದ 24 ರವೆಗೆ ‘ಸಂಪೂರ್ಣ ಲಾಕ್‌ಡೌನ್‌’ ಹೇರಿದ್ದಾರೆ. ಆದರೆ ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಆಕ್ರೋಶಗಳೆದ್ದಿದ್ದು ಸರ್ಕಾರವನ್ನು ತಾರಾಟೆಗೆ ತೆಗೆದುಕೊಂಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅಘೋಷಿತ ಲಾಕ್‌ಡೌನ್‌ ಬಗ್ಗೆ ಮಾತನಾಡಿದ ಸಿಎಂ, “ಕರ್ಫ್ಯೂ ವಿಧಿಸಿರುವುದು ಹೆಚ್ಚಿನ ಪರಿಣಾಮ ಬೀರಿಲ್ಲ. ಜನರು ನಿಯಮ ಉಲ್ಲಂಘಿಸಿ ಓಡಾಡುತ್ತಿರುವುದು ಕಂಡು ಬಂದಿದೆ. ಆದ್ದರಿಂದ 10 ರಿಂದ 24 ರವರೆಗೆ ಲಾಕ್‌ಡೌನ್‌ ಘೋಷಿಸಲಾಗುವುದು. ಈ ಸಮಯದಲ್ಲಿ ಹಾಲು, ಹಣ್ಣು, ತರಕಾರಿ, ಮಾಂಸ, ದಿನಸಿ ವಸ್ತುಗಳ ಮಾರಾಟಕ್ಕೆ ಬೆಳಿಗ್ಗೆ 6 ರಿಂದ 10 ರವರೆಗೆ ಅವಕಾಶವಿದೆ. ತಳ್ಳು ಗಾಡಿಯ ಮೂಲಕ ಹಣ್ಣು ತರಕಾರಿ ಮಾರಾಟಕ್ಕೆ ಅವಕಾಶ ಇದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಉಳಿದಂತೆ, ಲಾಕ್‌ಡೌನ್‌ನಲ್ಲಿ ಏನಿದೆ ಏನಿಲ್ಲ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದರು. ಅದನ್ನು ಕೆಳಗಿನ ಚಿತ್ರದಲ್ಲಿ ನೋಡಬಹುದಾಗಿದೆ.

ಮುಖ್ಯಮಂತ್ರಿ ಲಾಕ್‌ಡೌನ್‌ ಹೇರುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳೆದ್ದಿದೆ. ಕೇವಲ ಲಾಕ್‌ಡೌನ್‌ ಹೇರಿದರೆ ಮುಗಿಯಿತೆ, ಜನರು ಕೆಲಸವಿಲ್ಲದೆ ಬದುಕುವುದಾರೂ ಹೇಗೆ? ತಮಿಳುನಾಡು ಮತ್ತು ಕೇರಳ ರಾಜ್ಯಗಳು ಲಾಕ್‌ಡೌನ್‌ ಹೇರುವುದರ ಜೊತೆಗೆ ಜನರಿಗೆ ಕೊರೊನಾ ಪರಿಹಾರವಾಗಿ ನಗದು ಮತ್ತು ದಿನಸಿಗಳನ್ನು ಪಡಿತರ ವ್ಯವಸ್ಥೆಯ ಮೂಲಕ ನೀಡುತ್ತಿದೆ. ಆದರೆ ಯಡಿಯುರಪ್ಪ ನೇತೃತ್ವದ ರಾಜ್ಯ ಸರ್ಕಾರ ಇದು ಯಾವುದನ್ನೂ ಮಾಡದೆ ಕೇವಲ ಲಾಕ್‌ಡೌನ್‌ ಹೇರಿ ಸುಮ್ಮನಿದ್ದರೆ ಸಾಕೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬೆಡ್‌‌ಗೆ ಪರದಾಟ; ತನ್ನ ಪತಿಗಾಗಿ ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟಿಸಿದ ಮಹಿಳೆ

ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿರುವ ಇರ್ಫಾನ್ ಹಕ್, “ಮುಖ್ಯಮಂತ್ರಿ ಬಡ ಜನರಿಗೆ ಪರಿಹಾರವೇನು ಎಂದು ಕೇಳಿದರೆ, ಮಾರ್ಗಸೂಚಿ ಆಮೇಲೆ ಬಿಡುಗಡೆ ಮಾಡ್ತೀವಿ ಅಂತ ಮುಖ ತಿರುಗಿಸಿ ಹೋಗುತ್ತಾರೆ. ಪರಿಹಾರಗಳಿಲ್ಲದ ಲಾಕ್‌ಡೌನ್‌ ಬಡವರಿಗೆ ಬಹಳ ತೊಂದರೆ ನೀಡಲಿದೆ. ನೆರೆಯ ಸರಕಾರಗಳು ಜನರ ಕಷ್ಟಗಳಿಗೆ ಈ ರೀತಿ ಸ್ಪಂದಿಸುತ್ತಿದ್ದಾರೆ. ನಮ್ಮವರು ಬೆಳಿಗ್ಗೆಯೊಮ್ಮೆ, ಸಂಜೆಗೊಮ್ಮೆ ಮಾರ್ಗಸೂಚಿ ಬದಲಾಯಿಸಲು ಲಾಯಕ್ಕು” ಎಂದು ತಮಿಳುನಾಡು ಮತ್ತು ಕೇರಳ ಸರ್ಕಾರದ ಕೊರೊನಾ ಪರಿಹಾರದ ಸುದ್ದಿಯ ಚಿತ್ರವನ್ನು ಹಂಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ನಮ್ಮ ಮಾತನ್ನೂ ಕೇಳಿ’- ಪ್ರಧಾನಿ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಾರ್ಖಂಡ್ ಸಿಎಂ

ಸಮುದ್ಯತಾ ರಾಜೇಶ್ ಅವರು, “ಹೀಗೇ ಲಾಕ್‌ಡೌನ್ ಮಾಡ್ತಾ ಇದ್ರೆ. ಆಮೇಲೆ ಜನರು #Act1978 ಸಿನಿಮಾದಲ್ಲಿ ಬರುವ ದೃಶ್ಯದ ಥರ ಬಾಂಬ್ ಕಟ್ಕೊಂಡು ಬಂದು ಮನೆ ಅಡ್ರೆಸ್ ಕೊಟ್ಟು ಬಾಡಿಗೆ, ಕರೆಂಟ್ ಬಿಲ್, ವಾಟರ್ ಬಿಲ್ ಕಟ್ಟಿ ಅಂತ ರಾಜಕಾರಣಿಗಳಿಗೆ ಹೇಳಬಹುದು. ಇರೋ ಅಕ್ಕಿನೂ ಕಿತ್ಕೊಂಡು ಏನೂ ನೆರವಾಗದೇ ಮನೆಲಿ‌ ಇರು ಅಂದ್ರೆ ಜನ ಹೊಟ್ಟೆಗೆ ಏನು ತಿಂತಾರೆ?? ಲಾಕ್‌ಡೌನ್ ಒಂದೇ ಪರಿಹಾರ ಅಂತಾದ್ರೆ‌ ಅದಕ್ಕೆ ಸರಿಯಾದ ವ್ಯವಸ್ಥೆ ಕೂಡ ಮಾಡಬೇಕಲ್ವಾ?” ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಸಾಹಕಾರ್‌ ಅಚ್ಚು, “ನಿರ್ದಿಷ್ಟ ಸಮಯದ ನಂತರ ಜನರು ರಸ್ತೆಗಿಳಿಯುವಂತಿಲ್ಲ. ಹಾಲಿನ ಬೂತ್ ಪೂರ್ತಿ ತೆರೆದಿರುತ್ತದೆ. ಬಹುಷಃ ಬೆಕ್ಕಿಗಾಗಿ ಇರಬಹುದು” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ರಾಜ್ಯಕ್ಕೆ ಆಮ್ಲಜನಕ ನೀಡುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶ- ’ಬೆಡ್’ ವಿಚಾರದಲ್ಲೇ ಇರುವ BJP ಸಂಸದರು!

ಕನ್ನಡಪರ ಹೋರಾಟಗಾರ ದಿನೇಶ್ ಕುಮಾರ್‌ ಅವರು, “ಲಾಕ್ ಡೌನ್ ಮಾಡಿದ್ದೀರಿ, ಮಾಡ್ಕೊಳ್ಳಿ. ನಿಮ್ದು,‌ ಮೀಡಿಯಾಗಳದ್ದು ಬಿಟ್ಟಿ ಉಪದೇಶಗಳ ಜಾತ್ರೆ ನಡೀತಾ ಇದೆ. ನಡೀಲಿ. ನಮ್ಮ ಜವಾಬ್ದಾರಿ ನಾವು ಪಾಲಿಸುತ್ತೇವೆ. ನೀವು ಒಂದೇ ಒಂದು‌ ಕೆಲಸ ಮಾಡಿಬಿಡಿ. ಹೇಗೂ ಈ ತಿಂಗಳ ಅಂತ್ಯದವರೆಗೆ ಲಾಕ್ ಡೌನ್ ಇರುತ್ತೆ.‌ ನಾವು ಮನೆಗಳ ಒಳಗೆ ಇರ‌್ತೀವಿ. ಅದೇನು ಮಾಡ್ತೀರೋ ಮಾಡಿ, ಹದಿನೆಂಟು ವಯಸ್ಸು ದಾಟಿದ ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೆ ಮನೆಮನೆಗೆ ಹೋಗಿ ಕೋವಿಡ್ ಲಸಿಕೆ ಕೊಟ್ಟುಬಿಡಿ. ಎರಡನೇ ಅಲೆಯಿಂದ ಬದುಕಿ‌ ಉಳಿದವರು ಮೂರನೇ ಅಲೆಯಲ್ಲಿ ಜೀವ ಉಳಿಸಿಕೊಳ್ಳುವ ಪ್ರಯತ್ನನಾದ್ರೂ ಮಾಡ್ತೀವಿ. ಇದೊಂದೇ ಕೆಲಸ ಮಾಡಿಬಿಡಿ. ಎಲ್ಲ ಜನಗಳ ಮೇಲೆ ಜವಾಬ್ದಾರಿ ಹೊರೆಸಿದರೆ ಮುಗೀತಾ? ನೀವು ಏನನ್ನೂ ಮಾಡೋದಿಲ್ವಾ? ನಾಚಿಗೆಗೆಟ್ಟೋರೇ, ಇಷ್ಟನ್ನಾದ್ರೂ ಮಾಡಿ ಅಥವಾ ನಾವು ಅಯೋಗ್ಯರು ಅಂತ ಒಪ್ಪಿಕೊಂಡು ತಲೆತಗ್ಗಿಸಿ ನಿಂತುಕೊಳ್ಳಿ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...