Homeಕರ್ನಾಟಕಲಾಕ್ ಡೌನ್ ನಿಂದ ಅಸ್ತವ್ಯಸ್ತಗೊಂಡ ಕಾರ್ಮಿಕರ ಬದುಕು; ಜನ ಸಾಹಸ್ ಸರ್ವೇ ಬಿಚ್ಚಿಟ್ಟ ಸತ್ಯಗಳು

ಲಾಕ್ ಡೌನ್ ನಿಂದ ಅಸ್ತವ್ಯಸ್ತಗೊಂಡ ಕಾರ್ಮಿಕರ ಬದುಕು; ಜನ ಸಾಹಸ್ ಸರ್ವೇ ಬಿಚ್ಚಿಟ್ಟ ಸತ್ಯಗಳು

ಕೋವಿಡ್-19ನಿಂದ ಭಾರತವನ್ನು ಲಾಕ್ ಡೌನ್ ಮಾಡಿದ ಮೇಲೆ ವಲಸೆಕಾರ್ಮಿಕರ ಜೀವನ ಅಸ್ತವ್ಯವಸ್ತವಾಗಿದೆ ಎಂದು ಸರ್ಕಾರೇತರ ಸಂಸ್ಥೆ ಜನ ಸಾಹಸ್ ಸರ್ವೇ ಹೇಳಿದೆ.

- Advertisement -
- Advertisement -

ಲಾಕ್ ಡೌನ್ ಪರಿಣಾಮ ಸೀಜನಲ್ ವಲಸಿಗರಲ್ಲಿ ಜಾಗೃತಿ ಮೂಡಿಸಲು ಸಾಧ್ಯವಾಗದೆ ಆರ್ಥಿಕ ಬೆಳವಣಿಗೆ ಕುಸಿತ ಕಾಣಲು ಕಾರಣವಾಗಿದೆ. ಹೀಗಾಗಿ ಶೇ. 92ರಷ್ಟು ಕಾರ್ಮಿಕರ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಸರ್ಕಾರೇತರ ಸಂಸ್ಥೆ ಜನ ಸಾಹಸ್ ಸರ್ವೇ ಹೇಳಿದೆ.

ಜನ ಸಾಹಸ್ ಸಂಸ್ಥೆ ಪ್ರಮುಖವಾಗಿ ಉತ್ತರ ಭಾರತ ಮತ್ತು ಮಧ್ಯಭಾರತದಲ್ಲಿ ದೂರವಾಣಿ ಮೂಲಕ ವಲಸೆ ಕಾರ್ಮಿಕರನ್ನು ಸಂಪರ್ಕಿಸಿ ಸರ್ವೆ ನಡೆಸಿ ಲಾಕ್ ಡೌನ್ ಸಮಯದಲ್ಲಿ ಶೇಕಡ 42ರಷ್ಟು ವಲಸೆ ಕಾರ್ಮಿಕರ ಬಳಿ ಆ ದಿನಕ್ಕೂ ಆಹಾರಧಾನ್ಯಗಳಿಲ್ಲ ಎಂದು ಸ್ಪಷ್ಟಪಡಿಸಿದೆ. 21 ದಿನಗಳ ಲಾಕ್ ಡೌನ್ ವೇಳೆಯಲ್ಲಿ ಶೇಕಡ 66 ರಷ್ಟು ಮಂದಿ ಕಾರ್ಮಿಕರಿಗೆ ಮನೆಯ ಖರ್ಚುವೆಚ್ಚ ನಿರ್ವಹಣೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಮಧ್ಯ ಮತ್ತು ಉತ್ತರ ಭಾರತದ ಮೂರನೇ ಒಂದರಷ್ಟು ವಲಸೆ ಕಾರ್ಮಿಕರು ಈ ಸಮೀಕ್ಷೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಲಾಕ್ ಡೌನ್ ನ  ಆರಂಭದ ದಿನದಿಂದಲೂ ಆಹಾರ, ನೀರು ಮತ್ತು ಹಣ ಸಿಗದೆ ನಗರಗಳಲ್ಲಿ ಸಿಲುಕಿ ಪರದಾಡುತ್ತಿದ್ದಾರೆ. ನೀರು ಮತ್ತು ಆಹಾರ ಸಿಕ್ಕರೂ ಅದು ಕಡಿಮೆ ಪ್ರಮಾಣದಲ್ಲಿ ದೊರೆತಿದೆ ಎಂಬುದರ ಮೇಲೆ ಈ ಸರ್ವೇ ಬೆಳಕು ಚೆಲ್ಲಿದೆ.

ಲಾಕ್ ಡೌನ್ ನಡುವೆಯೇ ಅರ್ಧದಷ್ಟು ವಲಸೆ ಕಾರ್ಮಿಕರು ತಮ್ಮ ಹಳ್ಳಿಗಳಿಗೆ ಹಿಂದಿರುಗಿದ್ದಾರೆ. ಆದರೂ ಅವರು ವಿವಿಧ ಸವಾಲುಗಳನ್ನು ಎದುರಿಸುತ್ತಿದ್ದು ಆಹಾರಧಾನ್ಯಗಳನ್ನು ಮತ್ತು ಯಾವುದೇ ಆದಾಯವನ್ನು ಹೊಂದಲು ಆಗಿಲ್ಲ. ಹೀಗಾಗಿ ಅವರ ಬದುಕು ದುಸ್ಥರವಾಗಿದೆ.

ಶೇಕಡ 31ರಷ್ಟು ಕಾರ್ಮಿಕರು ಸಾಲ ಪಡೆದಿದ್ದಾರೆ. ಆದರೆ ಉದ್ಯೋಗವಿಲ್ಲದೆ ಸಾಲ ಮರುಪಾವತಿ ಮಾಡುವುದು ಕಷ್ಟವಾಗುತ್ತಿದೆ. ಬಹುತೇಕ ಕಾರ್ಮಿಕರು ಈ ಸಾಲವನ್ನು ಖಾಸಗಿ ಲೇವಾದೇವಿದಾರರಿಂದ ಪಡೆದಿದ್ದಾರೆ. ಶೇಕಡ 79ರಷ್ಟು ವಲಸೆ ಕಾರ್ಮಿಕರು ಸಾಲ ಕಟ್ಟಲು ಸಾಧ್ಯವಾಗುತ್ತಿಲ್ಲ ಹಾಗಾಗಿ ಹಿಂಸೆಗೆ ತುತ್ತಾಗಬಹುದು ಎನ್ನುವ ಆತಂಕದಲ್ಲಿದ್ದಾರೆ ಎಂದು ಸರ್ವೇ ತಿಳಿಸಿದೆ.

ಮಾರ್ಚ್ 24ರ ನಂತರ ಕಾರ್ಮಿಕರಿಗೆ ಉದ್ಯೋವಿಲ್ಲ. ಹಾಗಾಗಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಕಟ್ಟಡ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿಂದ ನೇರ ಹಣ ವರ್ಗಾವಣೆ ಮಾಡುವಂತೆ ಎಲ್ಲಾ ರಾಜ್ಯಗಳಿಗೆ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ಆದರೆ ಶೇಕಡ 94ರಷ್ಟು ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಗುರುತಿನ ಚೀಟಿ ಇಲ್ಲ ಎಂಬುದರ ಮೇಲೆ ಈ ಸರ್ವೇ ಬೊಟ್ಟು ಮಾಡಿದೆ.

ಸರಾಸರಿ ನಾಲ್ವರು ಸದಸ್ಯರಿರುವ ಕುಟುಂಬದ ಜವಾಬ್ದಾರಿ ಹೊಂದಿರುವ ಕಾರ್ಮಿಕರಲ್ಲಿ ಶೇಕಡ 55ರಷ್ಟು ಕಾರ್ಮಿಕರು ದಿನವೊಂದಕ್ಕೆ 200-400 ರೂಪಾಯಿ ಕೂಲಿ ಪಡೆದರೆ, ಶೇಕಡ 39ರಷ್ಟು ಕಾರ್ಮಿಕರು 400-600 ರೂಪಾಯಿ ದಿನಕ್ಕೆ ಪಡೆಯುತ್ತಿದ್ದು,  ಕನಿಷ್ಠ ದಿನಗೂಲಿ ಕಾಯಿದೆಯ ಅನುಗುಣವಾಗಿ ಪಡೆಯಬೇಕಾದ್ದಕಿಂತ ಕಡಿಮೆ ಆದಾಯ ಹೊಂದಿದ್ದಾರೆ. ಈ ಕಾಯಿದೆಯ ಪ್ರಕಾರ ದೆಹಲಿಯಲ್ಲಿ  ಕೌಶಲ, ಅರೆಕೌಶಲ ಮತ್ತು ಕೌಶಲ್ಯವಿಲ್ಲದ ಕಾರ್ಮಿಕರಿಗೆ ಕ್ರಮವಾಗಿ 692, 629 ಮತ್ತು 571 ರೂ ಆದಾಯ ಪಡೆಯಬೇಕಿದೆ.

ನಿರ್ಮಾಣ ವಲಯವು ದೇಶದ ಜಿಡಿಪಿಗೆ ಶೇ.9ರಷ್ಟು ಕೊಡುಗೆ ನೀಡುತ್ತದೆ ಮತ್ತು ದೇಶದ ವಲಸೆ ಕಾರ್ಮಿಕರಿಗೆ ಅತಿಹೆಚ್ಚು ಉದ್ಯೋಗ ನೀಡುತ್ತದೆ. ಅಂದರೆ 5 ಕೋಟಿ ದಿನಗೂಲಿ ಕಾರ್ಮಿಕರಿಗೆ ಕೆಲಸ ಕೊಡುತ್ತದೆ. ಪ್ರತಿವರ್ಷ 90 ಲಕ್ಷ ಕಾರ್ಮಿಕರು ಗ್ರಾಮೀಣ ಪ್ರದೇಶದಿಂದ ನಗರಗಳತ್ತ ನಿರ್ಮಾಣ ಮತ್ತು ಫ್ಯಾಕ್ಟರಿಗಳಲ್ಲಿ ಕೆಲಸ ಮಾಡಲು ಚಲಿಸುತ್ತಾರೆ ಎಂದು ಸರ್ವೆ ಹೇಳಿದ್ದನ್ನು ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ಈಗ ಈ ಕೋಟ್ಯಾಂತರ ಜನರು ಅತಂತ್ರ ಸ್ಥಿತಿಯಲ್ಲಿ ಜೀವನ ಸಾಗಿಸಬೇಕಿದೆ. ಇವರೆಲ್ಲರ ಬವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಮತ್ತು ಕೇಂದ್ರ ಸರಕಾರಗಳು ತುರ್ತು ಕ್ರಮ ಕೈಗೊಳ್ಳಬೇಕಿದೆ.

ಕೃಪೆ: ಇಂಡಿಯನ್‌ ಎಕ್ಸ್‌ಪ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...