Homeಕರ್ನಾಟಕಲಾಕ್ ಡೌನ್ ನಿಂದ ಅಸ್ತವ್ಯಸ್ತಗೊಂಡ ಕಾರ್ಮಿಕರ ಬದುಕು; ಜನ ಸಾಹಸ್ ಸರ್ವೇ ಬಿಚ್ಚಿಟ್ಟ ಸತ್ಯಗಳು

ಲಾಕ್ ಡೌನ್ ನಿಂದ ಅಸ್ತವ್ಯಸ್ತಗೊಂಡ ಕಾರ್ಮಿಕರ ಬದುಕು; ಜನ ಸಾಹಸ್ ಸರ್ವೇ ಬಿಚ್ಚಿಟ್ಟ ಸತ್ಯಗಳು

ಕೋವಿಡ್-19ನಿಂದ ಭಾರತವನ್ನು ಲಾಕ್ ಡೌನ್ ಮಾಡಿದ ಮೇಲೆ ವಲಸೆಕಾರ್ಮಿಕರ ಜೀವನ ಅಸ್ತವ್ಯವಸ್ತವಾಗಿದೆ ಎಂದು ಸರ್ಕಾರೇತರ ಸಂಸ್ಥೆ ಜನ ಸಾಹಸ್ ಸರ್ವೇ ಹೇಳಿದೆ.

- Advertisement -
- Advertisement -

ಲಾಕ್ ಡೌನ್ ಪರಿಣಾಮ ಸೀಜನಲ್ ವಲಸಿಗರಲ್ಲಿ ಜಾಗೃತಿ ಮೂಡಿಸಲು ಸಾಧ್ಯವಾಗದೆ ಆರ್ಥಿಕ ಬೆಳವಣಿಗೆ ಕುಸಿತ ಕಾಣಲು ಕಾರಣವಾಗಿದೆ. ಹೀಗಾಗಿ ಶೇ. 92ರಷ್ಟು ಕಾರ್ಮಿಕರ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಸರ್ಕಾರೇತರ ಸಂಸ್ಥೆ ಜನ ಸಾಹಸ್ ಸರ್ವೇ ಹೇಳಿದೆ.

ಜನ ಸಾಹಸ್ ಸಂಸ್ಥೆ ಪ್ರಮುಖವಾಗಿ ಉತ್ತರ ಭಾರತ ಮತ್ತು ಮಧ್ಯಭಾರತದಲ್ಲಿ ದೂರವಾಣಿ ಮೂಲಕ ವಲಸೆ ಕಾರ್ಮಿಕರನ್ನು ಸಂಪರ್ಕಿಸಿ ಸರ್ವೆ ನಡೆಸಿ ಲಾಕ್ ಡೌನ್ ಸಮಯದಲ್ಲಿ ಶೇಕಡ 42ರಷ್ಟು ವಲಸೆ ಕಾರ್ಮಿಕರ ಬಳಿ ಆ ದಿನಕ್ಕೂ ಆಹಾರಧಾನ್ಯಗಳಿಲ್ಲ ಎಂದು ಸ್ಪಷ್ಟಪಡಿಸಿದೆ. 21 ದಿನಗಳ ಲಾಕ್ ಡೌನ್ ವೇಳೆಯಲ್ಲಿ ಶೇಕಡ 66 ರಷ್ಟು ಮಂದಿ ಕಾರ್ಮಿಕರಿಗೆ ಮನೆಯ ಖರ್ಚುವೆಚ್ಚ ನಿರ್ವಹಣೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಮಧ್ಯ ಮತ್ತು ಉತ್ತರ ಭಾರತದ ಮೂರನೇ ಒಂದರಷ್ಟು ವಲಸೆ ಕಾರ್ಮಿಕರು ಈ ಸಮೀಕ್ಷೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಲಾಕ್ ಡೌನ್ ನ  ಆರಂಭದ ದಿನದಿಂದಲೂ ಆಹಾರ, ನೀರು ಮತ್ತು ಹಣ ಸಿಗದೆ ನಗರಗಳಲ್ಲಿ ಸಿಲುಕಿ ಪರದಾಡುತ್ತಿದ್ದಾರೆ. ನೀರು ಮತ್ತು ಆಹಾರ ಸಿಕ್ಕರೂ ಅದು ಕಡಿಮೆ ಪ್ರಮಾಣದಲ್ಲಿ ದೊರೆತಿದೆ ಎಂಬುದರ ಮೇಲೆ ಈ ಸರ್ವೇ ಬೆಳಕು ಚೆಲ್ಲಿದೆ.

ಲಾಕ್ ಡೌನ್ ನಡುವೆಯೇ ಅರ್ಧದಷ್ಟು ವಲಸೆ ಕಾರ್ಮಿಕರು ತಮ್ಮ ಹಳ್ಳಿಗಳಿಗೆ ಹಿಂದಿರುಗಿದ್ದಾರೆ. ಆದರೂ ಅವರು ವಿವಿಧ ಸವಾಲುಗಳನ್ನು ಎದುರಿಸುತ್ತಿದ್ದು ಆಹಾರಧಾನ್ಯಗಳನ್ನು ಮತ್ತು ಯಾವುದೇ ಆದಾಯವನ್ನು ಹೊಂದಲು ಆಗಿಲ್ಲ. ಹೀಗಾಗಿ ಅವರ ಬದುಕು ದುಸ್ಥರವಾಗಿದೆ.

ಶೇಕಡ 31ರಷ್ಟು ಕಾರ್ಮಿಕರು ಸಾಲ ಪಡೆದಿದ್ದಾರೆ. ಆದರೆ ಉದ್ಯೋಗವಿಲ್ಲದೆ ಸಾಲ ಮರುಪಾವತಿ ಮಾಡುವುದು ಕಷ್ಟವಾಗುತ್ತಿದೆ. ಬಹುತೇಕ ಕಾರ್ಮಿಕರು ಈ ಸಾಲವನ್ನು ಖಾಸಗಿ ಲೇವಾದೇವಿದಾರರಿಂದ ಪಡೆದಿದ್ದಾರೆ. ಶೇಕಡ 79ರಷ್ಟು ವಲಸೆ ಕಾರ್ಮಿಕರು ಸಾಲ ಕಟ್ಟಲು ಸಾಧ್ಯವಾಗುತ್ತಿಲ್ಲ ಹಾಗಾಗಿ ಹಿಂಸೆಗೆ ತುತ್ತಾಗಬಹುದು ಎನ್ನುವ ಆತಂಕದಲ್ಲಿದ್ದಾರೆ ಎಂದು ಸರ್ವೇ ತಿಳಿಸಿದೆ.

ಮಾರ್ಚ್ 24ರ ನಂತರ ಕಾರ್ಮಿಕರಿಗೆ ಉದ್ಯೋವಿಲ್ಲ. ಹಾಗಾಗಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಕಟ್ಟಡ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿಂದ ನೇರ ಹಣ ವರ್ಗಾವಣೆ ಮಾಡುವಂತೆ ಎಲ್ಲಾ ರಾಜ್ಯಗಳಿಗೆ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ಆದರೆ ಶೇಕಡ 94ರಷ್ಟು ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಗುರುತಿನ ಚೀಟಿ ಇಲ್ಲ ಎಂಬುದರ ಮೇಲೆ ಈ ಸರ್ವೇ ಬೊಟ್ಟು ಮಾಡಿದೆ.

ಸರಾಸರಿ ನಾಲ್ವರು ಸದಸ್ಯರಿರುವ ಕುಟುಂಬದ ಜವಾಬ್ದಾರಿ ಹೊಂದಿರುವ ಕಾರ್ಮಿಕರಲ್ಲಿ ಶೇಕಡ 55ರಷ್ಟು ಕಾರ್ಮಿಕರು ದಿನವೊಂದಕ್ಕೆ 200-400 ರೂಪಾಯಿ ಕೂಲಿ ಪಡೆದರೆ, ಶೇಕಡ 39ರಷ್ಟು ಕಾರ್ಮಿಕರು 400-600 ರೂಪಾಯಿ ದಿನಕ್ಕೆ ಪಡೆಯುತ್ತಿದ್ದು,  ಕನಿಷ್ಠ ದಿನಗೂಲಿ ಕಾಯಿದೆಯ ಅನುಗುಣವಾಗಿ ಪಡೆಯಬೇಕಾದ್ದಕಿಂತ ಕಡಿಮೆ ಆದಾಯ ಹೊಂದಿದ್ದಾರೆ. ಈ ಕಾಯಿದೆಯ ಪ್ರಕಾರ ದೆಹಲಿಯಲ್ಲಿ  ಕೌಶಲ, ಅರೆಕೌಶಲ ಮತ್ತು ಕೌಶಲ್ಯವಿಲ್ಲದ ಕಾರ್ಮಿಕರಿಗೆ ಕ್ರಮವಾಗಿ 692, 629 ಮತ್ತು 571 ರೂ ಆದಾಯ ಪಡೆಯಬೇಕಿದೆ.

ನಿರ್ಮಾಣ ವಲಯವು ದೇಶದ ಜಿಡಿಪಿಗೆ ಶೇ.9ರಷ್ಟು ಕೊಡುಗೆ ನೀಡುತ್ತದೆ ಮತ್ತು ದೇಶದ ವಲಸೆ ಕಾರ್ಮಿಕರಿಗೆ ಅತಿಹೆಚ್ಚು ಉದ್ಯೋಗ ನೀಡುತ್ತದೆ. ಅಂದರೆ 5 ಕೋಟಿ ದಿನಗೂಲಿ ಕಾರ್ಮಿಕರಿಗೆ ಕೆಲಸ ಕೊಡುತ್ತದೆ. ಪ್ರತಿವರ್ಷ 90 ಲಕ್ಷ ಕಾರ್ಮಿಕರು ಗ್ರಾಮೀಣ ಪ್ರದೇಶದಿಂದ ನಗರಗಳತ್ತ ನಿರ್ಮಾಣ ಮತ್ತು ಫ್ಯಾಕ್ಟರಿಗಳಲ್ಲಿ ಕೆಲಸ ಮಾಡಲು ಚಲಿಸುತ್ತಾರೆ ಎಂದು ಸರ್ವೆ ಹೇಳಿದ್ದನ್ನು ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ಈಗ ಈ ಕೋಟ್ಯಾಂತರ ಜನರು ಅತಂತ್ರ ಸ್ಥಿತಿಯಲ್ಲಿ ಜೀವನ ಸಾಗಿಸಬೇಕಿದೆ. ಇವರೆಲ್ಲರ ಬವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಮತ್ತು ಕೇಂದ್ರ ಸರಕಾರಗಳು ತುರ್ತು ಕ್ರಮ ಕೈಗೊಳ್ಳಬೇಕಿದೆ.

ಕೃಪೆ: ಇಂಡಿಯನ್‌ ಎಕ್ಸ್‌ಪ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...