Homeಕರ್ನಾಟಕಲಾಕ್ ಡೌನ್ ನಿಂದ ಅಸ್ತವ್ಯಸ್ತಗೊಂಡ ಕಾರ್ಮಿಕರ ಬದುಕು; ಜನ ಸಾಹಸ್ ಸರ್ವೇ ಬಿಚ್ಚಿಟ್ಟ ಸತ್ಯಗಳು

ಲಾಕ್ ಡೌನ್ ನಿಂದ ಅಸ್ತವ್ಯಸ್ತಗೊಂಡ ಕಾರ್ಮಿಕರ ಬದುಕು; ಜನ ಸಾಹಸ್ ಸರ್ವೇ ಬಿಚ್ಚಿಟ್ಟ ಸತ್ಯಗಳು

ಕೋವಿಡ್-19ನಿಂದ ಭಾರತವನ್ನು ಲಾಕ್ ಡೌನ್ ಮಾಡಿದ ಮೇಲೆ ವಲಸೆಕಾರ್ಮಿಕರ ಜೀವನ ಅಸ್ತವ್ಯವಸ್ತವಾಗಿದೆ ಎಂದು ಸರ್ಕಾರೇತರ ಸಂಸ್ಥೆ ಜನ ಸಾಹಸ್ ಸರ್ವೇ ಹೇಳಿದೆ.

- Advertisement -
- Advertisement -

ಲಾಕ್ ಡೌನ್ ಪರಿಣಾಮ ಸೀಜನಲ್ ವಲಸಿಗರಲ್ಲಿ ಜಾಗೃತಿ ಮೂಡಿಸಲು ಸಾಧ್ಯವಾಗದೆ ಆರ್ಥಿಕ ಬೆಳವಣಿಗೆ ಕುಸಿತ ಕಾಣಲು ಕಾರಣವಾಗಿದೆ. ಹೀಗಾಗಿ ಶೇ. 92ರಷ್ಟು ಕಾರ್ಮಿಕರ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಸರ್ಕಾರೇತರ ಸಂಸ್ಥೆ ಜನ ಸಾಹಸ್ ಸರ್ವೇ ಹೇಳಿದೆ.

ಜನ ಸಾಹಸ್ ಸಂಸ್ಥೆ ಪ್ರಮುಖವಾಗಿ ಉತ್ತರ ಭಾರತ ಮತ್ತು ಮಧ್ಯಭಾರತದಲ್ಲಿ ದೂರವಾಣಿ ಮೂಲಕ ವಲಸೆ ಕಾರ್ಮಿಕರನ್ನು ಸಂಪರ್ಕಿಸಿ ಸರ್ವೆ ನಡೆಸಿ ಲಾಕ್ ಡೌನ್ ಸಮಯದಲ್ಲಿ ಶೇಕಡ 42ರಷ್ಟು ವಲಸೆ ಕಾರ್ಮಿಕರ ಬಳಿ ಆ ದಿನಕ್ಕೂ ಆಹಾರಧಾನ್ಯಗಳಿಲ್ಲ ಎಂದು ಸ್ಪಷ್ಟಪಡಿಸಿದೆ. 21 ದಿನಗಳ ಲಾಕ್ ಡೌನ್ ವೇಳೆಯಲ್ಲಿ ಶೇಕಡ 66 ರಷ್ಟು ಮಂದಿ ಕಾರ್ಮಿಕರಿಗೆ ಮನೆಯ ಖರ್ಚುವೆಚ್ಚ ನಿರ್ವಹಣೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಮಧ್ಯ ಮತ್ತು ಉತ್ತರ ಭಾರತದ ಮೂರನೇ ಒಂದರಷ್ಟು ವಲಸೆ ಕಾರ್ಮಿಕರು ಈ ಸಮೀಕ್ಷೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಲಾಕ್ ಡೌನ್ ನ  ಆರಂಭದ ದಿನದಿಂದಲೂ ಆಹಾರ, ನೀರು ಮತ್ತು ಹಣ ಸಿಗದೆ ನಗರಗಳಲ್ಲಿ ಸಿಲುಕಿ ಪರದಾಡುತ್ತಿದ್ದಾರೆ. ನೀರು ಮತ್ತು ಆಹಾರ ಸಿಕ್ಕರೂ ಅದು ಕಡಿಮೆ ಪ್ರಮಾಣದಲ್ಲಿ ದೊರೆತಿದೆ ಎಂಬುದರ ಮೇಲೆ ಈ ಸರ್ವೇ ಬೆಳಕು ಚೆಲ್ಲಿದೆ.

ಲಾಕ್ ಡೌನ್ ನಡುವೆಯೇ ಅರ್ಧದಷ್ಟು ವಲಸೆ ಕಾರ್ಮಿಕರು ತಮ್ಮ ಹಳ್ಳಿಗಳಿಗೆ ಹಿಂದಿರುಗಿದ್ದಾರೆ. ಆದರೂ ಅವರು ವಿವಿಧ ಸವಾಲುಗಳನ್ನು ಎದುರಿಸುತ್ತಿದ್ದು ಆಹಾರಧಾನ್ಯಗಳನ್ನು ಮತ್ತು ಯಾವುದೇ ಆದಾಯವನ್ನು ಹೊಂದಲು ಆಗಿಲ್ಲ. ಹೀಗಾಗಿ ಅವರ ಬದುಕು ದುಸ್ಥರವಾಗಿದೆ.

ಶೇಕಡ 31ರಷ್ಟು ಕಾರ್ಮಿಕರು ಸಾಲ ಪಡೆದಿದ್ದಾರೆ. ಆದರೆ ಉದ್ಯೋಗವಿಲ್ಲದೆ ಸಾಲ ಮರುಪಾವತಿ ಮಾಡುವುದು ಕಷ್ಟವಾಗುತ್ತಿದೆ. ಬಹುತೇಕ ಕಾರ್ಮಿಕರು ಈ ಸಾಲವನ್ನು ಖಾಸಗಿ ಲೇವಾದೇವಿದಾರರಿಂದ ಪಡೆದಿದ್ದಾರೆ. ಶೇಕಡ 79ರಷ್ಟು ವಲಸೆ ಕಾರ್ಮಿಕರು ಸಾಲ ಕಟ್ಟಲು ಸಾಧ್ಯವಾಗುತ್ತಿಲ್ಲ ಹಾಗಾಗಿ ಹಿಂಸೆಗೆ ತುತ್ತಾಗಬಹುದು ಎನ್ನುವ ಆತಂಕದಲ್ಲಿದ್ದಾರೆ ಎಂದು ಸರ್ವೇ ತಿಳಿಸಿದೆ.

ಮಾರ್ಚ್ 24ರ ನಂತರ ಕಾರ್ಮಿಕರಿಗೆ ಉದ್ಯೋವಿಲ್ಲ. ಹಾಗಾಗಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಕಟ್ಟಡ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿಂದ ನೇರ ಹಣ ವರ್ಗಾವಣೆ ಮಾಡುವಂತೆ ಎಲ್ಲಾ ರಾಜ್ಯಗಳಿಗೆ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ಆದರೆ ಶೇಕಡ 94ರಷ್ಟು ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಗುರುತಿನ ಚೀಟಿ ಇಲ್ಲ ಎಂಬುದರ ಮೇಲೆ ಈ ಸರ್ವೇ ಬೊಟ್ಟು ಮಾಡಿದೆ.

ಸರಾಸರಿ ನಾಲ್ವರು ಸದಸ್ಯರಿರುವ ಕುಟುಂಬದ ಜವಾಬ್ದಾರಿ ಹೊಂದಿರುವ ಕಾರ್ಮಿಕರಲ್ಲಿ ಶೇಕಡ 55ರಷ್ಟು ಕಾರ್ಮಿಕರು ದಿನವೊಂದಕ್ಕೆ 200-400 ರೂಪಾಯಿ ಕೂಲಿ ಪಡೆದರೆ, ಶೇಕಡ 39ರಷ್ಟು ಕಾರ್ಮಿಕರು 400-600 ರೂಪಾಯಿ ದಿನಕ್ಕೆ ಪಡೆಯುತ್ತಿದ್ದು,  ಕನಿಷ್ಠ ದಿನಗೂಲಿ ಕಾಯಿದೆಯ ಅನುಗುಣವಾಗಿ ಪಡೆಯಬೇಕಾದ್ದಕಿಂತ ಕಡಿಮೆ ಆದಾಯ ಹೊಂದಿದ್ದಾರೆ. ಈ ಕಾಯಿದೆಯ ಪ್ರಕಾರ ದೆಹಲಿಯಲ್ಲಿ  ಕೌಶಲ, ಅರೆಕೌಶಲ ಮತ್ತು ಕೌಶಲ್ಯವಿಲ್ಲದ ಕಾರ್ಮಿಕರಿಗೆ ಕ್ರಮವಾಗಿ 692, 629 ಮತ್ತು 571 ರೂ ಆದಾಯ ಪಡೆಯಬೇಕಿದೆ.

ನಿರ್ಮಾಣ ವಲಯವು ದೇಶದ ಜಿಡಿಪಿಗೆ ಶೇ.9ರಷ್ಟು ಕೊಡುಗೆ ನೀಡುತ್ತದೆ ಮತ್ತು ದೇಶದ ವಲಸೆ ಕಾರ್ಮಿಕರಿಗೆ ಅತಿಹೆಚ್ಚು ಉದ್ಯೋಗ ನೀಡುತ್ತದೆ. ಅಂದರೆ 5 ಕೋಟಿ ದಿನಗೂಲಿ ಕಾರ್ಮಿಕರಿಗೆ ಕೆಲಸ ಕೊಡುತ್ತದೆ. ಪ್ರತಿವರ್ಷ 90 ಲಕ್ಷ ಕಾರ್ಮಿಕರು ಗ್ರಾಮೀಣ ಪ್ರದೇಶದಿಂದ ನಗರಗಳತ್ತ ನಿರ್ಮಾಣ ಮತ್ತು ಫ್ಯಾಕ್ಟರಿಗಳಲ್ಲಿ ಕೆಲಸ ಮಾಡಲು ಚಲಿಸುತ್ತಾರೆ ಎಂದು ಸರ್ವೆ ಹೇಳಿದ್ದನ್ನು ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ಈಗ ಈ ಕೋಟ್ಯಾಂತರ ಜನರು ಅತಂತ್ರ ಸ್ಥಿತಿಯಲ್ಲಿ ಜೀವನ ಸಾಗಿಸಬೇಕಿದೆ. ಇವರೆಲ್ಲರ ಬವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಮತ್ತು ಕೇಂದ್ರ ಸರಕಾರಗಳು ತುರ್ತು ಕ್ರಮ ಕೈಗೊಳ್ಳಬೇಕಿದೆ.

ಕೃಪೆ: ಇಂಡಿಯನ್‌ ಎಕ್ಸ್‌ಪ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....