Homeಕರ್ನಾಟಕಲಾಕ್ ಡೌನ್ ನಿಂದ ಅಸ್ತವ್ಯಸ್ತಗೊಂಡ ಕಾರ್ಮಿಕರ ಬದುಕು; ಜನ ಸಾಹಸ್ ಸರ್ವೇ ಬಿಚ್ಚಿಟ್ಟ ಸತ್ಯಗಳು

ಲಾಕ್ ಡೌನ್ ನಿಂದ ಅಸ್ತವ್ಯಸ್ತಗೊಂಡ ಕಾರ್ಮಿಕರ ಬದುಕು; ಜನ ಸಾಹಸ್ ಸರ್ವೇ ಬಿಚ್ಚಿಟ್ಟ ಸತ್ಯಗಳು

ಕೋವಿಡ್-19ನಿಂದ ಭಾರತವನ್ನು ಲಾಕ್ ಡೌನ್ ಮಾಡಿದ ಮೇಲೆ ವಲಸೆಕಾರ್ಮಿಕರ ಜೀವನ ಅಸ್ತವ್ಯವಸ್ತವಾಗಿದೆ ಎಂದು ಸರ್ಕಾರೇತರ ಸಂಸ್ಥೆ ಜನ ಸಾಹಸ್ ಸರ್ವೇ ಹೇಳಿದೆ.

- Advertisement -
- Advertisement -

ಲಾಕ್ ಡೌನ್ ಪರಿಣಾಮ ಸೀಜನಲ್ ವಲಸಿಗರಲ್ಲಿ ಜಾಗೃತಿ ಮೂಡಿಸಲು ಸಾಧ್ಯವಾಗದೆ ಆರ್ಥಿಕ ಬೆಳವಣಿಗೆ ಕುಸಿತ ಕಾಣಲು ಕಾರಣವಾಗಿದೆ. ಹೀಗಾಗಿ ಶೇ. 92ರಷ್ಟು ಕಾರ್ಮಿಕರ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಸರ್ಕಾರೇತರ ಸಂಸ್ಥೆ ಜನ ಸಾಹಸ್ ಸರ್ವೇ ಹೇಳಿದೆ.

ಜನ ಸಾಹಸ್ ಸಂಸ್ಥೆ ಪ್ರಮುಖವಾಗಿ ಉತ್ತರ ಭಾರತ ಮತ್ತು ಮಧ್ಯಭಾರತದಲ್ಲಿ ದೂರವಾಣಿ ಮೂಲಕ ವಲಸೆ ಕಾರ್ಮಿಕರನ್ನು ಸಂಪರ್ಕಿಸಿ ಸರ್ವೆ ನಡೆಸಿ ಲಾಕ್ ಡೌನ್ ಸಮಯದಲ್ಲಿ ಶೇಕಡ 42ರಷ್ಟು ವಲಸೆ ಕಾರ್ಮಿಕರ ಬಳಿ ಆ ದಿನಕ್ಕೂ ಆಹಾರಧಾನ್ಯಗಳಿಲ್ಲ ಎಂದು ಸ್ಪಷ್ಟಪಡಿಸಿದೆ. 21 ದಿನಗಳ ಲಾಕ್ ಡೌನ್ ವೇಳೆಯಲ್ಲಿ ಶೇಕಡ 66 ರಷ್ಟು ಮಂದಿ ಕಾರ್ಮಿಕರಿಗೆ ಮನೆಯ ಖರ್ಚುವೆಚ್ಚ ನಿರ್ವಹಣೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಮಧ್ಯ ಮತ್ತು ಉತ್ತರ ಭಾರತದ ಮೂರನೇ ಒಂದರಷ್ಟು ವಲಸೆ ಕಾರ್ಮಿಕರು ಈ ಸಮೀಕ್ಷೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಲಾಕ್ ಡೌನ್ ನ  ಆರಂಭದ ದಿನದಿಂದಲೂ ಆಹಾರ, ನೀರು ಮತ್ತು ಹಣ ಸಿಗದೆ ನಗರಗಳಲ್ಲಿ ಸಿಲುಕಿ ಪರದಾಡುತ್ತಿದ್ದಾರೆ. ನೀರು ಮತ್ತು ಆಹಾರ ಸಿಕ್ಕರೂ ಅದು ಕಡಿಮೆ ಪ್ರಮಾಣದಲ್ಲಿ ದೊರೆತಿದೆ ಎಂಬುದರ ಮೇಲೆ ಈ ಸರ್ವೇ ಬೆಳಕು ಚೆಲ್ಲಿದೆ.

ಲಾಕ್ ಡೌನ್ ನಡುವೆಯೇ ಅರ್ಧದಷ್ಟು ವಲಸೆ ಕಾರ್ಮಿಕರು ತಮ್ಮ ಹಳ್ಳಿಗಳಿಗೆ ಹಿಂದಿರುಗಿದ್ದಾರೆ. ಆದರೂ ಅವರು ವಿವಿಧ ಸವಾಲುಗಳನ್ನು ಎದುರಿಸುತ್ತಿದ್ದು ಆಹಾರಧಾನ್ಯಗಳನ್ನು ಮತ್ತು ಯಾವುದೇ ಆದಾಯವನ್ನು ಹೊಂದಲು ಆಗಿಲ್ಲ. ಹೀಗಾಗಿ ಅವರ ಬದುಕು ದುಸ್ಥರವಾಗಿದೆ.

ಶೇಕಡ 31ರಷ್ಟು ಕಾರ್ಮಿಕರು ಸಾಲ ಪಡೆದಿದ್ದಾರೆ. ಆದರೆ ಉದ್ಯೋಗವಿಲ್ಲದೆ ಸಾಲ ಮರುಪಾವತಿ ಮಾಡುವುದು ಕಷ್ಟವಾಗುತ್ತಿದೆ. ಬಹುತೇಕ ಕಾರ್ಮಿಕರು ಈ ಸಾಲವನ್ನು ಖಾಸಗಿ ಲೇವಾದೇವಿದಾರರಿಂದ ಪಡೆದಿದ್ದಾರೆ. ಶೇಕಡ 79ರಷ್ಟು ವಲಸೆ ಕಾರ್ಮಿಕರು ಸಾಲ ಕಟ್ಟಲು ಸಾಧ್ಯವಾಗುತ್ತಿಲ್ಲ ಹಾಗಾಗಿ ಹಿಂಸೆಗೆ ತುತ್ತಾಗಬಹುದು ಎನ್ನುವ ಆತಂಕದಲ್ಲಿದ್ದಾರೆ ಎಂದು ಸರ್ವೇ ತಿಳಿಸಿದೆ.

ಮಾರ್ಚ್ 24ರ ನಂತರ ಕಾರ್ಮಿಕರಿಗೆ ಉದ್ಯೋವಿಲ್ಲ. ಹಾಗಾಗಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಕಟ್ಟಡ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿಂದ ನೇರ ಹಣ ವರ್ಗಾವಣೆ ಮಾಡುವಂತೆ ಎಲ್ಲಾ ರಾಜ್ಯಗಳಿಗೆ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ಆದರೆ ಶೇಕಡ 94ರಷ್ಟು ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಗುರುತಿನ ಚೀಟಿ ಇಲ್ಲ ಎಂಬುದರ ಮೇಲೆ ಈ ಸರ್ವೇ ಬೊಟ್ಟು ಮಾಡಿದೆ.

ಸರಾಸರಿ ನಾಲ್ವರು ಸದಸ್ಯರಿರುವ ಕುಟುಂಬದ ಜವಾಬ್ದಾರಿ ಹೊಂದಿರುವ ಕಾರ್ಮಿಕರಲ್ಲಿ ಶೇಕಡ 55ರಷ್ಟು ಕಾರ್ಮಿಕರು ದಿನವೊಂದಕ್ಕೆ 200-400 ರೂಪಾಯಿ ಕೂಲಿ ಪಡೆದರೆ, ಶೇಕಡ 39ರಷ್ಟು ಕಾರ್ಮಿಕರು 400-600 ರೂಪಾಯಿ ದಿನಕ್ಕೆ ಪಡೆಯುತ್ತಿದ್ದು,  ಕನಿಷ್ಠ ದಿನಗೂಲಿ ಕಾಯಿದೆಯ ಅನುಗುಣವಾಗಿ ಪಡೆಯಬೇಕಾದ್ದಕಿಂತ ಕಡಿಮೆ ಆದಾಯ ಹೊಂದಿದ್ದಾರೆ. ಈ ಕಾಯಿದೆಯ ಪ್ರಕಾರ ದೆಹಲಿಯಲ್ಲಿ  ಕೌಶಲ, ಅರೆಕೌಶಲ ಮತ್ತು ಕೌಶಲ್ಯವಿಲ್ಲದ ಕಾರ್ಮಿಕರಿಗೆ ಕ್ರಮವಾಗಿ 692, 629 ಮತ್ತು 571 ರೂ ಆದಾಯ ಪಡೆಯಬೇಕಿದೆ.

ನಿರ್ಮಾಣ ವಲಯವು ದೇಶದ ಜಿಡಿಪಿಗೆ ಶೇ.9ರಷ್ಟು ಕೊಡುಗೆ ನೀಡುತ್ತದೆ ಮತ್ತು ದೇಶದ ವಲಸೆ ಕಾರ್ಮಿಕರಿಗೆ ಅತಿಹೆಚ್ಚು ಉದ್ಯೋಗ ನೀಡುತ್ತದೆ. ಅಂದರೆ 5 ಕೋಟಿ ದಿನಗೂಲಿ ಕಾರ್ಮಿಕರಿಗೆ ಕೆಲಸ ಕೊಡುತ್ತದೆ. ಪ್ರತಿವರ್ಷ 90 ಲಕ್ಷ ಕಾರ್ಮಿಕರು ಗ್ರಾಮೀಣ ಪ್ರದೇಶದಿಂದ ನಗರಗಳತ್ತ ನಿರ್ಮಾಣ ಮತ್ತು ಫ್ಯಾಕ್ಟರಿಗಳಲ್ಲಿ ಕೆಲಸ ಮಾಡಲು ಚಲಿಸುತ್ತಾರೆ ಎಂದು ಸರ್ವೆ ಹೇಳಿದ್ದನ್ನು ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ಈಗ ಈ ಕೋಟ್ಯಾಂತರ ಜನರು ಅತಂತ್ರ ಸ್ಥಿತಿಯಲ್ಲಿ ಜೀವನ ಸಾಗಿಸಬೇಕಿದೆ. ಇವರೆಲ್ಲರ ಬವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಮತ್ತು ಕೇಂದ್ರ ಸರಕಾರಗಳು ತುರ್ತು ಕ್ರಮ ಕೈಗೊಳ್ಳಬೇಕಿದೆ.

ಕೃಪೆ: ಇಂಡಿಯನ್‌ ಎಕ್ಸ್‌ಪ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...