Homeಕರ್ನಾಟಕಲಾಕ್ ಡೌನ್ ನಿಂದ ಅಸ್ತವ್ಯಸ್ತಗೊಂಡ ಕಾರ್ಮಿಕರ ಬದುಕು; ಜನ ಸಾಹಸ್ ಸರ್ವೇ ಬಿಚ್ಚಿಟ್ಟ ಸತ್ಯಗಳು

ಲಾಕ್ ಡೌನ್ ನಿಂದ ಅಸ್ತವ್ಯಸ್ತಗೊಂಡ ಕಾರ್ಮಿಕರ ಬದುಕು; ಜನ ಸಾಹಸ್ ಸರ್ವೇ ಬಿಚ್ಚಿಟ್ಟ ಸತ್ಯಗಳು

ಕೋವಿಡ್-19ನಿಂದ ಭಾರತವನ್ನು ಲಾಕ್ ಡೌನ್ ಮಾಡಿದ ಮೇಲೆ ವಲಸೆಕಾರ್ಮಿಕರ ಜೀವನ ಅಸ್ತವ್ಯವಸ್ತವಾಗಿದೆ ಎಂದು ಸರ್ಕಾರೇತರ ಸಂಸ್ಥೆ ಜನ ಸಾಹಸ್ ಸರ್ವೇ ಹೇಳಿದೆ.

- Advertisement -
- Advertisement -

ಲಾಕ್ ಡೌನ್ ಪರಿಣಾಮ ಸೀಜನಲ್ ವಲಸಿಗರಲ್ಲಿ ಜಾಗೃತಿ ಮೂಡಿಸಲು ಸಾಧ್ಯವಾಗದೆ ಆರ್ಥಿಕ ಬೆಳವಣಿಗೆ ಕುಸಿತ ಕಾಣಲು ಕಾರಣವಾಗಿದೆ. ಹೀಗಾಗಿ ಶೇ. 92ರಷ್ಟು ಕಾರ್ಮಿಕರ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಸರ್ಕಾರೇತರ ಸಂಸ್ಥೆ ಜನ ಸಾಹಸ್ ಸರ್ವೇ ಹೇಳಿದೆ.

ಜನ ಸಾಹಸ್ ಸಂಸ್ಥೆ ಪ್ರಮುಖವಾಗಿ ಉತ್ತರ ಭಾರತ ಮತ್ತು ಮಧ್ಯಭಾರತದಲ್ಲಿ ದೂರವಾಣಿ ಮೂಲಕ ವಲಸೆ ಕಾರ್ಮಿಕರನ್ನು ಸಂಪರ್ಕಿಸಿ ಸರ್ವೆ ನಡೆಸಿ ಲಾಕ್ ಡೌನ್ ಸಮಯದಲ್ಲಿ ಶೇಕಡ 42ರಷ್ಟು ವಲಸೆ ಕಾರ್ಮಿಕರ ಬಳಿ ಆ ದಿನಕ್ಕೂ ಆಹಾರಧಾನ್ಯಗಳಿಲ್ಲ ಎಂದು ಸ್ಪಷ್ಟಪಡಿಸಿದೆ. 21 ದಿನಗಳ ಲಾಕ್ ಡೌನ್ ವೇಳೆಯಲ್ಲಿ ಶೇಕಡ 66 ರಷ್ಟು ಮಂದಿ ಕಾರ್ಮಿಕರಿಗೆ ಮನೆಯ ಖರ್ಚುವೆಚ್ಚ ನಿರ್ವಹಣೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಮಧ್ಯ ಮತ್ತು ಉತ್ತರ ಭಾರತದ ಮೂರನೇ ಒಂದರಷ್ಟು ವಲಸೆ ಕಾರ್ಮಿಕರು ಈ ಸಮೀಕ್ಷೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಲಾಕ್ ಡೌನ್ ನ  ಆರಂಭದ ದಿನದಿಂದಲೂ ಆಹಾರ, ನೀರು ಮತ್ತು ಹಣ ಸಿಗದೆ ನಗರಗಳಲ್ಲಿ ಸಿಲುಕಿ ಪರದಾಡುತ್ತಿದ್ದಾರೆ. ನೀರು ಮತ್ತು ಆಹಾರ ಸಿಕ್ಕರೂ ಅದು ಕಡಿಮೆ ಪ್ರಮಾಣದಲ್ಲಿ ದೊರೆತಿದೆ ಎಂಬುದರ ಮೇಲೆ ಈ ಸರ್ವೇ ಬೆಳಕು ಚೆಲ್ಲಿದೆ.

ಲಾಕ್ ಡೌನ್ ನಡುವೆಯೇ ಅರ್ಧದಷ್ಟು ವಲಸೆ ಕಾರ್ಮಿಕರು ತಮ್ಮ ಹಳ್ಳಿಗಳಿಗೆ ಹಿಂದಿರುಗಿದ್ದಾರೆ. ಆದರೂ ಅವರು ವಿವಿಧ ಸವಾಲುಗಳನ್ನು ಎದುರಿಸುತ್ತಿದ್ದು ಆಹಾರಧಾನ್ಯಗಳನ್ನು ಮತ್ತು ಯಾವುದೇ ಆದಾಯವನ್ನು ಹೊಂದಲು ಆಗಿಲ್ಲ. ಹೀಗಾಗಿ ಅವರ ಬದುಕು ದುಸ್ಥರವಾಗಿದೆ.

ಶೇಕಡ 31ರಷ್ಟು ಕಾರ್ಮಿಕರು ಸಾಲ ಪಡೆದಿದ್ದಾರೆ. ಆದರೆ ಉದ್ಯೋಗವಿಲ್ಲದೆ ಸಾಲ ಮರುಪಾವತಿ ಮಾಡುವುದು ಕಷ್ಟವಾಗುತ್ತಿದೆ. ಬಹುತೇಕ ಕಾರ್ಮಿಕರು ಈ ಸಾಲವನ್ನು ಖಾಸಗಿ ಲೇವಾದೇವಿದಾರರಿಂದ ಪಡೆದಿದ್ದಾರೆ. ಶೇಕಡ 79ರಷ್ಟು ವಲಸೆ ಕಾರ್ಮಿಕರು ಸಾಲ ಕಟ್ಟಲು ಸಾಧ್ಯವಾಗುತ್ತಿಲ್ಲ ಹಾಗಾಗಿ ಹಿಂಸೆಗೆ ತುತ್ತಾಗಬಹುದು ಎನ್ನುವ ಆತಂಕದಲ್ಲಿದ್ದಾರೆ ಎಂದು ಸರ್ವೇ ತಿಳಿಸಿದೆ.

ಮಾರ್ಚ್ 24ರ ನಂತರ ಕಾರ್ಮಿಕರಿಗೆ ಉದ್ಯೋವಿಲ್ಲ. ಹಾಗಾಗಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಕಟ್ಟಡ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿಂದ ನೇರ ಹಣ ವರ್ಗಾವಣೆ ಮಾಡುವಂತೆ ಎಲ್ಲಾ ರಾಜ್ಯಗಳಿಗೆ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ಆದರೆ ಶೇಕಡ 94ರಷ್ಟು ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಗುರುತಿನ ಚೀಟಿ ಇಲ್ಲ ಎಂಬುದರ ಮೇಲೆ ಈ ಸರ್ವೇ ಬೊಟ್ಟು ಮಾಡಿದೆ.

ಸರಾಸರಿ ನಾಲ್ವರು ಸದಸ್ಯರಿರುವ ಕುಟುಂಬದ ಜವಾಬ್ದಾರಿ ಹೊಂದಿರುವ ಕಾರ್ಮಿಕರಲ್ಲಿ ಶೇಕಡ 55ರಷ್ಟು ಕಾರ್ಮಿಕರು ದಿನವೊಂದಕ್ಕೆ 200-400 ರೂಪಾಯಿ ಕೂಲಿ ಪಡೆದರೆ, ಶೇಕಡ 39ರಷ್ಟು ಕಾರ್ಮಿಕರು 400-600 ರೂಪಾಯಿ ದಿನಕ್ಕೆ ಪಡೆಯುತ್ತಿದ್ದು,  ಕನಿಷ್ಠ ದಿನಗೂಲಿ ಕಾಯಿದೆಯ ಅನುಗುಣವಾಗಿ ಪಡೆಯಬೇಕಾದ್ದಕಿಂತ ಕಡಿಮೆ ಆದಾಯ ಹೊಂದಿದ್ದಾರೆ. ಈ ಕಾಯಿದೆಯ ಪ್ರಕಾರ ದೆಹಲಿಯಲ್ಲಿ  ಕೌಶಲ, ಅರೆಕೌಶಲ ಮತ್ತು ಕೌಶಲ್ಯವಿಲ್ಲದ ಕಾರ್ಮಿಕರಿಗೆ ಕ್ರಮವಾಗಿ 692, 629 ಮತ್ತು 571 ರೂ ಆದಾಯ ಪಡೆಯಬೇಕಿದೆ.

ನಿರ್ಮಾಣ ವಲಯವು ದೇಶದ ಜಿಡಿಪಿಗೆ ಶೇ.9ರಷ್ಟು ಕೊಡುಗೆ ನೀಡುತ್ತದೆ ಮತ್ತು ದೇಶದ ವಲಸೆ ಕಾರ್ಮಿಕರಿಗೆ ಅತಿಹೆಚ್ಚು ಉದ್ಯೋಗ ನೀಡುತ್ತದೆ. ಅಂದರೆ 5 ಕೋಟಿ ದಿನಗೂಲಿ ಕಾರ್ಮಿಕರಿಗೆ ಕೆಲಸ ಕೊಡುತ್ತದೆ. ಪ್ರತಿವರ್ಷ 90 ಲಕ್ಷ ಕಾರ್ಮಿಕರು ಗ್ರಾಮೀಣ ಪ್ರದೇಶದಿಂದ ನಗರಗಳತ್ತ ನಿರ್ಮಾಣ ಮತ್ತು ಫ್ಯಾಕ್ಟರಿಗಳಲ್ಲಿ ಕೆಲಸ ಮಾಡಲು ಚಲಿಸುತ್ತಾರೆ ಎಂದು ಸರ್ವೆ ಹೇಳಿದ್ದನ್ನು ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ಈಗ ಈ ಕೋಟ್ಯಾಂತರ ಜನರು ಅತಂತ್ರ ಸ್ಥಿತಿಯಲ್ಲಿ ಜೀವನ ಸಾಗಿಸಬೇಕಿದೆ. ಇವರೆಲ್ಲರ ಬವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಮತ್ತು ಕೇಂದ್ರ ಸರಕಾರಗಳು ತುರ್ತು ಕ್ರಮ ಕೈಗೊಳ್ಳಬೇಕಿದೆ.

ಕೃಪೆ: ಇಂಡಿಯನ್‌ ಎಕ್ಸ್‌ಪ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...