Homeಮುಖಪುಟಯುಪಿಯ 5 ನಗರಗಳಲ್ಲಿ ಲಾಕ್‌ಡೌನ್‌ ಇಲ್ಲ: ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂ!

ಯುಪಿಯ 5 ನಗರಗಳಲ್ಲಿ ಲಾಕ್‌ಡೌನ್‌ ಇಲ್ಲ: ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂ!

- Advertisement -
- Advertisement -

ಕೋವಿಡ್ ನಿಭಾಯಿಸಲು ಲಕ್ನೋ, ಪ್ರಯಾಗರಾಜ್, ವಾರಣಾಸಿ, ಕಾನ್ಪುರ್ ಮತ್ತು ಗೋರಖ್ಪುರ್ ಈ ಐದು ನಗರಗಳಲ್ಲಿ ಏಪ್ರಿಲ್ 26 ರವರೆಗೆ ಲಾಕ್ ಡೌನ್ ಮಾಡುವಂತೆ ನಿನ್ನೆ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆನೀಡಿದೆ.

ಅಲಹಾಬಾದ್ ಹೈಕೋರ್ಟ್ ಆದೇಶದಂತೆ 5 ನಗರಗಳಲ್ಲಿ ಲಾಕ್ ಡೌನ್ ಜಾರಿ ಮಾಡಲು ಉತ್ತರಪ್ರದೇಶ ಸರ್ಕಾರ ನಿರಾಕರಿಸಿ ಇಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಅಲಹಾಬಾದ್ ಹೈಕೋರ್ಟ್ ಆದೇಶವು ಯುಪಿ ಸರ್ಕಾರದ ಸ್ವಾಯುತ್ತತೆಯನ್ನು ಅನ್ನು ಉಲ್ಲಂಘಿಸಿದೆ ಎಂದು ಆರೋಪಿಸಿತ್ತು.

“ನಾವು ನ್ಯಾಯಾಲಯದ ಕಳವಳವನ್ನು ಅರ್ಥಮಾಡಿಕೊಳ್ಳುತ್ತೇವೆ. ಆದರೆ ಹೈಕೋರ್ಟ್ ಆದೇಶಿಸಿದ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ, ಕೆಲವು ವಿಷಯಗಳು ಈಗಾಗಲೇ ಜಾರಿಯಲ್ಲಿವೆ ” ಎಂದು ಯುಪಿ ಸರ್ಕಾರ ಸುಪ್ರೀಂ ನಲ್ಲಿ ವಾದಿಸಿದೆ.

ಸಾಂಕ್ರಾಮಿಕ ರೋಗವು “ನಮ್ಮ ವೈದ್ಯಕೀಯ ಮೂಲಸೌಕರ್ಯವನ್ನು ವಾಸ್ತವಿಕವಾಗಿ ಅಸಮರ್ಥಗೊಳಿಸಿದೆ… ವಿಶೇಷವಾಗಿ ಪ್ರಯಾಗರಾಜ್, ಲಕ್ನೋ, ವಾರಣಾಸಿ, ಕಾನ್ಪುರ್ ಮತ್ತು ಗೋರಖ್ಪುರದಂತಹ ನಗರಗಳಲ್ಲಿ’ ಎಂದು ಅಲಹಾಬಾದ್ ಹೈಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿತ್ತು.

ಅಲಹಾಬಾದ್ ಹೈಕೋರ್ಟ್ ಆದೇಶದಂತೆ ಲಾಕ್‌ಡೌನ್ ಜಾರಿಗೊಳಿಸಲು ಉತ್ತರಪ್ರದೇಶ ಸರ್ಕಾರ ನಿನ್ನೆ ಸಂಜೆಯೇ ನಿರಾಕರಿಸಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಜೀವ ಮತ್ತು ಜೀವನೋಪಾಯ ಎರಡನ್ನೂ ರಕ್ಷಿಸಬೇಕಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಧಾರ್ಮಿಕ ಚಟುವಟಿಕೆಗಳನ್ನು ನಿಷೇಧಿಸುವುದು ಮತ್ತು ಶಿಕ್ಷಣ ಸಂಸ್ಥೆಗಳು ಮತ್ತು ಶಾಪಿಂಗ್ ಮಾಲ್‌ಗಳನ್ನು ಬಂದ್ ಮಾಡುವುದು ಸೇರಿದಂತೆ ಸರಣಿ ಕ್ರಮಗಳನ್ನು ಹೈಕೋರ್ಟ್ ಆದೇಶಿಸಿತ್ತು.

ಯುಪಿ 24 ಗಂಟೆಗಳಲ್ಲಿ ದಾಖಲೆಯ 30,000 ಕ್ಕಿಂತ ಹೆಚ್ಚು ಹೊಸ ಪ್ರಕರಣಗಳನ್ನು ವರದಿ ಮಾಡಿದೆ. ನ್ಯಾಯಾಲಯವು ಹಣಕಾಸು ಸಂಸ್ಥೆಗಳು, ವೈದ್ಯಕೀಯ ಅಥವಾ ಆರೋಗ್ಯ ಸೇವೆಗಳನ್ನು ನೀಡುವ ವ್ಯವಹಾರ, ಕೈಗಾರಿಕಾ ಮತ್ತು ವೈಜ್ಞಾನಿಕ ಸಂಸ್ಥೆಗಳು ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಕಚೇರಿಗಳು, ಸರ್ಕಾರಿ ಅಥವಾ ಖಾಸಗಿ, ಮುಚ್ಚಲು ಆದೇಶಿಸಿತ್ತು. ಸ್ಥಳೀಯ ಸಂಸ್ಥೆಗಳಿಗೆ ವಿನಾಯಿತಿ ನೀಡಿತ್ತು.

ವೈದ್ಯಕೀಯ ತುರ್ತು ಪರಿಸ್ಥಿತಿಗಳನ್ನು ಹೊರತುಪಡಿಸಿ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಬೇಕು ಎಂದು ಹೈಕೋರ್ಟ್ ಹೇಳಿತ್ತು.


ಇದನ್ನೂ ಓದಿ: ಕೋವಿಡ್ ಸಾವಿನ ಸಂಖ್ಯೆಗಳನ್ನು ಮುಚ್ಚಿಡುತ್ತಿರುವ ಯೋಗಿ ಸರ್ಕಾರ: ಒಂದು ಗ್ರೌಂಡ್ ರಿಪೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...