Homeಮುಖಪುಟಲಾಕ್‌ಡೌನ್ ವಿಸ್ತರಿಸುವ ಸಾಧ್ಯತೆ: ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಸೂಚನೆ

ಲಾಕ್‌ಡೌನ್ ವಿಸ್ತರಿಸುವ ಸಾಧ್ಯತೆ: ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಸೂಚನೆ

- Advertisement -
- Advertisement -

ದೇಶದಲ್ಲಿ ಕೊವಿಡ್-19 ಸೋಂಕುಗಳು ಹೆಚ್ಚುತ್ತಿರುವ ಮಧ್ಯೆ, ಏಪ್ರಿಲ್ 14 ರ ನಂತರ ಕೊರೊನ ವೈರಸ್ ಹರಡುವಿಕೆಯನ್ನು ತಡೆಯಲು ಲಾಕ್‌ಡೌನ್ ವಿಸ್ತರಿಸಲಾಗುವುದು ಮತ್ತು ನಿರ್ಬಂಧಗಳನ್ನು ಒಂದೇ ಬಾರಿಗೆ ತೆಗೆದುಹಾಕಲಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಸೂಚಿಸಿದ್ದಾರೆ.

ಸರ್ವ ಪಕ್ಷಗಳ ಮುಖಂಡರೊಂದಿಗಿನ ವಿಡಿಯೋ ಸಭೆಯಲ್ಲಿ ಪ್ರಧಾನ ಮಂತ್ರಿ ಮೋದಿ ಈ ಬಗ್ಗೆ ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸುವುದಾಗಿ ಹೇಳಿದ್ದಾರೆ.

“ಪ್ರತಿಯೊಂದು ಜೀವವನ್ನೂ ಉಳಿಸುವುದು ಸರ್ಕಾರದ ಆದ್ಯತೆಯಾಗಿದೆ. ದೇಶದ ಪರಿಸ್ಥಿತಿ ‘ಸಾಮಾಜಿಕ ತುರ್ತುಸ್ಥಿತಿಗೆ’ ಹೋಲುತ್ತದೆ, ಇಂದು ಕಠಿಣ ನಿರ್ಧಾರಗಳ ಅಗತ್ಯವಿದೆ ಹಾಗೂ ನಾವು ಜಾಗರೂಕರಾಗಿ ಮುಂದುವರಿಯಬೇಕು” ಎಂದು ಪ್ರಧಾನಿ ಹೇಳಿದರು.

ಕೊವಿಡ್-19 ರ ನಂತರ ಮತ್ತೆ ಬದುಕು ಒಂದೇ ಆಗಿರುವುದಿಲ್ಲ, ಮುಂದಿನ ದಿನಗಳಲ್ಲಿ “ಕೊರೊನಾ ಪೂರ್ವ ಮತ್ತು ಕೊರೊನಾ ನಂತರ” ಎಂದಿರುತ್ತದೆ ಎಂದು ಪ್ರಧಾನಿ ಹೇಳಿದರು.

“ಬೃಹತ್ ನಡೆಗಳು, ಸಾಮಾಜಿಕ ಹಾಗೂ ವೈಯಕ್ತಿಕ ಬದಲಾವಣೆಗಳು ಆಗಬೇಕಿದೆ” ಎಂದು ಅವರು ವಿಡಿಯೋ ಕಾನ್ಫರೆನ್ಸ್‌ನಲ್ಲಿ ರಾಜಕೀಯ ಮುಖಂಡರಿಗೆ ತಿಳಿಸಿದ್ದಾರೆ.

ಕೊವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು 130 ಕೋಟಿ ಜನರ ವ್ಯಾಪಕ ಲಾಕ್‌ಡೌನ್ ಏಪ್ರಿಲ್ 14 ರಂದು ಕೊನೆಗೊಳ್ಳುತ್ತದೆ. ಇದನ್ನು ವಿಸ್ತರಿಸಬೇಕೆ, ಬೇಡವೇ ಎಂಬ ಬಗ್ಗೆ ಪ್ರಧಾನಿ ಮೋದಿ ಈ ವಾರ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ನಿರ್ಧಾರ ತೆಗೆದುಕೊಳ್ಳುವ ಮೊದಲು, ಅವರು ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಗಳೊಂದಿಗೆ ಎರಡನೇ ಸಭೆ ನಡೆಸಲಿದ್ದಾರೆ.

ಅನೇಕ ರಾಜ್ಯಗಳು ಮತ್ತು ತಜ್ಞರು ಈಗಾಗಲೇ ಲಾಕ್‌ಡೌನ್‌ ವಿಸ್ತರಣೆಯನ್ನು ಕೋರಿದ್ದಾರೆ. ಲಾಕ್‌ಡೌನ್ ಇದ್ದರೂ ಕೊರೊನಾ ಪ್ರಕರಣಗಳು ವೇಗವಾಗಿ ಹರಡುತ್ತಿವೆ, ಜೊತೆಗೆ ಮುಂಬರುವ ವಾರಗಳಲ್ಲಿ ಸೋಂಕು ಗರಿಷ್ಠವಾಗಬಹುದು ಎಂಬ ಎಚ್ಚರಿಕೆಯನ್ನು ತಜ್ಞರು ಈಗಾಗಲೆ ನೀಡಿದ್ದಾರೆ ಎಂದಿದ್ದಾರೆ.

ಶಾಲಾ-ಕಾಲೇಜುಗಳು ಮತ್ತು ಧಾರ್ಮಿಕ ಕೇಂದ್ರಗಳು ಇನ್ನೂ ಹೆಚ್ಚಿನ ವಾರಗಳವರೆಗೆ ಮುಚ್ಚಲ್ಪಡಬೇಕೆಂದು ಮಂತ್ರಿಗಳ ಗುಂಪು ನಿನ್ನೆ ಸೂಚಿಸಿತ್ತು. ರೈಲು ಪ್ರಯಾಣ, ಬಸ್ಸುಗಳು, ಮಹಾನಗರಗಳು ಮತ್ತು ಧಾರ್ಮಿಕ ಕೂಟಗಳನ್ನು ದೇಶದಲ್ಲಿ ಎಲ್ಲಿಯಾದರೂ ಅನುಮತಿಸುವ ಸಾಧ್ಯತೆಯಿಲ್ಲ. ದೇಶದಲ್ಲಿ ಕೊರೊನ ವೈರಸ್ ಪ್ರಕರಣಗಳ ಸಂಖ್ಯೆ 5,194 ಕ್ಕೆ ಏರಿದೆ ಹಾಗೂ 149 ಸಾವುಗಳು ಸಂಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...