Homeಮುಖಪುಟಲಾಕ್‌ಡೌನ್ ವಿಸ್ತರಿಸುವ ಸಾಧ್ಯತೆ: ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಸೂಚನೆ

ಲಾಕ್‌ಡೌನ್ ವಿಸ್ತರಿಸುವ ಸಾಧ್ಯತೆ: ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಸೂಚನೆ

- Advertisement -
- Advertisement -

ದೇಶದಲ್ಲಿ ಕೊವಿಡ್-19 ಸೋಂಕುಗಳು ಹೆಚ್ಚುತ್ತಿರುವ ಮಧ್ಯೆ, ಏಪ್ರಿಲ್ 14 ರ ನಂತರ ಕೊರೊನ ವೈರಸ್ ಹರಡುವಿಕೆಯನ್ನು ತಡೆಯಲು ಲಾಕ್‌ಡೌನ್ ವಿಸ್ತರಿಸಲಾಗುವುದು ಮತ್ತು ನಿರ್ಬಂಧಗಳನ್ನು ಒಂದೇ ಬಾರಿಗೆ ತೆಗೆದುಹಾಕಲಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಸೂಚಿಸಿದ್ದಾರೆ.

ಸರ್ವ ಪಕ್ಷಗಳ ಮುಖಂಡರೊಂದಿಗಿನ ವಿಡಿಯೋ ಸಭೆಯಲ್ಲಿ ಪ್ರಧಾನ ಮಂತ್ರಿ ಮೋದಿ ಈ ಬಗ್ಗೆ ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸುವುದಾಗಿ ಹೇಳಿದ್ದಾರೆ.

“ಪ್ರತಿಯೊಂದು ಜೀವವನ್ನೂ ಉಳಿಸುವುದು ಸರ್ಕಾರದ ಆದ್ಯತೆಯಾಗಿದೆ. ದೇಶದ ಪರಿಸ್ಥಿತಿ ‘ಸಾಮಾಜಿಕ ತುರ್ತುಸ್ಥಿತಿಗೆ’ ಹೋಲುತ್ತದೆ, ಇಂದು ಕಠಿಣ ನಿರ್ಧಾರಗಳ ಅಗತ್ಯವಿದೆ ಹಾಗೂ ನಾವು ಜಾಗರೂಕರಾಗಿ ಮುಂದುವರಿಯಬೇಕು” ಎಂದು ಪ್ರಧಾನಿ ಹೇಳಿದರು.

ಕೊವಿಡ್-19 ರ ನಂತರ ಮತ್ತೆ ಬದುಕು ಒಂದೇ ಆಗಿರುವುದಿಲ್ಲ, ಮುಂದಿನ ದಿನಗಳಲ್ಲಿ “ಕೊರೊನಾ ಪೂರ್ವ ಮತ್ತು ಕೊರೊನಾ ನಂತರ” ಎಂದಿರುತ್ತದೆ ಎಂದು ಪ್ರಧಾನಿ ಹೇಳಿದರು.

“ಬೃಹತ್ ನಡೆಗಳು, ಸಾಮಾಜಿಕ ಹಾಗೂ ವೈಯಕ್ತಿಕ ಬದಲಾವಣೆಗಳು ಆಗಬೇಕಿದೆ” ಎಂದು ಅವರು ವಿಡಿಯೋ ಕಾನ್ಫರೆನ್ಸ್‌ನಲ್ಲಿ ರಾಜಕೀಯ ಮುಖಂಡರಿಗೆ ತಿಳಿಸಿದ್ದಾರೆ.

ಕೊವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು 130 ಕೋಟಿ ಜನರ ವ್ಯಾಪಕ ಲಾಕ್‌ಡೌನ್ ಏಪ್ರಿಲ್ 14 ರಂದು ಕೊನೆಗೊಳ್ಳುತ್ತದೆ. ಇದನ್ನು ವಿಸ್ತರಿಸಬೇಕೆ, ಬೇಡವೇ ಎಂಬ ಬಗ್ಗೆ ಪ್ರಧಾನಿ ಮೋದಿ ಈ ವಾರ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ನಿರ್ಧಾರ ತೆಗೆದುಕೊಳ್ಳುವ ಮೊದಲು, ಅವರು ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಗಳೊಂದಿಗೆ ಎರಡನೇ ಸಭೆ ನಡೆಸಲಿದ್ದಾರೆ.

ಅನೇಕ ರಾಜ್ಯಗಳು ಮತ್ತು ತಜ್ಞರು ಈಗಾಗಲೇ ಲಾಕ್‌ಡೌನ್‌ ವಿಸ್ತರಣೆಯನ್ನು ಕೋರಿದ್ದಾರೆ. ಲಾಕ್‌ಡೌನ್ ಇದ್ದರೂ ಕೊರೊನಾ ಪ್ರಕರಣಗಳು ವೇಗವಾಗಿ ಹರಡುತ್ತಿವೆ, ಜೊತೆಗೆ ಮುಂಬರುವ ವಾರಗಳಲ್ಲಿ ಸೋಂಕು ಗರಿಷ್ಠವಾಗಬಹುದು ಎಂಬ ಎಚ್ಚರಿಕೆಯನ್ನು ತಜ್ಞರು ಈಗಾಗಲೆ ನೀಡಿದ್ದಾರೆ ಎಂದಿದ್ದಾರೆ.

ಶಾಲಾ-ಕಾಲೇಜುಗಳು ಮತ್ತು ಧಾರ್ಮಿಕ ಕೇಂದ್ರಗಳು ಇನ್ನೂ ಹೆಚ್ಚಿನ ವಾರಗಳವರೆಗೆ ಮುಚ್ಚಲ್ಪಡಬೇಕೆಂದು ಮಂತ್ರಿಗಳ ಗುಂಪು ನಿನ್ನೆ ಸೂಚಿಸಿತ್ತು. ರೈಲು ಪ್ರಯಾಣ, ಬಸ್ಸುಗಳು, ಮಹಾನಗರಗಳು ಮತ್ತು ಧಾರ್ಮಿಕ ಕೂಟಗಳನ್ನು ದೇಶದಲ್ಲಿ ಎಲ್ಲಿಯಾದರೂ ಅನುಮತಿಸುವ ಸಾಧ್ಯತೆಯಿಲ್ಲ. ದೇಶದಲ್ಲಿ ಕೊರೊನ ವೈರಸ್ ಪ್ರಕರಣಗಳ ಸಂಖ್ಯೆ 5,194 ಕ್ಕೆ ಏರಿದೆ ಹಾಗೂ 149 ಸಾವುಗಳು ಸಂಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...