Homeಮುಖಪುಟಮೇ 31ರ ಬಳಿಕವೂ ಮತ್ತೆರೆಡು ವಾರ ಲಾಕ್‌ಡೌನ್ ಮುಂದುವರೆಯುವ ಸಾಧ್ಯತೆ?

ಮೇ 31ರ ಬಳಿಕವೂ ಮತ್ತೆರೆಡು ವಾರ ಲಾಕ್‌ಡೌನ್ ಮುಂದುವರೆಯುವ ಸಾಧ್ಯತೆ?

ಮುಂಬೈ, ಚೆನ್ನೈ, ಕೋಲ್ಕತ್ತಾ, ಅಹಮದಾಬಾದ್, ಬೆಂಗಳೂರು, ಇಂದೂರ್, ದೆಹಲಿ, ಪುಣೆ, ಥಾಣ, ಜೈಪುರ್, ಸೂರತ್ ಈ ಹನ್ನೊಂದು ನಗರಗಳಲ್ಲಿ ಲಾಕ್‌ಡೌನ್‌ ಬಿಗಿಗೊಳಿಸಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ.

- Advertisement -
- Advertisement -

ನಾಲ್ಕನೇ ಹಂತದ ಲಾಕ್‌ಡೌನ್‌ ಮುಕ್ತಾಯವಾಗುತ್ತಿದೆ. ಈ ಸಂದರ್ಭದಲ್ಲಿ ಮೇ 31ರ ಬಳಿಕವೂ ಮತ್ತೆರೆಡು ವಾರ ಲಾಕ್‌ಡೌನ್ ಮುಂದುವರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕಳೆದೊಂದು ವಾರದಿಂದ ಕೊರೊನಾ ಸೋಂಕು ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗುತ್ತಿರುವುದರಿಂದ ಮತ್ತು ದೇಶದಲ್ಲಿ ಪ್ರಕರಣಗಳ ಸಂಖ್ಯೆ ಒಂದೂವರೆ ಲಕ್ಷಕ್ಕೆ ತಲುಪಿರುವುದರಿಂದ ಲಾಕ್‌ಡೌನ್‌ ಅನ್ನು ಮತ್ತೆರೆಡು ವಾರ ವಿಸ್ತರಿಸುವಂತೆ ಅಧಿಕಾರಿಗಳು ಕೋರಿದ್ದಾರೆ ಎನ್ನಲಾಗಿದೆ.

5ನೇ ಹಂತದ ಲಾಕ್‌ಡೌನ್‌ನಲ್ಲಿ ಭಾರತದ ಕೊರೊನಾ ಹಾಟ್‌ಸ್ಪಾಟ್‌ಗಳಾದ 11 ಮಹಾನಗರಗಳ ಮೇಲೆ ಕಣ್ಣಿಡಲು ನಿರ್ಧರಿಸಿದ್ದು, ಈ  11ನಗರಗಳಲ್ಲಿ ಲಾಕ್‌ಡೌನ್‌ ನಿಯಮಗಳನ್ನು ಬಿಗಿಗೊಳಿಸುವ ಸಾಧ್ಯತೆಯಿದೆ.

ಮುಂಬೈ, ಚೆನ್ನೈ, ಕೋಲ್ಕತ್ತಾ, ಅಹಮದಾಬಾದ್, ಬೆಂಗಳೂರು, ಇಂದೂರ್, ದೆಹಲಿ, ಪುಣೆ, ಥಾಣ, ಜೈಪುರ್, ಸೂರತ್ ಈ ಹನ್ನೊಂದು ನಗರಗಳಲ್ಲಿ ಲಾಕ್‌ಡೌನ್‌ ಬಿಗಿಗೊಳಿಸಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ. ಈ ನಗರಗಳಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಿವೆ. ಶೇಕಡಾ 70ರಷ್ಟು ಪ್ರಕರಣಗಳು ಈ 11 ನಗರಗಳಿಂದಲೇ ವರದಿಯಾಗುತ್ತಿವೆ ಎನ್ನಲಾಗಿದೆ.

ಉಳಿದ ನಗರಗಳಲ್ಲಿ ಲಾಕ್‌ಡೌನ್‌ನಿಂದ ವಿನಾಯಿತಿ ನೀಡುವ ಸಾಧ್ಯತೆಯಿದೆ. ಈಗಾಗಲೇ ಕರ್ನಾಟಕದ ಕೆಲವು ನಗರಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಏರಿಯಾಗಳಲ್ಲಿ ಇಡೀ ಏರಿಯಾವನ್ನು ಲಾಕ್‌ಡೌನ್‌ ಮಾಡದೇ ಕೇವಲ ಸೋಂಕು ಕಾಣಿಸಿಕೊಂಡ ರಸ್ತೆಯನ್ನು ಮಾತ್ರ ಸೀಲ್‌ಡೌನ್‌ ಮಾಡಲು ನಿರ್ಧರಿಸಲಾಗಿದೆ.

ಲಾಕ್‌ಡೌನ್‌ 5.Oನಲ್ಲಿ ಆಟೋ, ಟ್ಯಾಕ್ಸಿ ಓಡಾಟಕ್ಕೆ ಅವಕಾಶ ನೀಡುವ ಸಾಧ್ಯತೆಯಿದೆ. ಜೊತೆಗೆ ಷರತ್ತುಗಳೊಂದಿಗೆ ದೇವಸ್ಥಾನ, ಚರ್ಚ್‌ ಮತ್ತು ಮಸೀದಿ ತೆರೆಯಲು ಅವಕಾಶ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ ಬೃಹತ್ ಧಾರ್ಮಿಕ ಕಾರ್ಯಕ್ರಮ ನಡೆಸುವಂತಿಲ್ಲ ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

ಶಾಲಾ ಕಾಲೇಜುಗಳು, ಮಾಲ್‌ಗಳು, ಚಿತ್ರಮಂದಿರಗಳನ್ನು ಸದ್ಯಕ್ಕೆ ತೆರೆಯುವಂತಿಲ್ಲ. ಜಿಮ್‌ಗಳನ್ನು ತೆರೆಯುವುದು ಆಯಾ ರಾಜ್ಯಗಳಿಗೆ ಬಿಟ್ಟ ವಿಚಾರ ಎಂದು ಕೇಂದ್ರ ಸರ್ಕಾರ ಘೋಷಿಸಲಿದೆ ಎಂದು ಮೂಲಗಳು ತಿಳಿಸಿವೆ. ಒಟ್ಟಿನಲ್ಲಿ ಅಂತಿಮ ತೀರ್ಮಾನ ಇನ್ನೆರಡು ದಿನಗಳಲ್ಲಿಯೇ ಹೊರಬೀಳಲಿದೆ.


ಇದನ್ನೂ ಓದಿ: ಕೊರೋನಾ ವೈರಸ್‌ ಬಿಕ್ಕಟ್ಟು ನಿಜ; ಆದರೆ ದುರಂತವಾಗಬೇಕಾಗಿಲ್ಲ: ಎಸ್ತರ್ ‌ಡಫ್ಲೋ, ಅಭಿಜಿತ್ ಬ್ಯಾನರ್ಜಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೇವಲ ಲಾಕ್ ಡೌನ್ ಮಾಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....